ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ
ದೇಶಪಾಂಡೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವ ರಾಮವಿಲಾಸ ಪಾಸ್ವಾನ್ ಅವರ ಶ್ರದ್ಧಾಂಜಲಿ ಸಭೆಯು ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಎಸ್.ಸಿ. ಮೋರ್ಚಾದ ಅಧ್ಯಕ್ಷ ಬಸವರಾಜ ಅಮ್ಮಿನಬಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ವಿವಿಧ ಮುಖಂಡರು ರಾಮವಿಲಾಸ ಪಾಸ್ವಾನ್ ಅವರನ್ನು ಸ್ಮರಿಸಿದರು.
ಸಭೆಯಲ್ಲಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ರಾಜ್ಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ, ರವಿ ನಾಯ್ಕ, ಹನಮಂತಪ್ಪ ಚಲವಾದಿ, ಸುಭಾಷ್ ಅಂಕಲಕೋಟಿ, ಮಂಜುನಾಥ ಬಿಜವಾಡ, ಕಿಟ್ಟು ಬಿಜವಾಡ, ರೇಣುಕಪ್ಪ ಕೇಲೂರ, ಚಂದ್ರಶೇಖರ ಗೋಕಾಕ್, ಶಶಿ ಬಿಜವಾಡ, ಮುರಗೇಶ ಹೊರಡಿ, ಸತೀಶ ಸತ್ಪತಿ, ಗುರುನಾಥ ಉಪ್ಪಲದಡ್ಡಿ ಮತ್ತಿತರರು ಭಾಗವಹಿಸಿದ್ದರು.
ರಾಮವಿಲಾಸ ಪಾಸ್ವಾನ್ಗೆ ಶ್ರದ್ಧಾಂಜಲಿ ಸಭೆ
Advertisement