ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆ

0
Spread the love

ಹುಬ್ಬಳ್ಳಿ,: ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಇತ್ತ ಕಾಂಗ್ರೆಸ್​​ನಿಂದ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಬಿರುಸುಗೊಂಡಿದೆ.

Advertisement

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್​, ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲು ಕಂಡಿರುವ ಬಿಜೆಪಿ ಹಾಗೂ ಜೆಡಿಎಸ್​​ ನಾಯಕರುಗಳಿಗೆ ಗಾಳ ಹಾಕಿದೆ.

ಈಗಾಗಲೇ ಕೆಲ ಭಾರತೀಯ ಜನತಾ ಪಕ್ಷದ ಮಾಜಿ ಶಾಸಕರುಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪನವರ ಸಂಬಂಧಿ , ಮಾಜಿ ಶಾಸಕ ಚಿಕ್ಕನಗೌಡರ್ ಭಾರತೀಯ ಜನತಾ ಪಕ್ಷ ತೊರೆದು ಕಾಂಗ್ರೆಸ್​ನತ್ತ ಸೇರ್ಪಡೆಗೆ ಮುಂದಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here