ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸರ್ವಜ್ಞರ ವಚನಗಳು ಜೀವನದ ಅನುಭವಗಳನ್ನು ಒಳಗೊಂಡಿವೆ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಯತ್ನ ವಚನಗಳ ಮೂಲಕ ನಡೆದಿದೆ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕ ಬಸವರಾಜ ಕುರಿ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಚರಿಸಲಾದ ಕವಿ ಸರ್ವಜ್ಞ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ಸರ್ವಕಾಲಿಕ ಸತ್ಯವನ್ನು ಪ್ರತಿಪಾದಿಸಿದ ಕವಿ ಸರ್ವಜ್ಞನ ವಚನಗಳು ಇಂದಿನ ಮಕ್ಕಳು, ಯುವಜನಾಂಗ ಹಾಗೂ ಸಮಾಜಕ್ಕೆ ದಾರಿದೀಪವಾಗಿವೆ. ಕವಿ ಸರ್ವಜ್ಞನ ವಚನಗಳು ಸಮಾಜ ಸುಧಾರಣೆಯ, ಜಾತ್ಯಾತೀತ, ಮಾನವೀಯ ಮೌಲ್ಯ ಹಾಗೂ ಸರ್ವಕಾಲಿಕ ಸತ್ಯವನ್ನು ಪ್ರತಿಪಾದಿಸುವ ವಚನಗಳಾಗಿವೆ. ಸರಳ, ಸಜ್ಜನಿಕೆ ಹಾಗೂ ಆದರ್ಶ ಗುಣಗಳನ್ನು ಹೊಂದಿದ್ದ ಸರ್ವಜ್ಞ ಸುಂದರ ಹಾಗೂ ಆದರ್ಶ ಸಮಾಜ ನಿರ್ಮಿಸಲು ನಿರಂತರವಾಗಿ ಶ್ರಮಿಸಿದ್ದಾರೆ ಎಂದರು.
ಜೆ.ಎ. ಪಾಟೀಲ, ಎನ್.ಎಲ್. ಚವ್ಹಾಣ, ಎಂ.ಪಿ. ಅಣಗೌಡರ, ಎಸ್.ಐ. ಜಗಾಪುರ, ರಾಜೇಶ್ವರಿ ಗವಳಿ, ಶಿಕ್ಷಕ ಡಿ.ವಿ. ಕಳ್ಳಿ ಇದ್ದರು.
ಬೂದಿಹಾಳ ಶಾಲೆಯಲ್ಲಿ: ಸಮೀಪದ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಆಚರಿಸಲಾಯಿತು.
ಮುಖ್ಯ ಶಿಕ್ಷಕರಾದ ಸಿ.ಕೆ. ಕೇಸರಿ ಮಾತನಾಡಿ, ಕವಿ ಸರ್ವಜ್ಞ ಸೌಜನ್ಯಶೀಲ, ವಿಧೇಯ, ಗೌರವಯುತವಾಗಿ ಬದುಕಿ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ ಎಂದರು. ಅತಿಥಿ ಶಿಕ್ಷಕಿಯರಾದ ದೀಪಾ ಪೂಜಾರ, ಸರಸ್ವತಿ ಪೂಜಾರ, ದೀಪಾ ತುಕ್ಕೋಜಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಇದ್ದರು.
ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ನರೇಗಲ್ಲ ಪಟ್ಟಣದ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕವಿ ಸರ್ವಜ್ಞ ಜಯಂತ್ಯುತ್ಸವವನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಬಿ.ಜಿ. ಶಿರ್ಸಿ, ಎಂ.ವಿ. ಕಡೆತೋಟದ, ವಿ.ಪಿ. ಗ್ರಾಮಪುರೋಹಿತ, ಎಸ್.ವಿ. ಹಿರೇಮಠ, ವಿ.ಎಸ್. ಜಾದವ್, ಎಸ್.ಕೆ. ಕುಲಕರ್ಣಿ, ಸಾವಿತ್ರಿ ಮಾನ್ವಿ, ಎಂ.ಎನ್. ಸಿಳ್ಳಿನ್, ಗೀತಾ ಶಿಂಧೆ, ಕೆ.ಐ. ಕೋಳಿವಾಡ, ಐ.ಬಿ. ಒಂಟೇಲಿ, ಎನ್.ಜೆ. ಸಂಗನಾಳ, ಜೆ.ವಿ. ಕೆರಿಯವರ, ಅಕ್ಕಮಹಾದೇವಿ ಅಯ್ಯನಗೌಡ್ರ, ರಾಜೇಶ್ವರಿ ಈಟಿ, ಗೀತಾ ಕಂಬಳಿ, ರಜಿಯಾಬೇಗಂ, ವಿದ್ಯಾ ಮುಗಳಿ, ಜಯಶ್ರೀ ಮೆಣಸಗಿ, ಎಂ.ಎಸ್. ಧರ್ಮಾಯತ, ಎಸ್.ಎ. ಚೋಳಿನ, ಪಿ.ಎಸ್. ಅಂಗಡಿ, ಪದ್ಮಾವತಿ ಅಂಬಿಗೇರ, ಶ್ವೇತಾ ಹಿರೇಮಠ, ನೇತ್ರಾ ಸೋಬಾನದ, ನಂದಿತಾ ರಾಜೂರ ಸೇರಿದಂತೆ ಸಿಬ್ಬಂದಿ ಇದ್ದರು.