Home Blog

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ: ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, HDK ದಂಪತಿ ಭಾಗಿ

0

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮದಿಂದ ನಡೆಯಿತು. ತಿರುಮಲ ತಿರುಪತಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ತರಲಾದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರ ಬೃಂದಾವನಕ್ಕೆ ಭಕ್ತಿಭಾವದಿಂದ ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಭಾಗವಹಿಸಿದ್ದರು.

ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳನ್ನು ರಾಯರ ಮಠದ ಆಡಳಿತ ಮಂಡಳಿ ಸಾಂಪ್ರದಾಯಿಕವಾಗಿ ಸ್ವಾಗತಿಸಿತು. ಬಳಿಕ ಮೆರವಣಿಗೆಯ ಮೂಲಕ ಶೇಷವಸ್ತ್ರವನ್ನು ಮಠಕ್ಕೆ ತರಲಾಗಿದ್ದು, ರಾಯರ ಮೂಲ ಬೃಂದಾವನದಲ್ಲಿ ಸಮರ್ಪಣೆ ನೆರವೇರಿಸಲಾಯಿತು.

ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಶೇಷವಸ್ತ್ರವನ್ನು ಸಮರ್ಪಿಸಿದರು. ಈ ವೇಳೆ ಅನೇಕ ಭಕ್ತರು ಉಪಸ್ಥಿತರಿದ್ದು, ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು.

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

0

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ‘ಮನರೇಗಾ ವನ್ನು ಉಳಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನ್ಲದಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾ ವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ,

ನಾಯಕಿ ಸೋನಿಯಾ ಗಾಂಧಿಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು.ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ:

ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ , 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53 % ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11 % ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದರು.

ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ ,

ಅನುಮತಿ ಇಲ್ಲದೇ , ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾ ವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾ ದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿಜಿರಾಮ್ ಜಿ ರದ್ದುಪಡಿಸಿ, ಮನರೇಗಾ ವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದರು.

ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ: ಸಾವು-ಬದುಕಿನ ನಡುವೆ ಯುವತಿ ಹೋರಾಟ

0

ಗುರುಗ್ರಾಮ: ಲಿವ್-ಇನ್ ಸಂಬಂಧದ ಹೆಸರಿನಲ್ಲಿ ಮದುವೆಯ ಆಮಿಷವೊಡ್ಡಿ ಯುವತಿಯನ್ನು ಅಮಾನವೀಯವಾಗಿ ಹಿಂಸಿಸಿದ ಅಘಾತಕಾರಿ ಘಟನೆ ಹರಿಯಾಣದ ಗುರುಗ್ರಾಮ್‌ ನಲ್ಲಿ ಬೆಳಕಿಗೆ ಬಂದಿದೆ. 19 ವರ್ಷದ ಬಿ.ಎಸ್ಸಿ ವಿದ್ಯಾರ್ಥಿನಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ತ್ರಿಪುರಾ ಮೂಲದ ವಿದ್ಯಾರ್ಥಿನಿ ಗುರುಗ್ರಾಮದ ಸೆಕ್ಟರ್ 69ರ ಪಿಜಿಯಲ್ಲಿ ವಾಸವಿದ್ದು, ಬಯೋಟೆಕ್ನಾಲಜಿ ಅಭ್ಯಾಸ ಮಾಡುತ್ತಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಆ್ಯಪ್ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಬಳಿಕ ಫ್ಲಾಟ್‌ನಲ್ಲಿ ಲಿವ್-ಇನ್ ಸಂಬಂಧ ಆರಂಭಿಸಿದ್ದನು.

ಇಬ್ಬರ ನಡುವೆ ಹೊಂದಾಣಿಕೆ ಸಮಸ್ಯೆ, ಸಂದೇಹಗಳು ಹೆಚ್ಚಾಗುತ್ತಿದ್ದಂತೆ ಶಿವಂ ಯುವತಿಯ ಮೇಲೆ ಸತತ ದೈಹಿಕ ದೌರ್ಜನ್ಯ ಎಸಗುತ್ತಿದ್ದನು ಎನ್ನಲಾಗಿದೆ. ಫೆಬ್ರವರಿ 16ರಂದು ಕ್ರೌರ್ಯ ಮಿತಿಮೀರಿದ್ದು, ಯುವತಿಯ ತಲೆಯನ್ನು ಗೋಡೆಗೆ ಜಜ್ಜಿ, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ಹಲ್ಲೆ ನಡೆಸಿದ್ದಾನೆ.

ಅಷ್ಟೇ ಅಲ್ಲದೆ, ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ಭೀಕರ ಹಲ್ಲೆಯ ವಿಡಿಯೋವನ್ನು ಸಹ ಆರೋಪಿ ಚಿತ್ರೀಕರಿಸಿದ್ದಾನೆ. ಕಾಲುಗಳಿಗೆ ಚಾಕುವಿನಿಂದ ಇರಿದು, “ಇನ್ನು ಮುಂದೆ ತಾಯಿಯಾಗಲು ಅಥವಾ ನಡೆಯಲು ಸಾಧ್ಯವಾಗದಂತೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಎರಡು ದಿನಗಳ ಕಾಲ ಚಿತ್ರಹಿಂಸೆ ಅನುಭವಿಸಿದ ಯುವತಿ, ಫೆಬ್ರವರಿ 18ರಂದು ಆರೋಪಿಯ ಫೋನಿನಿಂದಲೇ ತಾಯಿಗೆ ಸ್ಥಳೀಯ ಭಾಷೆಯಲ್ಲಿ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ವಿಷಯ ತಿಳಿದ ತಾಯಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿದ್ದಾರೆ.

ಸದ್ಯ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ದಲಿತ ಸಿಎಂ ಚರ್ಚೆ: ಅಂತಿಮ ನಿರ್ಧಾರ ಹೈಕಮಾಂಡ್‌ʼಗೆ – ಸತೀಶ್ ಜಾರಕಿಹೊಳಿ

0

ಕಾರವಾರ: ದಲಿತ ಸಿಎಂ ಕುರಿತ ಚರ್ಚೆ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಸಿಎಂ ಆಯ್ಕೆ ಕುರಿತು ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

“ಸಿಎಂ ಆಯ್ಕೆ ಐದು ವರ್ಷಗಳ ಅವಧಿಗೆ ಆಗಿದೆ. ಕೇವಲ ಚರ್ಚೆ ನಡೆದ ತಕ್ಷಣ ಸಿಎಂ ಮಾಡುವುದು ಸಾಧ್ಯವಿಲ್ಲ. ಸಿಎಂ ಆಕಾಂಕ್ಷಿಗಳು ಹಲವರು ಇದ್ದಾರೆ. ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ” ಎಂದು ಹೇಳಿದರು.

ಪಕ್ಷದೊಳಗಿನ ಗೊಂದಲವನ್ನು ಒಪ್ಪಿಕೊಂಡ ಜಾರಕಿಹೊಳಿ, “ಗೊಂದಲ ನಿವಾರಣೆ ಅಂದರೆ ಸ್ಥಾನ ಬದಲಾವಣೆ ಎಂದಲ್ಲ. ಕಾರ್ಯಕರ್ತರು, ನಾಯಕರು ಸೇರಿದಂತೆ ಪಕ್ಷದೊಳಗೆ ಕೆಲವು ಗೊಂದಲಗಳಿವೆ. ಅವು ಬಗೆಹರಿಯಬೇಕು. ಎಲ್ಲರೂ ಸಿಎಂ ಆಗಲು ಸಾಧ್ಯವಿಲ್ಲ. ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಈಗ ಸಿಎಂ ಇದ್ದಾರೆ. ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದೆ” ಎಂದು ತಿಳಿಸಿದ್ದಾರೆ.

ಸಿಎಂ ಮಾಡಿದ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಅವರು, “ಟ್ವೀಟ್ ಬಗ್ಗೆ ಅವರೇ ಹೇಳಬೇಕು. ಪಕ್ಷದಲ್ಲಿ ಕೆಲವು ಸಮಸ್ಯೆಗಳಿವೆ. ಅವು ಸರಿಯಾಗುತ್ತವೆ” ಎಂದರು. ಇದೇ ವೇಳೆ ಬಿಜೆಪಿಯ ಭ್ರಷ್ಟಾಚಾರ ಆರೋಪಗಳಿಗೆ ತಿರುಗೇಟು ನೀಡಿದ ಅವರು, “ಬಿಜೆಪಿ ನಾಯಕರು ಇತರರ ಮೇಲೆ ಆರೋಪ ಮಾಡುತ್ತಾರೆ. ಆದರೆ ಅವರದೇ ಎಂಎಲ್ಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಮ್ಮ ಭ್ರಷ್ಟಾಚಾರದ ಬಗ್ಗೆ ಅವರೇ ಸಾಕ್ಷಿ ನೀಡಿದ್ದಾರೆ” ಎಂದು ಕಟುವಾಗಿ ಪ್ರತಿಕ್ರಿಯಿಸಿದರು.

ಟ್ರಿಬಲ್ ಹಣದ ಆಮಿಷ, ಅಧಿಕಾರಿಗಳ ನಕಲಿ ವೇಷ! 24 ಲಕ್ಷ ದೋಚಿದ ಗ್ಯಾಂಗ್ ಬಯಲು

0

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿನಿಮಾವನ್ನೇ ಮೀರಿಸುವ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಹೆಸರಿನಲ್ಲಿ ಅಧಿಕಾರಿಗಳಂತೆ ನಟಿಸಿ 24 ಲಕ್ಷ ರೂ. ಹಣ ದೋಚಲಾಗಿದೆ.

ಈ ಪ್ರಕರಣದಲ್ಲಿ ಕೃಷ್ಣಕುಮಾರ್ ನೇತೃತ್ವದ 12 ಮಂದಿಯ ಗ್ಯಾಂಗ್ ಭಾಗಿಯಾಗಿದ್ದು, ಇದುವರೆಗೆ 9 ಆರೋಪಿಗಳನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ದೋಚಿದ ಹಣ ವಶಪಡಿಸಿಕೊಳ್ಳಲಾಗಿದೆ.

ಶಂಕರಪ್ಪ ಎಂಬುವರಿಗೆ ಹಣವನ್ನು ಮೂರರಷ್ಟು ಮಾಡಿಕೊಡುವುದಾಗಿ ಹೇಳಿ ಕರೆಸಿಕೊಂಡ ಆರೋಪಿಗಳು, ಖಾಸಗಿ ಕಾರಿನಲ್ಲಿ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು ಹಣ ಕಸಿದುಕೊಂಡಿದ್ದಾರೆ.

ಆಘಾತಕಾರಿ ಸಂಗತಿ ಏನೆಂದರೆ, ದರೋಡೆ ಬಳಿಕ ಎ1 ಆರೋಪಿ ಕೃಷ್ಣಕುಮಾರ್ ತಾನೇ ಠಾಣೆಗೆ ಬಂದು ದೂರು ದಾಖಲಿಸಿದ್ದಾನೆ. ಆದರೆ ಪೊಲೀಸರ ಕಠಿಣ ವಿಚಾರಣೆಯಲ್ಲಿ ಅವನೇ ಸಂಚಿನ ಸೂತ್ರಧಾರ ಎಂಬುದು ಬಹಿರಂಗವಾಗಿದೆ.

ಜೈಲಿನಲ್ಲೇ ಇರುವ ದರ್ಶನ್‌ಗೆ ಕೋರ್ಟ್ ರಿಲೀಫ್: ಲೈಸೆನ್ಸ್ ಅಮಾನತು ಕ್ರಮಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರಿಗೆ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಜಾಮೀನು ರದ್ದಾದ ಬಳಿಕ ಅವರ ಗನ್ ಲೈಸೆನ್ಸ್ ಅನ್ನು ಅಮಾನತುಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಪೀಠ ಅಮಾನತು ಕ್ರಮಕ್ಕೆ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದ್ದು, ಇದರಿಂದ ದರ್ಶನ್‌ಗೆ ಸಣ್ಣ ಮಟ್ಟಿನ ಕಾನೂನು ಬಲ ದೊರಕಿದೆ. ಆದರೂ ಅವರು ಇನ್ನೂ ಜೈಲಿನಲ್ಲೇ ಇದ್ದು, ಪ್ರಕರಣದ ವಿಚಾರಣೆ ಮುಂದುವರಿಯುತ್ತಿದೆ.

ಅಭಿಮಾನಿಗಳು ದರ್ಶನ್ ಬಿಡುಗಡೆಗಾಗಿ ಕಾಯುತ್ತಿದ್ದರೂ, ಸದ್ಯಕ್ಕೆ ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಪ್ರಕರಣದ ಮುಂದಿನ ಹಂತಗಳತ್ತ ಎಲ್ಲರ ಗಮನ ನೆಟ್ಟಿದೆ.

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು..?

0

ಬೆಂಗಳೂರು: “ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಕೇಳಿದಾಗ, “ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ” ಎಂದರು.

ಸಚಿವ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಕೇಳಿದಾಗ, “ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ” ಎಂದರು. ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂದು ನೀಡಿರುವ ವರದಿ ಬಗ್ಗೆ ಕೇಳಿದಾಗ,

“ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ. ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಬಿಡ್ಬ್ಯೂ ಎಸ್ ಎಸ್ ಬಿಯಿಂದ ಶುದ್ದಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನ‌ಮಾಡಲು ಅಲ್ಲ” ಎಂದರು.

ವಿಬಿ ಗ್ರಾಮ್ ಜೀ ವಿಚಾರವಾಗಿ ಕೇಳಿದಾಗ, “ವಿಬಿ ಗ್ರಾಮ್ ಜೀ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಹಾಗೂ ಯಾವುದೇ ನಿರ್ದೇಶನ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ. ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವ್ ಆದೋಂಲನ ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು‌.

ಆನ್‌ಲೈನ್ ಗೇಮ್ ವ್ಯಸನಕ್ಕೆ ಮತ್ತೊಂದು ಬಲಿ: ವೃದ್ಧೆ ಹತ್ಯೆ ಮಾಡಿ ಚಿನ್ನ ದೋಚಿದ ಯುವಕ ಅರೆಸ್ಟ್

0

ದಾವಣಗೆರೆ: ಜಿಲ್ಲೆಯಲ್ಲಿ ಆನ್‌ಲೈನ್ ಗೇಮ್ ವ್ಯಸನದಿಂದ ಭೀಕರ ಅಪರಾಧ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ಸಾಲ ತೀರಿಸಲು ವೃದ್ಧೆಯನ್ನೇ ಹತ್ಯೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣವು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಫೆಬ್ರವರಿ 2ರಂದು ನಡೆದ ಈ ಘಟನೆ ಇದೀಗ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಗ್ರಾಮದಲ್ಲಿ ವಾಸವಾಗಿದ್ದ 64 ವರ್ಷದ ವೃದ್ಧೆ ಕಮಲಮ್ಮ ಅವರ ಮನೆಗೆ ನುಗ್ಗಿದ ಆರೋಪಿಯು ಅವರನ್ನು ಹತ್ಯೆ ಮಾಡಿ ಸುಮಾರು 8.44 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸರ ತನಿಖೆಯಲ್ಲಿ ಆರೋಪಿಯ ಗುರುತು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ (23) ಬಂಧಿತ ಆರೋಪಿ. ಆನ್‌ಲೈನ್ ಗೇಮ್ ವ್ಯಸನದಿಂದ ಆತ 20 ರಿಂದ 25 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದನು ಎಂದು ತನಿಖೆಯಲ್ಲಿ ಗೊತ್ತಾಗಿದೆ.

ಸಾಲಗಾರರ ಒತ್ತಡದಿಂದ ತಪ್ಪಿಸಿಕೊಳ್ಳಲು ಆತ ಮನೆ ಬಿಟ್ಟು ಬಸ್ ನಿಲ್ದಾಣಗಳಲ್ಲಿ ವಾಸಿಸುತ್ತಿದ್ದ. ನಂತರ ಹಬ್ಬದ ಸಮಯದಲ್ಲಿ ಚಿನ್ನಾಭರಣ ಧರಿಸಿ ದೇವಸ್ಥಾನಕ್ಕೆ ಬಂದಿದ್ದ ಕಮಲಮ್ಮ ಅವರನ್ನು ಗುರಿಯಾಗಿಸಿಕೊಂಡಿದ್ದಾನೆ. ಮನೆ ಹಿಂಬಾಗಿಲಿನಿಂದ ಒಳನುಗ್ಗಿ, ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿ ಚಿನ್ನ ದೋಚಿದ್ದಾನೆ ಎಂದು ಆರೋಪಿಸಲಾಗಿದೆ.

ದೋಚಿದ ಚಿನ್ನವನ್ನು ಶಿಕಾರಿಪುರದ ಬ್ಯಾಂಕ್‌ಗಳಲ್ಲಿ ಅಡವಿಟ್ಟು ಹಣ ಪಡೆದು ಮತ್ತೆ ಆನ್‌ಲೈನ್ ಗೇಮ್ ಆಡಲು ಬಳಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ದಾವಣಗೆರೆ ಎಸ್‌ಪಿ ಎಚ್.ಟಿ. ಶೇಖರ್ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಮತ್ತೆ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ! ತನಿಖೆ ಚುರುಕು

0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇರುವ ಎರಡು ಪ್ರಮುಖ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಬಂದಿದೆ. ಧೌಲಾ ಕುವಾನ್‌ನ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಲೋಧಿ ರಸ್ತೆಯ ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್ ಗಳಿಗೆ ಸ್ಫೋಟ ಬೆದರಿಕೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆದರಿಕೆ ಇ-ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡೂ ಶಾಲೆಗಳನ್ನು ತಕ್ಷಣವೇ ಖಾಲಿ ಮಾಡಿಸಲಾಯಿತು. ಬಳಿಕ ಪೊಲೀಸ್, ಬಾಂಬ್ ನಿಷ್ಕ್ರಿಯಗೊಳಿಸುವ ದಳ, ಡಾಗ್ ಸ್ಕ್ವಾಡ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಶಾಲಾ ಆವರಣದ ಸಂಪೂರ್ಣ ಪರಿಶೀಲನೆ ನಡೆಸಿದರು.

12ನೇ ತರಗತಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ನಾಲ್ಕು ದಿನಗಳ ಅಂತರದಲ್ಲಿ ಇದು ಎರಡನೇ ಬೆದರಿಕೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಸಂಶಯಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಭದ್ರತಾ ಕಾರಣಗಳಿಂದ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಎರಡೂ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಧಮಕಿ ಬಂದಿರುವುದನ್ನು ದೃಢಪಡಿಸಿದರು. ಸೈಬರ್ ಸೆಲ್ ಸಹಾಯದಿಂದ ಇ-ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ.

 ಮೆಟ್ರೋ ದರ ಏರಿಕೆ ಬಗ್ಗೆ ಮತ್ತೆ ಚರ್ಚೆ: ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL!

0

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದ್ದರೂ, ಇದೀಗ ಮತ್ತೆ ದರ ಪರಿಷ್ಕರಣೆ ವಿಚಾರ ಮುನ್ನೆಲೆಗೆ ಬಂದಿದೆ. ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಳೆದ ಬಾರಿ ನಿಗದಿಯಾಗಿದ್ದ 5% ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು-ವೆಚ್ಚಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಎಂಆರ್ಸಿಎಲ್ ಗೆ ಸೂಚನೆ ನೀಡಿದ್ದರು.

ಇದೀಗ ಬಿಎಂಆರ್ಸಿಎಲ್ ಆಂತರಿಕ ಆಡಿಟ್ ಪೂರ್ಣಗೊಳಿಸಿದ್ದು, ಮೆಟ್ರೋ ನಿರ್ವಹಣೆ, ಕಾರ್ಯಾಚರಣೆ ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಗಿದೆ. ಆಡಿಟ್ ವರದಿಯನ್ನು ಡಿಸಿಎಂ ಗಮನಕ್ಕೆ ತರಲು ಸಂಸ್ಥೆ ಮುಂದಾಗಿದೆ.

ಆಡಿಟ್ ಪೂರ್ಣಗೊಂಡ ಹಿನ್ನೆಲೆ ಮತ್ತೆ ದರ ಏರಿಕೆ ಚರ್ಚೆ ಜೋರಾಗಿದೆ. ಆರಂಭದಲ್ಲಿ ನಿಗದಿಯಾಗಿದ್ದ 5% ಏರಿಕೆಯನ್ನು 1% ಅಥವಾ 2%ಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ದರದಲ್ಲಿ ಹೆಚ್ಚಳವಾಗುವ ಸಾಧ್ಯತೆಯನ್ನೂ ತಳ್ಳಿಹಾಕಲಾಗುತ್ತಿಲ್ಲ.

ಹೊಸ ದರ ನಿಗದಿ ಮಾಡಲು ಪ್ರತ್ಯೇಕ ಸಮಿತಿ ರಚನೆ ಅಗತ್ಯವಿದೆ. ಈ ಸಂಬಂಧ ಮೆಟ್ರೋ ಬೋರ್ಡ್ ಸಭೆಯ ದಿನಾಂಕ ನಿಗದಿ ಮಾಡುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಮನವಿ ಮಾಡಲು ಮುಂದಾಗಿದ್ದಾರೆ. ಬೋರ್ಡ್ ಸಭೆಯ ಬಳಿಕ ಅಂತಿಮ ದರ ಏರಿಕೆ ಅಥವಾ ಇಳಿಕೆ ಕುರಿತು ಸ್ಪಷ್ಟನೆ ಸಿಗುವ ಸಾಧ್ಯತೆ ಇದೆ.

error: Content is protected !!