ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ 25 ರಂದು 78 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
78 ಜನರಿಗೆ ಸೋಂಕು ತಗುಲುವ ಮೂಲಕ ಸೋಂಕಿತರ ಸಂಖ್ಯೆ 8757 ಕ್ಕೇರಿದೆ. ಶುಕ್ರವಾರ 87 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಇದುವರೆಗೂ 7840 ಜನ ಗುಣಮುಖರಾಗಿದ್ದಾರೆ.
790 ಜನ ಸಕ್ರಿಯ ಸೋಂಕಿತರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಬುಧವಾರ ಜಿಲ್ಲಾಡಳಿತ ನೀಡಿದ ಮಾಹಿತಿಯಂತೆ ಇದುವರೆಗೂ ಜಿಲ್ಲೆಯಲ್ಲಿ 127 ಜನ ಕೊವಿಡ್ ಗೆ ಮೃತಪಟ್ಟಿದ್ದಾರೆ.
ತಾಲೂಕುವಾರು ಒಟ್ಟು ಸೋಂಕಿತರ ವಿವರ: ಗದಗ-31, ಮುಂಡರಗಿ-12, ನರಗುಂದ-06, ರೋಣ-18, ಶಿರಹಟ್ಟಿ-07, ಹೊರಜಿಲ್ಲೆಯ ಪ್ರಕರಣಗಳು-04.