HomeKarnataka Newsದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ

ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ

For Dai;y Updates Join Our whatsapp Group

Spread the love

ದೇವನಹಳ್ಳಿ;- ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೋಲೆರೋ ವಾಹನ ಡಿಕ್ಕಿ ಹೊಡೆದ ಘಟನೆ ಜರುಗಿದೆ. ಡಿಕ್ಕಿಯ ರಭಸಕ್ಕೆ ಚಾಲಕ ರಘುಮೇನಹಳ್ಳಿ‌ ನರಸೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾ.ಜಿಲ್ಲೆ ದೇವನಹಳ್ಳಿ ತಾಲ್ಲೂಕು ಚಪ್ಪರಕಲ್ಲು ಬಳಿ ಅಪಘಾತ ಸಂಭವಿಸಿದೆ.

ಘಟನೆ ಪರಿಣಾಮ ಬೋಲೆರೋ ವಾಹನ ನಜ್ಜುಗುಜ್ಜಾಗಿದ್ದು, ಚಾಲಕನ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಲಘುಮೇನಹಳ್ಳಿಯ ನರಸೇಗೌಡ ಮೃತ ದುರ್ದೈವಿ. ಕೂದಲೆಳೆ ಅಂತರದಲ್ಲಿ ಪಾರಾಗಿರೊ ಬುಲೆರೋ ಚಾಲಕನ ಪಕ್ಕದಲ್ಲಿದ್ದ ವ್ಯಕ್ತಿ. ನೆನ್ನೆಯಷ್ಟೆ ಚಿಕ್ಕಬಳ್ಳಾಪುರದ ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ 13 ಜನ‌ರ ಸಾವಾಗಿತ್ತು. ಈ ದುರಂತ ಮಾಸುವ ಮುನ್ನವೇ ನಿಂತಿದ್ದ ಲಾರಿಗೆ ಬೋಲೆರೊ ಡಿಕ್ಕಿ ಹೊಡೆದಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ವಾಹನ ಕೆಟ್ಟು ನಿಲ್ಲುತ್ತಿದ್ದು, ಈ ರೀತಿಯ ವಾಹನಗಳಿಂದ ಅಪಘಾತ ಹೆಚ್ಚುತ್ತಿದೆ ಎನ್ನುವ ಆರೋಪ ಸಾರ್ವಜನಿಕರದ್ದಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!