ಆಸ್ತಿ ವಿವಾದ; ಒಡಹುಟ್ಟಿದ ತಮ್ಮನ್ನನ್ನೆ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಸಹೋದರ, ಕೊಡಲಿ ಸಮೇತ ಠಾಣೆಗೆ ಶರಣಾಗತಿ….?

0
Spread the love

ಹುಬ್ಬಳ್ಳಿಯ ಬಿಆರ್ ಟಿಸಿಯಲ್ಲಿ ಡ್ರೈವರ್ ಆಗಿದ್ದ ಶೇಕಪ್ಪ………

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಒಡಹುಟ್ಟಿದ ತಮ್ಮನನ್ನೇ ಕೊಡಲಿಯಿಂದ ಹೊಡೆದು ಭೀಕರವಾಗಿ ಕೊಲೆಗೈದ ಘಟನೆ ಶುಕ್ರವಾರ ಮಧ್ಯಾಹ್ನ ಜರುಗಿದೆ.

ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿಯ ಜಮೀನಿನಲ್ಲಿ ಇಂದು ಮಧ್ಯಾಹ್ನ ಜರುಗಿದ್ದು, ಶೇಕಪ್ಪ ನವಲಗುಂದ (36) ಎಂಬಾತನೇ ಕೊಲೆಗೀಡಾದ ವ್ಯಕ್ತಿ.

ಮೃತ ಶೇಕಪ್ಪ ಹುಬ್ಬಳ್ಳಿಯ ಬಿ ಆರ್ ಟಿಸಿ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಕಲಹ ನಡೆದಿತ್ತು ಎನ್ನಲಾಗಿದ್ದು, ಇಂದು ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯಕಂಡಿದೆ.

ಕೊಲೆಗೈದ ಆರೋಪಿ ಕೊಡಲಿ ಸಮೇತ ಠಾಣೆಗೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುದ್ದಿ ತಿಳಿದು ರೋಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here