ಸಮುದಾಯಗಳ ಮಧ್ಯ ಎತ್ತಿ ಕಟ್ಟುವ ಬರಹ…..
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ
ಸರ್ಕಾರದ ಯೋಜನೆಗಳನ್ನು ಹೀಯಾಳಿಸಿದ್ದಲ್ಲದೆ, ಒಂದು ಸಮುದಾಯದ ಜನರ ಮತೀಯ ಭಾವನೆಗಳಿಗೆ ಭಂಗವನ್ನುಂಟುಮಾಡಿ, ಸಮಾಜದಲ್ಲಿ ದ್ವೇಷ ಭಾವನೆಯನ್ನು ಮೂಡಿಸುವ ಬರಹಗಳನ್ನು ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಗಜೇಂದ್ರಗಡದ ಗೊಲ್ಲರ ಓಣಿಯ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಶಹರದ ಗೊಲ್ಲರ ಓಣಿಯ ನಿವಾಸಿ, ಪಾನ್ ಶಾಪ್ ಅಂಗಡಿಯ ಮುತ್ತಣ್ಣ ಯಮನಪ್ಪ ಮ್ಯಾಗೇರಿ ಜೂನ್ 11ರಂದು ಮುತ್ತು ಮ್ಯಾಗೇರಿ ಎನ್ನುವ ತನ್ನ ಫೇಸ್ಬುಕ್ ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಕುರಿತು ʻಷರತ್ತಿನ ಮೇಲೆ ಷರತ್ತು ಹಾಕಿ ಕೊನೆಗೆ ಅವರ ಬಾಂಧವರಿಗಷ್ಟೇ ಯೋಜನೆ ತಲುಪಿಸುವುದು ಗ್ಯಾರಂಟಿಯ ಉದ್ದೇಶʼ ಎಂದು ಪೋಸ್ಟ್ ಮಾಡಿದ್ದರು.
ʻಇಂದಿನಿಂದ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ವ್ಯಾನಿಟಿ ಬ್ಯಾಗಿಗೆ ಖಚಿತ ಇದು ಮುಲ್ಲಾ ಖಾನ್ ಆದೇಶʼ. ʻಸೀತಾಮಾತೆ ಲಂಕಾದಲ್ಲಿ ಇದ್ದ 11 ತಿಂಗಳು, 14 ದಿನವೂ ಸುರಕ್ಷಿತವಾಗಿದ್ದರು. ಯಾಕೆಂದರೆ, ರಾವಣ ವೇದ-ಪುರಾಣಗಳನ್ನು ಓದಿದ್ದನೇ ಹೊರತು ಕುರಾನ್ ಅಲ್ಲʼ ಎಂದೂ ಪೋಸ್ಟ್ ಮಾಡಿದ್ದರು.
ರಾಜ್ಯದ ಮುಖ್ಯಂಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಒಂದು ಸಮುದಾಯದ ಜನರ ಮತೀಯ ಭಾವನೆಗಳನ್ನು ಕೆರಳಿಸಿ, ಸಮುದಾಯಗಳ ನಡುವೆ ಎತ್ತಿ ಕಟ್ಟುವ ಪೋಸ್ಟ್ ಹಂಚಿಕೊಂಡಿದ್ದಾರೆಂದು ಆರೋಪಿಸಿ, ಅರ್ಜುನ್ ಹನಮಂತಪ್ಪ ರಾಥೋಡ್ ಎಂಬುವರು ದೂರು ನೀಡಿದ್ದರು.
ಸದರಿ ದೂರನ್ನು ಸ್ವೀಕರಿಸಿರುವ ಗಜೇಂದ್ರಗಡ ಪೊಲೀಸರು ಅಪರಾಧ 0087/2023, ಐಪಿಸಿ ಸೆಕ್ಷನ್̇1860ರ ಕಲಂ 295A, 505(1)(B) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಳವರ್ಗದ ಯುವಕರ ತಲೆಯಲ್ಲಿ ವೈದಿಕ ಸಂಘಟನೆಗಳು ತುಂಬಿರುವ ದ್ವೇಷ ಮನೋವಿಕಾರ ವಿಚಾರಗಳಿಂದ,, ಪರಸ್ಪರ ವೈರತ್ವವನ್ನು ಬೆಳೆಸಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ವರ್ಗಗಳನ್ನು ಬಳಸಿಕೊಳ್ಳುವ ಕುತಂತ್ರದ ಭಾಗ