ನೀರು ತುಂಬಲು ಹೋಗಿದ್ದ ಬಾಲಕಿ ಕೆರೆಯಲ್ಲಿ ಮುಳುಗಿ ಸಾವು; ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

0
Spread the love

ಗ್ರಾಮ ಪಂಚಾಯತ್ ಮುಂದೆ ಬಾಲಕಿ ಶವವಿಟ್ಟು ಆಕ್ರೋಶ…..

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಕುಡಿಯುವ ನೀರು ತುಂಬಲು ಕೆರೆಗೆ ಹೋಗಿದ್ದ ಬಾಲಕಿ ಕಾಲು ಜಾರಿ ನೀರಲ್ಲಿ ‌ಮುಳುಗಿ ಸಾವನ್ನಪ್ಪಿದ ದುರ್ಘಟನೆ ಬುಧವಾರ ಬೆಳಿಗ್ಗೆ ಜರುಗಿದೆ.

ಗದಗ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಇಂದು ಮುಂಜಾನೆ ಕುಡಿಯುವ ನೀರು ತುಂಬಲು ಕೆರೆಗೆ ಹೋಗಿದ್ದ ಗ್ರಾಮದ ಭುವನೇಶ್ವರಿ ಚಟ್ರಿ (13) ವರ್ಷದ ಬಾಲಕಿ ಕಾಲು ಜಾರಿ ನೀರಲ್ಲಿ ಬಿದ್ದಿದ್ದಾಳೆ.

ಸುದ್ದಿ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಬಾಲಕಿಯ ಶವ ಮೇಲೆತ್ತಿ ಹೊರ ತೆಗೆದಿದ್ದಾರೆ.

ಈ ದುರ್ಘಟನೆಗೆ ಗ್ರಾಮ ಪಂಚಾಯತಿ ಆಡಳಿತ ಮಂಡಳಿಯೇ ಕಾರಣವೆಂದು ರೊಚ್ಚಿಗೆದ್ದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪಂಚಾಯತಿಯ ಮುಂದೆ ಬಾಲಕಿ ಶವ ಇಟ್ಟು ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಕೆರೆಗೆ ತಂತಿ ಬೇಲಿ ಮತ್ತು ಮೆಟ್ಟಿಲುಗಳನ್ನು ನಿರ್ಮಿಸುವಂತೆ ಹಲವು ಭಾರಿ ಒತ್ತಾಯ ಮಾಡಿದ್ದರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿಯು ನಿರ್ಲಕ್ಷ್ಯ ತೋರಿದೆ ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ಇಡೀ ಗ್ರಾಮದ ಜನರು ಕುಡಿಯಲು ಇದೇ ಕೆರೆ ನೀರನ್ನು ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ನಿತ್ಯವೂ ನೂರಾರು ಜನರು ನೀರು ತರಲು ಕೆರೆ ಬರುತ್ತಾರೆ. ಇದರಿಂದಾಗಿ ಈ ಅವಘಡ ಸಂಭವಿಸಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here