ಬೆಂಗಳೂರು: ಕಾಂತರಾಜು ಕಮಿಟಿ ವಿಚಾರದಲ್ಲಿ ಲಿಂಗಾಯತ ಸಮುದಾಯದ ನಿಲುವಿನ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ನಾವು ವಿರೋಧ ವ್ಯಕ್ತಪಡಿಸಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕಾಂತರಾಜು ಕಮಿಟಿ ವಿಚಾರದಲ್ಲಿ ಲಿಂಗಾಯತ ಸಮುದಾಯದ ನಿಲುವಿನ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ನಾವು ವಿರೋಧ ವ್ಯಕ್ತಪಡಿಸಿಲ್ಲ. ನಮಗೆ ಕೆಲ ಆತಂಕಗಳಿವೆ ಅಷ್ಟೆ.
ಈ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ಹೇಳಿದ್ದಾರೆ. ಲಿಂಗಾಯತ ಸಮುದಾಯದಲ್ಲಿ 40 ಪ್ರಮುಖ ಉಪಜಾತಿಗಳಿವೆ. ಲಿಂಗಾಯತ ಗಾಣಿಗ ಅಂತಿದ್ದರೆ, ಹಿಂದೂ ಗಾಣಿಗ ಅಂತಾ ಬರೆಸಿರುತ್ತಾರೆ. ಸಾದರ ಸಮುದಾಯ, ಹಿಂದೂ ಸಾದರ ಅಂತ ಬರೆಸಿರುತ್ತಾರೆ. ಹೀಗೆ ಉಪಜಾತಿಗಳನ್ನು ಅವರ ಉಪಜಾತಿಯ ಹೆಸರಿನಲ್ಲಿ ಬರೆಸಿರುತ್ತಾರೆ. ಲಿಂಗಾಯತ ಸಮುದಾಯದ ಎಲ್ಲ ಉಪಜಾತಿಗಳನ್ನು ಒಂದೇ ಕಡೆ ತನ್ನಿ ಎನ್ನುವುದು ನಮ್ಮ ಬೇಡಿಕೆ. ಜಾತಿಗಣತಿಗೆ ನಮ್ಮ ವಿರೋಧ ಇಲ್ಲ. ನಾವು ಕೇಳ್ತಿರೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.