“ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಂಠಿತವಾಗುತ್ತಿದೆ. ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು.”ಕೆ. ನೇಮಿರಾಜ ನಾಯ್ಕ, ಶಾಸಕ
ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆ: ಶಾಸಕ ಕೆ. ನೇಮಿರಾಜ ನಾಯ್ಕ
ಬಕ್ರೀದ್ ವೇಳೆ ಗೋಹತ್ಯೆ ತಡೆಗೆ ಆಗ್ರಹ
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಮಾಂಸ ಮಾರಾಟದ ಅಂಗಡಿಗಳನ್ನು ಸ್ಥಳಾಂತರಿಸಬೇಕು ಹಾಗೂ ಬಕ್ರೀದ್ ವೇಳೆ ಗೋಹತ್ಯೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಹಾಗೂ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಬುಧವಾರ ತಹಸೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಶ್ರೀರಾಮ ಸೇನಾ ತಾಲೂಕು ಅಧ್ಯಕ್ಷ ಈರಣ್ಣ ಪೂಜಾರ ಹಾಗೂ ಹಿಂದೂ ಯುವ ಮುಖಂಡ ಗಂಗಾಧರ ಮೆಣಸಿನಕಾಯಿ, ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನ ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಕೂಗಳತೆಯಲ್ಲೇ ಮೀನು, ಮಟನ್ ಹಾಗೂ ಚಿಕನ್ ಮಾರಾಟ ನಡೆಯುತ್ತಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.
ಕೂಡಲೇ ಮಾಂಸ ಮಾರಾಟದ ಅಂಗಡಿಗಳನ್ನು 15 ದಿನಗಳೊಳಗೆ ಪಟ್ಟಣದ ಹೊರಭಾಗಕ್ಕೆ ಸ್ಥಳಾಂತರಿಸಬೇಕು. ಅಕ್ರಮ ಕಸಾಯಿಖಾನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ತೆರವುಗೊಳಿಸಬೇಕು. ಬಕ್ರೀದ್ ವೇಳೆ ಗೋಹತ್ಯೆ ಹಾಗೂ ಅಕ್ರಮ ಮಾಂಸ ಮಾರಾಟ ನಡೆಯದಂತೆ ಪೊಲೀಸ್ ಇಲಾಖೆ ಹಾಗೂ ಪುರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಶಾಲೆ ಹಾಗೂ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿ ಕೇಸರಿ ಶಾಲು ನಿರ್ಬಂಧಿಸುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲವಾದರೆ ಹಿಂದೂ ಸಂಘಟನೆಗಳಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ದುಂಡೇಶ ಕೋಟಗಿ, ವಿಜಯ ಕುಂಬಾರ, ಶಕ್ತಿ ಕತ್ತಿ, ವಿಶಾಲ ಬಟಗುರ್ಕಿ, ನವೀನ ಹಿರೇಮಠ, ಮಹಾಂತೇಶ ರಗಟಿ, ಅಮಿತ ಗುಡಗೇರಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಚುರುಕು
ಇಂಧನ ದರ ಏರಿಕೆ, ವಿದ್ಯಾರ್ಥಿಗಳ ಸಂಕಷ್ಟಕ್ಕೆ ಮೋದಿ ಸರ್ಕಾರವೇ ಕಾರಣ: ಹುಡೇದ್ ಗುರು ಬಸವರಾಜ್
“ಬೆಲೆ ಏರಿಕೆ ಮತ್ತು ಶಿಕ್ಷಣ ಹಗರಣಗಳಿಂದ ಜನರು ಕಂಗೆಟ್ಟಿದ್ದಾರೆ; ಕೇಂದ್ರ ಸರ್ಕಾರ ಜನರ ಧ್ವನಿಗೆ ಸ್ಪಂದಿಸಬೇಕು.”ಹುಡೇದ್ ಗುರು ಬಸವರಾಜ್
ಪ್ರತಿ ಮನುಷ್ಯನಲ್ಲಿ ಗಾಂಧೀಜಿ–ಅಂಬೇಡ್ಕರ್ ಪ್ರಜ್ಞೆ ಅಗತ್ಯ: ಎ.ಎಸ್. ಮಕಾನದಾರ
ಬಿರುಗಾಳಿ ಅಬ್ಬರಕ್ಕೆ ಮರ ಉರುಳಿ ಬಸ್ ಜಖಂ!
ಗರ್ಭಿಣಿಯರಿಗೆ ಮುಖ್ಯ ಸೂಚನೆ: ಮೂತ್ರ ಸೋಂಕು ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ!
ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ವಿಶೇಷ ಹಂತವಾಗಿದ್ದರೂ, ಈ ಸಮಯದಲ್ಲಿ ದೇಹದಲ್ಲಿ ಹಲವಾರು ಹಾರ್ಮೋನಲ್ ಹಾಗೂ ಶಾರೀರಿಕ ಬದಲಾವಣೆಗಳು ಸಂಭವಿಸುತ್ತವೆ. ಇದರಲ್ಲಿ ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್ ಕೂಡ ಪ್ರಮುಖ ಆರೋಗ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞೆ ಡಾ. ಆಭಾ ಮಜುಂದಾರ್ ಅವರ ಪ್ರಕಾರ, ಗರ್ಭಾವಸ್ಥೆಯಲ್ಲಿ ಪ್ರೊಜೆಸ್ಟೆರೋನ್ ಹಾರ್ಮೋನ್ ಪ್ರಮಾಣ ಹೆಚ್ಚಾಗುವುದರಿಂದ ಯೂರಿನರಿ ಸಿಸ್ಟಂ ಸಡಿಲಗೊಳ್ಳುತ್ತದೆ. ಇದರಿಂದ ಮೂತ್ರವು ಸಂಪೂರ್ಣವಾಗಿ ಹೊರಬರದೇ ಉಳಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಜೊತೆಗೆ ಗರ್ಭಾಶಯದ ಗಾತ್ರ ಹೆಚ್ಚಾದಂತೆ ಮೂತ್ರ ಮಾರ್ಗದ ಮೇಲೆ ಒತ್ತಡ ಉಂಟಾಗಿ ಮೂತ್ರದ ಹರಿವು ನಿಧಾನಗೊಳ್ಳುತ್ತದೆ.
ಅದರ ಜೊತೆಗೆ ಗರ್ಭಿಣಿಯರ ಮೂತ್ರದಲ್ಲಿ ಸಕ್ಕರೆ ಮತ್ತು ಅಮಿನೋ ಆಮ್ಲಗಳ ಪ್ರಮಾಣ ಸ್ವಲ್ಪ ಹೆಚ್ಚಾಗುವುದರಿಂದ ಬ್ಯಾಕ್ಟೀರಿಯಾ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಯೂರಿನ್ ಇನ್ಫೆಕ್ಷನ್ ಅಪಾಯ ಹೆಚ್ಚುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
ಯೂರಿನ್ ಇನ್ಫೆಕ್ಷನ್ ಲಕ್ಷಣಗಳು:
- ಮೂತ್ರ ವಿಸರ್ಜನೆ ವೇಳೆ ಉರಿ ಅಥವಾ ನೋವು
- ಪದೇಪದೇ ಮೂತ್ರ ಬರುವುದು
- ಹೊಟ್ಟೆ ಕೆಳಭಾಗ ಮತ್ತು ಬೆನ್ನು ನೋವು
- ಗಾಢ ಹಳದಿ ಬಣ್ಣದ ಮೂತ್ರ
- ದುರ್ವಾಸನೆ
- ಕೆಲವೊಮ್ಮೆ ಜ್ವರ ಅಥವಾ ನಡುಕ
ಮುನ್ನೆಚ್ಚರಿಕೆ ಕ್ರಮಗಳು:
- ಹೆಚ್ಚು ನೀರು ಕುಡಿಯುವುದು
- ನೀರಿನಾಂಶ ಹೆಚ್ಚಿರುವ ಹಣ್ಣುಗಳ ಸೇವನೆ
- ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವುದು
- ಸಕ್ಕರೆ ಹಾಗೂ ಸಿಹಿ ಪದಾರ್ಥಗಳ ಸೇವನೆ ಕಡಿಮೆ ಮಾಡುವುದು
- ಮೂತ್ರವನ್ನು ತಡೆಹಿಡಿಯಬಾರದು
- ಹತ್ತಿಯ ಬಟ್ಟೆ ಧರಿಸುವುದು
ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ.
ಪಾಲಕರ ಆಚಾರ-ವಿಚಾರವೇ ಮಕ್ಕಳಿಗೆ ಆದರ್ಶ: ಮಂಜುನಾಥ ಅಕ್ಕಸಾಲಿ
ತ್ಯಾಗ, ಸಮರ್ಪಣೆ- ಮಾನವೀಯತೆಯ ಸಂದೇಶವೇ ಬಕ್ರೀದ್
ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಯ ಟಕ್ಕರ್!
“ಗ್ರಾಮದ ಸಮುದಾಯ ಮತ್ತು ಶಿಕ್ಷಕರ ಸಹಕಾರದಿಂದ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಆಕರ್ಷಿಸಲು ಈ ಯೋಜನೆ ರೂಪಿಸಲಾಗಿದೆ. ಹೊಸದಾಗಿ ದಾಖಲಾಗುವ ವಿದ್ಯಾರ್ಥಿಗಳಿಗೆ ₹1000 ಠೇವಣಿ, ಶಾಲಾ ಬ್ಯಾಗ್, ಟೈ-ಬೆಲ್ಟ್, ಟೀ-ಶರ್ಟ್ ಹಾಗೂ ಮಗ್ಗಿ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ.”ಗಿರೀಶ ಕೊಡಬಾಳ, ಮುಖ್ಯೋಪಾಧ್ಯಾಯರು“ಶಾಲೆಯಲ್ಲಿ ಹೊಸದಾಗಿ ದಾಖಲಾಗುವ ವಿದ್ಯಾರ್ಥಿಗಳಿಗೆ ₹1000 ಠೇವಣಿ ಹಾಗೂ ಉಚಿತ ಶೈಕ್ಷಣಿಕ ಸಾಮಗ್ರಿ ನೀಡುತ್ತಿರುವುದು ಶಿಕ್ಷಣ ಮತ್ತು ದಾಖಲಾತಿ ಹೆಚ್ಚಿಸಲು ಮಾದರಿಯಾದ ಕಾರ್ಯಕ್ರಮ. ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರ ಇಚ್ಛಾಶಕ್ತಿ ಮತ್ತು ಸಮುದಾಯದ ಸಹಕಾರವೇ ದೊಡ್ಡ ಬಲ.”ಆರ್.ಎಸ್. ಬುರಡಿ, ಉಪನಿರ್ದೇಶಕರು

