HomeGadag Newsನೀರಾವರಿ ಯೋಜನೆಗಳ ಸಮಗ್ರ ಮಾಹಿತಿಗಾಗಿ ಗಣತಿ

ನೀರಾವರಿ ಯೋಜನೆಗಳ ಸಮಗ್ರ ಮಾಹಿತಿಗಾಗಿ ಗಣತಿ

Spread the love

ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ
ಎಲ್ಲ ವಿಧದ ನೀರಾವರಿ ಯೋಜನೆಗಳ ಸಮಗ್ರ ಮಾಹಿತಿಯನ್ನು ಹೊಂದುವ ಉದ್ದೇಶದಿಂದ ಸಣ್ಣ ನೀರಾವರಿ ಗಣತಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ ಹೇಳಿದರು.
ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಸಣ್ಣ ನೀರಾವರಿ ಮತ್ತು ಅಂರ್ತಜಲ ಅಭಿವೃದ್ಧಿ ಇಲಾಖೆಯಿಂದ 6ನೇ ಸಣ್ಣ ನೀರಾವರಿ ಮತ್ತು ನೀರಿನಾಸರೆಗಳ ಗಣತಿ ಕುರಿತು ಗುರುವಾರ ನಡೆದ ಗ್ರಾಮ ಲೆಕ್ಕಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಸಣ್ಣ ನೀರಾವರಿ ವಿವಿಧ ಯೋಜನೆಗಳನ್ನು ಸಂಪೂರ್ಣವಾಗಿ ಗಣತಿ ಮಾಡುವುದು, ಯೋಜನೆಳನುಸಾರ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಕಾಲಗಳಲ್ಲಿ ನೀರಾವರಿ ಕ್ಷೇತ್ರದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಇದರಿಂದ ಜಲ ಸಂಪನ್ಮೂಲ ಸಚಿವಾಲಯದಿಂದ ಸದರಿ ಅಧಿಕ ಅಂಕಶಗಳನ್ನು ವಿವಿಧ ಆಯಾಮಗಳಲ್ಲಿ ಉಪಯುಕ್ತ ಆಗುವುದರ ಜೊತೆಗೆ ಗಣತಿ ಮಾಹಿತಿಯಿಂದ ಅಂತರ್ಜಲ ಪ್ರಮಾಣವನ್ನು ಅಂದಾಜಿಸಲು ಸಹಾಯಕವಾಗಲಿದೆ.
ಎ.ಎ.ಕಂಬಾಳಿಮಠ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ.

ಸಹಾಯಕ ಸಾಂಕಿಖ್ಯ ಅಧಿಕಾರಿ ಟಿ.ಎಸ್.ಬೆಳ್ಳಟ್ಟಿ ಮಾತನಾಡಿ, ಸಣ್ಣ ನೀರಾವರಿ ಯೋಜನೆಗಳ ಗಣತಿಯಲ್ಲಿ ಅಂರ್ತಜಲ ಯೋಜನೆಗಳು ಹಾಗೂ ಮೇಲ್ಮೈಜಲ ಯೋಜನೆಗಳೆಂದು ಎರಡು ಮುಖ್ಯ ವಿಧಗಳಾಗಿ ವಿಂಗಡಿಸಲಾಗಿದೆ. ಅಂರ್ತಜಲದಲ್ಲಿ ಅಗೆದ ಬಾವಿಗಳು, ಆಳವಲ್ಲದ ಕೊಳವೆಬಾವಿಗಳು, ಮಧ್ಯಮ ಕೊಳವೆ ಬಾವಿ ಹಾಗೂ ಆಳದ ಕೊಳವೆ ಬಾವಿಗಳು ಎಂದು ವರ್ಗಿಕರಿಸಲಾಗಿದ್ದರೆ ಇತ್ತ ಮೇಲ್ಮೈಜಲ ಯೋಜನೆಯಲ್ಲಿ ಹರಿಯುವ ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಮೂಲಕ 2 ಸಾವಿರ ಹೆಕ್ಟೇರವರೆಗೆ ಅಚ್ಚುಕಟ್ಟುಗಳ ಯೋಜನೆಗಳು ಸಣ್ಣ ನೀರಾವರಿ ಯೋಜನೆಗಳನ್ನು ಪರಿಗಣಿಸಲಾಗಿದೆ ಎಂದರು.
ಉಪತಹಸೀಲ್ದಾರ್ ವೀರಣ್ಣ ಅಗಡತ್ತಿ, ಸಣ್ಣ ನೀರಾವರಿ ಇಲಾಖೆಯ ಎಂ.ಜಿ.ಸಂತೋಜಿ, ಗಣಪತಿಸಿಂಗ್, ಕಂದಾಯ ನೀರಿಕ್ಷಕ ಜಿ.ಬಿ.ಆನಂದಪ್ಪನವರ ಸೇರಿ 13 ಗ್ರಾಮ ಲೆಕ್ಕಾಧಿಕಾರಿಗಳು ಸಭೆಯಲ್ಲಿದ್ದರು.
 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!