ಹಾಸನ: ಕೇರಳ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ತೆರಳುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಮಳಲಿ ಬೈಪಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಅಬ್ದುಲ್ ಖಾದರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್ನಲ್ಲಿ ಕೆಲಸ ಮಾಡುತ್ತಿದ್ದ ಅವರು ಮತದಾನಕ್ಕಾಗಿ ಕಾರಿನಲ್ಲಿ ಕೇರಳಕ್ಕೆ ತೆರಳುತ್ತಿದ್ದರು.
ಈ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು, ರಸ್ತೆಯಿಂದ ಕೆಳಗೆ ಹಾರಿ ಸುಮಾರು 25 ಅಡಿ ದೂರದಲ್ಲಿ ನಿಂತಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಗಾಯಾಳುವಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

