ಕೈ ಕೊಟ್ಟ ಮಳೆ; ಆತ್ಮಹತ್ಯೆಗೆ ಶರಣಾದ ಅನ್ನದಾತ ರೈತ

0
Spread the love

ಹುಬ್ಬಳ್ಳಿ;- ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಕೈಗಡ 2 ಲಕ್ಷ ಸಾಲ ಮಾಡಿಕೊಂಡಿದ್ದ. ಅದಲ್ಲದೆ ಟ್ರ್ಯಾಕ್ಟರ್ ಸಾಲ 4.50 ಲಕ್ಷ ಮಾಡಿಕೊಂಡಿದ್ದ. ಆದ್ರೆ ಹಿಂಗಾರು‌ ಮಳೆಯಾಗಲಿಲ್ಲ.‌ ಈಗ ಮುಂಗಾರು ಮಳೆಯೂ ಸಮಯಕ್ಕೆ ಸರಿಯಾಗಿ ಬಾರದೆ ಬೆಳೆದ ಬೆಳೆಯಲ್ಲ ಹಾಳಾಗಿದ್ದು ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಬಂಧ ಕುಂದಗೋಳ ಪೊಲೀಸರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕಿನ ಚಾಕಲೆಬ್ಬಿ ಗ್ರಾಮದ ಮುಂಗಾರು ಹಿಂಗಾರು ಮಳೆ ಇಲ್ಲದೆ ಬೆಳೆಬಾರದೆ ರೈತ ಪೂಜಾರ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷರಾದ ಹೇಮನಗೌಡ್ರು ಬಸನಗೌಡರು ಮೃತ ರೈತನ ಕುಟುಂಬಕ್ಕೆ ಸಾಂತ್ವಾನ ಹೇಳಿದರು ಸರ್ಕಾರದಿಂದ ಮುಕ್ತ ರೈತನ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಬೇಕು ಅವರ ಕುಟುಂಬಕ್ಕೆ ಸರ್ಕಾರದಿಂದ ಸರಿಯಾದ ಸೌಲತ್ತುಗಳನ್ನು ಕೊಡಬೇಕೆಂದು ಆಗ್ರಹಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸವರಾಜ ಯೋಗಪ್ಪನವರ ವಿಟ್ಟಲ್ ಗಾಡಿಗೆ ಗುರುನಾಥ ಹೊನ್ನಳ್ಳಿ ಗ್ರಾಮದ ವಿವಿಧ ರೈತ ಮುಖಂಡರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು ಇದೇ ಸಂದರ್ಭದಲ್ಲಿ ಮೃತ ರೈತನಿಗೆ ಒಂದು ನಿಮಿಷ ಮೌನ ಆಚರಣೆ ಮಾಡಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಬೇಡಿಕೊಂಡರು.


Spread the love

LEAVE A REPLY

Please enter your comment!
Please enter your name here