ಜಗದ್ಗುರುಗಳ ವಿರುದ್ಧದ ಘಟನೆ ಖಂಡನೀಯ

0
sujnanadeva shree
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಬಾಗಲಕೋಟೆ ಜಿಲ್ಲೆ ಕಲಾದಗಿ ಮಾರ್ಗವಾಗಿ ಉದಲಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಚಪ್ಪಲಿ ಎಸೆತದ ಪಿತೂರಿಯನ್ನು ಬನ್ನಿಕೊಪ್ಪ/ಮೈಸೂರಿನ ಜಪದಕಟ್ಟಿಮಠದ ಡಾ. ಸುಜ್ಞಾನದೇವ ಶಿವಾಚಾರ್ಯರು ಖಂಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಭಕ್ತ ಕುಲಕೋಟಿಯ ಕಲ್ಯಾಣಕ್ಕಾಗಿ ಮತ್ತು ಧರ್ಮ, ಸಾಹಿತ್ಯ, ಸಂಸ್ಕೃತಿಯ ಸಂವರ್ಧನೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಜಗದ್ಗುರುಗಳ ವಿರುದ್ಧ ನಡೆಸಿದ ಅನಾಗರಿಕ ಘಟನೆ ಅತ್ಯಂತ ಅಮಾನವೀಯ. ಇದು ನಾಡಿನ ಶ್ರೀಗಳ ಮತ್ತು ಭಕ್ತರ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಈ ದುಷ್ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು ಆಗ್ರಹಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here