Home Blog

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: 15 ಮಂದಿ ಸಾವು, ಹಲವರಿಗೆ ಗಾಯ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ರಾಮನಗರದಿಂದ ಉಧಂಪುರಕ್ಕೆ ತೆರಳುತ್ತಿದ್ದ ಬಸ್ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ವಿಮಾನ ಮೂಲಕ ಸ್ಥಳಾಂತರಿಸುವ ವ್ಯವಸ್ಥೆ ಸೇರಿದಂತೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಬಿಟ್‌ಕಾಯಿನ್ ಪ್ರಕರಣ: ಶಾಸಕ ಹ್ಯಾರಿಸ್ ಮನೆ ಸೇರಿ 17 ಕಡೆ ಇಡಿ ದಾಳಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದ್ದು, ಅವರ ನಿವಾಸ ಸೇರಿ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆಸಿದೆ.

ಹ್ಯಾರಿಸ್ ಬಿಡಿಎ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡರಾಗಿದ್ದಾರೆ. ನಲಪಾಡ್ ನಿವಾಸದಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ದಾಳಿ ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದು, ಹ್ಯಾಕರ್ ಶ್ರೀಕಿ ಜೊತೆ ಆರ್ಥಿಕ ವ್ಯವಹಾರ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಇಡಿ ತನಿಖೆ ಕೈಗೊಂಡಿದೆ.

ನಲಪಾಡ್ ಮತ್ತು ಶ್ರೀಕಿ ನಡುವೆ ಸುಮಾರು ಆರು ವರ್ಷಗಳ ಕಾಲ ಆರ್ಥಿಕ ಸಂಪರ್ಕ ಇದ್ದು, ಇಬ್ಬರೂ ಸೇರಿ ಸುಮಾರು 4.5 ಕೋಟಿ ರೂ. ವಹಿವಾಟು ನಡೆಸಿದ್ದಾರೆ ಎನ್ನಲಾಗಿದೆ.

45 ಡಿಗ್ರಿ ಬಿಸಿಲಿನ ಅಬ್ಬರ: ಕೆಲಸಕ್ಕೆ ಹೊರಟ ಯುವಕ ರಸ್ತೆ ಮೇಲೆ ಕುಸಿದು ಸಾವು

0

ಬೀದರ್: ಬೀದರ್ ಜಿಲ್ಲೆ ಯಲ್ಲಿ ಮುಂದುವರಿದ ಭೀಕರ ಉಷ್ಣ ಅಲೆಯ ನಡುವೆ ಹೀಟ್ ಸ್ಟ್ರೋಕ್‌ಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ. ಕಮಲನಗರ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದ ಈ ಘಟನೆ ಪ್ರದೇಶದಲ್ಲಿ ಆತಂಕವನ್ನು ಹೆಚ್ಚಿಸಿದೆ.

ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಸ್ಥಳೀಯ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಜಿಲ್ಲೆಯಲ್ಲಿ ತಾಪಮಾನ ನಿರಂತರವಾಗಿ 45 ಡಿಗ್ರಿ ಸೆಲ್ಸಿಯಸ್ ಸಮೀಪಕ್ಕೆ ಏರಿಕೆಯಾಗಿದ್ದು, ಬಿಸಿಲಿನ ತೀವ್ರತೆಯಿಂದ ಜನರು ಮನೆಬಿಟ್ಟು ಹೊರಬರುವುದು ಕಷ್ಟಕರವಾಗಿತ್ತು.

ಘಟನೆಯ ದಿನ ಸಮೀರ್ ತೀವ್ರ ಬಿಸಿಲಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ತಲೆ ಸುತ್ತು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಮಾರ್ಗ ಮಧ್ಯೆ ಸ್ಥಳೀಯ ಅಂಗಡಿಯಲ್ಲಿ ನೀರು ಕುಡಿದು ವಿಶ್ರಾಂತಿ ಪಡೆದಿದ್ದರೂ, ನಂತರ ಹೆದ್ದಾರಿ ಬಳಿಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ನೆರವಿಗೆ ಧಾವಿಸಿದರೂ ಜೀವ ಉಳಿಸಲಾಗಲಿಲ್ಲ.

ಪೊಲೀಸರ ಪ್ರಾಥಮಿಕ ಶಂಕೆಯಂತೆ ಇದು ಹೀಟ್ ಸ್ಟ್ರೋಕ್ ಕಾರಣದಿಂದ ಸಂಭವಿಸಿದ ಸಾವು. ಮರಣೋತ್ತರ ಪರೀಕ್ಷೆಯ ವರದಿ ನಂತರ ಸ್ಪಷ್ಟತೆ ಸಿಗಲಿದೆ. ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಹೋಗದಂತೆ ಹಾಗೂ ಸಾಕಷ್ಟು ನೀರು ಸೇವಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಹೊಸಪೇಟೆ ಸರಣಿ ಅಪಘಾತ: NH-50 ಸರಣಿ ಅಪಘಾತದಲ್ಲಿ ನಾಲ್ವರು ಸಾವು

0

ಬೀದರ್: ಬೀದರ್ ಜಿಲ್ಲೆ ಯಲ್ಲಿ ಮುಂದುವರಿದ ಭೀಕರ ಉಷ್ಣ ಅಲೆಯ ನಡುವೆ ಹೀಟ್ ಸ್ಟ್ರೋಕ್‌ಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ. ಕಮಲನಗರ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದ ಈ ಘಟನೆ ಪ್ರದೇಶದಲ್ಲಿ ಆತಂಕವನ್ನು ಹೆಚ್ಚಿಸಿದೆ.

ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಸ್ಥಳೀಯ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಜಿಲ್ಲೆಯಲ್ಲಿ ತಾಪಮಾನ ನಿರಂತರವಾಗಿ 45 ಡಿಗ್ರಿ ಸೆಲ್ಸಿಯಸ್ ಸಮೀಪಕ್ಕೆ ಏರಿಕೆಯಾಗಿದ್ದು, ಬಿಸಿಲಿನ ತೀವ್ರತೆಯಿಂದ ಜನರು ಮನೆಬಿಟ್ಟು ಹೊರಬರುವುದು ಕಷ್ಟಕರವಾಗಿತ್ತು.

ಘಟನೆಯ ದಿನ ಸಮೀರ್ ತೀವ್ರ ಬಿಸಿಲಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ತಲೆ ಸುತ್ತು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಮಾರ್ಗ ಮಧ್ಯೆ ಸ್ಥಳೀಯ ಅಂಗಡಿಯಲ್ಲಿ ನೀರು ಕುಡಿದು ವಿಶ್ರಾಂತಿ ಪಡೆದಿದ್ದರೂ, ನಂತರ ಹೆದ್ದಾರಿ ಬಳಿಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ನೆರವಿಗೆ ಧಾವಿಸಿದರೂ ಜೀವ ಉಳಿಸಲಾಗಲಿಲ್ಲ.

ಪೊಲೀಸರ ಪ್ರಾಥಮಿಕ ಶಂಕೆಯಂತೆ ಇದು ಹೀಟ್ ಸ್ಟ್ರೋಕ್ ಕಾರಣದಿಂದ ಸಂಭವಿಸಿದ ಸಾವು. ಮರಣೋತ್ತರ ಪರೀಕ್ಷೆಯ ವರದಿ ನಂತರ ಸ್ಪಷ್ಟತೆ ಸಿಗಲಿದೆ. ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಹೋಗದಂತೆ ಹಾಗೂ ಸಾಕಷ್ಟು ನೀರು ಸೇವಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಹೆಣ್ಣು ನೋಡಲು ಹೊರಟಿದ್ದ ಮೂವರು ರಸ್ತೆ ಅಪಘಾತಕ್ಕೆ ಬಲಿ

0

ವಿಜಯನಗರ: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ NH-50ರಲ್ಲಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.

ಮಗನ ಮದುವೆಗೆ ಕನ್ಯೆ ನೋಡಲು ಬೈಕ್‌ನಲ್ಲಿ ತೆರಳುತ್ತಿದ್ದ ನಾಗಪ್ಪ, ಸುಜಾತಾ ಹಾಗೂ ಕೊಟ್ರೇಶ್ ಜೊತೆಗಿದ್ದ ಹಮಾಲಿ ದುರ್ಗಪ್ಪ ಸೇರಿ ನಾಲ್ವರು ಲಾರಿ ಡಿಕ್ಕಿಗೆ ಬಲಿಯಾಗಿದ್ದಾರೆ.

ಚಿತ್ರದುರ್ಗ ಕಡೆಗೆ ಬೆಳ್ಳುಳ್ಳಿ ಸಾಗಿಸುತ್ತಿದ್ದ ಲಾರಿ ಅತಿವೇಗದಲ್ಲಿ ಬಂದಿದ್ದು, ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಕಾರು ಮತ್ತು KSRTC ಬಸ್‌ಗೆ ತಗುಲಿ ಪಲ್ಟಿಯಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯ ರಭಸಕ್ಕೆ ಸ್ಥಳದಲ್ಲೇ ದಾರುಣ ಸಾವು ಸಂಭವಿಸಿದ್ದು, ದೃಶ್ಯಗಳು ಭೀಕರವಾಗಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಶಂಕಿಸಲಾಗಿದೆ.

ಮಹಿಳಾ ಮೀಸಲು ಸೋಲು, ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್ ಕಿಡಿ

0

ಲಕ್ನೋ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಂಸತ್ತಿನಲ್ಲಿ 131ನೇ ಸಂವಿಧಾನ ತಿದ್ದುಪಡಿ ಮಸೂದೆ ಚರ್ಚೆಯ ವೇಳೆ ವಿರೋಧ ಪಕ್ಷಗಳ ನಡವಳಿಕೆಯನ್ನು ಮಹಾಭಾರತದ ದ್ರೌಪದಿ ವಸ್ತ್ರಾಪಹರಣ ಘಟನೆಯೊಂದಿಗೆ ಹೋಲಿಸಿ ಅವರು ಟೀಕಿಸಿದರು.

ಕ್ಷೇತ್ರ ಪುನರ್ವಿಂಗಡಣೆಯ ಬಳಿಕ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಉದ್ದೇಶಿಸಿದ್ದ ಮಸೂದೆಗೆ ಇಂಡಿಯಾ ಒಕ್ಕೂಟ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿಪಕ್ಷಗಳ ನಡೆಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಸಂಸತ್ತಿನಲ್ಲಿ ಕಾಂಗ್ರೆಸ್, ಎಸ್‌ಪಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ವರ್ತನೆ ದ್ರೌಪದಿಯ ವಸ್ತ್ರಾಪಹರಣದ ದೃಶ್ಯವನ್ನು ನೆನಪಿಸುವಂತಿತ್ತು. ಅವರ ಹೇಳಿಕೆಗಳು ಮತ್ತು ನಡವಳಿಕೆಗಳು ಬೇಜವಾಬ್ದಾರಿತನವನ್ನು ತೋರಿಸುತ್ತವೆ” ಎಂದು ಯೋಗಿ ಆದಿತ್ಯನಾಥ್ ಕಿಡಿಕಾರಿದರು.

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ನೀಡುವ ಬೇಡಿಕೆಯನ್ನು ಉಲ್ಲೇಖಿಸಿದ ಅವರು, ಮಹಿಳಾ ಸಬಲೀಕರಣದ ಗುರಿಯನ್ನು ಹೊಂದಿರುವ ಮಸೂದೆ ಕುರಿತು ಅಪ್ರಸ್ತುತ ವಿಷಯಗಳನ್ನು ಎತ್ತಲಾಗುತ್ತಿದೆ ಎಂದು ಆರೋಪಿಸಿದರು.

“ಸಂವಿಧಾನವನ್ನು ಗೌರವಿಸುತ್ತೇವೆ ಎಂದು ಹೇಳುವವರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದರು.

ಚೆನ್ನಾಗಿ ನಿದ್ರೆ ಬೇಕೇ? ಮಲಗುವ ಮುನ್ನ ಈ ಆಹಾರಗಳಿಂದ ದೂರವಿರಿ

0

ಇಂದಿನ ವೇಗದ ಜೀವನಶೈಲಿಯಲ್ಲಿ ನೆಮ್ಮದಿಯ ನಿದ್ರೆ ದೊರಕುವುದು ಕಷ್ಟವಾಗುತ್ತಿದೆ. ಹಗಲಿನ ಕೆಲಸದಷ್ಟೇ, ರಾತ್ರಿಯ ನಿದ್ರೆಯೂ ಆರೋಗ್ಯಕ್ಕೆ ಅತ್ಯಂತ ಮುಖ್ಯ.

ಆದರೆ ಕೆಲಸದ ಒತ್ತಡ ಮಾತ್ರವಲ್ಲ, ನಾವು ಮಲಗುವ ಮುನ್ನ ಸೇವಿಸುವ ಆಹಾರವೂ ನಿದ್ರೆಯ ಗುಣಮಟ್ಟದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ.

ಸರಿಯಾಗಿ ನಿದ್ರೆ ಆಗದಿದ್ದರೆ ಮರುದಿನ ಜಂಕ್ ಫುಡ್ ತಿನ್ನುವ ಬಯಕೆ ಹೆಚ್ಚಾಗಿ, ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಉತ್ತಮ ನಿದ್ರೆಗೆ ಮಲಗುವ ಮುನ್ನ ಕೆಲವು ಆಹಾರಗಳನ್ನು ತಪ್ಪಿಸುವುದು ಅಗತ್ಯ.

1. ಕೆಫೀನ್ ಮತ್ತು ಚಾಕೊಲೇಟ್
ಕಾಫಿ, ಟೀ ಹಾಗೂ ಎನರ್ಜಿ ಪಾನೀಯಗಳಲ್ಲಿ ಇರುವ ಕೆಫೀನ್ ಮೆದುಳನ್ನು ಜಾಗೃತವಾಗಿರಿಸುತ್ತದೆ. ಇದರಿಂದ ಆಳವಾದ ನಿದ್ರೆ ಬರಲು ಅಡಚಣೆ ಉಂಟಾಗುತ್ತದೆ. ಡಾರ್ಕ್ ಚಾಕೊಲೇಟ್‌ನಲ್ಲಿ ಕೂಡ ಕೆಫೀನ್ ಮತ್ತು ಸಕ್ಕರೆ ಇರುವುದರಿಂದ ನಿದ್ರೆಗೆ ತೊಂದರೆ ಉಂಟಾಗಬಹುದು.

2. ಮಸಾಲೆ ಮತ್ತು ಎಣ್ಣೆ ಪದಾರ್ಥಗಳು
ಪನೀರ್, ಚೋಲೆ-ಭಾತುರೆ, ಪಿಜ್ಜಾ, ಬರ್ಗರ್ ಮುಂತಾದ ಎಣ್ಣೆ ಮತ್ತು ಮಸಾಲೆಯುಕ್ತ ಆಹಾರಗಳು ರಾತ್ರಿ ಸೇವಿಸಿದರೆ ಆಮ್ಲೀಯತೆ ಮತ್ತು ಎದೆಯುರಿ ಉಂಟಾಗಬಹುದು. ಹೆಚ್ಚಿನ ಕೊಬ್ಬಿನಾಂಶ ಇರುವ ಮಾಂಸಾಹಾರ ಜೀರ್ಣಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ನಿದ್ರೆ ಅಸ್ವಸ್ಥವಾಗಬಹುದು.

3. ಕೆಲವು ಹಣ್ಣು-ತರಕಾರಿಗಳೂ ಸಮಸ್ಯೆ
ಕಲ್ಲಂಗಡಿ ಮತ್ತು ಸೌತೆಕಾಯಿ ನೀರಿನಾಂಶ ಹೆಚ್ಚಿರುವುದರಿಂದ ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆಗೆ ಎಬ್ಬಿಸಬಹುದು. ಬ್ರೋಕೋಲಿ, ಹೂಕೋಸು, ಎಲೆಕೋಸುಗಳು ಹೊಟ್ಟೆಯಲ್ಲಿ ಅನಿಲ ಉಂಟುಮಾಡಿ ನಿದ್ರೆಗೆ ಅಡ್ಡಿಯಾಗಬಹುದು.

4. ಸಕ್ಕರೆ ಮತ್ತು ಆಮ್ಲೀಯ ಆಹಾರಗಳು
ಕೇಕ್, ಪೇಸ್ಟ್ರಿ, ಸಿಹಿ ಪದಾರ್ಥಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಏರುಪೇರು ಮಾಡುತ್ತವೆ. ಟೊಮೆಟೊ, ನಿಂಬೆ, ಕಿತ್ತಳೆ ಮುಂತಾದ ಆಮ್ಲೀಯ ಆಹಾರಗಳು ಎದೆಯಲ್ಲಿ ಭಾರವಾದ ಭಾವನೆ ಉಂಟುಮಾಡಬಹುದು.

5. ಮದ್ಯಪಾನ ಕುರಿತು ತಪ್ಪು ಕಲ್ಪನೆ
ಮದ್ಯಪಾನ ಮಾಡಿದರೆ ಚೆನ್ನಾಗಿ ನಿದ್ರೆ ಬರುತ್ತದೆ ಎನ್ನುವುದು ತಪ್ಪು. ಮದ್ಯವು ನಿದ್ರೆಯ ನೈಸರ್ಗಿಕ ಚಕ್ರವನ್ನು ಹಾಳುಮಾಡಿ ಮಧ್ಯರಾತ್ರಿ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ.

ಹಾಸನದಲ್ಲಿ ದುರಂತ: ಅಳಿಯನನ್ನು ಉಳಿಸಲು ಕೆರೆಗೆ ಇಳಿದ ಮಾವನೂ ಸಾವು

0

ಮೈಸೂರು/ಹಾಸನ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತಪಟ್ಟ ಘಟನೆ ಪಿರಿಯಾಪಟ್ಟಣದ ದೊಡ್ಡ ಹರವೆ ಗ್ರಾಮದ ಬಳಿ ನಡೆದಿದೆ. ಗಣೇಶ್ (22) ಮತ್ತು ಇಮ್ರಾನ್ (28) ಮೃತರು.

ನಾಲ್ವರು ಯುವಕರು ಈಜಲು ನದಿಗೆ ಇಳಿದ ವೇಳೆ ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಗಣೇಶ್ ಮೃತದೇಹ ಪತ್ತೆಯಾಗಿದ್ದು, ಇಮ್ರಾನ್ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಬೈಲಕುಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ವೇಳೆ, ಇತ್ತೀಚೆಗೆ ಅರ್ಕೇಶ್ವರ ದೇಗುಲ ಸಮೀಪ ಕಾವೇರಿ ನದಿಯಲ್ಲಿ ಆರು ಮಂದಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದ್ದರಿಂದ ಆತಂಕ ಇನ್ನಷ್ಟು ಹೆಚ್ಚಾಗಿದೆ. ನೀರಿನ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆ ಮತ್ತೊಮ್ಮೆ ಹೊರಹೊಮ್ಮಿದೆ.

4 ವರ್ಷದ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವು

0

ಗಾಜಿಯಾಬಾದ್: ಅಕ್ಕನ ಮಗಳು ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ವಾಂಟೆಡ್ ಆಗಿದ್ದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಜಸೀಮ್ ಅಲಿಯಾಸ್ ಛೋಟು ಎಂಬಾತನನ್ನು ವಾರಗಟ್ಟಲೆ ಶೋಧ ನಡೆಸಿದ ಬಳಿಕ ಬಂತ್ಲಾ ಕಾಲುವೆ ಪ್ರದೇಶದಲ್ಲಿ ಪೊಲೀಸರು ಎನ್‌ಕೌಂಟರ್ ನಡೆಸಿದ್ದಾರೆ.

ಏಪ್ರಿಲ್ 11ರಂದು ದಿನಗೂಲಿ ಕಾರ್ಮಿಕರಾಗಿ ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆದಿಂದ ನಾಪತ್ತೆಯಾಗಿದ್ದಳು. ಈ ವೇಳೆ ಆಕೆಯ ಮಾವನಾಗಿದ್ದ ಜಸೀಮ್, ತಿಂಡಿ ಕೊಡುತ್ತೇನೆ ಎಂದು ಕರೆದುಕೊಂಡು ಹೋಗಿ, ತನ್ನ ಬಾಡಿಗೆ ಕೋಣೆಯಲ್ಲಿ ಅತ್ಯಾಚಾರ ನಡೆಸಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ನಂತರ ಕಾರು ನಿಲ್ಲಿಸಿದ್ದ ಪ್ರದೇಶದ ಬಳಿ ಬಾಲಕಿಯ ಶವ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿ ಆರೋಪಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆರೋಪಿಯ ಮಾಹಿತಿ ನೀಡಿದವರಿಗೆ 50,000 ರೂ. ಬಹುಮಾನ ಘೋಷಿಸಲಾಗಿತ್ತು.

ಭಾನುವಾರ ರಾತ್ರಿ ಬಂತ್ಲಾ ಕಾಲುವೆ ಬಳಿ ಆರೋಪಿ ಕಾಣಿಸಿಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅವನನ್ನು ತಡೆದಾಗ, ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಪ್ರತಿಯಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಜಸೀಮ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಿದರೂ ವೈದ್ಯರು ಮೃತ ಎಂದು ಘೋಷಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗಿದೆ. ಸ್ಥಳದಿಂದ ಅಕ್ರಮ ಪಿಸ್ತೂಲ್ ಹಾಗೂ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮುಜಫರ್‌ನಗರ ಮೂಲದವನಾಗಿದ್ದು, ಹಿಂದಿನಿಂದಲೂ ಅಪರಾಧ ಚರಿತ್ರೆ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತರ ಜೊತೆ ಮದ್ಯಪಾನ… ಮರುದಿನ ಕಾರಿನಲ್ಲೇ ಶವ ಪತ್ತೆ!

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 56 ವರ್ಷದ ವ್ಯಕ್ತಿಯೊಬ್ಬರು ತಮ್ಮದೇ ಕಾರಿನೊಳಗೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕುತೂಹಲ ಹುಟ್ಟಿಸಿದೆ. ಬಸಾಪುರ ನಿವಾಸಿ ನಾರಾಯಣಪ್ಪ ಮೃತ ವ್ಯಕ್ತಿಯಾಗಿದ್ದು, ಕಾರಿನ ಚಾಲಕನ ಪಕ್ಕದ ಸೀಟ್‌ನಲ್ಲಿ ಅಚಲವಾಗಿ ಕುಳಿತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿದಾಗ, ನಾರಾಯಣಪ್ಪ ಅದಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಂತೆ, ಅವರು ಸ್ನೇಹಿತರಾದ ಮಂಜುನಾಥ ರೆಡ್ಡಿ ಮತ್ತು ಶಿವು ಜೊತೆ ಎಲೆಕ್ಟ್ರಾನಿಕ್ಸ್ ಸಿಟಿಯ ಬಾರ್‌ಗೆ ತೆರಳಿ ಮದ್ಯಪಾನ ಮಾಡಿದ್ದರು. ತೀವ್ರ ಮದ್ಯಪಾನದ ಪರಿಣಾಮವಾಗಿ ನಿಂತುಕೊಳ್ಳಲೂ ಕಷ್ಟವಾಗಿದ್ದ ಅವರನ್ನು ಸ್ನೇಹಿತರು ಹಿಡಿದು ಕಾರಿನವರೆಗೆ ಕರೆತಂದಿದ್ದಾರೆ.

ನಂತರ ನಾರಾಯಣಪ್ಪ ಕಾರಿನ ಪ್ಯಾಸೆಂಜರ್ ಸೀಟ್‌ನಲ್ಲಿ ಕುಳಿತಿದ್ದು, ಅವರ ಕಾರನ್ನು ಮಂಜುನಾಥ ರೆಡ್ಡಿ ಚಾಲನೆ ಮಾಡಿದ್ದಾರೆ. ಶಿವು ಬಾರ್ನಿಂದ ಹೊರಬಂದ ಬಳಿಕ ಬೇರೆ ದಾರಿಯಲ್ಲಿ ತೆರಳಿದ್ದಾನೆ. ಈ ಎಲ್ಲಾ ಘಟನೆಗಳು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೆಲ ಕಿಲೋಮೀಟರ್ ಪ್ರಯಾಣಿಸಿದ ಬಳಿಕ ಮಂಜುನಾಥ ರೆಡ್ಡಿಗೆ ಕಾರು ಚಲಾಯಿಸಲು ಅಸಾಧ್ಯವಾದ ಕಾರಣ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಮನೆಗೆ ತೆರಳಿದ್ದಾರೆ. ಆದರೆ ಮರುದಿನ ಅದೇ ಸ್ಥಳದಲ್ಲಿ ಕಾರಿನೊಳಗೆ ನಾರಾಯಣಪ್ಪ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಕುರಿತು ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದು, ದೇಹದಲ್ಲಿ ಯಾವುದೇ ಗಾಯಗಳಿಲ್ಲದೆ ಅನುಮಾನಾಸ್ಪದ ಅಂಶ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ತಿಳಿಯಲಿದೆ.

error: Content is protected !!