ಕೊಪ್ಪಳ: ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿದ್ದ ಲವ್ ಜಿಹಾದ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವರದಿಯ ಪ್ರಕಾರ, ನಗರದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಅಪ್ರಾಪ್ತ ಹಿಂದೂ ಬಾಲಕಿ ಹಾಗೂ ಮುಸ್ಲಿಂ ಯುವಕ ಒಟ್ಟಿಗೆ ಕಂಡುಬಂದಿದ್ದಾರೆ. ಈ ಕುರಿತು ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಭಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ ವೇಳೆ ಯುವಕ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಗಂಭೀರಗೊಂಡಿದೆ ಎಂದು ತಿಳಿದುಬಂದಿದೆ.
ಈ ಘಟನೆ ಸಂಬಂಧ ಯುವಕ ಸಮೀರ್ ನೀಡಿದ ದೂರಿನ ಆಧಾರದ ಮೇಲೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 8 ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆಯ ಬಳಿಕ ಅಪ್ರಾಪ್ತ ಬಾಲಕಿಯ ಪೋಷಕರು ಆತಂಕ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಎಸ್ಪಿ ಡಾ. ರಾಮ್ ಅರಸಿದ್ದಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದು, ಪ್ರಕರಣ ಕುರಿತು ಆರೋಪ–ಪ್ರತ್ಯಾರೋಪಗಳು ಮುಂದುವರಿದಿವೆ. ಕೊಪ್ಪಳ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.


