Home Blog

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿʼಗೆ ಸುಪ್ರೀಂನಿಂದ ಜಾಮೀನು ಮಂಜೂರು!

0

ನವದೆಹಲಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇತ್ತೀಚೆಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬಳಿಕ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರ ಪೀಠವು ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದುಪಡಿಸಬೇಕೆಂದು ಕೇಂದ್ರ ತನಿಖಾ ದಳ (ಸಿಬಿಐ) ಮನವಿ ಮಾಡಿತ್ತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶರಣಾಗಿದ್ದ ವಿನಯ್ ಕುಲಕರ್ಣಿ ಅವರಿಗೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೊದಲು ಜಾಮೀನು ರದ್ದುಗೊಂಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಧಾರವಾಡದ ಜಿಮ್‌ನಲ್ಲಿ 2016ರ ಜೂನ್ 15ರಂದು ಯೋಗೀಶ್ ಗೌಡರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಬಗ್ಗೆ ಯೋಗೀಶ್ ಗೌಡ ಅವರ ಸಹೋದರ ಹಾಗೂ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗಿನ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಆ ಸಮಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆರಂಭದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸದೇ ಎಸ್‌ಐಟಿಗೆ ಒಪ್ಪಿಸಲಾಗಿತ್ತು. ಬಳಿಕ ಸಿಬಿಐ ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಟೀಮ್ ಇಂಡಿಯಾದ ಸ್ಟಾರ್ ಫಿನಿಷರ್ ರಿಂಕು ಸಿಂಗ್ ತಂದೆ ಖಾನ್‌ ಚಂದ್‌ ನಿಧನ!

0

ಲಕ್ನೋ: ಟೀಂ ಇಂಡಿಯಾ ಕ್ರಿಕೆಟ್ ಸ್ಟಾರ್ ರಿಂಕು ಸಿಂಗ್ ಅವರ ತಂದೆ, ಖಾನ್ಚಂದ್ರ ಸಿಂಗ್, ನಿಧನರಾಗಿದ್ದಾರೆ. ಅವರು ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದು, ಕುಟುಂಬವು ದುಃಖದಲ್ಲಿದೆ.

4ನೇ ಹಂತದ ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಖಾನ್ಚಂದ್ರ ಸಿಂಗ್ ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈ ವಾರ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಆದ್ದರಿಂದಲೇ ರಿಂಕು ಸಿಂಗ್ ಅವರು ಟಿ20 ವಿಶ್ವಕಪ್ ಟೂರ್ನಿಯಿಂದ ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯಕ್ಕೂ ಮುನ್ನ ಮನೆಗೆ ತೆರಳಿದ್ದರು.

ಅಪ್ಪನ ಸ್ಥಿತಿ ಗಂಭೀರಗೊಂಡಿದ್ದರೂ ಟಿ20 ವಿಶ್ವಕಪ್ನ ಕೆಲ ಪಂದ್ಯಗಳನ್ನ ಆಡುವ ಮೂಲಕ ರಿಂಕು ಸಿಂಗ್ ತಮ್ಮ ಬದ್ಧತೆ ಪ್ರದರ್ಶಿಸಿದ್ದಾರೆ ಎಂದು ಹರ್ಭಜನ್ ಸಿಂಗ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಭಜ್ಜಿ,

ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ ಸಿಂಗ್ ಜಿ ಅವರ ನಿಧನದ ಬಗ್ಗೆ ತಿಳಿದು ನೋವಾಯಿತು. ಟಿ20 ವಿಶ್ವಕಪ್ ಸಮಯದಲ್ಲಿ ತಮ್ಮ ಜವಾಬ್ದಾರಿಗಳಿಗೆ ಬದ್ಧರಾಗಿದ್ದ ರಿಂಕು ಮತ್ತು ಅವರ ಕುಟುಂಬಕ್ಕೆ ಇದು ಕಷ್ಟಕರ ಸಮಯವಾಗಿದೆ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

Pakistan–Afghanistan ಗಡಿಯಲ್ಲಿ ಸಂಘರ್ಷ: 55 ಪಾಕ್ ಸೈನಿಕರ ಸಾವಿಗೆ ಪ್ರತಿಯಾಗಿ 130 ಆಫ್ಘನ್ ಹತ್ಯೆ!

0

ಪಾಕಿಸ್ತಾನ: ತಾಲಿಬಾನ್ ನಡೆಸಿದೆ ಎನ್ನಲಾದ ಗಡಿ ದಾಳಿಯಲ್ಲಿ 55 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿರುವುದಾಗಿ ಪಾಕಿಸ್ತಾನ ಹೇಳಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನೆ ‘ಆಪರೇಷನ್ ಗಜಬ್ ಲಿಲ್ ಹಕ್’ ಹೆಸರಿನ ಕಾರ್ಯಾಚರಣೆ ಆರಂಭಿಸಿದ್ದು, 130ಕ್ಕೂ ಹೆಚ್ಚು ತಾಲಿಬಾನ್ ಹೋರಾಟಗಾರರನ್ನು ಹತಮಾಡಲಾಗಿದೆ ಎಂದು ತಿಳಿಸಿದೆ.

ಆಫ್ಘನ್ ತಾಲಿಬಾನ್ ಹಲವಾರು ಗಡಿ ಪೋಸ್ಟ್‌ಗಳ ಮೇಲೆ ದಾಳಿ ನಡೆಸಿದ ಬಳಿಕ ಗುರುವಾರ ತಡರಾತ್ರಿ ಕಾರ್ಯಾಚರಣೆ ಪ್ರಾರಂಭವಾಗಿದೆ. ರಕ್ಷಣಾ ಸಚಿವ ಖವಾಜಾ ಆಸಿಫ್ ಕಾರ್ಯಾಚರಣೆ ನಡೆಯುತ್ತಿರುವುದನ್ನು ದೃಢಪಡಿಸಿದ್ದಾರೆ. ಪಾಕಿಸ್ತಾನದ ಸಶಸ್ತ್ರ ಪಡೆಗಳು ಅಫ್ಘಾನ್ ತಾಲಿಬಾನ್‌ನ ಆಕ್ರಮಣಕ್ಕೆ ಬಲವಾದ ಪ್ರತಿಕ್ರಿಯೆ ನೀಡುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅತ್ತೌಲ್ಲಾ ತರಾರ್ ನೀಡಿದ ಮಾಹಿತಿಯಂತೆ, ಕನಿಷ್ಠ 133 ತಾಲಿಬಾನ್ ಕಾರ್ಯಕರ್ತರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಕಾಬೂಲ್, ಪಕ್ತಿಯಾ ಮತ್ತು ಕಂದಹಾರ್ ಪ್ರದೇಶಗಳಲ್ಲಿನ ತಾಲಿಬಾನ್ ರಕ್ಷಣಾ ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಹೆಚ್ಚಿನ ಪ್ರಮಾಣದ ಸಾವುನೋವು ಸಂಭವಿಸಿರುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ತಿಳಿಸಿದೆ.

ತಾಲಿಬಾನ್ ಆಡಳಿತದ ಕನಿಷ್ಠ 27 ಗಡಿ ಪೋಸ್ಟ್‌ಗಳನ್ನು ನಾಶಪಡಿಸಲಾಗಿದ್ದು, ಇನ್ನೂ ಒಂಬತ್ತು ಪೋಸ್ಟ್‌ಗಳನ್ನು ಪಾಕ್ ಪಡೆಗಳು ವಶಕ್ಕೆ ಪಡೆದಿವೆ ಎಂದು ಹೇಳಲಾಗಿದೆ.

“ಅನ್ಯಾಯ ನೋಡುತ್ತಾ ಸುಮ್ಮನಿರಲ್ಲ”; ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

0

ಧಾರವಾಡ: ಉದ್ಯೋಗಾಕಾಂಕ್ಷಿಗಳ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ವಿಪಕ್ಷ ಉಪನಾಯಕ ಮತ್ತು ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಪ್ರಧಾನಿ ಮೋದಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ರಾಜ್ಯದಲ್ಲಿ ಓದುತ್ತಿರುವ ಉದ್ಯೋಗಾಕಾಂಕ್ಷಿಗಳ ನೋವನ್ನು ಗಮನಕ್ಕೆ ತರಲಾಗಿದೆ ಮತ್ತು ಸರ್ಕಾರವು ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ವಿವರಿಸಲಾಗಿದೆ. ರಾಜ್ಯದ ಅನೇಕ ಯುವಕರು ಹತಾಶೆಯಿಂದ ಬೀದಿಗೆ ತೆರಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವಕರಲ್ಲಿ ಕೋಪ ಮತ್ತು ಅಸಹನೆ ಸ್ಪಷ್ಟವಾಗಿದೆ. “ನಾವು ಉದ್ಯೋಗಾಕಾಂಕ್ಷಿಗಳ ಬೇಡಿಕೆಗಾಗಿ ಅವರ ಜೊತೆಗೆ ನಿಂತು ಬೆಂಬಲಿಸಿದ್ದೇವೆ.

ರಾಜ್ಯ ಸರ್ಕಾರ ಸಮರ್ಪಕ ಉತ್ತರ ನೀಡದೆ ಯುವಕರ ಮೇಲೆ ಲಾಠಿಚಾರ್ಜ್ ಮಾಡಿದೆ. ಯುವಕರ ಪರಿಶ್ರಮಕ್ಕೆ ಫಲ ಸಿಗಬೇಕು, ಅವರ ಅನ್ಯಾಯವನ್ನು ನೋಡುತ್ತಾ ನಾವು ಸುಮ್ಮನಿರಲ್ಲ” ಎಂದು ಅವರು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ಈ ಪತ್ರದ ಬಳಿಕ, ರಾಜ್ಯ ಸರ್ಕಾರವು 56,432 ಹುದ್ದೆಗಳ ಭರ್ತಿ ಅಧಿಸೂಚನೆ ಹೊರಡಿಸುವ ತೀರ್ಮಾನ ಕೈಗೊಂಡಿದೆ.

ಪಾಸ್‌ಪೋರ್ಟ್ ವೆರಿಫಿಕೇಶನ್: ಹೊಸ ನಿಯಮಗಳು ಜಾರಿ!

0

ಬೆಂಗಳೂರು: ಡಿಜಿ ಮತ್ತು ಐಜಿಪಿ ಸೂಚನೆಯಂತೆ, ಸಿಲಿಕಾನ್ ಸಿಟಿಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮಗಳು ಜಾರಿಗೆ ಬಂದಿವೆ.

ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈಗಿನಿಂದ ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ವೋನ್ ಕ್ಯಾಮೆರಾ ಕಡ್ಡಾಯವಾಗಿದ್ದು, ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸಬಾರದು. ಬದಲಾಗಿ, ಅಧಿಕಾರಿಗಳು ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹಿಸಬೇಕು.

ಅರ್ಜಿ ನೀಡುವ ಕನಿಷ್ಠ 24 ಗಂಟೆ ಮೊದಲು ಅರ್ಜಿದಾರರಿಗೆ ಎಸ್‌ಎಂಎಸ್ ಅಥವಾ ಕರೆ ಮೂಲಕ ಮಾಹಿತಿ ನೀಡಬೇಕು. ಅಧಿಕಾರಿಗಳು ಅರ್ಜಿದಾರರಿಂದ ಯಾವುದೇ ರೀತಿಯ ಲಂಚ ಅಥವಾ ಆಮಿಷ ನಿರೀಕ್ಷಿಸಬಾರದು. ಅರ್ಜಿದಾರರನ್ನು ಅಲೆದಾಡಿಸುವುದು ಅಥವಾ ವರದಿ ನೀಡಲು ವಿಳಂಬ ಮಾಡುವುದು ಮಾಡಬಾರದು. ಪ್ರತಿಕೂಲ ವರದಿ ಸಲ್ಲಿಸುವಾಗ, ಅಧಿಕಾರಿಗಳು ಸ್ಪಷ್ಟ ಮತ್ತು ಸೂಕ್ತ ಪುರಾವೆಗಳನ್ನು ಹೊಂದಿರಬೇಕು.

ನಿಯಮ ಪಾಲನೆಯ ಮೇಲೆ ವಾರಕ್ಕೆ ಒಂದು ಬಾರಿ ಡಿಸಿಪಿ ವರದಿ ಪರಿಶೀಲಿಸುತ್ತಾರೆ. ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.

 

ಕಲ್ಲು ಹೊಡೆಯಬೇಡಿ, ಓಡಿಸಬೇಡಿ; ಬೀದಿ ನಾಯಿಗಳ ಪರ ಧ್ವನಿ ಎತ್ತಿದ ಸುಧಾ ಮೂರ್ತಿ!

0

ಬೆಂಗಳೂರು: ಸಿಲಿಕಾನ್ ಸಿಟಿಯಾದ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಅವುಗಳ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಿವೆ. ಇಂತಹ ಸಂದರ್ಭದಲ್ಲಿ, ಇನ್ಫೋಸಿಸ್ ಫೌಂಡೇಶನ್‌ನ ಮಾರ್ಗದರ್ಶಕಿ ಸುಧಾ ಮೂರ್ತಿ ಅವರು ಮೂಕ ಪ್ರಾಣಿಗಳ ಪರವಾಗಿ ಧ್ವನಿ ಎತ್ತಿದ್ದಾರೆ. ಅವರು ನಗರ ಜನರಿಗೆ ಬೀದಿ ನಾಯಿಗಳ ಬಗ್ಗೆ ದಯೆ ಮತ್ತು ಮಾನವೀಯತೆ ತೋರಲು ಮನವಿ ಮಾಡಿದ್ದಾರೆ.

ಬೆಂಗಳೂರು ಕಾರ್ಯಕ್ರಮದಲ್ಲಿ ಮಾತನಾಡಿದ ಸುಧಾ ಮೂರ್ತಿಯವರು, “ನನ್ನ ಮನೆಯ ಬಳಿಯೂ ಹಲವು ಬೀದಿ ನಾಯಿಗಳಿವೆ. ಅವುಗಳಿಗೆ ನಾವು ನೀಡುವ ಒಂದು ತುತ್ತು ಅನ್ನಕ್ಕಿಂತ ಹೆಚ್ಚಾಗಿ, ನಾವು ತೋರುವ ಒಂದು ಸಣ್ಣ ಪ್ರೀತಿಯ ಸ್ಪರ್ಶ ಅಥವಾ ಕರುಣೆಯ ನೋಟ ಮುಖ್ಯ. ಪ್ರಾಣಿಗಳು ಭಾಷೆಯನ್ನು ಅರ್ಥ ಮಾಡಿಕೊಳ್ಳಲಾರವು, ಆದರೆ ಅವುಗಳಿಗೆ ಪ್ರೀತಿಯ ಭಾಷೆ ಚೆನ್ನಾಗಿ ಗೊತ್ತು,” ಎಂದು ಭಾವುಕರಾಗಿ ಹೇಳಿದರು.

ಬೀದಿ ನಾಯಿಗಳನ್ನು ಕಂಡಾಗ ಕಲ್ಲು ಹೊಡೆಯುವುದು ಅಥವಾ ಓಡಿಸುವುದು ಮಾಡಬೇಡಿ. ಅವುಗಳೂ ಈ ಸಮಾಜದ ಭಾಗವೆಂದು ನಾವು ಮರೆಯಬಾರದು. ನಗರದ ಬೆಳವಣಿಗೆಯ ನಡುವೆ ನಾವು ಅವುಗಳ ಆವಾಸಸ್ಥಾನಗಳನ್ನು ಕಿತ್ತುಕೊಂಡಿದ್ದೇವೆ, ಹೀಗಾಗಿ ಅವುಗಳಿಗೆ ಆಸರೆ ನೀಡುವುದು ನಮ್ಮ ಜವಾಬ್ದಾರಿ. ನಿಮ್ಮ ಮನೆಯ ಮುಂದೆ ಬರುವ ನಾಯಿಗಳಿಗೆ ಸ್ವಲ್ಪ ನೀರು ಅಥವಾ ಆಹಾರ ನೀಡಿ; ಅವು ನಮಗಿಂತ ಹೆಚ್ಚು ನಿಷ್ಠೆಯನ್ನು ತೋರಿಸುತ್ತವೆ ಎಂದು ಮನವಿ ಮಾಡಿದ್ದಾರೆ.

ಸುಧಾ ಮೂರ್ತಿಯವರ ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ಅನೇಕ ಬೆಂಗಳೂರಿಗರು ತಮ್ಮ ಮನೆಯ ಬಳಿಯ ಬೀದಿ ನಾಯಿಗಳ ಜೊತೆ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

 

ಕರ್ನಾಟಕದಲ್ಲಿ ವಾಯು ಗುಣಮಟ್ಟ ಕಳಪೆ; ಬೆಂಗಳೂರು, ಮಂಗಳೂರು, ಉಡುಪಿಯ ಜನರಿಗೆ ಆತಂಕ

0

ಬೆಂಗಳೂರು: ಬೆಂಗಳೂರು, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟ ಈಗ ಕಳಪೆ ಮಟ್ಟಕ್ಕೆ ತಲುಪಿದ್ದು, ಸ್ಥಳೀಯರಲ್ಲಿ ಆತಂಕ ಉಂಟುಮಾಡುತ್ತಿದೆ.

ಕಳೆದ ಕೆಲ ದಿನಗಳಿಂದ ಈ ನಗರಗಳ ಗಾಳಿಯ ಮಟ್ಟದಲ್ಲಿ ನಿರಂತರ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ಸೂಚ್ಯಂಕ ಇಂದು 168 ರಷ್ಟು ದಾಖಲಾಗಿದ್ದು, WHO ಮಾನದಂಡಗಳ ಪ್ರಕಾರ ಇದು ಅನಾರೋಗ್ಯಕರ ಮಟ್ಟಕ್ಕೆ ಸೇರಿದೆ. ಇಂತಹ ಮಟ್ಟದ ಗಾಳಿ ಉಸಿರಾಟದ ಸಮಸ್ಯೆ, ಕಫ, ಜ್ವರ, ತೀವ್ರ ಪ್ರಕರಣಗಳಲ್ಲಿ ಹೃದಯ ಸಂಬಂಧಿ ತೊಂದರೆಗಳಿಗೆ ಕಾರಣವಾಗಬಹುದು.

ಉಡುಪಿಯ ಗಾಳಿ ಇನ್ನೂ ಹೆಚ್ಚಿನ ಮಟ್ಟಕ್ಕೆ ಏರಿಕೆ ಕಂಡು, ಇಂದು 200 ರ ಗಡಿಯನ್ನು ತಲುಪಿದ್ದು, ಇದು ಗಂಭೀರ ಆರೋಗ್ಯ ಹಾನಿ ಸೂಚಿಸುತ್ತದೆ. ಇವು ನಗರಸ್ಥರಿಗೆ ಮತ್ತು ವಿಶೇಷವಾಗಿ ಹೃದಯ ಹಾಗೂ ಉಸಿರಾಟ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಹೆಚ್ಚು ಅಪಾಯಕಾರಿ. ಮಂಗಳೂರು, ಮೈಸೂರು, ಕಲಬುರ್ಗಿ, ವಿಜಯಪುರ ಮತ್ತು ಬೇರೆ ಕೆಲ ನಗರಗಳಲ್ಲಿಯೂ ಗಾಳಿ ಕಳಪೆ ಅಥವಾ ಅನಾರೋಗ್ಯಕರ ಮಟ್ಟಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಗಾಳಿ ಮಾಲಿನ್ಯ ಹೆಚ್ಚುತ್ತಿರುವುದು, ಪ್ಲಾಸ್ಟಿಕ್ ಸುಟ್ಟು, ವಾಹನಗಳಿಂದ ಹೊರಹೊಮ್ಮುವ ಧೂಳು, ಕಾರ್ಖಾನೆಗಳಿಂದ ಹೊರಬರುವ ವಾಯು ಮಾಲಿನ್ಯಗಳು ಮುಖ್ಯ ಕಾರಣಗಳು ಎಂದು ವಾಯು ಗುಣಮಟ್ಟ ತಜ್ಞರು ಹೇಳಿದ್ದಾರೆ.

ಸ್ಥಳೀಯರು ಹೊರಗೆ ಹೆಚ್ಚು ಸಮಯ ಕಳೆದರೆ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ಜನರು ಹೆಚ್ಚು ಫುಟ್ಬಾಲ್, ಓಟ ಅಥವಾ ಹೊರಗಡೆ ವ್ಯಾಯಾಮ ಮಾಡುವುದನ್ನು ತಪ್ಪಿಸಬೇಕು, ಮತ್ತು ಮನೆಯಲ್ಲಿ ವಾತಾವರಣವನ್ನು ಶುದ್ಧವಾಗಿಟ್ಟುಕೊಳ್ಳಲು ಫಿಲ್ಟರ್ ಅಥವಾ ಪೌರಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳ, ವೃದ್ಧರ ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರಿಗಾಗಿ, ಮಾಸ್ಕ್ ಧರಿಸುವುದು ಮತ್ತು ಗಾಳಿಯ ಅನುಸರಣೆ ಮಾಡುವ ಮೊಬೈಲ್ ಅಥವಾ ವೆಬ್ ತಂತ್ರಜ್ಞಾನಗಳನ್ನು ಬಳಸುವುದು ಸೂಕ್ತ.

ಈಗಿನ ಪರಿಸ್ಥಿತಿಯಲ್ಲಿ, ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ಗಾಳಿಯ ಗುಣಮಟ್ಟ ನಿಯಂತ್ರಿಸಲು ಕ್ರಮ ಕೈಗೊಳ್ಳುತ್ತಿರುವರೂ, ಜನರ ಸಹಭಾಗಿತ್ವ ಮತ್ತು ಎಚ್ಚರಿಕೆ ಬಹಳ ಮುಖ್ಯ. ಗಾಳಿ ಮಾಲಿನ್ಯ ಕಡಿಮೆಯಾಗಲು ವಾಹನ ಸಂಚಾರ ನಿಯಂತ್ರಣ, ಕಾರ್ಖಾನೆ ನಿಯಮ ಪಾಲನೆ ಮತ್ತು ಸಾರ್ವಜನಿಕ ಜಾಗಗಳಲ್ಲಿ ಧೂಳಿನ ನಿಯಂತ್ರಣ ಪ್ರಮುಖವಾಗಿದೆ. ಜನರು ತಮಗೆಲ್ಲಾ ತಕ್ಕ ಎಚ್ಚರಿಕೆ ವಹಿಸಿದರೆ, ಆರೋಗ್ಯ ಹಾನಿಯನ್ನು ತಡೆಯಬಹುದು ಮತ್ತು ಹೊರಗಡೆ ಸುರಕ್ಷಿತವಾಗಿ ಸಾಗಬಹುದು.

 

ಗರ್ಭಪಾತದ ನಂತರ ಸುರಕ್ಷಿತ ಆರೈಕೆ ಅಗತ್ಯ; ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!

0

ಗರ್ಭಪಾತದ ನಂತರ, ಮಹಿಳೆಯ ದೇಹದಲ್ಲಿ ಹಲವಾರು ಬದಲಾವಣೆಗಳು ಸಂಭವಿಸುತ್ತವೆ. ಗರ್ಭಾಶಯ ತನ್ನ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹ ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಈ ಅವಧಿಯಲ್ಲಿ ಸರಿಯಾದ ಆರೈಕೆಯಿಲ್ಲದಿದ್ದರೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ.

ಡಾ. ಸಲೋನಿ ಚಡ್ಡಾ – ಆರ್‌ಎಂಎಲ್ ಆಸ್ಪತ್ರೆ ತಿಳಿಸುವಂತೆ:

  • ಗರ್ಭಪಾತದ ನಂತರ ಹೆಚ್ಚು ಶ್ರಮ ಅಥವಾ ಭಾರವಾದ ದೈಹಿಕ ಕೆಲಸ ಮಾಡಬಾರದು. ದೈಹಿಕ ಪರಿಶ್ರಮ ರಕ್ತಸ್ರಾವವನ್ನು ಹೆಚ್ಚಿಸುತ್ತದೆ ಮತ್ತು ಚೇತರಿಕೆಯನ್ನು ನಿಧಾನಗೊಳಿಸುತ್ತದೆ.
  • ವೈದ್ಯರ ಸಲಹೆಯಿಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು. ನಿಗದಿತ ಔಷಧಿ ಕೋರ್ಸ್ ಅನ್ನು ಪೂರ್ಣಗೊಳಿಸದಿರುವುದೂ ಹಾನಿಕಾರಕವಾಗಿದೆ.
  • ನೋವು, ಸೌಮ್ಯ ಜ್ವರ ಅಥವಾ ಅಸಹಜ ರಕ್ತಸ್ರಾವವನ್ನು ಸಾಮಾನ್ಯವೆಂದು ನಿರ್ಲಕ್ಷಿಸಬಾರದು. ಇವು ವೈದ್ಯರ ತಕ್ಷಣದ ಪರಿಶೀಲನೆಗೆ ಕಾರಣವಾಗಬಹುದು.
  • ಶುಚಿತ್ವದಲ್ಲಿ ನಿರ್ಲಕ್ಷ್ಯ ಮಾಡಬಾರದು. ಹಳೆಯ ಅಥವಾ ಒದ್ದೆಯಾದ ಬಟ್ಟೆಗಳನ್ನು ಧರಿಸುವುದರಿಂದ ಸೋಂಕುಗಳ ಸಾಧ್ಯತೆ ಹೆಚ್ಚುತ್ತದೆ.
  • ಸೂಚಿಸಲಾದ ವಿಶ್ರಾಂತಿ ಅವಧಿಯನ್ನು ತಪ್ಪಿಸಬಾರದು. ತಪಾಸಣೆಗಳನ್ನು ನಿರ್ಲಕ್ಷಿಸಬಾರದು.
  • ಮಾನಸಿಕ ಒತ್ತಡವನ್ನು ನಿರ್ಲಕ್ಷಿಸಬಾರದು. ಭಾವನಾತ್ಮಕ ಬೆಂಬಲವನ್ನು ಪಡೆಯುವುದು ಚೇತರಿಕೆಗೆ ಸಹಾಯಕ.

ಆಹಾರ ಮತ್ತು ಜೀವನಶೈಲಿ:

  • ಹಸಿರು ತರಕಾರಿ, ಹಣ್ಣು, ಬೇಳೆ, ಹಾಲು, ಮೊಸರು ಮುಂತಾದ ಪೌಷ್ಟಿಕ ಮತ್ತು ಸಮತೋಲಿತ ಆಹಾರ ಸೇವಿಸಬೇಕು. ಇವು ಕಬ್ಬಿಣ, ಪ್ರೋಟೀನ್ ಮತ್ತು ವಿಟಮಿನ್‌ಗಳಲ್ಲಿ ಸಮೃದ್ಧವಾಗಿವೆ ಮತ್ತು ದೇಹವನ್ನು ಬಲಪಡಿಸುತ್ತವೆ.
  • ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು.
  • ಜಂಕ್ ಫುಡ್, ಹೆಚ್ಚು ಎಣ್ಣೆ, ಮಸಾಲೆ, ಆಲ್ಕೋಹಾಲ್, ಧೂಮಪಾನ ಮತ್ತು ಅತಿಯಾದ ಕಾಫಿ ಸೇವನೆಯು ಚೇತರಿಕೆಯನ್ನು ನಿಧಾನಗೊಳಿಸುತ್ತವೆ; ಇವನ್ನು ತಪ್ಪಿಸಬೇಕು.

ಸರಿಯಾದ ಆರೈಕೆಯಿಂದ ದೇಹ ಬೇಗ ಗುಣಮುಖವಾಗುತ್ತದೆ, ಭವಿಷ್ಯದ ಆರೋಗ್ಯ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ ಮತ್ತು ಮಹಿಳೆಯ ಶಾರೀರಿಕ ಮತ್ತು ಮಾನಸಿಕ ಕ್ಷೇಮ ಸಾಧನೆ ಸುಗಮವಾಗುತ್ತದೆ.

 

ಹಬ್ಬದಲ್ಲಿ ರಾಸಾಯನಿಕ ಬಣ್ಣ ಬಳಸದಿರಿ: ಸಿಪಿಐ ಬಿ.ವ್ಹಿ. ನ್ಯಾಮಗೌಡ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಸೇರಿ ತಾಲೂಕಿನಾದ್ಯಂತ ನಡೆಯಲಿರುವ ಹೋಳಿ ಹಬ್ಬವನ್ನು ಎಲ್ಲರೂ ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಬಿ.ವ್ಹಿ. ನ್ಯಾಮಗೌಡ ಹೇಳಿದರು.

ಅವರು ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಹಬ್ಬಗಳು ನಾಡಿನ ಸಂಪ್ರದಾಯದ ಪ್ರತೀಕ ಮತ್ತು ಪರಸ್ಪರರಲ್ಲಿ ಸ್ನೇಹ, ಸೌಹಾರ್ದತೆ ಬೆಸೆಯುವ ಕೊಂಡಿಯಾಗಿವೆ. ಹಬ್ಬದ ಸಂದರ್ಭದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ರಾಸಾಯನಿಕಯುಕ್ತ ಬಣ್ಣ ಬಳಸಬಾರದು. ಮುಂಜಾಗೃತ ಕ್ರಮವಾಗಿ ಸೂಕ್ತ ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಹಿತಕರ ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಬ್ಬದ ದಿನ ಬೇಕಾಬಿಟ್ಟಿ ವರ್ತನೆಯಿಂದ ಸಾಮಾಜಿಕ ಶಾಂತಿಗೆ ಭಂಗವನ್ನುಂಟುಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಬ್ಬದ ಸಮಯದಲ್ಲಿ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ಹಬ್ಬ ಆಚರಣೆ ಮಾಡಬೇಕು ಎಂದು ಹೇಳಿದರು.

ಪಿಎಸ್‌ಐ ನಾಗರಾಜ ಗಡದ ಮಾತನಾಡಿ, ಹಬ್ಬದಲ್ಲಿ ರಾಸಾಯನಿಕ ಮಿಶ್ರಿತ ಬಣ್ಣವನ್ನು ಬಳಸಬೇಡಿ, ಹಬ್ಬದ ದಿನ ಬೈಕ್‌ಗಳ ಕರ್ಕಶ ಶಬ್ದ ಹಾಗೂ ಟ್ರ್ಯಾಕ್ಟರ್‌ನಲ್ಲಿ ಅಬ್ಬರದ ಸೌಂಡ್ ಮೂಲಕ ಸಾರ್ವಜನಿಕರಿಗೆ, ವಿದ್ಯಾರ್ಥಿಗಳ ಓದಿಗೆ ತೊಂದರೆ ಮಾಡಬೇಡಿ. ಕಳೆದ ಬಾರಿ ವಿದ್ಯಾರ್ಥಿನಿಯರು ಇರುವ ಬಸ್‌ನಲ್ಲಿ ಬಣ್ಣ ಎರಚಿ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿತ್ತು. ಅಂತಹ ಘಟನೆಗಳು ನಡೆಯದಂತೆ ನಿಗಾವಹಿಸುತ್ತೇವೆ. ಹೋಳಿ ಹಬ್ಬವನ್ನು ಸಹೋದರತ್ವ ಭಾವನೆಯಿಂದ ಶಾಂತಿಯುತ ಮತ್ತು ಅರ್ಥಪೂರ್ಣವಾಗಿ ಆಚರಿಸಿ ಎಂದರು.

ಹಿರಿಯರಾದ ಪಿ.ಬಿ. ಖರಾಟೆ, ಗಂಗಾಧರ ಮೆಣಸಿನಕಾಯಿ ಮಾತನಾಡಿ, ಸ್ನೇಹ ಸೌಹಾರ್ದತೆ ಮತ್ತು ಧಾರ್ಮಿಕ ಬಾಂಧವ್ಯ ವೃದ್ಧಿಸುವ ಪವಿತ್ರ ಹೋಳಿ ಹಬ್ಬಕ್ಕೆ ಸಾಂಪ್ರದಾಯಿಕ, ವೈಜ್ಞಾನಿಕ ಹಿನ್ನೆಲೆಯಿದ್ದು, ಅವುಗಳನ್ನು ಮುಂದಿನ ಸಮಾಜಕ್ಕೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರದ್ದಾಗಿದೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಪೊಲೀಸ್ ಮತ್ತು ಪುರಸಭೆ ಜಂಟಿ ಕಾರ್ಯಾಚರಣೆ ಮೂಲಕ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಈ ವೇಳೆ ಶಿವಣ್ಣ ಕಟಗಿ, ಮಾಬುಸಾಬ ಮುಳುಗುಂದ, ಶರಣು ಗೋಡಿ, ನವೀನ ಹಿರೇಮಠ, ವಿಜಯ ಕುಂಬಾರ, ಹಾಲಪ್ಪ ಸೂರಣಗಿ, ಮಂಜುನಾಥ ಶೆರಸೂರಿ, ಮಲ್ಲೇಶಪ್ಪ ಬಸಾಪುರ, ದಾವೂದಖಾನ ಕಾರಡಗಿ, ಯೂನುಷ್ ಚೌರಿ, ಗೋಪಿ ಪಾಣಿಗಟ್ಟಿ, ಮುತ್ತು ಪಾಣಿಗಟ್ಟಿ, ಭರಮಗೌಡ ಪಾಣಿಗಟ್ಟಿ, ಮಂಜುನಾಥ ಕೊಡಳ್ಳಿ, ಫಕ್ಕೀರೇಶ ಅಣ್ಣಿಗೇರಿ, ಬಸಣ್ಣ ಬೆಂಗಳೂರು, ಜಗದೀಶ ಕೋಲಕಾರ, ಶೇಖಣ್ಣ ಹಂಜಗಿ, ಹಿಂದೂ-ಮುಸ್ಲಿಂ ಬಾಂಧವರು ಇದ್ದರು.

ಮಾ.3ರಂದು ಎಲ್ಲೆಡೆ ಕಾಮರತಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಕೆಲ ಗ್ರಾಮಗಳಲ್ಲಿ ಬಣ್ಣದೋಕುಳಿ ನಡೆಯಲಿದೆ. ಮಾ. 4ರಂದು ತಾಲೂಕಿನ ಗ್ರಾಮೀಣ ಭಾಗದಲ್ಲಿ ಮತ್ತು ಮಾ. 7ರಂದು ಲಕ್ಷ್ಮೇಶ್ವರದಲ್ಲಿ ರಂಗ ಪಂಚಮಿ ನಡೆಯಲಿದೆ. ಇತ್ತೀಚೆಗಷ್ಟೇ ಗ್ರಾಮದೇವಿ ಜಾತ್ರೆ ನಡೆದ ಹಿನ್ನೆಲೆಯಲ್ಲಿ ಈ ವರ್ಷ ಶಿಗ್ಲಿಯಲ್ಲಿ ರಂಗಿನೋಕುಳಿ ಆಡದಿರಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಪ್ರಜ್ವಲ್ ರಿತ್ತಿಗೆ ನಿವೇಶನ ವಿತರಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ತನ್ನ ಮನೆ ನಿರ್ಮಾಣದ ಸಂದರ್ಭದಲ್ಲಿ ಚಿನ್ನಾಭರಣಗಳ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಬಾಲಕ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಗುರುವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿವೇಶನವನ್ನು ವಿತರಿಸಿದರು.

ಈ ಕುರಿತು ಮಾಹಿತಿ ನೀಡಿದ ಅಭಿವೃದ್ಧಿ ಅಧಿಕಾರಿ ಅಮೀರನಾಯಕ, ಮಾರುತಿ ನಗರದ 7 ಎಕರೆ ಕ್ಷೇತ್ರದಲ್ಲಿಯ 274/4ರ ಸರ್ವೇಯಲ್ಲಿ ನಿವೇಶನವನ್ನು ವಿತರಿಸಲಾಗಿದ್ದು, ಸ್ಥಳದಲ್ಲಿ ಜಿ.ಪಿ.ಎಸ್ ಭಾವಚಿತ್ರವನ್ನು ತೆಗೆಯಲಾಗಿದೆ ಎಂದು ತಿಳಿಸಿದರು.


error: Content is protected !!