ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಎಚ್.ಕೆ ಪಾಟೀಲ: ಸೆ.3ರಂದು ಟರ್ಫ್ ಹಾಕಿ ಕ್ರೀಡಾಂಗಣ ಲೋಕಾರ್ಪಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಹಾಕಿ ಕ್ರೀಡೆಯಲ್ಲಿ ಗದಗ ಜಿಲ್ಲೆ ತನ್ನದೇ ಆದ ಇತಿಹಾಸ ಹೊಂದಿದೆ. ಕಲ್ಕತ್ತಾ, ಮುಂಬೈ ಬಿಟ್ಟರೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಹಾಕಿ ಕ್ರೀಡಾಪಟುಗಳನ್ನು ನೀಡಿರುವ ಹೆಮ್ಮೆ ನಮ್ಮ ಗದಗ ಜಿಲ್ಲೆಯದಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ ಪಾಟೀಲ ಹೇಳಿದರು.

ಬೆಟಗೇರಿಯ ಗಾಂಧೀ ನಗರದಲ್ಲಿ ನಿರ್ಮಾಣವಾದ ಸುಸಜ್ಜಿತ ಹಾಕಿ ಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಗದಗ-ಬೆಟಗೇರಿ ನಗರದ ಹೃದಯ ಭಾಗದಲ್ಲಿ ಅಂದಾಜು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಸುಸಜ್ಜಿತ ಟರ್ಫ್ ಹಾಕಿ ಕ್ರೀಡಾಂಗಣವು ಬರುವ ಸೆಪ್ಟೆಂಬರ 3ರಂದು ಮುಂಜಾನೆ 9 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಸುಸಜ್ಜಿತ ಹಾಕಿ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ನಾಗೇಂದ್ರ ಆಗಮಿಸಲಿರುವರು ಎಂದರು.

ಅದೇ ದಿನ ಮುಂಜಾನೆ 10 ಗಂಟೆಗೆ ಹಾಕಿ ಕ್ರೀಡಾಂಗಣದಲ್ಲಿ ಆರು ತಂಡಗಳು ಎ ಮತ್ತು ಬಿ ಗುಂಪುಗಳಾಗಿ ವಿಂಗಡಿಸಿ ಹಾಕಿ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ಮೊದಲ ಗುಂಪಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಹುಬ್ಬಳ್ಳಿಯ ಹಾಕಿ ಅಕಾಡೆಮಿ, ಬಿವಾಯ್‍ಎಎಸ್ತಂ ಡಗಳು ಹಾಗೂ ಮತ್ತೊಂದು ಗುಂಪಿನಲ್ಲಿ ಗದಗ-ಘಿI, ಎಸ್‍ಡಬ್ಲೂಆರ್ ಹುಬ್ಬಳ್ಳಿ ಹಾಗೂ ಬಿವಾಯ್‍ಎಎಸ್ ಬೆಂಗಳೂರು ತಂಡಗಳು ಸೆಣಸಲಿವೆ ಎಂದರು.

ಸುಸಜ್ಜಿತ ಹಾಕಿ ಕ್ರೀಡಾಂಗಣವು ಉತ್ತರ ಕರ್ನಾಟಕ ಭಾಗದಲ್ಲಿಯೇ ಪ್ರಥಮವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತ ಟರ್ಫ್ ಹಾಕಿ ಕ್ರೀಡಾಂಗಣ ಹೊಂದಿರುವುದು ಗದಗ ಜಿಲ್ಲೆ ಮಾತ್ರ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಈ ಹಾಕಿ ಕ್ರಿಡಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಯುವ ಕ್ರೀಡಾಪಟುಗಳನ್ನು ಹಾಗೂ
ತರಬೇತುದಾರರನ್ನು ಸನ್ಮಾನಿಸಲಾಗುವದು. ಟರ್ಫ್ ಹಾಕಿ ಕ್ರೀಡಾಂಗಣ ನಿರ್ಮಿಸಲು ಅಗತ್ಯ ಸಹಕಾರ ನೀಡಿದ ಐವರನ್ನು ಗೌರವಿಸಿ ಸನ್ಮಾನಿಸಲಾಗುವದು. ಅದೇ ದಿನ ಕಳಸಾಪುರ ರಸ್ತೆಯಲ್ಲಿನ ಒಳಾಂಗಣ ಕ್ರೀಡಾಂಗಣದ ಹಿಂದುಗಡೆ ನಿರ್ಮಾಣಗೊಂಡಿರುವ ಹೊಸ ಈಜುಕೊಳ ಕೂಡ ಮಧ್ಯಾಹ್ನ 12 ಗಂಟೆಗೆ ಸಚಿವ ನಾಗೇಂದ್ರ ಅವರು ಲೋಕಾರ್ಪಣೆಗೊಳಿಸುವರು ಎಂದು ಸಚಿವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ನೇ ಮಗೌಡ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಲೋಕಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಹಾಕಿ ತರಬೇತಿದಾರರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕ್ರೀಡಾ ಕೌಶಲ್ಯ ಪ್ರದರ್ಶಿಸಿದ ಸಚಿವ ಎಚ್.ಕೆ ಪಾಟೀಲ

ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣಕ್ಕೆ ಸಚಿವ ಡಾ. ಎಚ್.ಕೆ ಪಾಟೀಲ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ, ಹಾಕಿ ಕ್ರೀಡಾಪಟುಗಳು ತಮ್ಮ ಕೌಶಲ್ಯವನ್ನು ಸಚಿವರಿಗೆ ಪ್ರದರ್ಶಿಸಿದರು. ಸಚಿವ ಎಚ್.ಕೆ ಪಾಟೀಲ ಅವರು ಹಾಕಿ ಕ್ರೀಡಾಪಟುಗಳಿಗೆ ಕಮ್ಮಿ ಇಲ್ಲದಂತೆ ತಮ್ಮಲ್ಲಿ ಅಡಗಿರುವ ಹಾಕಿ ಕೌಶಲ್ಯವನ್ನು ಪ್ರದರ್ಶಿಸಿದರು. ಗುರಿ ಸಾಧನೆಗೆ ಮರಳಿ ಪ್ರಯತ್ನ ಮಾಡು ಎನ್ನುವಂತೆ ಸಚಿವರು ಚೆಂಡನ್ನು ನಿಖರವಾಗಿ ಬಾರಿಸುವ ಮೂಲಕ ಗೋಲು ಹೊಡೆದಿದ್ದು ಮೈದಾನದಲ್ಲಿ ನೆರೆದ ಕ್ರೀಡಾಪಟುಗಳನ್ನು ರೋಮಾಂಚನಗೊಳಿಸಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ವ ರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಲೋಕಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಹಾಕಿ ಕಿಟ್‍ನ್ನು ಸಚಿವ ಎಚ್.ಕೆ ಪಾಟೀಲ ವಿತರಿಸಿದರು.


Spread the love

LEAVE A REPLY

Please enter your comment!
Please enter your name here