ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ಶರಣಬಸವ ಪಾಟೀಲ
“ಅಕ್ರಮ ಇ-ಫಾರ್ಮಸಿಗೆ ಕಡಿವಾಣ ಹಾಕಿ!”
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅಧ್ಯಕ್ಷರಾಗಿ ವ್ಹಿ.ಎಂ. ಹಿರೇಮಠ ಅವಿರೋಧ ಆಯ್ಕೆ
ಆನ್ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್ ಹಾಕಿ!
“ಸಾರ್ವಜನಿಕರ ಪ್ರಾಣಕ್ಕೆ ಕುತ್ತು ತರುತ್ತಿರುವ ಈ ಇ-ಕಾಮರ್ಸ್ ಔಷಧಿ ವಿತರಣಾ ವ್ಯವಸ್ಥೆಯನ್ನು ಸರ್ಕಾರ ತಕ್ಷಣ ಶಾಶ್ವತವಾಗಿ ಬಂದ್ ಮಾಡಬೇಕು”ರಾಮನಗೌಡ ದಾನಪ್ಪಗೌಡ್ರ
“ಆನ್ಲೈನ್ ಔಷಧಿ ಮಾರಾಟಕ್ಕೆ ಲಾಕ್ ಹಾಕಿ!”
“ಆನ್ಲೈನ್ ಔಷಧಿ ಮಾರಾಟದಿಂದ ಸ್ಥಳೀಯ ಮೆಡಿಕಲ್ ಅಂಗಡಿಗಳ ವಹಿವಾಟು ಕುಸಿಯುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಾವಿರಾರು ಔಷಧ ವ್ಯಾಪಾರಸ್ಥರು ನಿರುದ್ಯೋಗಿಗಳಾಗುವ ಪರಿಸ್ಥಿತಿ ಎದುರಾಗಲಿದೆ.”ಚಂದ್ರಶೇಖರಗೌಡ ಪಾಟೀಲಅಧ್ಯಕ್ಷರು, ತಾಲೂಕು ಔಷಧ ವ್ಯಾಪಾರಸ್ಥರ ಸಂಘ
“ಪುಲಿಗೆರೆ ಕನ್ನಡದ ಮೊದಲ ಸಾಹಿತ್ಯ ರಾಜಧಾನಿ!”
“ಪುಲಿಗೆರೆ ಮುನ್ನೂರು ಪ್ರಾಂತ್ಯಗಳ ರಾಜಧಾನಿಯಾಗಿತ್ತು. ಇಲ್ಲಿನ ಸೋಮೇಶ್ವರ ದೇವಸ್ಥಾನ ಹಾಗೂ ಶಂಖ ಬಸದಿಗಳಲ್ಲಿರುವ ನೂರಾರು ಶಾಸನಗಳು ಈ ನೆಲದ ಹಿರಿಮೆ-ಗರಿಮೆಗೆ ಸಾಕ್ಷಿಯಾಗಿವೆ”
“ಇನ್ನು ಕಸಕ್ಕೂ ಕಾನೂನಿನ ಕಟ್ಟುಪಾಡು!”
ರಾಹುಲ್ ಗಾಂಧಿ ಹೇಳಿಕೆ ನಾಚಿಕೆಗೇಡು: ‘ದೇಶ ದ್ರೋಹಿ’ ಮಾತಿಗೆ ಜೋಶಿ ತಿರುಗೇಟು!
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್ಎಸ್ಎಸ್ ವಿರುದ್ಧ “ದೇಶದ್ರೋಹಿಗಳು” ಎಂಬ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ, ರಾಹುಲ್ ಗಾಂಧಿಯ ಹೇಳಿಕೆ “ನಾಚಿಕೆಗೇಡಿನದು” ಎಂದು ಟೀಕಿಸಿದ್ದಾರೆ. ರಾಷ್ಟ್ರಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವವರನ್ನು ದೇಶದ್ರೋಹಿಗಳೆಂದು ಕರೆಯುವುದು ದೇಶಭಕ್ತರಿಗೆ ಮಾಡಿದ ಅವಮಾನ ಎಂದು ಅವರು ಹೇಳಿದ್ದಾರೆ.
ತುರ್ತು ಪರಿಸ್ಥಿತಿಯ ಕಾಲದಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಿದ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷವೇ ಈಗ ಪ್ರಜಾಪ್ರಭುತ್ವದ ಪಾಠ ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳನ್ನು ನಿಯಂತ್ರಿಸುವುದು, ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕುವುದು ಹಾಗೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್ನ ಇತಿಹಾಸ ಎಂದು ಆರೋಪಿಸಿದ್ದಾರೆ.
ಚೀನಾದೊಂದಿಗೆ ಸಂಬಂಧ, 1962ರ ಯುದ್ಧದ ಪರಿಣಾಮಗಳು, ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಸಿಗಬೇಕಿದ್ದ ಸ್ಥಾನಗಳನ್ನು ಉಲ್ಲೇಖಿಸಿದ ಜೋಶಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೇಶದ ಜಾಗತಿಕ ಸ್ಥಾನಮಾನ ದುರ್ಬಲಗೊಂಡಿದೆ ಎಂದು ಟೀಕಿಸಿದ್ದಾರೆ.
ಇನ್ನು ರಾಹುಲ್ ಗಾಂಧಿಗೆ ಹತಾಶೆ ಹೆಚ್ಚಾಗಿದೆ ಎಂದು ಹೇಳಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಆರ್ಥಿಕವಾಗಿ ಮತ್ತು ಜಾಗತಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ರಾಷ್ಟ್ರವಾದಿ ಶಕ್ತಿಗಳನ್ನು ಟೀಕಿಸುವ ಮೂಲಕ ಕಾಂಗ್ರೆಸ್ ತನ್ನ ಇತಿಹಾಸವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ಮತ್ತೊಂದೆಡೆ, ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ಬಿಜೆಪಿ-ಆರ್ಎಸ್ಎಸ್ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ, ಇಂಧನ ಬೆಲೆಗಳ ವಿಷಯದಲ್ಲಿ ಜನರಿಗೆ ತಪ್ಪು ಭರವಸೆ ನೀಡಲಾಗಿದೆ ಹಾಗೂ ಆರ್ಥಿಕ ನೀತಿಗಳ ಕುರಿತು ಗಂಭೀರ ಪ್ರಶ್ನೆಗಳು ಇವೆ ಎಂದು ಆರೋಪಿಸಿದ್ದಾರೆ.
ಈ ಹೇಳಿಕೆ–ಪ್ರತಿಹೇಳಿಕೆಗಳ ನಡುವೆ ರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ತೀವ್ರ ವಾಗ್ವಾದದ ವಾತಾವರಣ ನಿರ್ಮಾಣವಾಗಿದೆ.
ಮೇ 22ರಿಂದ ರಾಷ್ಟ್ರಮಟ್ಟದ ‘ಮೂಟ್ ಕೋರ್ಟ್’ ಮಹಾಸ್ಪರ್ಧೆ
ವಿಜಯಸಾಕ್ಷಿ ಸುದ್ದಿ, ಗದಗಳ ಗದಗ ನಗರ ಮತ್ತೊಮ್ಮೆ ರಾಷ್ಟ್ರಮಟ್ಟದ ಕಾನೂನು ಚಟುವಟಿಕೆಗಳಿಗೆ ಸಾಕ್ಷಿಯಾಗಲಿದ್ದು, ಕೆ.ಎಲ್.ಇ. ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ ವತಿಯಿಂದ ಮೇ 22ರಿಂದ 24ರವರೆಗೆ 3ನೇ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ ಸ್ಪರ್ಧೆ–2026 ಆಯೋಜಿಸಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ 27 ಕಾನೂನು ವಿದ್ಯಾರ್ಥಿ ತಂಡಗಳು ಭಾಗವಹಿಸುತ್ತಿದ್ದು, ಮೂರು ದಿನಗಳ ಕಾಲ ಗದಗದಲ್ಲಿ ಕಾನೂನು ವಾದ-ಪ್ರತಿವಾದಗಳ ಸಿಡಿಲು ಮೊಳಗಲಿದೆ.
ಈ ಕುರಿತು ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ಮಾಹಿತಿ ನೀಡಿದರು.
ಈ ವರ್ಷದ ಸ್ಪರ್ಧೆ “ಹಿಂದೂ ಕಾನೂನಿನ ದಾಂಪತ್ಯ ಹಕ್ಕುಗಳ ಮರುಸ್ಥಾಪನೆ” ವಿಷಯವನ್ನು ಆಧರಿಸಿಕೊಂಡಿದ್ದು, ಕಾನೂನು ವಿದ್ಯಾರ್ಥಿಗಳಲ್ಲಿ ವಾದ ಮಂಡನೆ, ಕಾನೂನು ಸಂಶೋಧನೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಅರಿವು ಬೆಳೆಸುವ ಉದ್ದೇಶ ಹೊಂದಿದೆ. ರಾಷ್ಟ್ರಮಟ್ಟದ ಈ ಸ್ಪರ್ಧೆ ಯುವ ಕಾನೂನು ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಮಹತ್ವದ ವೇದಿಕೆಯಾಗಲಿದೆ ಎಂದರು.
ಮೇ 22ರಂದು ಸಂಜೆ 5 ಗಂಟೆಗೆ ಗದಗದ ಜೆ.ಟಿ. ಕಾಲೇಜು ಆವರಣದ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಹಾತ್ಮ ಗಾಂಧೀ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಗಳು (ಪ್ರ) ಹಾಗೂ ಕುಲಸಚಿವರಾದ ಪ್ರೊ. (ಡಾ.) ಸುರೇಶ ವಿ. ನಾಡಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಡಾ. ಸಂಜೀವ ಎಂ. ಹುಲ್ಲೂರ ಹೇಳಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ಡಾ. ಜಗದೀಶ ಎಸ್. ಹಾಲಶೆಟ್ಟಿ ಹಾಗೂ ಜೆ.ಟಿ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಜಿ. ಪಾಟೀಲ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಸ್.ಎ. ಮಾನ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ಪರ್ಧೆಯಲ್ಲಿ ಪ್ರಾಥಮಿಕ ಸುತ್ತು, ಕ್ವಾರ್ಟರ್ ಫೈನಲ್, ಸೆಮಿ ಫೈನಲ್ ಹಾಗೂ ಅಂತಿಮ ಸುತ್ತುಗಳು ನಡೆಯಲಿವೆ.
ಮೇ 24ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿ.ಎ. ಪಾಟೀಲ ಸಮಾರೋಪ ಭಾಷಣ ಮಾಡಲಿದ್ದಾರೆ.
ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಉಮೇಶ ಮಂಜುನಾಥ ಭಟ್ ಅಡಿಗ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಅಧ್ಯಕ್ಷ ಎಂ.ಐ. ಶಿಗ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕೆ.ಎಲ್.ಇ. ಕಾನೂನು ಮಹಾವಿದ್ಯಾಲಯ, ಬೆಂಗಳೂರಿನ ಪ್ರಾಚಾರ್ಯ ಹಾಗೂ ಕಾನೂನು ಅಕಾಡೆಮಿ ನಿರ್ದೇಶಕ ಡಾ. ಜೆ.ಎಂ. ಮಲ್ಲಿಕಾರ್ಜುನಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಬಿ.ಜಿ. ಶೆಲ್ಲಿಕೇರಿ ಮತ್ತು ಎಸ್.ಎಫ್. ಹಾದಿಮನಿ ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್.ಎ. ಮಾನ್ವಿ, ಎಸ್.ಎಫ್. ಹಾದಿಮನಿ, ಬಿ.ಜಿ. ಶೆಲ್ಲಿಕೇರಿ, ಪಿ.ಜಿ. ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

