ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ: ಕುಮಾರಸ್ವಾಮಿ ಪ್ರಶ್ನೆ

0
Spread the love

ಬೆಂಗಳೂರು: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಮಾಜಿ ಶಾಸಕ ಡಾ.ಯತೀಂದ್ರಗೆ ಫೋನ್ ಕರೆ ಮಾಡಿದ್ದು ಯಾರು? ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ? ವಿವೇಕಾನಂದ ಯಾರು?, ನಾಲ್ಕೈದು ಲಿಸ್ಟ್​ ಕೊಟ್ಟಿದ್ದು ಏನು? ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಫೋನ್ ಮಾಡಿ ಕೇಳಿದ್ಯಾರು? ಅದು ಸಿಎಂ ಪರಿಹಾರ ನಿಧಿಯ ಹೆಸರುಗಳು? ಒಬ್ಬ ಮುಖ್ಯಮಂತ್ರಿ ಫೋನ್ ಮಾಡಿ ಲಿಸ್ಟ್ ಬಗ್ಗೆ ಮಾತಾಡುತ್ತಾರೆ.

Advertisement

ಯಾರು ಮಹದೇವ?, ಯಾರು ಲೇಬರ್​ ಇನ್ಸ್​​ಪೆಕ್ಟರ್​ ಅವನು?  ಆರ್​.ಮಹದೇವ್​ ಅವರದ್ದು ವಿಶೇಷ ಕರ್ತವ್ಯ ಏನು? ಸಾರ್ವಜನಿಕವಾಗಿ ಈ ರೀತಿಯಾದರೆ 4 ಗೋಡೆ ಮಧ್ಯೆ ಇನ್ನೇನು ಆಗುತ್ತಿದೆ? ಸಿಎಂ ಕೆಲಸ ಅಂದರೆ ಮಗನಿಗೆ ಫೋನ್​ ಮಾಡಿ ಕೇಳಬಹುದಾ? ಸಾರ್ವಜನಿಕರ ಹಣ ಲೂಟಿ ಮಾಡಿ ಎಂದು ಅಧಿಕಾರ ಕೊಟ್ಟಿದ್ದಾರಾ? ಫೋನ್ ಮಾಡಿ ಹೇಳಿದ್ದಾರಲ್ಲ ಅದರ ದಾಖಲೆ ಬಿಡುಗಡೆ ಮಾಡಿ. ಯಾವ ಶಾಲೆಗಳ ಸಿಎಸ್​​ಆರ್​ ಫಂಡ್​ ಅಂತಾ ಬಿಡುಗಡೆ ಮಾಡಲಿ ಎಂದು ಕುಮಾರಸ್ವಾಮಿ  ಸವಾಲು ಹಾಕಿದರು.


Spread the love

LEAVE A REPLY

Please enter your comment!
Please enter your name here