ಜೀವನದಲ್ಲಿ ಜಿಗುಪ್ಸೆ; ಸರಕಾರಿ ‌ನೌಕರ ಬಾವಿಗೆ ಹಾರಿ ಆತ್ಮಹತ್ಯೆ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ

Advertisement

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಸ್ವಾಮಿ ಚಿದಾನಂದಯ್ಯ ಬರದೂರಮಠ (45) ಎಂಬುವವರೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.

ಮೂಲತಃ ಗದಗ ತಾಲೂಕಿನ ಹುಯಿಲಗೋಳ ಗ್ರಾಮದವರಾದ ಕುಮಾರಸ್ವಾಮಿ, ರೋಣ ಪಟ್ಟಣದಲ್ಲಿ ವಾಸವಾಗಿದ್ದರು. ನಿತ್ಯವೂ ನಿಡಗುಂದಿ ಗ್ರಾಮಕ್ಕೆ ಕೆಲಸಕ್ಕೆ ಹೋಗಿ ಬರುತ್ತಿದ್ದ ಕುಮಾರಸ್ವಾಮಿ, ಮೊನ್ನೆ ಜೂ.16ರಂದು ಗದಗನಲ್ಲಿ ಮೀಟಿಂಗ್ ಇದೆ ಎಂದು ಹೋದವರು ಮರಳಿ ಮನೆಗೆ ಬಂದಿರಲಿಲ್ಲ. ಫೋನ್ ಮಾಡಿದರೂ ಮೊಬೈಲ್ ಸ್ವಿಚ್ಆಪ್ ಆಗಿತ್ತು.

ಹೀಗಾಗಿ ಕುಮಾರಸ್ವಾಮಿ ಪತ್ನಿ ಶಶಿಕಲಾ ಅವರು, ರೋಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ನಿನ್ನೆ ಮತ್ತೆ ಕುಮಾರಸ್ವಾಮಿ ಅವರನ್ನು ಹುಡುಕಾಡಲು ಅವರ ಜೊತೆಗೆ ಕೆಲಸ ಮಾಡುತ್ತಿದ್ದ ಆನಂದ ಜವಾರಿ ಹಾಗೂ ಇತರರು ಅವರ ಜಮೀನಿನ ಬಾವಿಯ ಬಳಿ ನೋಡಿದಾಗ ಚಪ್ಪಲಿ ಇದ್ದದ್ದು ಕಂಡು, ಬಾವಿಯೊಳಗೆ ಇಣಕಿದಾಗ ಕುಮಾರಸ್ವಾಮಿ ಅವರ ಶವ ತೇಲುತ್ತಿತ್ತು ಎನ್ನಲಾಗಿದೆ. ತಕ್ಷಣವೇ ಅವರ ಮನೆಯವರಿಗೆ ತಿಳಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ನಂತರ ಶವ ಹೊರತೆಗೆದು ಶವಗಾರಕ್ಕೆ ಸಾಗಾಟ ಮಾಡಲಾಗಿದೆ.

ಕುಮಾರಸ್ವಾಮಿ ಅವರು ಪಾರ್ಶ್ವವಾಯುನಿಂದ ಬಳಲುತ್ತಿದ್ದರು ಎಂದು ಅವರ ಪತ್ನಿ ಶಶಿಕಲಾ ಅವರು ಪೊಲೀಸರಿಗೆ ತಿಳಿಸಿದ್ದು, ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here