ನ್ಯಾಯೋಚಿತ ಚುನಾವಣೆಗೆ ಅಗತ್ಯ ಕ್ರಮ

0
police statement
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಒಟ್ಟು 1719 ರೌಡಿ ಜನರ ಪೈಕಿ 1355 ಜನರ ಮೇಲೆ ಮುಂಜಾಗೃತಾ ಕ್ರಮ ಜರುಗಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಒಟ್ಟು 88 ವಲ್ನರೇಬಲ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ಚುನಾವಣಾ ಅಪರಾಧಗಳಲ್ಲಿನ ಆರೋಪಿತರ ಮೇಲೆ ಸಿ.ಆರ್.ಪಿ.ಸಿ. ಅಡಿಯಲ್ಲಿ ಮುಂಜಾಗೃತಾ ಕ್ರಮ ಜರುಗಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅವಳಿ ನಗರ ವಾಪ್ತಿಯಲ್ಲಿನ 88 ವಲ್ನರೇಬಲ್ ಪ್ರದೇಶಗಳಲ್ಲಿ ಭಯಪಡಿಸುವ ಅಥವಾ ಅನಗತ್ಯ ಪ್ರಭಾವ ಬಿರುವ ಒಟ್ಟು 12 ವ್ಯಕ್ತಿಗಳನ್ನು ಗುರುತಿಸಿದ್ದು, ಅವರ ಮೇಲೆ ಸಿ.ಆರ್.ಪಿ.ಸಿ ಅಡಿಯಲ್ಲಿ ಮುಂಜಾಗೃತ ಕ್ರಮ ಜರುಗಿಸಲಾಗಿದೆ. ದೈಹಿಕ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಒಟ್ಟು 955 ಪರವಾನಿಗೆ ಹೊಂದಿದ ಆಯುಧಗಳಿದ್ದು, ಅವುಗಳಲ್ಲಿನ 726 ಆಯುಧಗಳನ್ನು ಜಮಾ ಮಾಡಿಕೊಳ್ಳಲಾಗಿದೆ. ಉಳಿದವುಗಳನ್ನು ಮಾರ್ಚ್ 25ರ ಒಳಗಾಗಿ ಜಮಾ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಬಂದೋಬಸ್ತಗಾಗಿ ಸಿ.ಐ.ಎಸ್.ಎಫ್. ಒಂದು ಕಂಪನಿ ಹುಬ್ಬಳ್ಳಿ-ಧಾರವಾಡ ನಗರಕ್ಕೆ ಬಂದಿದ್ದು, ಪ್ರತಿ ದಿನ ಒಂದೊಂದು ಠಾಣೆಗಳಲ್ಲಿನ ವಲ್ನರೇಬಲ್ ಪ್ರದೇಶಗಳಿಗೆ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಭೇಟಿ ನೀಡಿ ರೂಟ್ ಮಾರ್ಚ್ ಮಾಡಿ ಜನರಲ್ಲಿ ಆತ್ಮ ವಿಶ್ವಾಸ ಮತ್ತು ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಚುನಾವಣೆಗೆ ಸಂಬಂಧಿಸಿದಂತೆ ಮತ್ತು ಮತದಾನದ ದಿನ ಮತಗಟ್ಟೆಗಳ ಭದ್ರತೆ ಕುರಿತು ಸಿಬ್ಬಂದಿಗಳ ನಿಯೋಜನೆ ಕುರಿತು ತಯಾರಿ ಮಾಡಿಕೊಳ್ಳಲಾಗಿದೆ. ಮುಕ್ತ ಮತ್ತು ನ್ಯಾಯೋಚಿತ ಚುನಾವಣೆ ಜರುಗಿಸುವ ಕುರಿತು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here