Home Blog

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿಯಿಂದ ಚಾಲನೆ

0

ಕೋಲಾರ: ದೇಶದ ಹಾರ್ಮಿಕ ವೀರ್ಯದಲ್ಲಿ ಮತ್ತೊಂದು ಹೊಸ ಘಟ್ಟ – ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕ ನಾಳೆ (ಫೆ.17) ಅಧಿಕೃತ ಚಾಲನೆ ಪಡೆಯುತ್ತಿದೆ. ವರಚುವಲ್ ಉದ್ಘಾಟನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ಈ ಘಟಕವನ್ನು ಉದ್ಘಾಟಿಸಲಿದ್ದಾರೆ.

ಸ್ಥಳೀಯ ಸನ್ನಿವೇಶದಲ್ಲಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ವೈಯಕ್ತಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭದ್ರತಾ ಕ್ರಮಗಳು ಗಟ್ಟಿಯಾಗಿದ್ದು, ಜಿಲ್ಲಾಧಿಕಾರಿ ಎಂ.ಆರ್. ರವಿ ಹಾಗೂ ಎಸ್‌ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ತಪಾಸಣೆ ಮಾಡಿದರು.

16 ಎಕರೆ ಪ್ರದೇಶದಲ್ಲಿ ನಿರ್ಮಿತ ಘಟಕವು ದೇಶದ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ. ಮೊದಲ ಹಂತದಲ್ಲಿ ವರ್ಷಕ್ಕೆ 10 H125 ಮಾದರಿಯ ಹೆಲಿಕಾಪ್ಟರ್‌ಗಳು ಉತ್ಪಾದನೆಗೆ ಬರುತ್ತವೆ. ಸ್ಥಳೀಯ ಉದ್ಯೋಗ ಅವಕಾಶಗಳು, ಕೋಲಾರ ಕೈಗಾರಿಕಾ ಬೆಳವಣಿಗೆ, ಮತ್ತು ರಾಷ್ಟ್ರಮಟ್ಟದ ಹೆಗ್ಗಳಿಕೆ – ಈ ಎಲ್ಲಾ ಅಂಶಗಳು ಈ ಘಟಕದ ಮಹತ್ವವನ್ನು ಹೆಚ್ಚಿಸುತ್ತಿವೆ.

ಪವಿತ್ರಾ ಗೌಡಗೆ ಮತ್ತೆ ನಿರಾಸೆ: ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

ಬೆಂಗಳೂರು: ಪವಿತ್ರಾ ಗೌಡ ಅವರಿಗೆ ಮತ್ತೆ ಜಾಮೀನು ನಿರಾಕರಣೆ ಎದುರಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಅವರು ಮಗಳ ಪರೀಕ್ಷೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿದ್ದರು.

25 ದಿನಗಳ ಕಾಲ ಜಾಮೀನು ನೀಡುವಂತೆ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಅವರು ಜೈಲಿನಲ್ಲೇ ಉಳಿಯಬೇಕಾಗಿದೆ.

ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಕೂಡ ಭಾಗಿಯಾಗಿದ್ದರೆಂದು ಆರೋಪಿಸಲಾಗಿದೆ. ಆರೋಪಿಯು ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ತನಿಖೆಯಲ್ಲಿ ಹೇಳಲಾಗಿದೆ.
ಇದಕ್ಕೂ ಮುನ್ನ ಜೈಲು ಆಹಾರದಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಮನೆ ಊಟಕ್ಕೆ ಅವಕಾಶ ಕೋರಿದ್ದರೂ ನಂತರ ಅದು ರದ್ದುಗೊಂಡಿತ್ತು.

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

0

ನವದೆಹಲಿ/ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿವಾದ ದೀರ್ಘ ವಿರಾಮದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. 2018ರ ಸೆಪ್ಟೆಂಬರ್‌ನಲ್ಲಿ ನೀಡಿದ್ದ ಮಹಿಳಾ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಭಾರತದ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

9 ನ್ಯಾಯಮೂರ್ತಿಗಳ ಪ್ರತ್ಯೇಕ ಪೀಠವು ಏಪ್ರಿಲ್ 7ರಿಂದ ವಿಚಾರಣೆ ಆರಂಭಿಸಲಿದ್ದು, ಏಪ್ರಿಲ್ 22ರಂದು ಮುಕ್ತಾಯಗೊಳಿಸುವ ಉದ್ದೇಶ ಹೊಂದಿದೆ. ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ನ್ಯಾಯಪೀಠ ಈ ಕುರಿತು ತೀರ್ಮಾನ ಪ್ರಕಟಿಸಿದೆ. 9 ನ್ಯಾಯಾಧೀಶರ ಪೀಠದ ಸಂಯೋಜನೆಯನ್ನು ಸಿಜೆಐ ಆಡಳಿತಾತ್ಮಕ ಆದೇಶದ ಮೂಲಕ ಪ್ರತ್ಯೇಕವಾಗಿ ಪ್ರಕಟಿಸಲಾಗುತ್ತದೆ.

ಮಹಿಳಾ ಪ್ರವೇಶ ತೀರ್ಪನ್ನು ಬೆಂಬಲಿಸುವ ಪಕ್ಷಗಳಿಗೆ ಏಪ್ರಿಲ್ 7ರಿಂದ 9ರವರೆಗೆ ವಾದ ಮಂಡಿಸಲು ಅವಕಾಶ ನೀಡಲಾಗಿದ್ದು, ವಿರೋಧಿಸುವ ಪಕ್ಷಗಳಿಗೆ ಏಪ್ರಿಲ್ 14ರಿಂದ 16ರವರೆಗೆ ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 21ರಂದು ಮರುಪ್ರಶ್ನೆ ಸಲ್ಲಿಕೆಗಳು ನಡೆಯಲಿದ್ದು, ಏಪ್ರಿಲ್ 22ರಂದು ವಿಚಾರಣೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

2018ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಪೀಠ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ವಿರೋಧಾಭಿಪ್ರಾಯ ವ್ಯಕ್ತಪಡಿಸಿದ್ದರು. ನಂತರ ಅಕ್ಟೋಬರ್‌ನಲ್ಲಿ ಕೆಲ ಹಿಂದೂ ಪರ ಸಂಘಟನೆಗಳು ತೀರ್ಪು ವಿರೋಧಿಸಿ ಭಾರೀ ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಮರುಪರಿಶೀಲನೆ ಅರ್ಜಿ ಸಲ್ಲಿಸಲಾಗಿತ್ತು.

ಇದರೊಂದಿಗೆ ದರ್ಗಾ ಅಥವಾ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶ, ಪಾರ್ಸಿ ಅಲ್ಲದವರನ್ನು ವಿವಾಹವಾದ ಮಹಿಳೆಯರ ಅಗ್ನಿ ದೇವಾಲಯ ಪ್ರವೇಶ, ದಾವೂದಿ ಬೊಹ್ರಾ ಸಮುದಾಯದ ಬಹಿಷ್ಕಾರ ಹಾಗೂ ಸ್ತ್ರೀ ಜನನಾಂಗ ಛೇದನ ಪದ್ಧತಿ ಸೇರಿದಂತೆ ಹಲವು ಧಾರ್ಮಿಕ ಆಚರಣೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನೂ ಪಟ್ಟಿ ಮಾಡಲಾಗಿದೆ.

ವಸತಿ ಶಾಲೆಯ ಮೂರನೇ ಮಹಡಿಯಿಂದ ಬಿದ್ದು SSLC ವಿದ್ಯಾರ್ಥಿ ಆತ್ಮಹತ್ಯೆ!

0

ಚಿತ್ರದುರ್ಗ: ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಡಿವಿಎಸ್ ಶಾಲೆಯಲ್ಲಿ ನಡೆದಿದೆ.

ಡಿವಿಎಸ್ ವಸತಿ ಶಾಲೆಯ SSLC ವಿದ್ಯಾರ್ಥಿ ಕೊಟ್ರೇಶ್(16) ಮೃತ ದುರ್ಧೈವಿಯಾಗಿದ್ದು, ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು, ಈವರೆಗೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಕೊಟ್ರೇಶ್ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಭರಮಸಾಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

0

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ‘ವಂದೇ ಮಾತರಂ’ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

‘ವಂದೇ ಮಾತರಂ’ ಹೇಳುವ ಮೂಲಕ ರಾಷ್ಟ್ರಗೀತೆಯನ್ನು ಡೀ-ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಆರ್‌ಎಸ್‌ಎಸ್‌ನ ಗೋಳವಲ್ಕರ್ ಅವರು ರಾಷ್ಟ್ರಗೀತೆಯ ಬಗ್ಗೆ ಅಪಸ್ವರ ಎತ್ತಿದ್ದರು. ಒಂದು ದಿನವೂ ರಾಷ್ಟ್ರಗೀತೆಯನ್ನು ಅವರ ಸಂಘದಲ್ಲಿ ಹಾಡಿಲ್ಲ. ಅದಕ್ಕಾಗಿ ವಂದೇ ಮಾತರಂ ಅನ್ನು ಎಲ್ಲೆಡೆ ಕಡ್ಡಾಯಗೊಳಿಸಲಾಗುತ್ತಿದೆ ಎಂದು  ಹೇಳಿದರು.

“ಮೊದಲು ವಂದೇ ಮಾತರಂ, ನಂತರ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದಂತಾಗಿದೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಧಕ್ಕೆ ತರುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ನಡೆಯುತ್ತಿದ್ದಾರೆ,” ಎಂದು ಹರಿಪ್ರಸಾದ್ ಕಿಡಿಕಾರಿದರು.

‘ವಂದೇ ಮಾತರಂ’ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಹಿನ್ನೆಲೆ ಇದನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

“ವಂದೇ ಮಾತರಂನಲ್ಲಿ ದೇವರ ಹೆಸರೂ ಇದೆ. ಎಲ್ಲಾ ಧರ್ಮದವರು ಇರುವ ದೇಶದಲ್ಲಿ ಇದು ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೋಮು ಭಾವನೆ ಕೆರಳಿಸಲು ಇದನ್ನು ಬಳಸಲಾಗುತ್ತಿದೆ. ಇದು ಚುನಾವಣಾ ಗಿಮಿಕ್ ಮಾತ್ರ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

BREAKING: ಧಾರವಾಡ ಹೈಕೋರ್ಟ್ ಸೇರಿ 3 ಜಿಲ್ಲೆಗಳ ಕೋರ್ಟ್‌ʼಗಳಿಗೆ ಬಾಂಬ್ ಬೆದರಿಕೆ ಇ-ಮೇಲ್!

0

ಧಾರವಾಡ: ಧಾರವಾಡ ಹೈಕೋರ್ಟ್ ಪೀಠಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿರುವ ಘಟನೆ ಆತಂಕ ಮೂಡಿಸಿದೆ. ಇ-ಮೇಲ್ ಮೂಲಕ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ರವಾನೆಯಾಗಿದ್ದು, ತಕ್ಷಣವೇ ವಕೀಲರು ಹಾಗೂ ಸಿಬ್ಬಂದಿ ನ್ಯಾಯಾಲಯ ಆವರಣದಿಂದ ಹೊರಬಂದಿದ್ದಾರೆ. ವಿಷಯ ತಿಳಿದು ಗರಗ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಆರಂಭಿಸಿದ್ದಾರೆ.

ಇದೇ ರೀತಿಯ ಇ-ಮೇಲ್ ಬೆದರಿಕೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಕ್ಕೆ ಸಹ ಬಂದಿದೆ. ಅಪರಿಚಿತ ವ್ಯಕ್ತಿ RDX ಸ್ಫೋಟಿಸುವುದಾಗಿ ಮಧ್ಯಾಹ್ನ 12:30ರ ಸಮಯ ಉಲ್ಲೇಖಿಸಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ.
ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಧೀಶರಿಗೆ ಈ ಇ-ಮೇಲ್ ರವಾನೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಷಯ ತಿಳಿದು ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಿ, ಸಿಬ್ಬಂದಿ ಹೊರಬಂದಿದ್ದಾರೆ. ಶ್ವಾನ ದಳ ಮತ್ತು ಭದ್ರತಾ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಇನ್ನೂ ಮಡಿಕೇರಿ ನ್ಯಾಯಾಲಯ ಕ್ಕೂ ಸಹ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನ್ಯಾಯಾಲಯದ ಅಧಿಕೃತ ಇ-ಮೇಲ್ ಐಡಿಗೆ ಬಂದಿರುವ ಈ ಸಂದೇಶದ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ.

ಬಾಂಬ್ ಪತ್ತೆ ದಳ ಹಾಗೂ ಭದ್ರತಾ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರಿದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದರೂ, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಘೋರ ದುರಂತ: ಅವೈಜ್ಞಾನಿಕ ಹಂಪ್ʼಗೆ ಯುವಕ ಬಲಿ!

0

ಶಿವಮೊಗ್ಗ: ಶಿವಮೊಗ್ಗದಲ್ಲಿ ಘೋರ ದುರಂತ ಸಂಭವಿಸಿದ್ದು, ಪಾಲಿಕೆ ನಿರ್ಮಿಸಿದ್ದ ಅವೈಜ್ಞಾನಿಕ ಹಂಪ್ಗೆ ಯುವಕ ಬಲಿಯಾದ ಘಟನೆ ಶಿವಮೊಗ್ಗದ ಎಲ್ಬಿಎಸ್ ನಗರದಲ್ಲಿ ಜರುಗಿದೆ. ಉಲ್ಲಾ (35)

ಮೃತ ದುರ್ಧೈವಿಯಾಗಿದ್ದು, ಎಲ್‌ಬಿಎಸ್ ನಗರ ಫ್ಲೈಓವರ್ ಸಮೀಪ ಹಂಪ್ ಗಮನಿಸದೆ ಬೈಕ್‌ನಿಂದ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೈಕ್ ಸವಾರ ಹಂಪ್ ಕಾಣದೇ ನಿಯಂತ್ರಣ ತಪ್ಪಿ ಬಿದ್ದ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೃತ ಉಲ್ಲಾ ಶಿವಮೊಗ್ಗದ ‘ಸಂಗೀತಾ ಮೊಬೈಲ್ಸ್’ನಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

 

ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಚಂದನ್ ಹತ್ಯೆ: ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

0

ಬೆಂಗಳೂರು: ಕೆನಡಾದಲ್ಲಿ ಹತ್ಯೆಯಾದ ಕನ್ನಡಿಗ ಚಂದನ್ ಪಾರ್ಥಿವ ಶರೀರ ಸ್ವಗ್ರಾಮ ತ್ಯಾಮಗೊಂಡ್ಲು ತಲುಪುತ್ತಿದ್ದಂತೆ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಮನೆ ಮುಂದೆ ಪೂಜಾ ವಿಧಿವಿಧಾನಗಳ ಬಳಿಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ರಿಂದ 3ರವರೆಗೆ ಜನರಿಗೆ ಅಂತಿಮ ನಮನ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಬಳಿಕ ಆರ್ಯವೈಶ್ಯ ಸಂಘದ ಸ್ಥಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ತಾಯಿ ಶೈಲಜಾ ಕಣ್ಣೀರಿಟ್ಟುಕೊಂಡು, “ನಮ್ಮ ಮಗ ಒಳ್ಳೆಯ ಹೆಸರು ಮಾಡಿದ್ದ. ನಮ್ಮನ್ನ ಕೆನಡಾಕ್ಕೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದ. ಸುಖವಾಗಿ ಬದುಕಬೇಕಿದ್ದ ವಯಸ್ಸಿನಲ್ಲಿ ನಮ್ಮನ್ನ ಬಿಟ್ಟು ಹೋದ. ಅವನ ಕೊಲೆಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಕೊಡಬೇಕು” ಎಂದು ಮನವಿ ಮಾಡಿದರು.

ಕುಟುಂಬದ ಆಕ್ರಂದನ ನಡುವೆ ಗ್ರಾಮಸ್ಥರು ಸಂತಾಪ ಸೂಚಿಸಿದ್ದು, ಆರೋಪಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು ದಾಖಲು

0

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ತೆರೆಯುವ ಮೂಲಕ ವಂಚನೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ ಸೃಷ್ಟಿಸಿ, ಗಣ್ಯ ವ್ಯಕ್ತಿಗಳ ಜೊತೆ ಇರುವ ಫೋಟೋಗಳನ್ನು ಪೋಸ್ಟ್ ಮಾಡಲಾಗಿದೆ.

ಹಿಂದಿ ಹೆಸರಿನೊಂದಿಗೆ ಖಾತೆ ರಚಿಸಿರುವ ವಂಚಕರು, ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬುವಂತೆ ಮಾಡುತ್ತಿದ್ದಾರೆ. ನಕಲಿ ಖಾತೆಯಿಂದ ತಪ್ಪು ಸಂದೇಶಗಳನ್ನು ಕಳುಹಿಸಿ ಜನರನ್ನು ದಾರಿ ತಪ್ಪಿಸುವ ಯತ್ನ ಮಾಡಲಾಗಿದೆ.

ಕೆಲವು ನಾಗರಿಕರು ಖಾತೆಯನ್ನು ನಿಜವೆಂದು ಭಾವಿಸಿ ಪ್ರತಿಕ್ರಿಯೆ ನೀಡಿರುವುದು ತಿಳಿದುಬಂದಿದೆ. ಮೊದಲು ನಂಬಿಕೆ ಗಳಿಸಿ ಬಳಿಕ ಹಣ ದೋಚುವ ಉದ್ದೇಶದಿಂದ ಖಾತೆ ಸೃಷ್ಟಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಕೂಡ ಅಲೋಕ್ ಕುಮಾರ್ ಹಾಗೂ ಭೀಮಾ ಶಂಕರ ಗುಳೇದ್ ಅವರ ಹೆಸರಿನಲ್ಲಿ ನಕಲಿ ಖಾತೆಗಳು ರಚನೆಯಾಗಿದ್ದವು. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸಾರ್ವಜನಿಕರು ಇಂತಹ ನಕಲಿ ಖಾತೆಗಳಿಗೆ ಮೋಸ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗೆ ಸೈಬರ್ ಸೆಲ್ ಅಧಿಕಾರಿಗಳ ಹೆಸರಿನಲ್ಲಿ ಬೆದರಿಕೆ ಕರೆ!

0

ಬೆಂಗಳೂರು: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗೆ ಬೆಂಗಳೂರು ಸೈಬರ್ ಸೆಲ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಬೆದರಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸುಪ್ರೀಂ ಕೋರ್ಟ್‌ ಮಾಜಿ ನ್ಯಾಯಮೂರ್ತಿಯಾದ ಜೆ. ಚೆಲಮೇಶ್ವರ್ ಅವರಿಗೆ ಅಪರಿಚಿತರು ಕರೆ ಮಾಡಿ ತಾವು ಬೆಂಗಳೂರಿನ ಸೈಬರ್ ಸೆಲ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ಕುರಿತು ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿ ಭರತ್ ಪರಾಶರ್ ದೂರು ನೀಡಿದ್ದು, ಅವರ ದೂರಿನ ಅನ್ವಯ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜನವರಿ 9ರಂದು ನಡೆದ ಈ ಘಟನೆಗೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತನಿಖೆ ಆರಂಭಿಸಲಾಗಿದೆ. ಕರೆ ಮಾಡಿದವರ ಪತ್ತೆಗಾಗಿ ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!