ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿಗ್ಲಿ ಗ್ರಾಮದಲ್ಲಿ ಫೆ. 2 ರಂದು ಹಾಗೂ ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಟ್ಟಿಯಲ್ಲಿ ನಡೆದ ಹಗಲು ಮನೆ ಕಳ್ಳತನ ಪ್ರಕರಣಗಳಲ್ಲಿ ಭಯ ಮೂಡಿಸಿದ್ದ ಕಳ್ಳನನ್ನು ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ರಾಮಾಪುರ ಗ್ರಾಮದ ನಿವಾಸಿ ಚಮನಸಾಬ್ ಚ. ಪಾಟೀಲ ಎಂದು ಗುರುತಿಸಲಾಗಿದೆ. ಆರೋಪಿಯಿಂದ 21 ಗ್ರಾಂ ಬಂಗಾರ ಆಭರಣಗಳು, 100 ಗ್ರಾಂ ಬೆಳ್ಳಿ ಆಭರಣಗಳು ಮತ್ತು ₹14,000 ನಗದು ವಶಪಡಿಸಲಾಯಿತು.
ಗದಗ ಜಿಲ್ಲೆ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಮತ್ತು ಗದಗ ಉತ್ತರ ವಿಭಾಗದ ಡಿಎಸ್ಪಿ ಮುರ್ತಜಾ ಖಾದ್ರಿ ಮಾರ್ಗದರ್ಶನದಲ್ಲಿ, ಸಿಪಿಐ ಬಿ.ವಿ. ನ್ಯಾಮಗೌಡ ನೇತೃತ್ವದಲ್ಲಿ, ಪಿಎಸ್ಐ ನಾಗರಾಜ್ ಗಡ್ಡ ಮತ್ತು ಪಿಎಸ್ಐ ಟಿ.ಕೆ. ರಾಠೋಡ್ ಅವರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಸಿಬ್ಬಂದಿ, ಆರ್.ಎಸ್. ಯರಗಟ್ಟಿ, ಎಮ್.ಎ. ಶೇಖ್, ಎಮ್.ಎಸ್. ಬಳ್ಳಾರಿ, ಆನಂದ್ ಕಮ್ಮಾರ್, ಸಿ.ಎಸ್. ಮಠಪತಿ, ಡಿ.ಎಸ್. ನದಾಫ್, ಎಚ್.ಐ. ಕಲ್ಲಣ್ಣವರ, ಪಾಂಡುರಂಗ್ ರಾವ್, ಮದುಚಂದ್ರ ಧಾರವಾಡ, ಮಾರ್ತಾಂಡ ಉಪ್ಪಾರ, ಮಾಂತೇಶ ಐಗಾರ, ಗುರು ಬೂದಿಹಾಳ ಮತ್ತು ಟೆಕ್ನಿಕಲ್ ಸೆಲ್ ಗದಗದ ಸಂಜು ಕೊರಡೂರು ಸೇರಿದಂತೆ ತಂಡದೊಂದಿಗೆ ಕಾರ್ಯನಿರ್ವಹಿಸಿದರು.
ಈ ಕಾರ್ಯಕ್ಕೆ ಎಸ್ಪಿ ರೋಹನ್ ಜಗದೀಶ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಸುರಕ್ಷತೆಗೆ ಪೊಲೀಸ್ ದಳದ ಸಮರ್ಪಣೆ ಮತ್ತು ಧೈರ್ಯವನ್ನು ಪ್ರಶಂಸಿಸಿದ್ದಾರೆ.

