Home Blog

ವಿಮಾನದಲ್ಲಿ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನ: ಹೋಗಲಿ ಅಂತ ಬಿಟ್ಟು ಕಳಿಸಿದ್ದ ಪೊಲೀಸರನ್ನೇ ನಿಂದಿಸಿದ್ದ ವ್ಯಕ್ತಿ ವಿರುದ್ದ FIR

ದೇವನಹಳ್ಳಿ:- ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ್ದಲ್ಲದೆ, ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದ ವ್ಯಕ್ತಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಹಾರುತ್ತಿದ್ದ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪಿ ಉತ್ಕರ್ಷ್ ಗೌತಮ್, ಹೋಗಲಿ ಎಂದು ಬಿಟ್ಟು ಕಳುಹಿಸಿದ ಬೆಂಗಳೂರು ಪೊಲೀಸರನ್ನೇ ‘ಬಸ್ಟರ್ಡ್ಸ್’ ಎಂದು ನಿಂದಿಸಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಎಕ್ಸ್ (X) ಖಾತೆಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಆರೋಪ ಮಾಡಿ ಪೋಸ್ಟ್ ಹಾಕಿದ್ದ ಆರೋಪಿಯ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

FIR ಬೆನ್ನಲ್ಲೇ ಆರೋಪಿ ಎಸ್ಕೇಪ್ ಆಗಿದ್ದು, ಆತನ ಶೋಧಕ್ಕೆ ಪೊಲೀಸರು ಮುಂದಾಗಿದ್ದಾರೆ.

Crime News: ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಮಂಗಳಮುಖಿಯರ ಮೇಲೆ ಯುವಕರಿಂದ ಹಲ್ಲೆ!

0

ಮೈಸೂರು: ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಖರ್ಚಿಗೆ ಹಣ ನೀಡಿಲ್ಲವೆಂದು ಕೋಪಗೊಂಡು ಮಂಗಳಮುಖಿಯರ ಮೇಲೆ ಯುವಕರು ತಲ್ವಾರ್ ನಿಂದ ಹಲ್ಲೆ ಮಾಡಿರುವ ಘಟನೆ ಜರುಗಿದೆ.

ಅಮೃತ ಬಡಾವಣೆಯ ಕೆಲ ಯುವಕರು, ಆನಮ್ ಎಂಬ ಮಂಗಳಮುಖಿ ಬಳಿ ಖರ್ಚಿಗೆ ಹಣ ಕೇಳಿದ್ದಾರೆ. ಇದಕ್ಕೆ ಆನಮ್ ನಿರಾಕರಿಸಿದಾಗ ಯುವಕರು ಗಲಾಟೆ ತೆಗೆದಿದ್ದಾರೆ. ಆಗ ಸ್ನೇಹಿತೆಯಾದ ಆನಮ್ ತನ್ನ ಮತ್ತೊಬ್ಬ ಸ್ನೇಹಿತೆ ಪಾರಿಯನ್ನು ಕರೆ ಮಾಡಿ ಕರೆಸಿಕೊಂಡಿದ್ದಾಳೆ. ಪಾರಿ ಸ್ಥಳಕ್ಕೆ ಬರುತ್ತಿದ್ದಂತೆ ಯುವಕರು ಹಲ್ಲೆ ಮಾಡಿದ್ದಾರೆ.

ಘಟನೆ ಸಂಬಂಧ ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ಯುವಕರ ಬಂಧನಕ್ಕೆ ಪೊಲೀಸರು ಶೋಧ ಕೈಗೊಂಡಿದ್ದಾರೆ.

ಡೀಸೆಲ್‌ ಟ್ಯಾಂಕರ್‌-ಕಾರು ನಡುವೆ ಭೀಕರ ಅಪಘಾತ! ತಪ್ಪಿದ ಅನಾಹುತ

ಹಾಸನ: ಡೀಸೆಲ್‌ ಟ್ಯಾಂಕರ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿರುವ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಜರುಗಿದೆ.

ಅಪಘಾತದಿಂದ ಟ್ಯಾಂಕರ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಡೀಸೆಲ್‌ ಸೋರಿಕೆಯಾಗಿರುವುದು ಕಂಡುಬಂದಿದೆ. ಆದ್ರೆ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮುಂದಾಗುವ ಅನಾಹುತ ತಪ್ಪಿದೆ. ಇನ್ನೂ ಟ್ಯಾಂಕರ್‌ ಡಿಕ್ಕಿಯಿಂದ ಕಾರಿನ ಒಂದು ಬದಿ ನಜ್ಜುಗುಜ್ಜಾಗಿದ್ದು, ರಸ್ತೆಯ ಇನ್ನೊಂದು ಬದಿಗೆ ಹಾರಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಗರ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನ ಏರ್ ಕ್ವಾಲಿಟಿ ಕುಸಿತ: ಪರಿಸ್ಥಿತಿ ಚಿಂತಾಜನಕ ಎಂದ ತಜ್ಞರು!

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಯು ಗುಣಮಟ್ಟ ಇನ್ನೂ ಹದಗೆಟ್ಟ ಸ್ಥಿತಿಯಲ್ಲೇ ಮುಂದುವರಿದಿದ್ದು, ಆರೋಗ್ಯದ ಬಗ್ಗೆ ಆತಂಕ ಮೂಡಿಸಿದೆ.

ಇದಕ್ಕಿಂತಲೂ ಹೆಚ್ಚಾಗಿ ಮೈಸೂರಿನಲ್ಲಿ ಏರ್ ಕ್ವಾಲಿಟಿ ಮತ್ತಷ್ಟು ಕುಸಿದಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಇಂದಿನ ಅಂಕಿ-ಅಂಶಗಳ ಪ್ರಕಾರ, ಕೆಲ ದಿನಗಳ ಹಿಂದೆ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ AQI ಇಂದು 166ಕ್ಕೆ ತಲುಪಿದ್ದು, ಇನ್ನೂ ‘ಅನಾರೋಗ್ಯಕರ’ ಮಟ್ಟದಲ್ಲೇ ಇದೆ. ಇದೇ ವೇಳೆ ಮೈಸೂರಿನಲ್ಲಿ AQI 185ಕ್ಕೆ ಏರಿಕೆಯಾಗಿದ್ದು, ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಟ್ಟಿದೆ. WHO ಮಾನದಂಡಗಳ ಪ್ರಕಾರ ಈ ಮಟ್ಟದ ವಾಯು ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ಇನ್ನೊಂದೆಡೆ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದ್ದು, ಮಂಗಳೂರು ಮತ್ತು ಉಡುಪಿ ನಗರಗಳಲ್ಲಿ ವಾಯು ಗುಣಮಟ್ಟ ಮಧ್ಯಮ ಮಟ್ಟದಲ್ಲಿದೆ.

ರಾಜ್ಯದ ಇತರ ಪ್ರಮುಖ ನಗರಗಳ ಇಂದಿನ AQI ವಿವರ ಹೀಗಿದೆ:
ಬೆಂಗಳೂರು – 166
ಮಂಗಳೂರು – 102
ಮೈಸೂರು – 185
ಬೆಳಗಾವಿ – 64
ಕಲಬುರ್ಗಿ – 82
ಶಿವಮೊಗ್ಗ – 126
ಬಳ್ಳಾರಿ – 120
ಹುಬ್ಬಳ್ಳಿ – 84
ಉಡುಪಿ – 93
ವಿಜಯಪುರ – 119

AQI ವರ್ಗೀಕರಣ ಪ್ರಕಾರ 0-50 ‘ಉತ್ತಮ’, 50-100 ‘ಮಧ್ಯಮ’, 100-150 ‘ಕಳಪೆ’, 150-200 ‘ಅನಾರೋಗ್ಯಕರ’, 200-300 ‘ಗಂಭೀರ’ ಹಾಗೂ 300ಕ್ಕಿಂತ ಮೇಲಿನ ಮಟ್ಟ ‘ಅಪಾಯಕಾರಿ’ ಎಂದು ಪರಿಗಣಿಸಲಾಗುತ್ತದೆ.

ತಜ್ಞರು ಮಕ್ಕಳಿಗೆ, ವೃದ್ಧರಿಗೆ ಹಾಗೂ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿರುವವರಿಗೆ ಹೊರಾಂಗಣ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಸಲಹೆ ನೀಡಿದ್ದಾರೆ.

ಇಂದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಗದಗದಲ್ಲೂ ಮಳೆ ನಿರೀಕ್ಷೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಉಷ್ಣತೆಯ ತೀವ್ರತೆ ಕಡಿಮೆಯಾದಂತಾಗಿದೆ.

ಇಂದೂ ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರ್ಗಿ, ಬೀದರ್, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜನಸಂದಣಿ ಮಧ್ಯೆ ಕಳ್ಳತನ: ಯುವತಿಯ ಮುಖ್ಯ ದಾಖಲೆಗಳಿದ್ದ ಬ್ಯಾಗ್ ಕಳುವು!

0

ಕೋಲ್ಕತ್ತಾ: ಸಾಮಾನ್ಯವಾಗಿ ರೈಲ್ವೆ ನಿಲ್ದಾಣಗಳ ಸುತ್ತಮುತ್ತ 24 ಗಂಟೆಯೂ ಜನ ಸಂಚಾರ ಜೋರಾಗಿರುತ್ತದೆ. ಆದರೂ, ಜನಸಂದಣಿ ನಡುವೆಯೇ ಕಳ್ಳತನದ ಘಟನೆ ನಡೆದಿದೆ.

ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ಅಕ್ಕ-ತಂಗಿ ಲಗೇಜ್ ಹಿಡಿದು ನಿಂತಿದ್ದ ವೇಳೆ, ಬೈಕ್‌ನಲ್ಲಿ ಬಂದ ಕಳ್ಳನೊಬ್ಬ ಯುವತಿಯ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ.

ಯುವತಿಯ ಬ್ಯಾಗ್‌ನಲ್ಲಿ ಪ್ರಮುಖ ದಾಖಲೆಗಳು ಇದ್ದವು ಎಂದು ತಿಳಿದುಬಂದಿದೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು.

ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಜನರಿಗೆ ಮನವಿ ಮಾಡಿದರು. ಬಿಜೆಪಿಯವರು ಕಳ್ಳೆತ್ತುಗಳು, ಅವರಿಗೆ ಮತ ಹಾಕಬಾರದು. ನಾನು ಸಿಎಂ ಆಗಿ ಇಲ್ಲಿಗೆ ಬಂದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಬಂದಿದ್ದೇನೆ. ಮೇಟಿ ಅವರ ಅಪೂರ್ಣ ಕೆಲಸಗಳನ್ನು ಮುಂದುವರಿಸಲು ಉಮೇಶ್ ಮೇಟಿಗೆ ಮತ ನೀಡಿ ಗೆಲ್ಲಿಸಬೇಕು” ಎಂದು ಕರೆ ನೀಡಿದರು.

ಇದೇ ವೇಳೆ ಹಿಂದಿನ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, B. S. ಯಡಿಯೂರಪ್ಪ, ಬೊಮ್ಮಾಯಿ ಆಡಳಿತದಲ್ಲಿ ಅಭಿವೃದ್ಧಿಗಿಂತ ಲೂಟಿಯೇ ನಡೆದಿದ್ದು, ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಆರೋಪಿಸಿದರು.

ಆಲಮಟ್ಟಿ ಜಲಾಶಯದ ಎತ್ತರವನ್ನು 519ರಿಂದ 524 ಮೀಟರ್‌ವರೆಗೆ ಹೆಚ್ಚಿಸುವ ಅಗತ್ಯವಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಕಾರ್ಯ ಕೈಗೊಂಡಿಲ್ಲ ಎಂದು ಟೀಕಿಸಿದರು. ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತ ಕನಸನ್ನೂ ಅವರು ಪ್ರಸ್ತಾಪಿಸಿ, ಈ ವಿಷಯದಲ್ಲಿ ಹಿಂದಿನ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯವರು ಈಗ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹವರಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ಸಿಎಂ ವಾಗ್ದಾಳಿ ನಡೆಸಿದರು.

ದಾಂಪತ್ಯ ಕಲಹ ದುರಂತ ಅಂತ್ಯ: ಮದ್ವೆಯಾದ ತಿಂಗಳಲ್ಲೇ ಉದ್ಯಮಿ ಆತ್ಮಹತ್ಯೆ!

ಉಡುಪಿ: ಮದುವೆಯಾಗಿ ಕೇವಲ ಒಂದೇ ತಿಂಗಳಲ್ಲಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.

ಮೂಲತಃ ನೆಲ್ಯಾಡಿ ನಿವಾಸಿಯಾದ ಸುದೀಪ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಳೆದ ಫೆಬ್ರವರಿ 17ರಂದು ಪುತ್ತೂರಿನಲ್ಲಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ಸುದೀಪ್ ಶೆಟ್ಟಿ, ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆಯಾದರೂ, ಹತ್ತಾರು ದಿನಗಳ ಜೀವ-ಮರಣ ಹೋರಾಟದ ಬಳಿಕ ಮಾರ್ಚ್ 29ರಂದು ಅವರು ಕೊನೆಯುಸಿರೆಳೆದಿದ್ದಾರೆ.

ಈ ಪ್ರಕರಣದಲ್ಲಿ ಸುದೀಪ್ ತಂದೆ ದಾಮೋದರ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸುದೀಪ್ ಪತ್ನಿ ಸೌಮ್ಯ ಶೆಟ್ಟಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಆರೋಪಿಸಿದ್ದಾರೆ. ಸುದೀಪ್ ಹಾಗೂ ಸೌಮ್ಯ ನಡುವೆ ನಡೆದ ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ, ಮದುವೆಯ ಬಳಿಕವೇ ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎನ್ನಲಾಗಿದೆ.

ಮಾರ್ಚ್ 17ರಂದು ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಇದ್ದ ಸುದೀಪ್ ಬಳಿ ಸೌಮ್ಯ ಹೋಗಿ ಬೆದರಿಕೆ ಹಾಕಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ. ಬಳಿಕ ಮಾರ್ಚ್ 22ರಂದು ವಿಷ ಸೇವಿಸಿದ ವಿಷಯ ತಿಳಿದುಬಂದಿದ್ದು, ಮೊದಲಿಗೆ ನಿಟ್ಟೆಯ ಗಜಾರಿಯ ಆಸ್ಪತ್ರೆಗೆ ಸೇರಿಸಿ ನಂತರ ಉಡುಪಿ ಹಾಗೂ ಮಂಗಳೂರು ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುದೀಪ್ ಸಾವನ್ನಪ್ಪಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾರ್ಕಳ ನಗರ ಪೊಲೀಸರು ತಿಳಿಸಿದ್ದಾರೆ.

 

ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ: ಹೃದಯಾಘಾತ ತಡೆಯಲು ಪ್ರಮುಖ ಸೂಚನೆಗಳು ಇಲ್ಲಿದೆ!

0

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ ಸಮಸ್ಯೆ ವಯಸ್ಸಾದವರಲ್ಲಷ್ಟೇ ಅಲ್ಲ, ಯುವಕರಲ್ಲಿಯೂ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ.

ಜೀವನಶೈಲಿ ಬದಲಾವಣೆ, ಅಸ್ವಸ್ಥ ಆಹಾರ ಪದ್ಧತಿ ಮತ್ತು ಹೆಚ್ಚುತ್ತಿರುವ ಮಾನಸಿಕ ಒತ್ತಡ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ದೀರ್ಘಕಾಲ ಕುಳಿತು ಕೆಲಸ ಮಾಡುವವರು, ವ್ಯಾಯಾಮದ ಕೊರತೆ ಇರುವವರು ಹಾಗೂ ಕುಟುಂಬದಲ್ಲಿ ಹೃದಯ ರೋಗ ಇತಿಹಾಸವಿರುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಯುವಕರು ಆರೋಗ್ಯದ ಕಡೆ ನಿರ್ಲಕ್ಷ್ಯ ತೋರದೆ ಮುಂಚಿತವಾಗಿಯೇ ಜಾಗರೂಕರಾಗುವುದು ಅಗತ್ಯ.

ಹೃದಯಾಘಾತಕ್ಕೆ ಪ್ರಮುಖ ಕಾರಣಗಳು:

  • ದೀರ್ಘಕಾಲ ಕುಳಿತುಕೊಳ್ಳುವುದು ಮತ್ತು ವ್ಯಾಯಾಮ ಮಾಡದಿರುವುದು
  • ಜಂಕ್ ಫುಡ್, ಹೆಚ್ಚು ಎಣ್ಣೆಯ ಆಹಾರ ಸೇವನೆ
  • ನಿದ್ರೆಯ ಕೊರತೆ, ರಾತ್ರಿ ತಡವಾಗಿ ಮಲಗುವುದು
  • ನಿರಂತರ ಒತ್ತಡ, ಕೋಪ ಮತ್ತು ಮಾನಸಿಕ ಒತ್ತಡ
  • ಧೂಮಪಾನ ಮತ್ತು ಮದ್ಯಪಾನ

ಹೃದಯಾಘಾತದ ಮುನ್ನ ಕಾಣಿಸಿಕೊಳ್ಳುವ ಲಕ್ಷಣಗಳು:

  • ಎದೆಯಲ್ಲಿ ನೋವು ಅಥವಾ ಒತ್ತಡ
  • ಕೈ, ಕತ್ತು ಅಥವಾ ಬೆನ್ನಿನ ಭಾಗದಲ್ಲಿ ನೋವು
  • ಉಸಿರಾಟದ ತೊಂದರೆ
  • ಅಚಾನಕ್ ಹೆಚ್ಚು ಬೆವರು ಬರುವುದು
  • ತಲೆಸುತ್ತು, ದುರ್ಬಲತೆ
  • ವಾಂತಿ

ಈ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ. ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ ಮತ್ತು ಸಮತೋಲನ ಆಹಾರದಿಂದ ಹೃದಯ ಸಂಬಂಧಿತ ಸಮಸ್ಯೆಗಳನ್ನು ತಡೆಯಬಹುದು.

ಬೆಳಗಾವಿ: ಹಿಡಕಲ್​ ಡ್ಯಾಮ್​ನ ಹಿನ್ನೀರಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು!

ಬೆಳಗಾವಿ: ಜಿಲ್ಲೆ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದ ಬಳಿಯ ಹಿಡಕಲ್​ ಡ್ಯಾಮ್​ನ ಹಿನ್ನೀರಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾದ ಘಟನೆ ಜರುಗಿದೆ.

14 ವರ್ಷದ ಕೃಷ್ಣಾ ಖಾನಾಪುರಿ, 13 ವರ್ಷದ ಪ್ರಜ್ವಲ್ ಗೋಕಾರ್ ಮೃತ ಬಾಲಕರು.

ಹಿಡಕಲ್ ಜಲಾಶಯ ಹಿನ್ನೀರಿನಲ್ಲಿ ಬಾಲಕರು ಈಜುಲು ತೆರಳಿದ್ದರು. ಈ ವೇಳೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳನ್ನ ಸ್ಥಳೀಯರು ಮತ್ತು ಪೊಲೀಸರು ಹೊರತೆಗೆದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

error: Content is protected !!