ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲೆಯಿಂದ ಅಯೋಧ್ಯೆ ದರ್ಶನಕ್ಕೆ 250 ಯಾತ್ರಾರ್ಥಿಗಳು ರೈಲಿನ ಮೂಲಕ ಪ್ರಯಾಣ ಬೆಳೆಸಿದರು. ಭಾರತೀಯ ಜನತಾ ಪಾರ್ಟಿ ರಾಜ್ಯ ಅಧ್ಯಕ್ಷರಾದ ಬಿ.ವಾಯ್. ವಿಜಯೇಂದ್ರ ಅವರು ಕರ್ನಾಟಕದ ಪ್ರತಿಯೊಂದು ಜಿಲ್ಲೆಯಿಂದ 250 ಜನರನ್ನು ಅಯೋಧ್ಯೆಯ ಶ್ರೀರಾಮ ದರ್ಶನಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಸಂಪೂರ್ಣ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದಕ್ಕಾಗಿ ಧನ್ಯವಾದ ಸಮರ್ಪಿಸಿದರು.
Advertisement
ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮಾಜಿ ಸಚಿವ ಕಳಕಪ್ಪ ಬಂಡಿ, ಶಾಸಕ ಡಾ. ಚಂದ್ರು ಲಮಾಣಿ, ಮುಖಂಡರಾದ ಉಮೇಶಗೌಡ ಪಾಟೀಲ, ಶಶಿಕಾಂತ ವಿಶ್ವಬ್ರಾಹ್ಮಣ, ಸಂಚಾಲಕ ಸಿದ್ರಾಮಪ್ಪ ಮೊರಬದ, ಸಹ ಸಂಚಾಲಕ ಸಂತೋಷ ಅಕ್ಕಿ ಹಾಗೂ ಗದಗ ನಗರದ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಯಾತ್ರಾರ್ಥಿಗಳಿಗೆ ಶುಭ ಕೋರಿ ಬೀಳ್ಕೊಟ್ಟರು.