ಸಿಎಂ ಸಿದ್ದರಾಮಯ್ಯ ಬುರುಡೆ ಬಿಟ್ಟು ಹೋಗಿದ್ದಾರೆ – ಸಂಸದ ಮುನಿಸ್ವಾಮಿ ವ್ಯಂಗ್ಯ

0
Spread the love

ಬಂಗಾರಪೇಟೆ:- ಬುರುಡೆ ಬಿಟ್ಟು ಸಿದ್ದರಾಮಯ್ಯ ಹೋಗಿದ್ದಾರೆ ಎಂದು ಹೇಳುವ ಮೂಲಕ ಸಂಸದ ಮುನಿಸ್ವಾಮಿ ಟೀಕೆ ಮಾಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕೊಡಲು ಹಣವಿಲ್ಲ, ಇನ್ನು ಕೋಲಾರ ಜಿಲ್ಲೆಯ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ಸರ್ಕಾರದ ಖಜಾನೆ ಖಾಲಿಯಾಗಿದೆ. ಕಾಂಗ್ರೆಸ್‌ ಶಾಸಕರಿಗೆ ಕೇವಲ ಒಂದೆರಡು ಲಕ್ಷ ಅನುದಾನ ಕೊಡಲೂ ಸರ್ಕಾರದ ಬಳಿ ಹಣವಿಲ್ಲ. ಕೆಜಿಎಫ್ ಮತ್ತು ಬಂಗಾರಪೇಟೆ ಶಾಸಕರು ಹೇಳಿಕೊಟ್ಟಂತೆ ಅಂಕಿ ಅಂಶಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಯರಗೋಳ್ ಡ್ಯಾಂ ಉದ್ಘಾಟನೆ ಡ್ರಾಮಾ ಕಂಪನಿಯ ವೇದಿಕೆಯಾಗಿತ್ತು ಎಂದರು.

ಯರಗೋಳ್ ಯೋಜನೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಅದು ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಧನೆ. ಮೊದಲು ಯೋಜನೆಗೆ 150ಕೋಟಿ ಮಂಜೂರು ಮಾಡಿದ್ದೇ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಎಂದರು.

ಇದಕ್ಕೂ ಮೊದಲು ಯೋಜನೆಯ ಸರ್ವೆ ಮಾಡಲು ಮಾಜಿ ಶಾಸಕರಾದ ಬಿ.ಪಿ.ವೆಂಕಟಮುನಿಯಪ್ಪ, ಕೆ.ಶ್ರೀನಿವಾಸಗೌಡ, ಎಸ್.ರಾಜೇಂದ್ರನ್, ಕೃಷ್ಣಯ್ಯ ಶೆಟ್ಟಿ ತಲಾ 2 ಲಕ್ಷ ಕೊಟ್ಟಿದ್ದರು. ಯರಗೋಳ್ ಲೋಕಾರ್ಪಣೆ ಕೀರ್ತಿ ಇವರಿಗೆ ಸಲ್ಲಬೇಕೇ ಹೊರತು ಕಾಂಗ್ರೆಸ್ ಸರ್ಕಾರಕ್ಕೆ ಅಲ್ಲ ಎಂದರು.


Spread the love

LEAVE A REPLY

Please enter your comment!
Please enter your name here