Home Blog

ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಿಸಿದ ಡಿಜಿಪಿ ಡಾ.ಎಂ.ಎ.ಸಲೀಂ

ಬೆಂಗಳೂರು: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ(ಏ.1) ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದ ಡಾ.ಎಂ.ಎ.ಸಲೀಂ ಅವರು ಅವರು ತಮ್ಮ ಕಚೇರಿಯಲ್ಲಿ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.

ಕರ್ನಾಟಕ ರಾಜ್ಯದ ಜನಗಣತಿ ನಿರ್ದೇಶಕರಾದ ರಾಮಚಂದ್ರನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬಹುದು ಎಂದು ತಿಳಿಸಿದರು.

“ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಪ್ರಕ್ರಿಯೆ ಅತ್ಯಂತ ಸರಳ ಮತ್ತು ಸುರಕ್ಷಿತವಾಗಿದ್ದು, ನಾಗರಿಕರು ಯಾವುದೇ ಆತಂಕವಿಲ್ಲದೇ ಸ್ವಯಂ ಮಾಹಿತಿಯನ್ನು ದಾಖಲಿಸಬಹುದು ಎಂದರು.

ಕರ್ತವ್ಯ ಲೋಪ ಆರೋಪ: ಮುನಿರಾಬಾದ್ PSI ಅಮಾನತು

ಕೊಪ್ಪಳ: ಆಡಳಿತಾತ್ಮಕ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮ್ ಅರಸಿದ್ಧಿ ಅವರು ಸಂಬಂಧ ಆದೇಶ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದ ಮುನಿರಾಬಾದ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚೆಗೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಸೇರಿದಂತೆ ಹಲವು ಅನಧಿಕೃತ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು. ಘಟನೆಗಳನ್ನು ಸಮರ್ಪಕವಾಗಿ ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಡಳಿತಾತ್ಮಕ ವೈಫಲ್ಯ ಆರೋಪದಡಿ ಅವರನ್ನು ಅಮಾನತು ಮಾಡಲಾಗಿದೆ.

ಕ್ರಮದಿಂದ ಇಲಾಖೆಯಲ್ಲಿ ಜವಾಬ್ದಾರಿತನವನ್ನು ಬಲಪಡಿಸುವ ಸಂದೇಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಹೋದ್ಯೋಗಿಗೆ ಕಿರುಕುಳ ಆರೋಪ: ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಅರೆಸ್ಟ್!

0

ಬೆಂಗಳೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯ ರಿಜಿಸ್ಟ್ರಾರ್ ಡಾ. ಮಲ್ಲುರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಗಾಂಧಿನಗರದಲ್ಲಿರುವ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರು, ಡಾ. ಮಲ್ಲು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಾರ್ಚ್ 26ರಂದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಂಬಂಧ ಆರೋಪಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನಂತರ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕುರಿತು ಮಾಹಿತಿ ನೀಡಿದ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್., ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬಡಾವಣೆ ಪೊಲೀಸರ ಕಾರ್ಯಾಚರಣೆ: ಬೈಕ್ ಕಳ್ಳತನ ಮಾಡಿದ್ದ ಆರೋಪಿ ಬಂಧನ, 4 ಬೈಕ್ʼಗಳ ಜಪ್ತಿ

ಗದಗ: ನಗರದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

2025ರ ನವೆಂಬರ್ 5ರಂದು ಹೊಂಡಾ ಆಕ್ಟಿವಾ (KA-26/ED-1568) ಬೈಕ್ ಕಳುವಾಗಿದ್ದ ಕುರಿತು ಗುನ್ನಾ ಸಂಖ್ಯೆ 97/2025, ಕಲಂ 303(2) ಬಿಎನ್‌ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಗಂಗಾಪೂರ ಪೇಟದ ಶಿವು ನಡಗೇರಿ ಅವರು ಈ ಕುರಿತು ದೂರು ನೀಡಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ಹಾಗೂ ಉಪಾಧೀಕ್ಷಕರಾದ ಮುರ್ತುಜಾ ಖಾದ್ರಿ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಧೀರಜ್ ಬಿ. ಸಿಂಧೆ ನೇತೃತ್ವದಲ್ಲಿ

ಸಿ.ಪಿ.ಐ ಧೀರಜ್ ಬಿ. ಸಿಂಧೆ, ಪಿ.ಎಸ್.ಐ ಮಾರುತಿ ಎಸ್. ಜೋಗದಂಡಕರ್, ಎಎಸ್ಐ‌ ಐ.ಎಸ್ ಲಮಾಣಿ, ಸಿಬ್ಬಂದಿಗಳಾದ ಎನ್.ಡಿ ಹುಬ್ಬಳ್ಳಿ, ಎಸ್.ಎಚ್ ಡೋಣಿ, ಪರಶುರಾಮ. ಎಚ್ ದೊಡಮನಿ,ಅಶೋಕ ಗದಗ, ನಾಗರಾಜ್ ಬರಡಿ, ಪ್ರವೀಣ್ ಕಲ್ಲೂರ,ಅಕ್ಷಯ ಕುಮಾರ್ ಬದಾಮಿ, ಖಯ್ಯುಮ್ ಲಕ್ಕುಂಡಿ ಒಳಗೊಂಡ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.

ತಂಡದ ಕಾರ್ಯಾಚರಣೆಯಲ್ಲಿ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಮಧುಸೂಧನ ತಂದೆ ಷಣ್ಮುಖಪ್ಪ ಕುಂತಿಕಲ ವಯಸ್ಸು (25) ಜಾತಿ-ಹಿಂದೂ ಲಿಂಗಾಯತ ಎಂಬಾತ ವೃತ್ತಿಯಲ್ಲಿ ಗೌಂಡಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಆರೋಪಿಯು ಗದಗ ನಗರದಲ್ಲಿ 1, ಸಿಂಧನೂರಿನಲ್ಲಿ 2 ಹಾಗೂ ಗಂಗಾವತಿಯಲ್ಲಿ 1 ಬೈಕ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇದಲ್ಲದೆ, ಕೊಪ್ಪಳ ಜಿಲ್ಲೆಯಲ್ಲಿ ಮಹಿಳೆಯ ತಾಳಿ ಸರ ಕಳವು ಪ್ರಕರಣದಲ್ಲೂ ಭಾಗಿಯಾಗಿರುವುದು ತಿಳಿದು ಬಂದಿದೆ.

ಆರೋಪಿಯಿಂದ ಹೊಂಡಾ ಆಕ್ಟಿವಾ (₹30,000), ಹೊಂಡಾ ಸಿಬಿ ಶೈನ್ (₹35,000), ಹೊಂಡಾ ಯುನಿಕಾರ್ನ್ (₹45,000) ಮತ್ತು ಹೀರೋ HF ಡಿಲಕ್ಸ್ (₹25,000) ಸೇರಿ ಒಟ್ಟು ₹1,35,000 ಮೌಲ್ಯದ ನಾಲ್ಕು ಮೋಟಾರ್ ಸೈಕಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಪ್ರಶಂಸಿ, ಬಹುಮಾನ ಘೋಷಿಸಿದ್ದಾರೆ.

NDA ಒಕ್ಕೂಟಕ್ಕೆ ಅಸ್ಸಾಂ ಜನರು ಮತ್ತೊಮ್ಮೆ ಆಶೀರ್ವಾದ ನೀಡಲಿದ್ದಾರೆ: ಪ್ರಧಾನಿ ಮೋದಿ

0

ಗುವಾಹಟಿ: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂ ರಾಜ್ಯವು ಮಹತ್ವದ ಅಭಿವೃದ್ಧಿಯನ್ನು ಕಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಕ್ಕೆ ಜನರು ಮತ್ತೊಮ್ಮೆ ಆಶೀರ್ವಾದ ನೀಡಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

ಗೋಗಮುಖ್ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನರಲ್ಲಿರುವ ಉತ್ಸಾಹವು ನಿರಂತರ ಅಭಿವೃದ್ಧಿ ಮತ್ತು ಸ್ಥಿರ ಆಡಳಿತದ ಮೇಲೆ ಇರುವ ನಂಬಿಕೆಯನ್ನು ತೋರಿಸುತ್ತದೆ ಎಂದರು. ಬಾರಿ ನಡೆಯುವ ಚುನಾವಣೆಯು ಅಭಿವೃದ್ಧಿ ಹೊಂದಿದ ಭಾರತದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದರು.

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸಿ ಹ್ಯಾಟ್ರಿಕ್ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮೋದಿ, ರಾಜ್ಯದ ಜನರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲು ಸಿದ್ಧರಾಗಿದ್ದಾರೆ ಎಂದರು. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ, “ಸ್ವಯಂ ಘೋಷಿತ ರಾಜಕುಮಾರನಿಗೆ ಇದು ಹ್ಯಾಟ್ರಿಕ್ ಸೋಲು ಆಗಲಿದೆಎಂದು ಟೀಕಿಸಿದರು.

ಚುನಾವಣೆ ಘೋಷಣೆಯಾದ ನಂತರ ಅಸ್ಸಾಂನಲ್ಲಿ ಇದು ತನ್ನ ಮೊದಲ ಸಾರ್ವಜನಿಕ ಸಭೆಯಾಗಿದ್ದು, ಇಲ್ಲಿ ಕಂಡುಬರುವ ಜನಸಾಗರವೇ ಮೂರನೇ ಬಾರಿ ಗೆಲುವು ಖಚಿತ ಎಂಬುದಕ್ಕೆ ಸಾಕ್ಷಿ ಎಂದು ಮೋದಿ ಹೇಳಿದ್ದಾರೆ. ತಮ್ಮ ನಾಯಕತ್ವದಲ್ಲಿ ದೇಶದಲ್ಲಿ ಹ್ಯಾಟ್ರಿಕ್ ಸಾಧನೆಯಾಗಿರುವುದನ್ನು ಉಲ್ಲೇಖಿಸಿ, ಅಸ್ಸಾಂದಲ್ಲೂ ಅದೇ ರೀತಿಯ ಫಲಿತಾಂಶ ಬರುತ್ತದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಪೊಲೀಸ್, ಪಬ್ಲಿಕ್, ಪ್ರೆಸ್, ಆರ್ಮಿ ಹೆಸರಿಡಲು ಅಧಿಕಾರ ಕೊಟ್ಟವರ್ಯಾರು? ರೌಡಿಶೀಟರ್ ಅರ್ಜಿ ವಜಾ!

ಬೆಂಗಳೂರು: ರೌಡಿಶೀಟರ್‌ರಿಂದ “ಪಬ್ಲಿಕ್ ಪ್ರೆಸ್ ಆರ್ಮಿ” ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸಲಾಗಿದೆ ಎಂಬ ಆರೋಪದ ಪ್ರಕರಣವನ್ನು ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡುವಂತೆ ಮೊಹಮ್ಮದ್ ಖಲಂದರ್, ಗೌಸ್ ಪಾಷಾ ಹಾಗೂ ಆಶಿಯಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

“ಪಬ್ಲಿಕ್ ಪ್ರೆಸ್ ಆರ್ಮಿ” ಎಂಬ ಟ್ರಸ್ಟ್ ಸ್ಥಾಪಿಸಲು ನಿಮಗೆ ಅಧಿಕಾರ ನೀಡಿದವರು ಯಾರು? ಈ ರೀತಿಯ ಸಂಘಟನೆಗೆ ಕಾನೂನುಬದ್ಧ ಮಾನ್ಯತೆ ಏನು?” ಎಂದು ನ್ಯಾಯಾಲಯ ಪ್ರಶ್ನಿಸಿದೆ. ಜೊತೆಗೆ, ಇಂತಹ ಟ್ರಸ್ಟ್‌ಗೆ ರಕ್ಷಣೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಆರೋಪಿಗಳು “ಪಬ್ಲಿಕ್ ಪ್ರೆಸ್ ಆರ್ಮಿ” ಹೆಸರಿನಲ್ಲಿ ಟ್ರಸ್ಟ್ ಆರಂಭಿಸಿ, ಯುವಕರನ್ನು ಪ್ರಚೋದನೆಗೊಳಿಸಿ, ತಮ್ಮನ್ನು ಸಾರ್ವಜನಿಕ ಅಧಿಕಾರಿಗಳಂತೆ ತೋರಿಸಿಕೊಂಡಿದ್ದರು. ಪೊಲೀಸರ ಹೆಸರನ್ನು ದುರುಪಯೋಗಪಡಿಸಿಕೊಂಡು ಜನರ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ ಎಂದು ಸುಳ್ಳು ಹೇಳಿ ನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದರು ಎಂಬ ಆರೋಪಗಳಿವೆ.

ಈ ಹಿನ್ನೆಲೆಯಲ್ಲಿ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ವಿವಿಧ ಕಲಂಗಳಡಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ತೀರ್ಪಿನಿಂದ ಪ್ರಕರಣದ ತನಿಖೆಗೆ ಮುಂದುವರಿಯಲು ಹಸಿರು ನಿಶಾನೆ ದೊರೆತಿದೆ.

ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಆಗ್ರಹ: ಚುನಾವಣಾಧಿಕಾರಿಗೆ ಬಿಜೆಪಿ ದೂರು

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರು ಅವಹೇಳನಕಾರಿ ಮಾತನಾಡುತ್ತಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ.

ಸಿ.ಕೆ. ರಾಮಮೂರ್ತಿ, ಪಕ್ಷದ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರು ಇಂದು ಮಹಾರಾಣಿ ಕಾಲೇಜು ಸರ್ಕಲ್ ಬಳಿ ಇರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದರು.

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ನಡೆಯುತ್ತಿದೆ. ಪ್ರದೀಪ್ ಈಶ್ವರ್ ಒಬ್ಬ ಹುಚ್ಚ; ಅವರು ಬಿಜೆಪಿ ನಾಯಕರನ್ನು ಕೋತಿಗಳು, ಅಯೋಗ್ಯರೆಂದು ಸಂಬೋಧಿಸಿದ್ದಾರೆ. ಅವಹೇಳನಕಾರಿ ಮಾತನಾಡಿದ್ದಾರೆ. ಇವೆಲ್ಲ ಸಂವಿಧಾನವಿರೋಧಿ ಮತ್ತು ನೀತಿಸಂಹಿತೆಯನ್ನು ಉಲ್ಲಂಘಿಸಿವೆ ಎಂದು ಸಿ.ಕೆ. ರಾಮಮೂರ್ತಿ ಅವರು ಆಕ್ಷೇಪಿಸಿದರು. ಪ್ರದೀಪ್ ಈಶ್ವರ್ ಪ್ರಚೋದನೆ ಕೊಡುವಂತೆ ಮಾತನಾಡುತ್ತಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ರೂಪಿಸುವುದಾಗಿ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.

ಎಸ್. ಹರೀಶ್ ಅವರು ಮಾತನಾಡಿ, ಬಾಗಲಕೋಟೆ ಉಪ ಚುನಾವಣೆ ವೇಳೆ ಶಿಕ್ಷಕರ ಸಂಘದ ಅಧ್ಯಕ್ಷ, ಸರಕಾರಿ ನೌಕರ ಚಂದ್ರು ನುಗ್ಲಿ ಅವರು ಮುಖ್ಯಮಂತ್ರಿಗಳು ಬಂದಾಗ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈಗಲೂ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅವರನ್ನು ವಜಾ ಮಾಡುವಂತೆ ಆಗ್ರಹಿಸಿದರು. ಈ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿರುವುದಾಗಿ ಹೇಳಿದರು.

ಕಾಂಗ್ರೆಸ್, ಧರ್ಮದ ಆಧಾರದಲ್ಲಿ ಚುನಾವಣೆ ನಡೆಸುತ್ತಿದೆ. ಇದು ನೀತಿಸಂಹಿತೆಯ ಉಲ್ಲಂಘನೆ ಎಂದರು. ಪ್ರದೀಪ್ ಈಶ್ವರ್ ವಿರುದ್ಧ ಕ್ರಮ ಕೈಗೊಂಡು ಅವರನ್ನು ಅಲ್ಲಿಂದ ಹೊರಕ್ಕೆ ಕಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.

Gold Silver Price: ಚಿನ್ನ, ಬೆಳ್ಳಿ ಬೆಲೆಯಲ್ಲಿ ದಿಢೀರ್ ಏರಿಕೆ! ಬೆಂಗಳೂರಿನಲ್ಲಿ ರೇಟ್ ಎಷ್ಟು ಗೊತ್ತಾ?

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರವಾಗಿ ಏರಿಕೆ ಕಾಣುತ್ತಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆ ಆಗಿದೆ. ನಿನ್ನೆ ಗ್ರಾಮ್‌ಗೆ 185 ರೂ ಏರಿಕೆಯಾದ ಚಿನ್ನದ ದರ ಇಂದು ಮತ್ತಷ್ಟು 200 ರೂ ಹೆಚ್ಚಳ ಕಂಡಿದೆ. ಅಂದರೆ ಎರಡು ದಿನಗಳಲ್ಲಿ ಒಟ್ಟು ಸುಮಾರು 400 ರೂಗಳಷ್ಟು ಏರಿಕೆಯಾಗಿದೆ.

ಅಪರಂಜಿ (24 ಕ್ಯಾರಟ್) ಚಿನ್ನದ ಬೆಲೆ 15,000 ರೂ ಗಡಿಯನ್ನು ದಾಟಿದ್ದು, ವಿದೇಶಿ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯೂ ನಿನ್ನೆ ಹಾಗೆಯೇ ಇಂದು ಕೂಡ 5 ರೂ ಏರಿಕೆಯಾಗಿದೆ.

ದೇಶದಲ್ಲಿನ ಇಂದಿನ ದರ (ಏಪ್ರಿಲ್ 1)

  • 24 ಕ್ಯಾರಟ್ ಚಿನ್ನ (10 ಗ್ರಾಂ): ₹1,51,480
  • 22 ಕ್ಯಾರಟ್ ಚಿನ್ನ (10 ಗ್ರಾಂ): ₹1,38,850
  • 18 ಕ್ಯಾರಟ್ ಚಿನ್ನ (1 ಗ್ರಾಂ): ₹11,361
  • ಬೆಳ್ಳಿ (100 ಗ್ರಾಂ): ₹25,500
  • ಬೆಳ್ಳಿ (1 ಗ್ರಾಂ): ₹255

ಬೆಂಗಳೂರಿನ ದರ

  • 24 ಕ್ಯಾರಟ್ (1 ಗ್ರಾಂ): ₹15,148
  • 22 ಕ್ಯಾರಟ್ (1 ಗ್ರಾಂ): ₹13,885
  • ಬೆಳ್ಳಿ (1 ಗ್ರಾಂ): ₹255

ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)

  • ಬೆಂಗಳೂರು: ₹13,885
  • ಚೆನ್ನೈ: ₹14,050
  • ಮುಂಬೈ: ₹13,885
  • ದೆಹಲಿ: ₹13,900
  • ಕೋಲ್ಕತಾ: ₹13,885
  • ಕೇರಳ: ₹13,885
  • ಅಹಮದಾಬಾದ್: ₹13,890
  • ಜೈಪುರ್: ₹13,900
  • ಲಕ್ನೋ: ₹13,900
  • ಭುವನೇಶ್ವರ್: ₹13,885

ಚಿನ್ನ-ಬೆಳ್ಳಿ ದರ ಏರಿಕೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯ ಚಲನವಲನಗಳು ಹಾಗೂ ಆರ್ಥಿಕ ಅನಿಶ್ಚಿತತೆಗಳು ಪ್ರಮುಖ ಕಾರಣಗಳೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಸ್ಸಾಂ ಚಹಾ ತೋಟಕ್ಕೆ ಪ್ರಧಾನಿ ಭೇಟಿ: “ಚಹಾ ಅಸ್ಸಾಂನ ಆತ್ಮ” ಎಂದ ಮೋದಿ

0

ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ನಡೆಯಲಿರುವ ಚುನಾವಣಾ ರ್ಯಾಲಿಗಳಿಗೆ ಮುನ್ನ ದಿಬ್ರುಗಢದಲ್ಲಿರುವ ಚಹಾ ತೋಟಕ್ಕೆ ಭೇಟಿ ನೀಡಿದರು. ಈ ವೇಳೆ ಅಸ್ಸಾಂನ ಚಹಾವನ್ನು “ರಾಜ್ಯದ ಆತ್ಮ” ಎಂದು ಬಣ್ಣಿಸಿದರು. ಇಲ್ಲಿಂದ ಉತ್ಪಾದನೆಯಾಗುವ ಚಹಾ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ ಎಂದು ಹೇಳಿದರು.

ಇಂದು ಬೆಳಗ್ಗೆ ದಿಬ್ರುಗಢದ ಚಹಾ ತೋಟಕ್ಕೆ ಭೇಟಿ ನೀಡಿ ಅಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರೊಂದಿಗೆ ಮಾತನಾಡಿದ ಕ್ಷಣಗಳು ಬಹಳ ಸ್ಮರಣೀಯವಾಗಿದ್ದವು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಚಹಾ ತೋಟಗಾರರ ಕುಟುಂಬಗಳ ಪರಿಶ್ರಮವನ್ನು ಮೆಚ್ಚಿದ ಮೋದಿ, ಅವರ ಶ್ರಮವೇ ಅಸ್ಸಾಂನ ಗೌರವವನ್ನು ಜಗತ್ತಿನ ಮಟ್ಟದಲ್ಲಿ ಹೆಚ್ಚಿಸಿದೆ ಎಂದು ಹೇಳಿದರು. ಅಲ್ಲಿನ ಕೆಲಸಗಾರರೊಂದಿಗೆ ಸಂವಾದ ನಡೆಸಿ, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ರಾಜ್ಯ ಸರ್ಕಾರದ ವರದಿಗಳ ಪ್ರಕಾರ, ಅಸ್ಸಾಂ ವರ್ಷಕ್ಕೆ ಸುಮಾರು 630–700 ಮಿಲಿಯನ್ ಕೆಜಿ ಚಹಾ ಉತ್ಪಾದನೆ ಮಾಡುತ್ತಿದ್ದು, ಇದು ಭಾರತದ ಒಟ್ಟು ಉತ್ಪಾದನೆಯ ಅರ್ಧಕ್ಕಿಂತ ಹೆಚ್ಚಿನದು ಎಂಬುದು ಗಮನಾರ್ಹವಾಗಿದೆ.

ಇದೇ ವೇಳೆ, ಮೋದಿ ಅವರು ಧೆಮಾಜಿ ಮತ್ತು ಢಕುವಾಖಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಾದ ರಾನೋಜ್ ಪೆಗು ಮತ್ತು ನಬಾ ಕುಮಾರ್ ಡೋಲೆ ಪರ ಪ್ರಚಾರ ನಡೆಸಲಿದ್ದಾರೆ. ಗೋಗಮುಖದಲ್ಲಿ ನಡೆಯುವ ರ್ಯಾಲಿಯಲ್ಲಿ ಮಾತನಾಡಿದ ಬಳಿಕ, ಮಧ್ಯಾಹ್ನ ಬಿಸ್ವಾನಾಥ್ ಜಿಲ್ಲೆಯಲ್ಲಿ ಮತ್ತೊಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವೂ ಇದೆ.

ರಾಜ್ಯದಲ್ಲಿ LPG ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

ದಾವಣಗೆರೆ:  ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಅನಗತ್ಯವಾಗಿ ಗ್ರಾಹಕರು ಕ್ಯೂನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ, ಬೇಕಾದಷ್ಟು ಸಿಲಿಂಡರ್‌ಗಳು ಲಭ್ಯವಿವೆ ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಎಲ್‌ಪಿಜಿ ಆಟೋರಿಕ್ಷಾಗಳ ಬಳಕೆಗೆ ಪ್ರತಿದಿನ ಸುಮಾರು 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲೂ ಕೊರತೆ ಇಲ್ಲ ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ, ಖಾಸಗಿ ಗ್ಯಾಸ್ ಏಜೆನ್ಸಿಗಳೇ ಗೊಂದಲಕ್ಕೆ ಕಾರಣವಾಗಿದ್ದು, ಅವು ಎಲ್‌ಪಿಜಿ ದರವನ್ನು ಹೆಚ್ಚಿಸಿರುವುದಾಗಿ ಆರೋಪಿಸಿದ್ದಾರೆ. ಈ ಕುರಿತು ಪೆಟ್ರೋಲಿಯಂ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ ಅವರು, ಖಾಸಗಿ ಸಂಸ್ಥೆಗಳೂ ಸರ್ಕಾರ ನಿಗದಿಪಡಿಸಿದ ದರದಲ್ಲೇ ಎಲ್‌ಪಿಜಿ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!