Home Blog

ಪರ್ಫೆಕ್ಟ್ ಸ್ಕೋರ್‌ನಿಂದ ರಾಜ್ಯವೇ ಶಾಕ್: ದಕ್ಷಿಣ ಕನ್ನಡದ ದಿಶಾ 600ಕ್ಕೆ 600 ಅಂಕ ಪಡೆದು ಟಾಪರ್

ಮಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಎಲ್ಲರ ಗಮನ ಸೆಳೆದ ಸಾಧನೆ ದಕ್ಷಿಣ ಕನ್ನಡದಲ್ಲಿ ದಾಖಲಾಗಿದೆ. ದಿಶಾ ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ಅಚ್ಚರಿ ಮೂಡಿಸಿದ್ದಾಳೆ.

ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾದ ದಿಶಾ, ಯಾವುದೇ ವಿಷಯದಲ್ಲೂ ಒಂದೇ ಒಂದು ಅಂಕವೂ ಕಳೆದುಕೊಳ್ಳದೆ ಪರ್ಫೆಕ್ಟ್ ಸಾಧನೆ ಮಾಡಿದ್ದಾಳೆ. ಈ ಸಾಧನೆ ಕಾಲೇಜಿನಲ್ಲಿ ಸಂಭ್ರಮದ ವಾತಾವರಣವನ್ನು ಸೃಷ್ಟಿಸಿದ್ದು, ಶಿಕ್ಷಕರು ಮತ್ತು ಸಹಪಾಠಿಗಳಿಂದ ಭರ್ಜರಿ ಪ್ರಶಂಸೆಗೆ ಪಾತ್ರವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಮೇಲುಗೈ ತೋರಿಸಿದ್ದು, ದಿಶಾ ಸಾಧನೆ ರಾಜ್ಯದ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ಈ ಯಶಸ್ಸು ಸಾಧ್ಯವಾಗಿದೆ.

ಈ ಸಾಧನೆ ಮುಂದಿನ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, “ಟಾಪ್ ಮಾಡೋದು ಅಸಾಧ್ಯ ಅಲ್ಲ” ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ! ರಿಸಲ್ಟ್ ಹೀಗೆ ಚೆಕ್ ಮಾಡಿ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಆನ್‌ಲೈನ್‌ನಲ್ಲಿ ಪ್ರಕಟವಾಗಿದೆ. ಬಳಿಕ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ಪರಿಶೀಲಿಸಬಹುದು. ಸರ್ವರ್ ಸಮಸ್ಯೆ ಎದುರಾದಲ್ಲಿ ಡಿಜಿಲಾಕರ್ ಮೂಲಕವೂ ಫಲಿತಾಂಶ ವೀಕ್ಷಿಸಲು ಅವಕಾಶ ಇದೆ.

ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದಾದ್ಯಂತ 1,217 ಕೇಂದ್ರಗಳಲ್ಲಿ ನಡೆಯಿತು. ಒಟ್ಟು 5,174 ಕಾಲೇಜುಗಳ ಸುಮಾರು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಇದಲ್ಲದೆ, ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ತೆರಳಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ‘Submit’ ಬಟನ್ ಒತ್ತಿದರೆ ಅಂಕಪಟ್ಟಿ ಪರದೆ ಮೇಲೆ ಕಾಣಿಸುತ್ತದೆ.

ಇನ್ನು ಕರ್ನಾಟಕ ಒನ್ ಮೊಬೈಲ್ ಆಪ್‌ನಲ್ಲಿಯೂ ಫಲಿತಾಂಶ ಲಭ್ಯವಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕವೂ ಮಾಹಿತಿ ರವಾನೆಯಾಗುತ್ತದೆ.

ಈ ಬಾರಿ ಮೊದಲ ಬಾರಿಗೆ ಡಿಜಿಲಾಕರ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಫಲಿತಾಂಶ ಲಭ್ಯವಾಗಿದ್ದು, ವಿದ್ಯಾರ್ಥಿಗಳು ಅಲ್ಲಿ ಕೂಡ ಅಂಕಪಟ್ಟಿಯನ್ನು ವೀಕ್ಷಿಸಬಹುದು.

ಗುವಾಹಟಿಯಲ್ಲಿ ಭರ್ಜರಿ ಕದನ: ಬೆಂಗಳೂರು vs RR ಮುಖಾಮುಖಿ – RCB ಪ್ಲೇಯಿಂಗ್ 11​ನಲ್ಲಿ ಒಂದು ಬದಲಾವಣೆ

0

ಐಪಿಎಲ್ 2026ರ 16ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಲಿಷ್ಠ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಉತ್ಸುಕವಾಗಿದೆ.

ಆರ್‌ಸಿಬಿ ತಂಡದ ಪ್ರಮುಖ ಶಕ್ತಿ ಅದರ ಬ್ಯಾಟಿಂಗ್ ವಿಭಾಗ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಆರಂಭ ತಂಡಕ್ಕೆ ಭರ್ಜರಿ ಬಲ ನೀಡುತ್ತಿದೆ. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ದೇವದತ್ ಪಡಿಕ್ಕಲ್ ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದಾರೆ.

ನಾಯಕ ರಜತ್ ಪಾಟಿದಾರ್ ಮತ್ತು ಟಿಮ್ ಡೇವಿಡ್ ಅವರ ಅಬ್ಬರ ಎದುರಾಳಿ ಬೌಲರ್‌ಗಳಿಗೆ ದೊಡ್ಡ ಸವಾಲಾಗಿದೆ. ನಂತರದ ಕ್ರಮದಲ್ಲಿ ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಮತ್ತು ರೊಮಾರಿಯೋ ಶೆಫರ್ಡ್ ಇದ್ದು, ತಂಡದ ಬ್ಯಾಟಿಂಗ್ ಇನ್ನಷ್ಟು ಬಲಿಷ್ಠವಾಗಿದೆ. ಹೀಗಾಗಿ ಬ್ಯಾಟಿಂಗ್ ಕ್ರಮದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ.

ಕಳೆದ ಎರಡು ಪಂದ್ಯಗಳಲ್ಲಿ ಆಡದ ಜೋಶ್ ಹೇಝಲ್‌ವುಡ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅವರು ಆಡಿದರೆ ಜೇಕಬ್ ಡಫಿ ಹೊರಗುಳಿಯಬಹುದು. ಹೀಗಾಗಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ.

ಪ್ಲೇಯಿಂಗ್ ಇಲೆವೆನ್

ಫಿಲ್ ಸಾಲ್ಟ್ (ವಿಕೆಟ್ ಕೀಪರ್)
ವಿರಾಟ್ ಕೊಹ್ಲಿ
ದೇವದತ್ ಪಡಿಕ್ಕಲ್
ರಜತ್ ಪಾಟಿದಾರ್ (ನಾಯಕ)
ಜಿತೇಶ್ ಶರ್ಮಾ
ಟಿಮ್ ಡೇವಿಡ್
ರೊಮಾರಿಯೋ ಶೆಫರ್ಡ್
ಕೃನಾಲ್ ಪಾಂಡ್ಯ
ಭುವನೇಶ್ವರ್ ಕುಮಾರ್
ಅಭಿನಂದನ್ ಸಿಂಗ್
ಜೋಶ್ ಹೇಝಲ್‌ವುಡ್
ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್)

ಉಭಯ ತಂಡಗಳ ಮುಖಾಮುಖಿ

ಈವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು 34 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 17 ಪಂದ್ಯಗಳಲ್ಲಿ ಗೆದ್ದಿದ್ದು, ರಾಜಸ್ಥಾನ್ 14 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಉಳಿದ 3 ಪಂದ್ಯಗಳು ರದ್ದಾಗಿವೆ.

ಕಳೆದ ಐದು ಮುಖಾಮುಖಿಗಳಲ್ಲಿ ಆರ್‌ಸಿಬಿ 3ರಲ್ಲಿ ಗೆದ್ದಿದ್ದರೆ, ರಾಜಸ್ಥಾನ್ 2ರಲ್ಲಿ ಜಯ ಸಾಧಿಸಿದೆ. ಈಗ ಎರಡೂ ತಂಡಗಳು 35ನೇ ಬಾರಿ ಮುಖಾಮುಖಿಯಾಗಲು ಸಜ್ಜಾಗಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

ಬಿಜೆಪಿ ಗೆಲ್ಲಿಸಿ, ಡಬಲ್ ಎಂಜಿನ್ ಸರ್ಕಾರ ತನ್ನಿ: ಬಂಗಾಳದ ಜನತೆಗೆ ಮೋದಿ 6 ಗ್ಯಾರಂಟಿ ಘೋಷಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಟೀಕೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ಉದ್ದೇಶ ಹಣ ದುರುಪಯೋಗ ಮತ್ತು ಲೂಟಿ ಮಾಡುವುದು ಎಂಬ ಆರೋಪ ಮಾಡಿದ್ದಾರೆ. ಜೊತೆಗೆ, ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ ಡಬಲ್ ಎಂಜಿನ್ ಸರ್ಕಾರವನ್ನು ಸ್ಥಾಪಿಸಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ.

ಬಂಗಾಳದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವೆಂದು  ಹೇಳಿದರು. ಪ್ರಧಾನಿಯನ್ನು ವಿರೋಧಿಸುವುದರಿಂದ ರಾಜ್ಯಕ್ಕೆ ಯಾವುದೇ ಲಾಭವಾಗುವುದಿಲ್ಲ.

ಮುಖ್ಯಮಂತ್ರಿ ಮತ್ತು ಪ್ರಧಾನಿಯವರು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಜನರಿಗೆ ನೇರ ಪ್ರಯೋಜನ ಸಿಗುತ್ತದೆ ಎಂದು ತಿಳಿಸಿದ್ದಾರೆ. ಇದೇ ಕಾರಣಕ್ಕಾಗಿ ಬಂಗಾಳದಲ್ಲಿ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಅಗತ್ಯವಿದೆ ಎಂದು ಹೇಳಿದರು.

ಹಲ್ದಿಯಾದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಮೋದಿ, ಡಬಲ್ ಎಂಜಿನ್ ಸರ್ಕಾರ ಬಂಗಾಳವನ್ನು ಮೀನುಗಾರಿಕೆ ಮತ್ತು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿಸುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾಳದ ಜನತೆಗೆ ಆರು ಭರವಸೆಗಳನ್ನು ಘೋಷಿಸಿದರು. ಅದರಲ್ಲಿ ಮೊದಲ ಭರವಸೆ ರಾಜ್ಯದಲ್ಲಿ ಇರುವ ‘ಭಯದ ವಾತಾವರಣ’ವನ್ನು ಅಂತ್ಯಗೊಳಿಸುವುದು ಎಂದು ಹೇಳಿದರು. ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಭಯದ ಪರಿಸ್ಥಿತಿ ಸೃಷ್ಟಿಸಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ಬಂದರೆ ಅದನ್ನು ನಂಬಿಕೆ ಮತ್ತು ಭದ್ರತೆಯ ವಾತಾವರಣವಾಗಿ ಪರಿವರ್ತಿಸಲಾಗುತ್ತದೆ ಎಂದು ಹೇಳಿದರು.

ಮಗ ಬೆಂಗಳೂರಿನಲ್ಲಿ, ಮಗಳು ದುಬೈನಲ್ಲಿ: ಪತಿಯ ಶವದೊಂದಿಗೆ 10 ದಿನ ಕಳೆದು ಪತ್ನಿ!

0

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲುಕುವ ಘಟನೆ ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್ ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಆದರೆ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರ ಪತ್ನಿಗೆ ಪತಿಯ ಸಾವಿನ ವಿಷಯವೇ ತಿಳಿದಿರಲಿಲ್ಲ. ಪರಿಣಾಮವಾಗಿ, ಅವರು ಸುಮಾರು 10 ದಿನಗಳ ಕಾಲ ಪತಿಯ ಕೊಳೆತ ಶವದ ಪಕ್ಕದಲ್ಲೇ ಇದ್ದರು.

ಮನೆಯಿಂದ ತೀವ್ರ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ತೆಗೆದುಕೊಳ್ಳಲು ಮುಂದಾದಾಗ, ಪತ್ನಿ “ನನ್ನ ಗಂಡ ನನಗೆ ಬೇಕು, ಯಾರೂ ಮುಟ್ಟಬೇಡಿ” ಎಂದು ಹೇಳುತ್ತಾ ತಡೆಯಲು ಪ್ರಯತ್ನಿಸಿದರು.

ಮೃತರ ಮಗ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಮಗಳು ದುಬೈನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಮಗ ಪ್ರತಿದಿನ ಕರೆ ಮಾಡಿದಾಗಲೂ ತಾಯಿ “ಅಪ್ಪ ಚೆನ್ನಾಗಿದ್ದಾರೆ” ಎಂದು ಹೇಳುತ್ತಿದ್ದಳು. ಪತಿಯ ಸಾವಿನ ಸುಮಾರು 10 ದಿನಗಳ ಬಳಿಕ ಮಗ ಮನೆಗೆ ಬಂದರೂ, ತಂದೆಯ ಮುಖವನ್ನು ನೋಡುವ ಅವಕಾಶ ಅವನಿಗೆ ಸಿಗಲಿಲ್ಲ. ಇನ್ನು ಮಗಳು ಸಹ ಅಂತ್ಯಕ್ರಿಯೆಗೆ ಆಗಮಿಸಿಲ್ಲ ಎಂದು ತಿಳಿದುಬಂದಿದೆ.

ಶವ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸ್ಥಳೀಯರು ಅದನ್ನು ಮುಟ್ಟಲು ಹಿಂಜರಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ ಆರೀಫ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಅಂತ್ಯಸಂಸ್ಕಾರಕ್ಕೂ ನೆರವಾದರು. ಬಳಿಕ ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಸಂಜೆ ವೇಳೆಗೆ ಅಂತ್ಯಸಂಸ್ಕಾರ ನೆರವೇರಿತು. ಈ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಒಪ್ಪಂದ ಉಲ್ಲಂಘಿಸಿದ್ರೆ ಭೀಕರ ದಾಳಿ: ಕದನ ವಿರಾಮದ ಬಳಿಕ ಟ್ರಂಪ್ ಎಚ್ಚರಿಕೆ

0

ವಾಷಿಂಗ್ಟನ್: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕದನ ವಿರಾಮ ಪಾಲನೆಯವರೆಗೆ ಮಾತ್ರ ಇರಾನ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸುರಕ್ಷಿತವಾಗಿರುತ್ತವೆ. ಒಪ್ಪಂದವನ್ನು ಉಲ್ಲಂಘಿಸಿದರೆ, ಹಿಂದೆಂದಿಗಿಂತಲೂ ಭೀಕರ ದಾಳಿ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.

ಇನ್ನು ಮುಂದೆ ಹಾರ್ಮುಜ್ ಜಲಸಂಧಿ ಸುರಕ್ಷಿತವಾಗಿ ಮತ್ತು ಮುಕ್ತವಾಗಿ ಇರಲಿದೆ ಎಂದು ಅವರು ತಿಳಿಸಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಲು ಅವಕಾಶ ನೀಡುವುದಿಲ್ಲವೆಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಒಪ್ಪಂದ ಅಂತಿಮಗೊಳ್ಳುವವರೆಗೆ ಇರಾನ್ ಮತ್ತು ಅದರ ಸುತ್ತಮುತ್ತ ಅಮೆರಿಕದ ಪಡೆಗಳನ್ನು ನಿಯೋಜಿಸಲಾಗುವುದು ಎಂದೂ ಹೇಳಿದ್ದಾರೆ.

“ನಮ್ಮ ಸೇನೆ ಸಜ್ಜಾಗಿದ್ದು, ವಿಶ್ರಾಂತಿ ಪಡೆಯುತ್ತಿದೆ. ಅದು ಮುಂದಿನ ವಿಜಯಕ್ಕಾಗಿ ಸಿದ್ಧವಾಗುತ್ತಿದೆ,” ಎಂದು ಟ್ರಂಪ್ ಹೇಳಿದ್ದಾರೆ. ಏಪ್ರಿಲ್ 7ರಂದು ಅಮೆರಿಕ ಮತ್ತು ಇರಾನ್ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿದೆ. ಈ ಘೋಷಣೆಗೆ ಮುನ್ನ ಇರಾನ್ 10 ಷರತ್ತುಗಳನ್ನು ಮುಂದಿಟ್ಟಿತ್ತು. ಅವುಗಳನ್ನು ಅಮೆರಿಕ ಹೇಗೆ ಸ್ವೀಕರಿಸುತ್ತದೆ ಎಂಬುದರ ಮೇಲೆ ಕದನ ವಿರಾಮದ ಭವಿಷ್ಯ ಅವಲಂಬಿತವಾಗಿದೆ.

ಇರಾನ್ ನೀಡಿದ 10 ಅಂಶಗಳ ಪ್ರಸ್ತಾವನೆ ಶಾಶ್ವತ ಶಾಂತಿ ಮಾತುಕತೆಗೆ ಉತ್ತಮ ಆಧಾರವಾಗಿದೆ ಎಂದು ಹೇಳಲಾಗುತ್ತಿದೆ. ಈ ಎರಡು ವಾರಗಳ ಅವಧಿ, ಅಮೆರಿಕ ಮತ್ತು ಇರಾನ್ ನಡುವೆ ದೀರ್ಘಕಾಲಿಕ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲು ಮಹತ್ವದ ಅವಕಾಶವೆಂದು ಪರಿಗಣಿಸಲಾಗಿದೆ.

ಕೋಟ್ಯಂತರ ಆಸ್ತಿ ಬಯಲು: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ!

0

ಅಮರಾವತಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಕಳಿಂಗಿರಿ ಶಾಂತಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.

ಏಪ್ರಿಲ್ 7ರಂದು ವಿಜಯವಾಡ ಮತ್ತು ವಿಶಾಖಪಟ್ಟಣಂ ಸೇರಿದಂತೆ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಶಾಂತಿ ಅವರನ್ನು ಬಂಧಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಗ್ರಹಿಸಿರುವ ಆರೋಪದ ಮೇರೆಗೆ, ವಿಜಯವಾಡ ಶ್ರೇಣಿಯ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಶಾಂತಿ ಅವರ ನಿವಾಸ, ಅವರ ತಾಯಿಗೆ ಸೇರಿದ ಬಟ್ಟೆ ಅಂಗಡಿ, ಸಹೋದರಿಯ ಮನೆ ಸೇರಿದಂತೆ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಲಾಯಿತು. ಇದಲ್ಲದೆ ವಿಶಾಖಪಟ್ಟಣಂನಲ್ಲಿರುವ ಮತ್ತೊಂದು ಆಸ್ತಿಯಲ್ಲೂ ಪರಿಶೀಲನೆ ನಡೆಯಿತು.

ದಾಳಿಯ ವೇಳೆ ತನಿಖಾಧಿಕಾರಿಗಳು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅಧಿಕಾರಿಗೆ ಸಂಬಂಧಿಸಿದೆ ಎನ್ನಲಾದ ಆಸ್ತಿಗಳ ಮಹತ್ವದ ವಿವರಗಳನ್ನು ಪತ್ತೆಹಚ್ಚಿದ್ದಾರೆ. ವಿಶಾಖಪಟ್ಟಣಂನಲ್ಲಿರುವ ವಸತಿ ಫ್ಲಾಟ್, ವಿಜಯವಾಡದಲ್ಲಿರುವ ಜಿ+2 ಕಟ್ಟಡ, ಸುಮಾರು 770 ಗ್ರಾಂ ಚಿನ್ನಾಭರಣ, 3 ಕಿಲೋ ಬೆಳ್ಳಿ ವಸ್ತುಗಳು, 1.15 ಲಕ್ಷ ರೂಪಾಯಿ ನಗದು ಮತ್ತು ಸುಮಾರು 3 ಲಕ್ಷ ರೂಪಾಯಿ ಬ್ಯಾಂಕ್ ಠೇವಣಿಗಳ ವಿವರಗಳು ಪತ್ತೆಯಾಗಿವೆ. ಜೊತೆಗೆ ಕಾರು, ಮೋಟಾರ್ಸೈಕಲ್, ಎಲೆಕ್ಟ್ರಾನಿಕ್ ಸಾಧನಗಳು ಸೇರಿದಂತೆ ಇತರ ಬೆಲೆಬಾಳುವ ವಸ್ತುಗಳನ್ನೂ ವಶಪಡಿಸಿಕೊಳ್ಳಲಾಗಿದೆ.

2020ರಲ್ಲಿ ಸಾರ್ವಜನಿಕ ಸೇವಾ ಆಯೋಗದ ಮೂಲಕ ನೇಮಕಗೊಂಡ ಶಾಂತಿ, ವಿಶಾಖಪಟ್ಟಣಂ ಮತ್ತು ವಿಜಯವಾಡದಲ್ಲಿ ಸೇವೆ ಸಲ್ಲಿಸಿದ್ದರು. ಅಧಿಕಾರಿಗಳ ಮಾಹಿತಿ ಪ್ರಕಾರ, ಅವರು 2024ರ ಜುಲೈದಿಂದ 2026ರ ಮಾರ್ಚ್ ವರೆಗೆ ಅಮಾನತುಗೊಂಡಿದ್ದರು ಹಾಗೂ ಹೊಸ ನೇಮಕಾತಿಗಾಗಿ ಕಾಯುತ್ತಿದ್ದರು.

ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಿರುವ ಎಸಿಬಿ, ಬಂಧನದ ನಂತರ ಶಾಂತಿಯನ್ನು ವಿಜಯವಾಡದಲ್ಲಿರುವ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ. ನ್ಯಾಯಾಲಯವು ಅವರನ್ನು ಏಪ್ರಿಲ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಂತರ ಅವರನ್ನು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ವಶಪಡಿಸಿಕೊಂಡ ಆಸ್ತಿಗಳ ಹೆಚ್ಚಿನ ಪರಿಶೀಲನೆ ಮತ್ತು ಮೌಲ್ಯಮಾಪನ ಇನ್ನೂ ನಡೆಯುತ್ತಿದ್ದು, ತನಿಖೆ ಮುಂದುವರಿದಂತೆ ಒಟ್ಟು ಮೌಲ್ಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆ ತಪ್ಪಿಸಲು ಪುದುಚೇರಿ ನೋಂದಣಿ: 92 ವಾಹನ ಮಾಲೀಕರಿಗೆ ದಂಡ

ಕಲಬುರಗಿ: ವಾಹನ ತೆರಿಗೆ ಕಡಿಮೆ ಎಂಬ ಕಾರಣಕ್ಕೆ ದೂರದ ಪುದುಚೇರಿಯಲ್ಲಿ ನೋಂದಣಿ ಮಾಡಿಸಿರುವ ವಾಹನ ಮಾಲೀಕರ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು 1.98 ಕೋಟಿ ರೂಪಾಯಿ ತೆರಿಗೆ ಮತ್ತು ದಂಡವನ್ನು ಸಂಗ್ರಹಿಸಲಾಗಿದೆ.

ಕರ್ನಾಟಕದೊಂದಿಗೆ ಹೋಲಿಸಿದರೆ ಪುದುಚೇರಿಯಲ್ಲಿ ನಾಲ್ಕು ಚಕ್ರ ವಾಹನಗಳ ರಸ್ತೆ ತೆರಿಗೆ ಕಡಿಮೆ ಇರುವುದರಿಂದ, ಹಲವರು ತಮ್ಮ ವಾಹನಗಳನ್ನು ಅಲ್ಲಿ ನೋಂದಣಿ ಮಾಡಿಸುತ್ತಿದ್ದಾರೆ. ಇದರಿಂದ ರಾಜ್ಯದ ತೆರಿಗೆ ಸಂಗ್ರಹಕ್ಕೆ ನಷ್ಟವಾಗುತ್ತಿದೆ. ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಕಲಬುರಗಿ ಜಿಲ್ಲೆಯಲ್ಲಿ ಇಂತಹ 92 ವಾಹನ ಮಾಲೀಕರ ವಿರುದ್ಧ ಕಳೆದ ವರ್ಷ ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 1.98 ಕೋಟಿ ರೂಪಾಯಿ ದಂಡ ಮತ್ತು ತೆರಿಗೆ ವಸೂಲಿ ಮಾಡಲಾಗಿದೆ.

ರಾಜ್ಯದಲ್ಲಿ ವಾಹನಗಳ ಮೇಲೆ ವಿಧಿಸುವ ತೆರಿಗೆ ಸುಮಾರು ಶೇಕಡಾ 13ರಿಂದ 20ರವರೆಗೆ ಇದ್ದರೆ, ಪುದುಚೇರಿಯಲ್ಲಿ ಅದೇ ವಾಹನಗಳಿಗೆ ಕಡಿಮೆ ಪ್ರಮಾಣದ ತೆರಿಗೆ ವಿಧಿಸಲಾಗುತ್ತದೆ. ಇದರಿಂದ ದುಬಾರಿ ಕಾರು ಖರೀದಿಸುವಾಗ ಲಕ್ಷಾಂತರ ರೂಪಾಯಿ ಉಳಿಯುತ್ತದೆ ಎಂಬ ಕಾರಣಕ್ಕೆ ಜನರು ಪುದುಚೇರಿಯಲ್ಲಿ ವಾಹನಗಳನ್ನು ನೋಂದಣಿ ಮಾಡಿಸುತ್ತಿದ್ದಾರೆ.

ಬದಲಾವಣೆಗಾಗಿ ಮತ ಚಲಾಯಿಸಿ: ಮತದಾರರಿಗೆ ವಿಶೇಷ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ!

0

ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಇಂದು ಏಕ ಹಂತದಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ವಿಭಜನೆ, ಬಹಿಷ್ಕಾರ ಮತ್ತು ನಿರಾಸಕ್ತಿಯ ರಾಜಕೀಯವನ್ನು ಸೋಲಿಸಲು ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಅಸ್ಸಾಂನ ಜನರು ಏಕತೆ, ಕಲ್ಯಾಣ ಮತ್ತು ನೈಜ ಅಭಿವೃದ್ಧಿಯ ಮಾರ್ಗವನ್ನು ಆರಿಸಿಕೊಳ್ಳಬೇಕು ಎಂದು ಹೇಳಿದರು. ಜನರ ಮತಗಳು ಅಸ್ಸಾಂನ ಗೌರವ ಮತ್ತು ಭವಿಷ್ಯವನ್ನು ಪುನರ್ ನಿರ್ಮಿಸಲು ನೆರವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದಲ್ಲದೆ, 2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಬದಲಾವಣೆಯ ಸೂಚನೆಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನ ಏಕತೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸಲಾಗಿದೆ. ರಾಜ್ಯದ ಸಾಮಾಜಿಕ ವ್ಯವಸ್ಥೆ ಹದಗೆಡಿಸಲಾಗಿದೆ. ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡು ರಾಜಕೀಯ ಲಾಭಕ್ಕಾಗಿ ಸುಳ್ಳು ಪ್ರಚಾರ ನಡೆಸಲಾಗಿದೆ ಎಂದು ಅವರು ಆರೋಪಿಸಿದರು.

ಈಗ ಅಸ್ಸಾಂನ ಜನರು ಒಗ್ಗೂಡಿ ತಮ್ಮ ಮತದ ಶಕ್ತಿಯಿಂದ ವಿಭಜನೆ ಮತ್ತು ನಿರಾಸಕ್ತಿಯ ರಾಜಕೀಯಕ್ಕೆ ತೆರೆ ಎಳೆಯಬೇಕಾದ ಸಮಯ ಬಂದಿದೆ ಎಂದು ಹೇಳಿದರು. ಜನರು ಏಕತೆ, ಕಲ್ಯಾಣ ಮತ್ತು ನೈಜ ಅಭಿವೃದ್ಧಿಯ ದಾರಿಯನ್ನು ಆರಿಸಿಕೊಂಡರೆ, ತಮ್ಮ ಮತದ ಮೂಲಕ ರಾಜ್ಯದ ಹೆಮ್ಮೆ ಮತ್ತು ಭವಿಷ್ಯವನ್ನು ಪುನರ್ ಸ್ಥಾಪಿಸಬಹುದು ಎಂದು ತಿಳಿಸಿದರು.

ವಿಶೇಷವಾಗಿ ಮೊದಲ ಬಾರಿಗೆ ಮತದಾರರು ಸಾಮರಸ್ಯ ಮತ್ತು ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

ಯೋಗೇಶ್ ಗೌಡ ಕೊಲೆ ಪ್ರಕರಣ: ಅಂತಿಮ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಿಕೆ

0

ಧಾರವಾಡ: ಧಾರವಾಡ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಈಗಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಏಪ್ರಿಲ್ 15ಕ್ಕೆ ಮುಂದೂಡಿಕೆಯಾಗಿದೆ. ಇಂದು ನ್ಯಾಯಾಲಯ ಆದೇಶ ಪ್ರಕಟಿಸುವುದಾಗಿ ನಿರೀಕ್ಷಿಸಿದ್ದರೂ, ತೀರ್ಪು ಮುಂದೂಡಲಾಗಿದೆ.

ಈ ಪ್ರಕರಣ ಸಂಬಂಧಿ ಎಲ್ಲಾ 21 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿದ್ದರು. ಕೋಣೆಗೆ ತೆರಳುವ ಮೊದಲು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ, “ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ ಎಂಬ ನಂಬಿಕೆ ಇದೆ. ಕೋರ್ಟ್ ಮೇಲೆ ಭರವಸೆ ಇರಬೇಕು, ಪ್ರಕರಣ ನ್ಯಾಯಾಲಯದಲ್ಲಿದೆ, ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ” ಎಂದು ತಿಳಿಸಿದ್ದಾರೆ.

ಈ ತೀರ್ಪಿನ ನಿರೀಕ್ಷೆಯಲ್ಲಿ ನ್ಯಾಯಾಲಯದ ಮುಂದಿನ ದಿನಗಳಲ್ಲಿ ಅಧಿಕೃತ ಆದೇಶ ಪ್ರಕಟವಾಗುವಂತೆ, ಆರೋಪಿಗಳ ಹಾಗೂ ಕುಟುಂಬಗಳ ಗಮನ ತೀವ್ರವಾಗಿದೆ.

error: Content is protected !!