ಮುಳುಗಡೆ ರೈತರಿಗೆ ಭೂಮಿ ನೀಡದಿದ್ದರೆ ತಿನ್ನುವ ಅನ್ನಕ್ಕೆ ದ್ರೋಹ ಬಗೆದಂತೆ – ಮಧು ಬಂಗಾರಪ್ಪ

0
Spread the love

ಬ್ಯಾಕೋಡ;- ಮುಳುಗಡೆ ರೈತರಿಗೆ ಭೂಮಿ ನೀಡದಿದ್ದರೆ ತಿನ್ನುವ ಅನ್ನಕ್ಕೆ ದ್ರೋಹ ಬಗೆದಂತೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಮಲೆನಾಡಿಗರು ಫಲವತ್ತಾದ ಹೊಲ- ಗದ್ದೆಗಳನ್ನು ಮತ್ತು ತಮ್ಮ ಬದುಕನ್ನು ನೀರಿನಲ್ಲಿ ಮುಳುಗಿಸಿ ನಾಡಿಗೆ ಬೆಳಕು ನೀಡಲು ಕಾರಣರಾಗಿದ್ದಾರೆ. ಅವರಿಗೆ ಭೂಮಿ ಹಕ್ಕನ್ನು ನೀಡದೇ ಹೋದರೆ, ನಾವು ತಿನ್ನುವ ಅನ್ನಕ್ಕೆ ದ್ರೋಹ ಬಗೆದಂತೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

Advertisement

ಮುಳುಗಡೆ ರೈತರಿಗೆ, ಅರಣ್ಯ ಹಕ್ಕು ಕಾಯಿದೆ ಸಂಬಂಧಿತ ಅರ್ಜಿಗಳನ್ನು ಪುನರ್ ಪರಿಶೀಲಿಸಿ, 94 ಸಿಸಿ ಮತ್ತು ಬಗರ್‌ಹುಕುಂ ಸಾಗುವಳಿದಾರರಿಗೆ ಭೂ ಮಂಜೂರಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲಾಗುವುದು. ಕೃಷಿಗೆ ಸಂಬಂಧಿಸಿದಂತೆ ನಿರಂತರ 5 ಗಂಟೆ ಉಚಿತ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ.

ಮಂತ್ರಿಯಾದ ನಂತರ ಶೈಕ್ಷಣಿಕವಾಗಿ ₹35 ಸಾವಿರ ಕೋಟಿ ಖರ್ಚು ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ ಎಂದರು. ರಾಜ್ಯದಲ್ಲಿ 40 ಸಾವಿರ ಶಿಕ್ಷಕರ ಕೊರತೆ ಇದ್ದು, ಈಗಾಗಲೇ 9000 ಶಿಕ್ಷಕರ ಆಯ್ಕೆ ಪ್ರಕ್ರಿಯೆ ಮುಗಿದಿದೆ.

ದಸರಾ ರಜೆ ಮುಗಿಸಿ ಶಾಲೆಗಳನ್ನು ಪುನರಾರಂಭ ಮಾಡುವ ಹೊತ್ತಿನಲ್ಲಿ ಶಿಕ್ಷಕರು ಶಾಲೆಗೆ ಹಾಜರಾಗಲಿದ್ದಾರೆ. ಅತಿ ಶೀಘ್ರದಲ್ಲಿ ಉಳಿದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here