HomeVijayanagarಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದೇ ನೋವಿನಿಂದ ನರಳಾಡಿದ ವ್ಯಕ್ತಿ

ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದೇ ನೋವಿನಿಂದ ನರಳಾಡಿದ ವ್ಯಕ್ತಿ

For Dai;y Updates Join Our whatsapp Group

Spread the love

ವಿಜಯನಗರ: ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್​ ಬಾರದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ನೋವಿನಿಂದ ನಡು ರಸ್ತೆಯಲ್ಲಿ ನರಳಾಡಿರುವ ಘಟನೆ ಕೂಟ್ಟೂರು ಪಟ್ಟಣದಲ್ಲಿ ನಡೆದಿದೆ. ಮನಕಲುಕುವ ದೃಶ್ಯಕ್ಕೆ ಕೂಟ್ಟೂರು ಪಟ್ಟಣ ಸಾಕ್ಷಿಯಾಗಿದೆ. ಬಸವರಾಜಪ್ಪ ಗಾಯಗೊಂಡ ವ್ಯಕ್ತಿಯಾಗಿದ್ದು, ಬಸವರಾಜಪ್ಪ ಅವರು ಇಂದು ಬೆಳಿಗ್ಗೆ ಕೊಟ್ಟೂರು ಬಸ್ ನಿಲ್ದಾಣ ಬಳಿ ಹೋಗುತ್ತಿದ್ದರು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಕೆಎಸ್​ಆರ್​ಟಿಸಿ ಬಸ್ ಬಸವರಾಜಪ್ಪ ಅವರಿಗೆ​ ಡಿಕ್ಕಿ ಹೊಡೆದಿದೆ.

ಇದರಿಂದ ಬಸವರಾಜಪ್ಪ ಅವರ ಎಡಗಾಲಿಗೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಿಯರು ಆಂಬ್ಯುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್​ ಸ್ಥಳಕ್ಕೆ ಬರಲಿಲ್ಲ. ಹೀಗಾಗಿ ಗಾಯಗೊಂಡಿದ್ದ ಬಸವರಾಜಪ್ಪ ನಡು ರಸ್ತೆಯಲ್ಲಿ ನೋವಿನಿಂದ ನರಳಾಡಿದ್ದಾರೆ. ಕೊನೆಗೆ ಸ್ಥಳೀಯರು ಬಸ್‌ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಚಾಲಕನ ವಿರುದ್ಧ ಕೂಟ್ಟೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!