Bengaluru: ರಾಜ್ಯದ ವಿವಿಧ ಜಿಲ್ಲೆಗಳಿಗೂ BMTC ಸಂಚಾರ

0
Spread the love

ಬೆಂಗಳೂರು;- ರಾಜ್ಯದಾದ್ಯಂತ ಪ್ರಯಾಣಿಕರ ಅಗತ್ಯತೆಗಳಿಗೆ ಅನುಸಾರವಾಗಿ ವಿವಿಧ ಊರುಗಳ ನಡುವೆ ಬಿಎಂಟಿಸಿ ವಿಶೇಷ ಬಸ್‌ಗಳನ್ನು ಆರಂಭಿಸುತ್ತಿದೆ. ಈ ದಸರಾಕ್ಕೆ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ರಾಜ್ಯ ಮತ್ತು ಅಂತಾರಾಜ್ಯ ಗಳಿಗೆ ಬಿಡಲಾಗಿದೆ. ಆದರೂ ಸಹ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕೆಎಸ್​ಆರ್​​ಟಿಸಿ ಜೊತೆಗೆ ಬಿಎಂಟಿಸಿ ಬಸ್​ಗಳನ್ನು ಸಹ ರಾಜ್ಯದ ಇತರೆ ಜಿಲ್ಲೆಗಳಿಗೆ ಸಂಚಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

Advertisement

ಅಕ್ಟೋಬರ್ 23ರಂದು ಆಯುಧ ಪೂಜೆ ಹಾಗೂ ಅ.24 ವಿಜಯದಶಮಿ ಹಿನ್ನಲೆಯಲ್ಲಿ ಜನರು ಬೆಂಗಳೂರಿನಿಂದ ಬೇರೆ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಅಕ್ಟೋಬರ್ 21, 22 ಮತ್ತು 23ರ ವರಿಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್​ಗಳು ಸಂಚರಿಸಲಿವೆ. ಇದರೊಂದಿಗೆ ಇಷ್ಟು ದಿನ ಬೆಂಗಳೂರಿಗೆ ಸೀಮತವಾಗಿದ್ದ ಬಿಎಂಟಿಸಿ ಬಸ್​ಗಳು ಇದೀಗ ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಗೂ ಹೋಗಲಿವೆ.

ಅಕ್ಟೋಬರ್-10 ರಂದು ಕೆಎಸ್‌ಆರ್ಟಿಸಿಯಲ್ಲಿ ನಡೆದ ಸಭೆ ನಿರ್ಧಾರದಂತೆ ಬಿಎಂಟಿಸಿ ಬಸ್ ಓಡಿಸಲು ಸೂಚನೆ ನೀಡಲಾಗಿದೆ. ಕೆಎಸ್‌ಆರ್ಟಿಸಿ ಮನವಿ ಆಧಾರದ ಮೇಲೆ ಹೊರ ಜಿಲ್ಲೆಗಳಿಗೂ ಬಸ್ ಓಡಿಸಲು ಬಿಎಂಟಿಸಿ ತೀರ್ಮಾನಿಸಿದೆ. ದಾವಣಗೆರೆ, ಶಿವಮೊಗ್ಗ, ಹೊಸದುರ್ಗ,ಬಳ್ಳಾರಿ, ಹಾಸನ, ಮತ್ತು ಧರ್ಮಸ್ಥಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಪೂರ್ವ, ಉತ್ತರ, ದಕ್ಷಿಣ, ಹಾಗೂ ಈಶಾನ್ಯ ವಲಯದ ಡಿಪೋಗಳಿಂದ ನಿತ್ಯ 100 ಬಸ್​ ಗಳು ಓಡಾಡಲಿವೆ


Spread the love

LEAVE A REPLY

Please enter your comment!
Please enter your name here