ಶಾಸಕ ವಿರುದ್ಧ ಫೇಸ್‌ಬುಕ್ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

0
Spread the love

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರಾಜಕೀಯ ಸಂಘರ್ಷ ಆರಂಭವಾಗಿದೆಯಾ? ಹೀಗೆ ಪ್ರಶ್ನೆ ಮೂಡುವುದಕ್ಕೆ ಕಾರಣವಾಗಿರುವುದು ನಿನ್ನೆ ಬಿಜೆಪಿ ಕಾರ್ಯಕರ್ತನ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಪ್ರಕರಣ.

Advertisement

ಹೌದು  ಶಾಸಕ ಸಂಗಮೇಶ್​ ಹಾಗೂ ಅವರ ಪುತ್ರನ ವಿರುದ್ಧ ಫೇಸ್​ಬುಕ್ ಫೋಸ್ಟ್​ನ್ನ ಗೋಕುಲಕೃಷ್ಣ ಎಂಬುವರು ಪೋಸ್ಟ್ ಮಾಡಿದ್ದರು.

ಅದರ ಬೆನ್ನಲ್ಲೆ ದುಷ್ಕರ್ಮಿಗಳು  ಗೋಕುಲ್​ ರವರಿಗೆ ಸೇರಿದ್ದ ಕಾರನ್ನ ಲಟ್ಟಾದಿಂದ ಹೊಡೆದು ಜಖಂಗೊಳಿಸಿದ್ದರು. ಇನ್ನೇನು ಇಲ್ಲಿಗೆ ಮುಗಿಯಿತು ಎನ್ನುವಷ್ಟರಲ್ಲಿ ನಿನ್ನೆ ರಾತ್ರಿ ಗೋಕುಲ್​ರವರ ಮೇಲೆ ಹಲ್ಲೆ ಮಾಡಲಾಗಿದೆ.

ಈ ಬಗ್ಗೆ ಬಿಜೆಪಿ ಮುಖಂಡರು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದು, ನಡೆದ ಘಟನೆಯ ಬಗ್ಗೆ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here