HomeIndia News1 ಕೋಟಿ ವಲಸೆ ಕಾರ್ಮಿಕರು ನಡೆದೇ ಹೋದರು: ಕೇಂದ್ರ ಸರ್ಕಾರ

1 ಕೋಟಿ ವಲಸೆ ಕಾರ್ಮಿಕರು ನಡೆದೇ ಹೋದರು: ಕೇಂದ್ರ ಸರ್ಕಾರ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕೊವಿಡ್ ಲಾಕ್‌ಡೌನ್ ಕಾರಣಕ್ಕೆ ಮಾರ್ಚ್-ಜೂನ್ ಅವಧಿಯಲ್ಲಿ 1 ಕೋಟಿ 6 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ತಾವು ಕೆಲಸ ಮಾಡುತ್ತಿದ್ದ ಪ್ರದೇಶದಿಂದ ತಮ್ಮೂರಿಗೆ ನಡೆದುಕೊಂಡೇ ಹೋಗಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ರಸ್ತೆ ಮತ್ತು ಹೆದ್ದಾರಿ ರಾಜ್ಯ ಸಚಿವ ವಿ.ಕೆ.ಸಿಂಗ್ ಮಂಗಳವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.
ಮಾರ್ಚ್-ಜೂನ್ ಅವಧಿಯಲ್ಲಿ ಹೆದ್ದಾರಿ ಸೇರಿ ಒಟ್ಟು 81,385 ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ 29,415 ಜನರು ಮೃತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆದರೆ, ವಲಸೆ ಕಾರ್ಮಿಕರ ಕುರಿತಂತೆ ಪ್ರತ್ಯೇಕ ವರದಿಯನ್ನು ತಮ್ಮ ಸಚಿವಾಲಯ ಸಿದ್ಧಪಡಿಸಿಲ್ಲ ಎಂದು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!