ಉಡುಪಿ: ಶಾಲಾ–ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವಿಚಾರ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ.
ಹಿಂದೂ ಮುಖಂಡ ಸುನೀಲ್ ಕೆ.ಆರ್ ಮಾತನಾಡಿ, ಸರ್ಕಾರ ಈ ನಿರ್ಧಾರವನ್ನು ವೋಟ್ ಬ್ಯಾಂಕ್ ರಾಜಕಾರಣದ ಭಾಗವಾಗಿ ತೆಗೆದುಕೊಂಡಿದೆ ಎಂದು ಆರೋಪಿಸಿದರು. ‘ಇದು ಕೇವಲ ಶಿಕ್ಷಣ ವ್ಯವಸ್ಥೆಯ ವಿಚಾರವಲ್ಲ, ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ’ ಎಂದು ಅವರು ಹೇಳಿದ್ದಾರೆ.
ಅವರು ಮುಂದುವರಿದು, ಸರ್ಕಾರ ಇಸ್ಲಾಮಿಕರಣದ ದಾರಿಗೆ ಹೋಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದು, ಮೂಲಭೂತವಾದಿ ಸಂಘಟನೆಗಳ ಒತ್ತಡಕ್ಕೆ ಸರ್ಕಾರ ಮಣಿದಿದೆ ಎಂದು ಟೀಕಿಸಿದ್ದಾರೆ.
ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು, ಇಲ್ಲವಾದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಬೆಳವಣಿಗೆ ಈಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

