ಪುತ್ರನ ವಿರುದ್ಧ ಪ್ರೀತಿಸಿ ವಂಚಿಸಿದ ಆರೋಪ: ಬಳ್ಳಾರಿ ಸಂಸದ ದೇವೇಂದ್ರಪ್ಪ ಹೇಳಿದ್ದೇನು..?

0
Spread the love

ಬಳ್ಳಾರಿ: ಬಳ್ಳಾರಿ ಸಂಸದ ದೇವೇಂದ್ರಪ್ಪ  ಅವರ ಪುತ್ರ ಪ್ರೊ. ರಂಗನಾಥ್‌  ಅವರ ವಿರುದ್ಧ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಸಂಸದ ದೇವೇಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆ ಯುವತಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾಳೆ. ನನ್ನ ಮಗ ಸಾಕಷ್ಟು ಹಣ ಕಳೆದುಕೊಂಡಿದ್ದಾನೆ ಎಂದು ಪ್ರಕರಣದ ಬಗ್ಗೆ ಸಂಸದ ಆರ್‌ ದೇವೇಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಹರಪನಹಳ್ಳಿ ತಾಲೂಕಿನ ಅರಸಿಕೆರೆ ನಿವಾಸದಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಸಮಿತಿ ಸಭೆಗಾಗಿ ಕಾರಿನಲ್ಲಿ ಹೋಗುವಾಗ ಯುವತಿಯ ಕರೆ ಬಂದಿತ್ತು. ನಿಮ್ಮ ಮಗ ಮದುವೆ ಆಗುತ್ತೇನೆ ಎಂದು ಹೇಳಿ ಒಂದೂವರೆ ವರ್ಷದಿಂದ ವಂಚನೆ ಮಾಡಿದ್ದಾನೆ. ನೀವು ದೊಡ್ಡವರು ಅಂತ ಕರೆ ಮಾಡಿದ್ದೇನೆ ಎಂದಳು.

ನಾನು ಕಾನೂನು ಪ್ರಕಾರ ಹೋಗು ಅಂತ ಹೇಳಿದ್ದೇನೆ ಎಂದು ತಿಳಿಸಿದರು. ಆ ಯುವತಿ ಬ್ಲಾಕ್ ಮೇಲ್ ಮಾಡ್ತಿದ್ದಾಳೆ. ಚೈನು, ಉಂಗುರ ಎಲ್ಲ‌ ಕಳೆದುಕೊಂಡಿದ್ದೇನೆ ಎಂದು ಮಗ ಹೇಳಿದ್ದಾನೆ. ನನ್ನ ಮಗನಿಗೆ ಮದ್ವೆ ಮಾಡಿ 10-12 ವರ್ಷ ಆಯ್ತು. ಮಗ-ಸೊಸೆ ಚನ್ನಾಗಿದ್ದಾರೆ ಎಂದು ಹೇಳಿರುವ ದೇವೇಂದ್ರಪ್ಪ, ಕಾನೂನು ಪ್ರಕಾರ ಎಲ್ಲರೂ ಒಂದೇ, ಹೆಣ್ಣು, ಗಂಡು ಎರಡೂ ಒಂದೇ ಎಂದರು.

 


Spread the love

LEAVE A REPLY

Please enter your comment!
Please enter your name here