ಅಮರಾವತಿ: ಉಯ್ಯೂರುದಲ್ಲಿರುವ ವಿಜಯಸಾಯಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶಿಸ್ತು ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ. ಶೂ ಧರಿಸದೆ ಬಂದ ಕಾರಣಕ್ಕೆ 10ನೇ ತರಗತಿಯ ವಿದ್ಯಾರ್ಥಿಗಳ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಶಿಕ್ಷೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಪದ್ಮರಾಣಿ ಮತ್ತು ದುರ್ಗಾ ಪ್ರಸಾದ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ಅವಮಾನಿಸಿದ ಶಾಲಾ ಸಿಬ್ಬಂದಿಯನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.
ಆದರೆ ಶಾಲಾ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಮಕ್ಕಳು ಶಾಲೆಯ ಶಿಸ್ತು ನಿಯಮ ಉಲ್ಲಂಘಿಸಿದ್ದರಿಂದ ಅವರನ್ನು ಭಯಪಡಿಸಲು ಈ ರೀತಿಯ ಶಿಕ್ಷೆ ನೀಡಲಾಗಿದೆ” ಎಂದು ಹೇಳಿದ್ದಾರೆ.
ಇದಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಶೂ ಧರಿಸಿ ಬರಲಿಲ್ಲ ಎಂಬ ಕಾರಣಕ್ಕೆ ಮಕ್ಕಳನ್ನು ಈ ರೀತಿಯಾಗಿ ಅವಮಾನಿಸುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತಿದ್ದು, ಅವರ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

