Home Blog

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ!

ಗದಗ: ಜಿಲ್ಲೆಯ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಯುವಕನೊಬ್ಬನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

27 ವರ್ಷದ ಚಂದ್ರು ಕುರಿ ಎಂಬ ಯುವಕ ಮಂಗಳವಾರ ರಾತ್ರಿ ಮನೆಯಿಂದ ಹೊರಟಿದ್ದಾನೆ. ಆದರೆ, ಮುಂದಿನ ದಿನ ಗ್ರಾಮ ಹೊರವಲಯದ ಬ್ರಿಡ್ಜ್ ಕೆಳಗೆ ಅವನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಕುಟುಂಬಸ್ಥರನ್ನು ದುಃಖದ ಸಾಗರಕ್ಕೆ ತಳ್ಳಿದೆ.

ಕುಟುಂಬಸ್ಥರ ಆರೋಪ – ಕೊಲೆ ಮಾಡಿ ಸುಟ್ಟಿದ್ದಾರೆ

ಮೃತನ ಕುಟುಂಬದವರು ಇದೊಂದು ಪೂರ್ವ ಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ. ಎದುರು ಮನೆಯ ಕುಟುಂಬದವರ ಮೇಲೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ.

ಚಂದ್ರು ಎದುರು ಮನೆಯ ಹೆಣ್ಣುಮಕ್ಕಳನ್ನು ನೋಡುತ್ತಿದ್ದನೆಂಬ ಅನುಮಾನದಿಂದಾಗಿ ಹಿಂದಿನಿಂದಲೂ ಜಗಳಗಳು ನಡೆದಿದ್ದವು ಎಂದು ಕುಟುಂಬಸ್ಥರು ಹೇಳಿದ್ದಾರೆ. ಕೆಲವೊಮ್ಮೆ ಬೈಕ್ ಹತ್ತಿಸಲು ಪ್ರಯತ್ನಿಸಿದ ಘಟನೆಗಳೂ ನಡೆದಿದ್ದವು ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಆ ಕುಟುಂಬದವರೇ ಕೊಲೆ ಮಾಡಿ ನಂತರ ಶವವನ್ನು ಸುಟ್ಟಿದ್ದಾರೆ ಎಂದು ಮೃತನ ಕುಟುಂಬದವರು ದೂರಿದ್ದಾರೆ.

ತಂದೆಯ ಆಕ್ರೋಶ – “ಕೊಲೆ ಮಾಡಿದವರನ್ನು ಬಿಡಲ್ಲ”

ಮೃತ ಚಂದ್ರುವಿನ ತಂದೆ ಬಸವರಾಜ್ ದುಃಖ ಮತ್ತು ಆಕ್ರೋಶದಲ್ಲಿ ಮಾತನಾಡಿ, “ನನ್ನ ಮಗ ಒಳ್ಳೆಯ ಹುಡುಗ. ಯಾರ ಜೊತೆಗೂ ತಕರಾರು ಮಾಡಲಿಲ್ಲ. ದಿನವೂ ಕೆಲಸಕ್ಕೆ ಹೋಗುವಾಗ 100 ರೂಪಾಯಿ ಕೇಳುತ್ತಿದ್ದ. ಅಂತಹ ಮಗನನ್ನು ಕಳೆದುಕೊಂಡಿದ್ದೇನೆ. ಕೊಲೆ ಮಾಡಿದವರನ್ನು ಬಿಡುವುದಿಲ್ಲ, ಸೇಡು ತೀರಿಸಿಕೊಳ್ಳುತ್ತೇನೆ” ಎಂದು ಕಣ್ಣೀರಿನಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

ಇನ್ನೂ ಅವರು, “ನನ್ನ ಬಳಿ ಮೂರು ಎಕರೆ ಹೊಲ ಇದೆ. ಅದು ಹೋದರೂ ಪರವಾಗಿಲ್ಲ, ಆದರೆ ನನ್ನ ಮಗನ ಸಾವಿಗೆ ನ್ಯಾಯ ತರುತ್ತೇನೆ” ಎಂದು ಹೇಳಿದ್ದಾರೆ.

ಮದುವೆ ಕನಸು ನುಚ್ಚುನೂರು!

ಚಂದ್ರು ಮನೆಯ ಹಿರಿಯ ಮಗನಾಗಿದ್ದು, ಅವನ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದರು. ಬೀಳಲಿಂಗೇಶ್ವರ ಜಾತ್ರೆಯ ಬಳಿಕ ಹುಡುಗಿ ನೋಡಿ ಮದುವೆ ಮಾಡಲು ಯೋಜನೆ ಹಾಕಿಕೊಂಡಿದ್ದರು. ಆದರೆ ಈ ದುರ್ಘಟನೆ ಅವರ ಕನಸುಗಳನ್ನು ಭಗ್ನಗೊಳಿಸಿದೆ.

ಪೊಲೀಸರ ತನಿಖೆ ಆರಂಭ

 

ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ.
ಸಮಗ್ರ ತನಿಖೆಯ ಬಳಿಕವೇ ನಿಜಾಂಶ ಹೊರಬರುವ ನಿರೀಕ್ಷೆ ಇದೆ.

IPL 2026: ನಮ್ಮ ಸಿಂಹಗಳ ದಿನ ಬಂತು! ಪಂದ್ಯಕ್ಕೂ ಮುನ್ನ RCBಗೆ ವಿಶ್‌ ಮಾಡಿದ ವಿಜಯ್‌ ಮಲ್ಯ!

0

ಬೆಂಗಳೂರು: ಐಪಿಎಲ್ 2026ರ ಸೀಸನ್‌ಗೆ ಇಂದು ಚಾಲನೆ ದೊರೆಯುತ್ತಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ.

ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಮಾಡಿದ ಟ್ವೀಟ್ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ಮಲ್ಯ ಅವರು ಆರ್‌ಸಿಬಿ ತಂಡಕ್ಕೆ ಶುಭಹಾರೈಸಿ, “ಬೆಂಗಳೂರಿನ ನಮ್ಮ ಸಿಂಹಗಳಿಗೆ ಆ ದಿನ ಬಂದಿದೆ… ನಮ್ಮ ಸಿಂಹಗಳು ಐಪಿಎಲ್ ಚಾಂಪಿಯನ್ಸ್ ಆಗಲಿ. ಗುಡ್ ಲಕ್, ಪ್ಲೇ ಬೋಲ್ಡ್… ಧೈರ್ಯದಿಂದ ಆಟವಾಡಿ” ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಈ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಭಾರೀ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. “ಪ್ಲೇ ಬೋಲ್ಡ್, ವಿನ್ ಬಿಗ್” ಎಂದು ಕೆಲವರು ಬರೆದರೆ, “ಇದು ನಮ್ಮ ಸಮಯ” ಎಂದು ಮತ್ತಷ್ಟು ಅಭಿಮಾನಿಗಳು ಉತ್ಸಾಹ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ಮಲ್ಯ ಅವರು ಆರ್‌ಸಿಬಿ ತಂಡದ ಕುರಿತು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು. 2008ರಲ್ಲಿ 450 ಕೋಟಿ ರೂಪಾಯಿಗೆ ತಂಡವನ್ನು ಖರೀದಿಸಿದ ವಿಚಾರವನ್ನು ನೆನಪಿಸಿಕೊಂಡ ಅವರು, ಇಂದು ಅದರ ಮೌಲ್ಯ 16,500 ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಹಾಗೇ ವಿರಾಟ್ ಕೊಹ್ಲಿ ಅವರನ್ನು ಯುವಕರಾಗಿದ್ದಾಗಲೇ ತಂಡಕ್ಕೆ ಸೇರಿಸಿಕೊಂಡಿದ್ದೆ ಎಂದು ತಿಳಿಸಿದ್ದಾರೆ. “ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎ ಭಾಗವಾಗಿರುತ್ತದೆ” ಎಂದೂ ಹೇಳಿದ್ದಾರೆ.

ಪ್ರಸ್ತುತ ಆರ್‌ಸಿಬಿ ತಂಡದ ಮಾಲೀಕತ್ವವು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಬ್ಲ್ಯಾಕ್‌ಸ್ಟೋನ್ ಸೇರಿರುವ ಒಕ್ಕೂಟದ ಕೈಯಲ್ಲಿದೆ. ಈ ಒಕ್ಕೂಟವು ತಂಡವನ್ನು ಸುಮಾರು 1.78 ಬಿಲಿಯನ್ ಡಾಲರ್‌ಗೆ ಖರೀದಿಸಿದೆ.

Fake Doctor: ನಕಲಿ ವೈದ್ಯನ ಇಂಜೆಕ್ಷನ್ʼ​ಗೆ​​​​​​​​​​ 9ನೇ ತರಗತಿ ಬಾಲಕಿ ಬಲಿ!

ರಾಯಚೂರು: ನಕಲಿ ವೈದ್ಯ ನೀಡಿದ ಇಂಜೆಕ್ಷನ್ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ದುರ್ಘಟನೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಬಿಂದು (14) ಎಂದು ಗುರುತಿಸಲಾಗಿದೆ. ಜ್ವರದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ನಕಲಿ ವೈದ್ಯನ ಬಳಿ ಇಂಜೆಕ್ಷನ್ ಪಡೆದಿದ್ದಳು.

ಇಂಜೆಕ್ಷನ್‌ಗೆ ರಿಯಾಕ್ಷನ್ ಉಂಟಾಗಿ ಆರೋಗ್ಯ ತೀವ್ರವಾಗಿ ಹದಗೆಟ್ಟ ಪರಿಣಾಮ ಬಿಂದು ಮೃತಪಟ್ಟಿದ್ದಾಳೆ. ಘಟನೆಯ ನಂತರ ನಕಲಿ ವೈದ್ಯ ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕವಿತಾಳ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಪ್ರಕರಣ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸ ಅವಕಾಶಗಳು: ಪ್ರಧಾನಿ ಮೋದಿ

0

ನವದೆಹಲಿ: ಉತ್ತರ ಪ್ರದೇಶದ ಜೇವರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಯೋಜನೆ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಮಾನ ನಿಲ್ದಾಣವು ಪ್ರಾದೇಶಿಕ ಅಭಿವೃದ್ಧಿ ಮತ್ತು ಸಂಪರ್ಕ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇದು ಭಾರತದ ಹೊಸ ಚೈತನ್ಯದ ಸಂಕೇತವಾಗಿದ್ದು, ಉತ್ತರ ಪ್ರದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದು ಹೇಳಿದರು.

ಈ ಯೋಜನೆ ಪಶ್ಚಿಮ ಉತ್ತರ ಪ್ರದೇಶದ ರೈತರು ಮತ್ತು ಯುವಜನರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಿದೆ. ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಹೊಸ ಗುರುತು ತರುವುದಾಗಿ ಮೋದಿ ಹೇಳಿದರು.

ಅಲ್ಲದೆ, ನೋಯ್ಡಾ ವಿಮಾನ ನಿಲ್ದಾಣದಿಂದ ಆಗ್ರಾ, ಮಥುರಾ, ಗಾಜಿಯಾಬಾದ್, ಮೀರತ್, ಇಟಾವಾ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಎಸಿಬಿಯಲ್ಲಿ ಅತ್ಯುತ್ತಮ ಸೇವೆಗೆ ಸಿಎಂ ಪದಕ: ವೀರೇಶ ಜೋಳದ ಸಾಧನೆಗೆ ಅಭಿನಂದನೆಗಳ ಮಹಾಪೂರ!

0

ಗದಗ: ಪ್ರಸ್ತುತ ವಿಜಯನಗರ ಜಿಲ್ಲೆಯ ಮುನಿರಾಬಾದ್‌ನ ಇಂಡಿಯಾ ರಿಸರ್ವ್ ಬಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೀರೇಶ ಎ. ಜೋಳದ ಅವರು, ಈ ಹಿಂದೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗದಗ ಜಿಲ್ಲಾ ಘಟಕದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.

ಈ ಹಿಂದೆ ಗದಗ ಎಸಿಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಅವರು ಭ್ರಷ್ಟಾಚಾರ ಪ್ರಕರಣಗಳ ಪತ್ತೆ ಮತ್ತು ತನಿಖೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವೈಯಕ್ತಿಕವಾಗಿ 40 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪ್ರಮುಖ ಪಾತ್ರವಹಿಸಿ, ಯಾವುದೇ ಮಾಹಿತಿ ಸೋರಿಕೆಯಾಗದಂತೆ ಟ್ರ್ಯಾಪ್ ದಾಳಿ ಹಾಗೂ ಶೋಧ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಸೂಕ್ಷ್ಮ ಯೋಜನೆ, ನಿಖರ ಕಾರ್ಯಾಚರಣೆ ಮತ್ತು ದೃಢ ಸಾಕ್ಷ್ಯಾಧಾರಗಳೊಂದಿಗೆ ಪ್ರಕರಣಗಳನ್ನು ದಾಖಲಿಸುವಲ್ಲಿ ಅವರು ತೋರಿದ ನಿಪುಣತೆ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಿದೆ. ಭ್ರಷ್ಟಾಚಾರದ ವಿರುದ್ಧ ಕಠಿಣ ನಿಲುವು ಹೊಂದಿ ಕಾರ್ಯನಿರ್ವಹಿಸಿದ ಅವರು, ಹಲವಾರು ಆರೋಪಿಗಳನ್ನು ಕಾನೂನಿನ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ, ಸಾರ್ವಜನಿಕರಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯದಲ್ಲಿಯೂ ಮುಂಚೂಣಿಯಲ್ಲಿ ನಿಂತು, ಜನರಲ್ಲಿ ಕಾನೂನು ಅರಿವು ಮತ್ತು ನೈತಿಕತೆ ಬೆಳೆಸಲು ಶ್ರಮಿಸಿದ್ದಾರೆ. ಇದರ ಫಲವಾಗಿ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ಗಳಿಸಿದ್ದಾರೆ.

ದೈನಂದಿನ ಕರ್ತವ್ಯದ ಜೊತೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮೇಘಾಲಯ ರಾಜ್ಯಗಳಲ್ಲಿ ನಡೆದ ಚುನಾವಣಾ ಕರ್ತವ್ಯಗಳನ್ನು ಸಹ ಯಶಸ್ವಿಯಾಗಿ ನಿರ್ವಹಿಸಿರುವುದು ಅವರ ಸೇವಾ ನಿಷ್ಠೆಗೆ ಸಾಕ್ಷಿಯಾಗಿದೆ.

ಎಸಿಬಿಯಲ್ಲಿ ತೋರಿದ ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಸಿಎಂ ಪದಕ ಲಭಿಸಿರುವುದು ಗದಗ ಜಿಲ್ಲೆ ಹಾಗೂ ಹುಟ್ಟೂರು ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮಸ್ಥರಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಸಾಧನೆಗೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ನೇಹಿತರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

0

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ದುರ್ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರ ಸಮೀಪದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿಕೊಂಡು ಬಸ್‌ನಲ್ಲಿ ಊರಿಗೆ ಬಂದಿದ್ದ ಚಿರಂತ್ ರಸ್ತೆ ದಾಟುವ ವೇಳೆ ಈ ಅಪಘಾತ ಸಂಭವಿಸಿದೆ.

ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಚಿರಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಅತಿವೇಗ ಮತ್ತು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

0

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ದೇವಸ್ಥಾನದ ಆವರಣದಲ್ಲಿ ಚಿತ್ರೀಕರಣ ಮಾಡುತ್ತಿದ್ದರು. ವೇಳೆ ಸ್ಥಳೀಯ ಕೆಲವರುದೇವಸ್ಥಾನದ ಪಾವಿತ್ರತೆಗೆ ಧಕ್ಕೆ ತರುತ್ತಿದ್ದೀರಿ ಎಂದು ಆರೋಪಿಸಿ ಗಲಾಟೆ ಆರಂಭಿಸಿದ್ದಾರೆ.

ಫೋಟೋಗ್ರಾಫರ್ಗಳು ಮನವಿ ಮಾಡಿದರೂ ಕೇಳದ ಹಲ್ಲೆಕೋರರು ಚೇತನ್, ಯಶು ಮತ್ತು ಸೋಮಶೇಖರ್ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮೆರಾ ಮತ್ತು ಮೊಬೈಲ್ಗಳನ್ನು ಜಖಂಗೊಳಿಸಿರುವುದಾಗಿ ತಿಳಿದುಬಂದಿದೆ. ಮೇಕಪ್ ಆರ್ಟಿಸ್ಟ್ಗಳ ಮೇಲೂ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ.

ಘಟನೆ ಬಳಿಕ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದಾಗ, ಪೊಲೀಸರ ಸಮ್ಮುಖದಲ್ಲೇ ಎರಡೂ ಗುಂಪುಗಳ ನಡುವೆ ಮತ್ತೆ ವಾಗ್ವಾದ ನಡೆದು ಹೊಡೆದಾಟ ಸಂಭವಿಸಿದೆ. ಗಾಯಗೊಂಡ ಫೋಟೋಗ್ರಾಫರ್ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೊಂದೆಡೆ, ಸ್ಥಳೀಯರು ಇದು ಪ್ರವಾಸಿ ತಾಣವಲ್ಲ, ಧಾರ್ಮಿಕ ಕೇಂದ್ರವಾಗಿದ್ದು, ಪಾವಿತ್ರತೆ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ. ದೇವಸ್ಥಾನದ ಸುತ್ತಲೂ ಬೇಲಿ ಹಾಕಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮುಸ್ಲಿಂ ವಿದ್ಯಾರ್ಥಿಗೆ “ಟೆರರಿಸ್ಟ್” ಎಂದ ಪ್ರಾಧ್ಯಾಪಕ! ಪ್ರೊಫೆಸರ್ ಅಮಾನತು

ಬೆಂಗಳೂರು: ನಗರದ ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಅವರನ್ನು ಸೇವೆಯಿಂದ ವಜಾಗೊಳಿಸಿದೆ..

ಬಿಬಿಎ ಅನಾಲಿಟಿಕ್ಸ್ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ, ಅರೆಕಾಲಿಕ ಪ್ರಾಧ್ಯಾಪಕ ಡಾ. ಮುರುಳೀಧರ ದೇಶಪಾಂಡೆ ಅವರು ಒಬ್ಬ ವಿದ್ಯಾರ್ಥಿಯನ್ನು ಪದೇಪದೇಭಯೋತ್ಪಾದಕಎಂದು ಕರೆದಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ, “ನಿಮ್ಮಂತಹವರಿಂದಲೇ ಇರಾನ್ ಯುದ್ಧ ನಡೆದಿದೆಹಾಗೂಟ್ರಂಪ್ ನಿನ್ನನ್ನು ಕರೆದುಕೊಂಡು ಹೋಗುತ್ತಾರೆಎಂಬ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಘಟನೆ ಸುಮಾರು 60 ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಆಡಳಿತವು ಪ್ರಾಧ್ಯಾಪಕರನ್ನು ಅಮಾನತುಗೊಳಿಸಿದೆ. ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಿಸಲಾಗಿದೆ.

ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆ ದೂರು ನೀಡಿದ್ದು, ವಿದ್ಯಾರ್ಥಿ ಅಧಿಕೃತ ದೂರು ನೀಡಲು ಸಮಯ ಕೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಅವರು, ಮುಂದಿನ ಕ್ರಮವನ್ನು ವಿಶ್ವವಿದ್ಯಾಲಯದ ವರದಿ ಆಧರಿಸಿ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ, ನೆಲಮಂಗಲ ಸಮೀಪದ ಟಿ. ಬೇಗೂರು ಪ್ರದೇಶದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ವಿಡಿಯೋ ಕೂಡ ಇತ್ತೀಚೆಗೆ ವೈರಲ್ ಆಗಿತ್ತು. ಪ್ರಕರಣದಲ್ಲಿಯೂ ಅಸಭ್ಯ ವರ್ತನೆ ಆರೋಪದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

0

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಅಭಿಷೇಕ್ (21) ಮತ್ತು ಮನೋಜ್ (21) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದು ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ನವೀನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IPL 2026: RCB ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ! ಬೆಂಗಳೂರಲ್ಲಿ ಇಂದು ಹೇಗಿರುತ್ತೆ ವಾತಾವರಣ?

0

ಕ್ರಿಕೆಟ್ ಅಭಿಮಾನಿಗಳ ಬಹುಕಾಲದ ನಿರೀಕ್ಷೆಗೆ ಇಂದು ತೆರೆ ಬೀಳುತ್ತಿದೆ. ಐಪಿಎಲ್ ಸೀಸನ್ 19ರ ಉದ್ಘಾಟನಾ ಪಂದ್ಯದಲ್ಲಿ RCB ಮತ್ತು SRH ತಂಡಗಳು ಮುಖಾಮುಖಿಯಾಗುತ್ತಿವೆ.

ಈ ಹೈವೋಲ್ಟೇಜ್ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇತ್ತೀಚೆಗೆ ನಿಷೇಧದಿಂದ ಮುಕ್ತಗೊಂಡ ಬಳಿಕ ಇದೇ ಮೈದಾನದಲ್ಲಿ ಪಂದ್ಯ ಆಯೋಜಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಶನಿವಾರ ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆ ಇದೆ. ಮಧ್ಯಾಹ್ನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದರೂ, ಸಂಜೆ ಪಂದ್ಯದ ವೇಳೆಯಲ್ಲಿ ಮಳೆಯ ಸಾಧ್ಯತೆ ಕೇವಲ 5 ಶೇಕಡಾ ಮಾತ್ರ. ಹೀಗಾಗಿ ಪಂದ್ಯ ರದ್ದಾಗುವ ಸಾಧ್ಯತೆ ಬಹಳ ಕಡಿಮೆ. ಆದರೆ, ಮಳೆ ಕಾರಣದಿಂದ ಸ್ವಲ್ಪ ಸಮಯ ವ್ಯತ್ಯಯ ಉಂಟಾಗಬಹುದು.

ಕಳೆದ ಸೀಸನ್‌ನಲ್ಲಿ ಇದೇ ಮೈದಾನದಲ್ಲಿ ನಡೆದ 5 ಪಂದ್ಯಗಳಲ್ಲಿ ಆರ್ಸಿಬಿ 2ರಲ್ಲಿ ಗೆದ್ದು, 3ರಲ್ಲಿ ಸೋಲು ಕಂಡಿತ್ತು. ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಅವರು ಇಲ್ಲಿ ಆಡಿದ 106 ಇನ್ನಿಂಗ್ಸ್‌ಗಳಲ್ಲಿ 3618 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ಬಾರಿ ಉದ್ಘಾಟನಾ ಸಮಾರಂಭ ಇರುವುದಿಲ್ಲ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ ಸಂಜೆ 7:00ಕ್ಕೆ ನಡೆಯಲಿದೆ.

error: Content is protected !!