ಬೆಂಗಳೂರು: ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆಯನ್ನು ಖಂಡಿಸಿ, ಡಿಸಿಎಂ ಡಿಕೆ ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ” ಎಂದು ತೈಲ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ತಮ್ಮ ಪಕ್ಷದ ವರಿಷ್ಠ ನಾಯಕರು ಮತ್ತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಅಂತೆಯೇ, ಐಪಿಎಲ್ ಟಿಕೆಟ್ ಸಂಬಂಧಿ ಶಾಸಕರ ಬೇಡಿಕೆ ಕುರಿತು ಡಿಸಿಎಂ ಹೇಳಿದರು, “ಶಾಸಕರ ಬೇಡಿಕೆ ನ್ಯಾಯಸಮ್ಮತ. ಅವರು ವ್ಯವಸ್ಥೆಯ ಭಾಗ, ಅವರಿಗೆ ಸೂಕ್ತ ವ್ಯವಸ್ಥೆ ಒದಗಿಸಬೇಕು. ನಾನು ಕೆಎಸ್ಸಿಎ ಅಧ್ಯಕ್ಷರೊಂದಿಗೆ ಇಂದು ಈ ಬಗ್ಗೆ ಚರ್ಚೆ ಮಾಡುತ್ತೇನೆ.”
ಇದಕ್ಕೂ ನಡುವೆ, ಟಿಕೆಟ್ ಬೇಡಿಕೆಯನ್ನು ವಿರೋಧಿಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ಕಿಡಿ ಕಾರಿದರು. “ತೇಜಸ್ವಿ ಸೂರ್ಯ ತನ್ನ ಜ್ಞಾನವನ್ನು ತಮ್ಮ ಪಕ್ಷಕ್ಕೆ ಹೇಳಲಿ, ನಮಗೆ ಅಲ್ಲ,” ಎಂದು ಟೀಕೆ ಮಾಡಿದ್ದಾರೆ.

