ವಿಜಯಸಾಕ್ಷಿ ಸುದ್ದಿ ಗದಗ
ಜಿಲ್ಲೆಯ ಶುಕ್ರವಾರ ರಾತ್ರಿಯಿಡಿ ಸುರಿದ ಮಳೆಯಿಂದ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿ ಹೋಗಿದೆ.
ನರಗುಂದ ತಾಲೂಕಿನ ಹಿರೇಹಳ್ಳ ಉಕ್ಕಿ ಹರಿಯುತ್ತಿರುವ ಕಾರಣ ನರಗುಂದ ಹಾಗೂ ಗುರ್ಲಕಟ್ಟಿ ಸಂಪರ್ಕ ಕಲ್ಪಿಸುವ ಸೇತುವೆ ಹಿರೇಹಳ್ಳದ ರಭಸಕ್ಕೆ ಕೊಚ್ಚಿ ಹೋಗಿದೆ. ಗುರ್ಲಕಟ್ಟಿ ಹಾಗೂ ಕಣಿಕೀಕೊಪ್ಪದಿಂದ ನರಗುಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.
ನರಗುಂದ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಈಗಾಗಲೇ ಐದಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಟಾವಿಗೆ ಬಂದ ಪೈರು ನೀರುಪಾಲಾಗಿದ್ದು, ರೈತರ ಚಿಂತಾಕ್ರಾಂತರಾಗಿದ್ದಾರೆ.