ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕಕ್ಕೆ ರಮೇಶ್ ಜಾರಕಿಹೊಳಿ ಅಸಮಾಧಾನ

0
Spread the love

ಬೆಳಗಾವಿ: ಪ್ರತಿಪಕ್ಷ ನಾಯಕನ ಆಯ್ಕೆಗೆ ಶುಕ್ರವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗದೆ ಮುನಿಸಿಕೊಂಡು ತೆರಳಿದ್ದ ಶಾಸಕ ರಮೇಶ್​​ ಜಾರಕಿಹೊಳಿ ಇದೀಗ ಪಕ್ಷದ ರಾಜ್ಯ ಘಟದ ಅಧ್ಯಕ್ಷರ ನೇಮಕ್ಕೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕಕ್ಕೆ ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದ ವೀಕ್ಷಕರ ಎದುರು ತಮ್ಮ ಬೇಗುದಿ ತೋಡಿಕೊಂಡಿದ್ದಾರೆ.

Advertisement

ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದರೆ ಒಪ್ಪುತ್ತಿದ್ದೆವು. ಆದರೆ, ನಮಗಿಂತ ಕಿರಿಯವಯಸ್ಸಿನ ಬಿವೈ ವಿಜಯೇಂದ್ರ ಕೈ ಕೆಳಗೆ ಕೆಲಸ ಮಾಡೋದು ಹೇಗೆ? ರಾಜಾಧ್ಯಕ್ಷರ ನೇಮಕ ವಿಚಾರದಲ್ಲಿ ಇತರ ಹಿರಿಯರನ್ನ ಪರಿಗಣಿಸಬೇಕಿತ್ತು ಎಂದು ರಮೇಶ್ ಜಾರಕಿಹೊಳಿ ನೇರವಾಗಿ ವೀಕ್ಷಕರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here