ಅಧಿಕಾರದ ಬಗ್ಗೆ ಚರ್ಚೆ ಮಾಡಿದ್ರೆ ಜನರಿಗೆ ಯಾವ ಲಾಭ ಇಲ್ಲ: ಕೃಷ್ಣಭೈರೇಗೌಡ

0
Spread the love

ಬಳ್ಳಾರಿ: ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆಂದು ಶಾಸಕ ವಿಶ್ವಾಸ್ ವೈದ್ಯ ಹೇಳಿಕೆ ವಿಚಾರಕ್ಕೆ ಸಂಭಂಧಿಸಿದಂತೆ ‘ ಯಾವ ಸಮಯಕ್ಕೆ ಯಾರು ಸಿಎಂ ಎಂದು ಪಕ್ಷ ನಿರ್ಧರಿಸುತ್ತದೆ ಎಂದು ಬಳ್ಳಾರಿಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Advertisement

ಒಳ್ಳೆಯ ಆಡಳಿತ ನಡೆಸಲು ಜನರು ನಮಗೆ ಅಧಿಕಾರ ಕೊಟ್ಟಿದ್ದು, ಆ ಕಡೆ ನಾವು ಹೆಚ್ಚಿನ ಗಮನ ಕೊಡಬೇಕು. ಮುಂದೆ ಯಾರು ಸಿಎಂ ಎಂದು ಪಕ್ಷ ನಿರ್ಧಾರ ಮಾಡುತ್ತದೆ. ಅಭಿವೃದ್ಧಿ ಕಡೆಗೆ ನಮ್ಮ ಗಮನ ಇದ್ದರೆ ಎಲ್ಲರಿಗೂ ಒಳ್ಳೆಯದು. ಅಧಿಕಾರದ ಬಗ್ಗೆ ಚರ್ಚೆ ಮಾಡಿದ್ರೆ ಜನರಿಗೆ ಯಾವ ಲಾಭ ಇಲ್ಲ ಎಂದರು.


Spread the love

LEAVE A REPLY

Please enter your comment!
Please enter your name here