ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿಧನ

0
Spread the love

ಬೆಂಗಳೂರು:– ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಂಬಿಕಾಪತಿ ಅವರಿಗೆ ನಿನ್ನೆ ಸಂಜೆ 6:40 ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ

Advertisement

ಅಕ್ಟೋಬರ್​ದ 13 ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ ​​​ಅಶ್ವತ್ಥಮ್ಮ, ಪತಿ ಆರ್​.ಅಂಬಿಕಾಪತಿ ಮತ್ತು ​ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಅಂಬಿಕಾಪತಿಯ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 42 ಕೋಟಿ ರೂ. ಕಂತೆ ಕಂತೆ ಹಣ ಪತ್ತೆಯಾಗಿತ್ತು. ಅಲ್ಲದೆ ಅಂಬಿಕಾಪತಿ ಮಗಳ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದರು.


Spread the love

LEAVE A REPLY

Please enter your comment!
Please enter your name here