Home Blog

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆಯನ್ನು ಖಂಡಿಸಿ,  ಡಿಸಿಎಂ ಡಿಕೆ ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ” ಎಂದು ತೈಲ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ತಮ್ಮ ಪಕ್ಷದ ವರಿಷ್ಠ ನಾಯಕರು ಮತ್ತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

ಅಂತೆಯೇ, ಐಪಿಎಲ್ ಟಿಕೆಟ್ ಸಂಬಂಧಿ ಶಾಸಕರ ಬೇಡಿಕೆ ಕುರಿತು ಡಿಸಿಎಂ ಹೇಳಿದರು, “ಶಾಸಕರ ಬೇಡಿಕೆ ನ್ಯಾಯಸಮ್ಮತ. ಅವರು ವ್ಯವಸ್ಥೆಯ ಭಾಗ, ಅವರಿಗೆ ಸೂಕ್ತ ವ್ಯವಸ್ಥೆ ಒದಗಿಸಬೇಕು. ನಾನು ಕೆಎಸ್ಸಿಎ ಅಧ್ಯಕ್ಷರೊಂದಿಗೆ ಇಂದು ಈ ಬಗ್ಗೆ ಚರ್ಚೆ ಮಾಡುತ್ತೇನೆ.”

ಇದಕ್ಕೂ ನಡುವೆ, ಟಿಕೆಟ್ ಬೇಡಿಕೆಯನ್ನು ವಿರೋಧಿಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ಕಿಡಿ ಕಾರಿದರು. “ತೇಜಸ್ವಿ ಸೂರ್ಯ ತನ್ನ ಜ್ಞಾನವನ್ನು ತಮ್ಮ ಪಕ್ಷಕ್ಕೆ ಹೇಳಲಿ, ನಮಗೆ ಅಲ್ಲ,” ಎಂದು ಟೀಕೆ ಮಾಡಿದ್ದಾರೆ.

ಮಧ್ಯಪ್ರಾಚ್ಯ ಯುದ್ಧ: ಮತ್ತೆ 10 ದಿನ ಕದನ ವಿರಾಮ ಘೋಷಿಸಿದ ಟ್ರಂಪ್

0

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಕಲ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇರಾನ್ ಜೊತೆ ಮಾತುಕತೆ ಮುಂದುವರಿಸಲು  ಇಂಧನ ಸೌಲಭ್ಯಗಳ ಮೇಲಿನ ದಾಳಿ ಮತ್ತೆ 10 ದಿನಗಳವರೆಗೆ ವಿರಾಮಗೊಳಿಸಿರುವುದಾಗಿ ಘೋಷಿಸಿದ್ದಾರೆ.

ಟ್ರಂಪ್ ನಿರ್ಧಾರವನ್ನು ಇರಾನಿನ ಸರ್ಕಾರದ ಕೋರಿಕೆಯ ಮೇರೆಗೆ ತೆಗೆದುಕೊಂಡಿದ್ದಾರೆ ಮತ್ತು ಇದು ಇಬ್ಬರ ನಡುವೆ ಶಾಂತಿಯುತ ಮಾತುಕತೆಗೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಮಾಹಿತಿಯನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್ನಲ್ಲಿ ಹಂಚಿಕೊಂಡಿದ್ದಾರೆ.

ಟ್ರಂಪ್ ಪೋಸ್ಟ್ನಲ್ಲಿ, ಇರಾನಿನ ಸರ್ಕಾರದ ಕೋರಿಕೆಯ ಮೇರೆಗೆ, ನಾನು ಇಂಧನ ಸ್ಥಾಪನೆಗಳ ಮೇಲಿನ ದಾಳಿಯನ್ನ 10 ದಿನಗಳವರೆಗೆ ವಿರಾಮಗೊಳಿಸುತ್ತಿದ್ದೇನೆ. ಇದು ಏಪ್ರಿಲ್ 6 ರಾತ್ರಿ 8 ಗಂಟೆಯವರೆಗೆ ಮುಂದುವರಿಯುತ್ತದೆ ಎಂದು ತಿಳಿಸಿದ್ದೇವೆ.

ಅಲ್ಲದೇ, ಮಾಧ್ಯಮ ವರದಿಗಳಲ್ಲಿ ಇರಾನ್ ಮಾತುಕತೆಗೆ ಒಪ್ಪಿಲ್ಲ ಎನ್ನುವ ತೀವ್ರ ಸುದ್ದಿಗಳನ್ನು ಟ್ರಂಪ್ ತಳ್ಳಿಹಾಕಿದ್ದಾರೆ. ಅಮೆರಿಕಾ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆ ಸಕಾರಾತ್ಮಕ ದಿಕ್ಕಿನಲ್ಲಿ, ಚೆನ್ನಾಗಿ ನಡೆಯುತ್ತಿವೆ ಎಂದು ದೃಢಪಡಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಮುಂದುವರಿದ ಸಿಲಿಂಡರ್ ಹಾಹಾಕಾರ; ನರಗುಂದದಲ್ಲಿ ಉದ್ದನೆಯ ಸಾಲು – ಜನರ ಆಕ್ರೋಶ!

0

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ ಪಡೆಯಲು ಜನರು ನಸುಕಿನಿಂದಲೇ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಕಂಡು ಬಂದಿವೆ.

ಪಟ್ಟಣದ ಸಿದ್ದನಬಾವಿ ಓಣಿಯಲ್ಲಿರುವ ಇಂಡಿಯನ್ ಗ್ಯಾಸ್ ಏಜೆನ್ಸಿ ಎದುರು ಶುಕ್ರವಾರವೂ ಅರ್ಧ ಕಿಲೋಮೀಟರ್ ಉದ್ದದ ಸಾಲು ಕಂಡು ಬಂದಿದ್ದು, ಮಹಿಳೆಯರು ಮಕ್ಕಳ ಸಮೇತ ಖಾಲಿ ಸಿಲಿಂಡರ್ ಹಿಡಿದು ಗಂಟೆಗಳ ಕಾಲ ಕಾಯುತ್ತಿದ್ದಾರೆ. ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಜನರು ಬೆಳಗ್ಗೆಯೇ ಕ್ಯೂನಲ್ಲಿ ನಿಂತು ಸಿಲಿಂಡರ್ ಪಡೆಯಲು ಹರಸಾಹಸ ಪಡುತ್ತಿದ್ದಾರೆ.

“ಮೂರು ತಿಂಗಳ ಹಿಂದೆ ಸಿಲಿಂಡರ್ ಪಡೆದಿದ್ದೇವೆ. ಈಗ ಬುಕ್ ಮಾಡಿದರೂ ಸಿಗುತ್ತಿಲ್ಲ. ಬೇರೆವರಿಗೆ ಕೊಡಲಾಗುತ್ತಿದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಮಧ್ಯವರ್ತಿಗಳ ಮೂಲಕ ಹೆಚ್ಚಿನ ಹಣಕ್ಕೆ ಸಿಲಿಂಡರ್ ಮಾರಾಟವಾಗುತ್ತಿರುವ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಬೆಳಗ್ಗೆ 8ರಿಂದ 11 ಗಂಟೆಯವರೆಗೆ ಮಾತ್ರ ಪೂರೈಕೆ ನಡೆಯುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಈ ಸಮಸ್ಯೆ ಮುಂದುವರಿದಿದ್ದರೂ ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಜನಪ್ರತಿನಿಧಿಗಳು ಈ ಕುರಿತು ಮೌನವಾಗಿರುವುದಕ್ಕೂ ಸಾರ್ವಜನಿಕರು ಕಿಡಿಕಾರಿದ್ದಾರೆ. ಗೃಹಬಳಕೆ ಸಿಲಿಂಡರ್ ಕೊರತೆಯಿಂದ ನರಗುಂದದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೊಸ ತಂತ್ರಜ್ಞಾನ ಬಳಸಿ 3 ಕರಡಿಗಳನ್ನು ಏಕಕಾಲಕ್ಕೆ ಸೆರೆಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು!

ಬಳ್ಳಾರಿ: ಇದೇ ಮೊದಲ ಬಾರಿಗೆ ಹೊಸ ತಂತ್ರಜ್ಞಾನ ಬಳಸಿ (Automatic Mobile App Based Cage locking System) ಅರಣ್ಯ ಇಲಾಖೆ ಅಧಿಕಾರಿಗಳು ಜಿಂದಾಲ್‌ನಲ್ಲಿದ್ದ ಮೂರು ಕರಡಿಗಳನ್ನು ಏಕಕಾಲಕ್ಕೆ ಸೆರೆಹಿಡಿದಿದ್ದಾರೆ.

ಇದರಿಂದ ಗ್ರಾಮಸ್ಥರು ಹಾಗೂ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಎಸ್, ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿಯ ಜಿಂದಾಲ್‌ನ ವಿದ್ಯಾನಗರದ ಟೌನ್‌ಶಿಪ್‌ನಲ್ಲಿ ಕಳೆದ 10 ತಿಂಗಳಿಂದ ಒಂದು ಕರಡಿ ಹಾಗೂ ಎರಡು ಮರಿಗಳು ಬೀಡು ಬಿಟ್ಟಿದ್ದವು. ಪ್ರತೀ ದಿನ ಕರಡಿಗಳನ್ನ ಕಂಡು ಜಿಂದಾಲ್ ಕಾರ್ಮಿಕರು, ನೌಕರರು ಹಾಗೂ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ವಿಶೇಷ ಕಾರ್ಯಾಚರಣೆ ಮೂಲಕ ಮೂರು ಕರಡಿಗಳನ್ನ ಏಕಕಾಲದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Automatic Mobile App Based Cage locking System ಮೂಲಕ ಸೆರೆ ಹಿಡಿದ ಕರಡಿಗಳನ್ನ ರೇಡಿಯೋ-ಕಾಲರ್ ಅಳವಡಿಸಿ ಕರಡಿ ಧಾಮಕ್ಕೆ ಬಿಡಲಾಯಿತು. ಅರಣ್ಯ ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.

ಪೆಟ್ರೋಲ್-ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಇಳಿಕೆ: ಕೇಂದ್ರದ ಮಹತ್ವದ ನಿರ್ಧಾರ

0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಬೆಲೆ ಏರಿಕೆಯ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂಪಾಯಿ ಇಳಿಸುವ ನಿರ್ಧಾರ ತೆಗೆದುಕೊಂಡಿದೆ.

ಗುರುವಾರ ತಡರಾತ್ರಿ ಪ್ರಕಟವಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಯಿಂದ 3 ರೂಪಾಯಿಗೆ ಇಳಿಸಲಾಗಿದೆ. ಅದೇ ರೀತಿ, ಡೀಸೆಲ್ ಮೇಲಿನ ಸುಂಕವನ್ನು ಲೀಟರ್‌ಗೆ 10 ರೂಪಾಯಿಯಿಂದ ಶೂನ್ಯಕ್ಕೆ ಇಳಿಸಲಾಗಿದೆ.

ಇರಾನ್ ಮತ್ತು ಯುಎಸ್-ಇಸ್ರೇಲ್ ನಡುವಿನ ಸಂಘರ್ಷದಿಂದ ಉಂಟಾದ ಜಾಗತಿಕ ತೈಲ ಬಿಕ್ಕಟ್ಟು, ವಿಶೇಷವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಹಿನ್ನೆಲೆ, ಈ ನಿರ್ಧಾರಕ್ಕೆ ಕಾರಣವಾಗಿದೆ.

ಅಬಕಾರಿ ಸುಂಕ ಕಡಿತದಿಂದ ಕಚ್ಚಾ ತೈಲದ ಬೆಲೆ ಏರಿಕೆಯಿಂದ ನಷ್ಟ ಅನುಭವಿಸುತ್ತಿದ್ದ ತೈಲ ಕಂಪನಿಗಳಿಗೆ ಸ್ವಲ್ಪ ಪರಿಹಾರ ದೊರೆಯುವ ನಿರೀಕ್ಷೆ ಇದೆ. ಜೊತೆಗೆ, ಇಂಧನ ಬೆಲೆಗಳನ್ನು ನಿಯಂತ್ರಣದಲ್ಲಿ ಇಡುವುದು ಮತ್ತು ಗ್ರಾಹಕರಿಗೆ ಸಹಾಯ ಮಾಡುವುದೂ ಈ ಕ್ರಮದ ಉದ್ದೇಶವಾಗಿದೆ. ಆದರೆ, ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇದರ ನಡುವೆಯೇ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಪೂರೈಕೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಭರವಸೆ ನೀಡಿದೆ. ಯಾವುದೇ ಕೊರತೆ ಇಲ್ಲದೆ, ಪೂರೈಕೆ ಸರಪಳಿ ಸರಾಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.

ದೇಶದ ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದೆ. ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನಿರಂತರ ಪೂರೈಕೆಯನ್ನು ಕಾಯ್ದುಕೊಳ್ಳಲಾಗುತ್ತಿದೆ. ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು ದೇಶೀಯ ಎಲ್‌ಪಿಜಿ ಉತ್ಪಾದನೆಯನ್ನು ಕೂಡ ಹೆಚ್ಚಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ: ಯುವಕ ಸಾವು, ಗುಜರಿ ಗೋಡೌನ್ ಬೆಂಕಿಗಾಹುತಿ!

ಬೆಂಗಳೂರು: ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಗರದ ಕುರುಬರಹಳ್ಳಿ ಬಳಿ ಜರುಗಿದೆ.

22 ವರ್ಷದ ಅಂಬದಾಸ್ ಮೃತ ಯುವಕ. ಲಾರಿ ಚಾಲಕ ಶರ್ಮಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರದಿಂದ ಸುಂಕದಕಟ್ಟೆಗೆ ಲಾರಿಯಲ್ಲಿ ಸ್ಟೀಲ್ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ರಾತ್ರಿ 1:30ರ ಸುಮಾರಿಗೆ ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದ. ಈ ವೇಳೆ ಕುರುಬರಹಳ್ಳಿ ಮುಖಾಂತರ ದಾರಿ ತೋರಿಸಿತ್ತು.

ಕುರುಬರಹಳ್ಳಿ ಬಳಿ ರಸ್ತೆ ಬಹುತೇಕವಾಗಿ ಇಳಿಜಾರಾಗಿತ್ತು. ಲಾರಿ ಓವರ್ ಲೋಡ್ ಆಗಿದ್ದರಿಂದ ಇಳಿಜಾರಿನಲ್ಲಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಕಾರು ಚಾಲಕ ಏರ್‌ಪೋರ್ಟ್ ಪಿಕ್‌ಅಪ್‌ಗಾಗಿ ಕಾಯುತ್ತಾ ನಿಂತಿದ್ದ. ಈ ವೇಳೆ ಲಾರಿ ಗುದ್ದಿದ ರಭಸಕ್ಕೆ ಕಾರನ್ನು 50 ರಿಂದ 100 ಮೀ ದೂರಕ್ಕೆ ಎಳೆದೊಯ್ದಿದೆ. ಪರಿಣಾಮ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.

ಲಾರಿ ಹಾಗೆಯೇ ಮುಂದೆ ಹೋಗಿ ಸ್ಕ್ರಾಪ್ ಗೋಡೌನ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಧ್ಯಪ್ರಾಚ್ಯ ಬಿಕ್ಕಟ್ಟು ತೀವ್ರ: ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ!

0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಈ ಸಭೆಯ ಉದ್ದೇಶ ದೇಶದ ಒಟ್ಟಾರೆ ಸಿದ್ಧತೆ, ಭದ್ರತಾ ತಂತ್ರಗಳು ಮತ್ತು ಯೋಜನೆಗಳನ್ನು ಪರಿಶೀಲಿಸುವುದು ಎಂದು ತಿಳಿಸಲಾಗಿದೆ.

ಆದರೆ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸಲಾರರು. ಹೀಗಾಗಿ, ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆಯನ್ನು ಶೀಘ್ರದಲ್ಲೇ ಆಯೋಜಿಸಲು ಯೋಜನೆ ರೂಪಿಸಲಾಗಿದೆ.

ಇನ್ನೂ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಾರೋ ಇಲ್ಲವೋ ಅನ್ನೋದು ಕುತೂಹಲ ಕೆರಳಿಸಿದೆ.

 

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಆಗುಂಬೆ ಘಾಟ್‌ನಲ್ಲಿ ಸಂಚಾರ ಬಂದ್!

ಶಿವಮೊಗ್ಗ: ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿರುವ ಘಟನೆ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಜರುಗಿದೆ.

ಘಟನೆಯಿಂದಾಗಿ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ. ಮರ ಸಂಪೂರ್ಣ ರಸ್ತೆಗೆ ಬಿದ್ದಿರುವ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಘಟನೆ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಧಾವಿಸಿಲ್ಲ. ಘಾಟ್ ನಲ್ಲಿ ಓಡಾಟ ನಡೆಸುತ್ತಿದ್ದ ಲಾರಿ ಚಾಲಕರು ಮರ ತೆರವಿಗೆ ಪ್ರಯತ್ನ ಪಡುತ್ತಿದ್ದು ದೊಡ್ಡ ಮರ ಆಗಿರುವುದರಿಂದ ಮರ ತೆರವಿನ ಕಾರ್ಯ ಅಷ್ಟು ಸುಲಭ ಅಲ್ಲ ಎಂದು ಹೇಳಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ, ಸಂಚಾರ ಬಂದ್ ಆಗಿದ್ದು, ಮುಂದಿನ ಕ್ರಮ ಕಾದು ನೋಡಬೇಕಿದೆ.

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

0

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಜರುಗಿದೆ.

ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್. ಈತ ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ. ಇಂದು ಬೆಳ್ಳಂಬೆಳ್ಳಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಆರೋಪಿಗಳು ಕಾರಿನಲ್ಲಿ ಬಂದು ಹಿಬ್ಬಂದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಘಟನೆಗೆ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೈಸೂರು: 45 ಜಾತಿಯ ಮರಗಳನ್ನು ಅಕ್ರಮವಾಗಿ ಕಡಿದ ಆರೋಪಿ ಬಂಧನ!

ಮೈಸೂರು: ನಂಜನಗೂಡಿನ ಕಪಿಲಾ ನದಿಯ ದಡದಲ್ಲಿ ಅರಣ್ಯ ಇಲಾಖೆ ಬೆಳೆಸಿದ್ದ 45 ವಿಭಿನ್ನ ಜಾತಿಯ ಮರಗಳನ್ನು ಯಾವುದೇ ಅನುಮತಿ ಪಡೆಯದೆ ಕಡಿದುಹಾಕಿದ ಆರೋಪಿಯನ್ನು ಬಂಧಿಸಲಾಗಿದೆ.

ಆಲತ್ತೂರು ಗ್ರಾಮದ ಕೃಷ್ಣ (45) ಆರೋಪಿ ಎಂದು ಗುರುತಿಸಲಾಗಿದೆ.

ಮಾರ್ಚ್ 8ರಂದು ನಡೆದ ಈ  ವಿಚಾರ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗುರಿಯಾಗಿತ್ತು. ಪ್ರಕರಣ ನಡೆದು ಹಲವು ದಿನಗಳಾದರೂ ಅರಣ್ಯ ಇಲಾಖೆಯು ಯಾವುದೇ ಕ್ರಮ ಕೈಗೊಳ್ಳದೆ ಇರಲು ಚುನಾವಣಾ ಆಲೋಚನೆಗಳಾಗಿತ್ತು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾರ್ಚ್ 10ರಂದು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದ್ದರು.

ಘಟನೆ ನಡೆದು 17 ದಿನಗಳ ನಂತರ ಎಚ್ಚೆತ್ತ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದಾರೆ.

error: Content is protected !!