Home Blog

‘ಶಿಸ್ತು ಹೆಸರಿನಲ್ಲಿ ಅವಮಾನ’: ವಿದ್ಯಾರ್ಥಿಗಳಿಗೆ ಚಪ್ಪಲಿ ಹಾರ ಹಾಕಿದ ಶಾಲೆ ಮೇಲೆ ತನಿಖೆ

ಅಮರಾವತಿ: ಉಯ್ಯೂರುದಲ್ಲಿರುವ ವಿಜಯಸಾಯಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶಿಸ್ತು ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ. ಶೂ ಧರಿಸದೆ ಬಂದ ಕಾರಣಕ್ಕೆ 10ನೇ ತರಗತಿಯ ವಿದ್ಯಾರ್ಥಿಗಳ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಶಿಕ್ಷೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಪದ್ಮರಾಣಿ ಮತ್ತು ದುರ್ಗಾ ಪ್ರಸಾದ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ಅವಮಾನಿಸಿದ ಶಾಲಾ ಸಿಬ್ಬಂದಿಯನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಆದರೆ ಶಾಲಾ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಮಕ್ಕಳು ಶಾಲೆಯ ಶಿಸ್ತು ನಿಯಮ ಉಲ್ಲಂಘಿಸಿದ್ದರಿಂದ ಅವರನ್ನು ಭಯಪಡಿಸಲು ಈ ರೀತಿಯ ಶಿಕ್ಷೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಶೂ ಧರಿಸಿ ಬರಲಿಲ್ಲ ಎಂಬ ಕಾರಣಕ್ಕೆ ಮಕ್ಕಳನ್ನು ಈ ರೀತಿಯಾಗಿ ಅವಮಾನಿಸುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತಿದ್ದು, ಅವರ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಭಾರತಕ್ಕೆ ಯಾರ ಅನುಮತಿಯೂ ಬೇಡ’: ಅಮೆರಿಕ ಹೇಳಿಕೆಗೆ ಕಮಲ್ ಹಾಸನ್ ತಿರುಗೇಟು

ನವದೆಹಲಿ: ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಅಮೆರಿಕದ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ನಟ ಕಮಲ್ ಹಾಸನ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಇತ್ತೀಚೆಗೆ ಭಾರತಕ್ಕೆ ರಷ್ಯಾ ತೈಲ ಖರೀದಿಸಲು 30 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದರು. ಇದರಿಂದ ರಾಜಕೀಯ ಚರ್ಚೆ ತೀವ್ರಗೊಂಡಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕಮಲ್ ಹಾಸನ್, “ಭಾರತವು ಸ್ವತಂತ್ರ ರಾಷ್ಟ್ರ. ಇತರ ದೇಶಗಳ ಅನುಮತಿಯ ಮೇಲೆ ನಾವು ಅವಲಂಬಿತರಾಗಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದರ ನಡುವೆಯೇ ಇರಾನ್ಅಮೆರಿಕಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ತೈಲ ಪೂರೈಕೆಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಯಲ್ಲೂ ಭಾರತ ಕಡಿಮೆ ಬೆಲೆಗೆ ದೊರೆಯುವ ಯಾವುದೇ ಮೂಲದಿಂದ ಕಚ್ಚಾ ತೈಲ ಖರೀದಿಯನ್ನು ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ವಾಟಾಳ್ ನಾಗರಾಜ್

ಮೈಸೂರು: ರಾಜ್ಯ ಸರ್ಕಾರ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸಿದೆ. ತಮ್ಮ 17ನೇ ದಾಖಲೆಯ ಬಜೆಟ್ ವೇಳೆ ಸಿಎಂ ಸಿದ್ದರಾಮಯ್ಯ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಈ ನಿರ್ಧಾರವನ್ನು ಖಂಡಿಸಿದ್ದಾರೆ. ಮಕ್ಕಳಿಗೆ ಮೊಬೈಲ್ ಬ್ಯಾನ್ ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮನೆಯಲ್ಲಿ ಮಕ್ಕಳು ಅವರ ಅಪ್ಪ, ಅಮ್ಮನ ಮೊಬೈಲ್ ಎತ್ತಿಕೊಂಡು ನೋಡುತ್ತಾರೆ. ಅವರನ್ನು ಏನು ಮಾಡಲು ಆಗುತ್ತೆ, ಜೈಲಿಗೆ ಹಾಕುವುದಕ್ಕೆ ಆಗುತ್ತಾ? ಕೊರೊನಾ ಸಂದರ್ಭದಲ್ಲಿ ಆನ್​ಲೈನ್ ಕ್ಲಾಸ್ ಏಕೆ ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಬಜೆಟ್​ನಲ್ಲಿ ಕನ್ನಡ ಶಾಲೆಗಳ ಕಡೆಗಣನೆ ಹಿನ್ನೆಲೆ ಇದನ್ನ ಖಂಡಿಸಿ ಮಾ.12 ರಂದು ಕನ್ನಡ ಶಾಲೆಗಳ ಬಂದ್​ಗೆ ಕರೆ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, ರಾಜ್ಯಾದ್ಯಂತ ಇರುವ ಕನ್ನಡ ಶಾಲೆಗಳನ್ನು ಬಂದ್ ಮಾಡುತ್ತೇವೆ. ಮೈಸೂರಿನ ಜಯ ಚಾಮರಾಜೇಂದ್ರ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತೇವೆ. ಇಂಗ್ಲಿಷ್ ಶಾಲೆಗಳಿಗೆ 3900 ಕೋಟಿ ರೂ ಕೊಟ್ಟಿದ್ದೀರಿ. ಕನ್ನಡ ಶಾಲೆಗಳ ಅಭಿವೃದ್ಧಿಗೆ ನಯಾ ಪೈಸೆ ಘೋಷಣೆ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಕನ್ನಡವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮವೇ ಇಲ್ಲ. ಕನ್ನಡ ಮಾಧ್ಯಮ ಇರುವುದು ಸರ್ಕಾರಿ ಶಾಲೆಗಳಲ್ಲಿ. ಸರ್ಕಾರಿ ಶಾಲೆ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ಕೊಡಬೇಕಿತ್ತು. ಸರ್ಕಾರದ ಧೋರಣೆಯನ್ನು ನಾನು ಖಂಡಿಸುತ್ತೇನೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಮಾ.12 ರಂದು ಎಲ್ಲಾ ಕನ್ನಡ ಶಾಲೆಗಳ ಬಂದ್ ಮಾಡಲು ವಿವಿಧ ಕನ್ನಡ ಪರ ಸಂಘಟನೆಗಳು ಕೈಜೋಡಿಸಬೇಕು ಎಂದು ಹೇಳಿದ್ದಾರೆ.

ಬೆಂಗಳೂರು: ಜಿಬಿಎ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ – 176 ವಾರ್ಡ್‌ ಮಹಿಳಾ ಮೀಸಲು

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಬಹು ನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ವೇದಿಕೆ ಸಜ್ಜಾಗಿದೆ. ನಗರಾಭಿವೃದ್ಧಿ ಇಲಾಖೆ ಐದು ನಗರ ಪಾಲಿಕೆಗಳ ವಾರ್ಡ್‌ಗಳ ಮೀಸಲಾತಿ ಪಟ್ಟಿ ಅಧಿಕೃತವಾಗಿ ಪ್ರಕಟಿಸಿದೆ.

ಒಟ್ಟು 369 ವಾರ್ಡ್‌ಗಳು ಇದೆ, ಇದರಲ್ಲಿ ಮಹಿಳೆಯರಿಗೆ 176 ವಾರ್ಡ್‌ಗಳು ಮೀಸಲಾಗಿದೆ. ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಮತ್ತು ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.

ವಾರ್ಡ್ ಮೀಸಲಾತಿ ವಿವರ:

  • ಸಾಮಾನ್ಯ ವರ್ಗ: 192
  • ಹಿಂದುಳಿದ ವರ್ಗ ‘ಎ’ (BCA): 97
  • ಪರಿಶಿಷ್ಟ ಜಾತಿ (SC): 43
  • ಹಿಂದುಳಿದ ವರ್ಗ ‘ಬಿ’ (BCB): 24
  • ಪರಿಶಿಷ್ಟ ಪಂಗಡ (ST): 7

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ ಮೀಸಲಾತಿ:

  1. ಬೆಂಗಳೂರು ನಗರ ಪಾಲಿಕೆ (72 ವಾರ್ಡ್‌ಗಳು)
    • ಮಹಿಳಾ ಮೀಸಲು: 34
    • ಸಾಮಾನ್ಯ: 40
    • BCA: 19
    • SC: 7
    • BCB: 5
    • ST: 1
  2. ಬೆಂಗಳೂರು ಉತ್ತರ ನಗರ ಪಾಲಿಕೆ (72 ವಾರ್ಡ್‌ಗಳು)
    • ಮಹಿಳಾ: 34
    • ಸಾಮಾನ್ಯ: 37
    • BCA: 19
    • SC: 9
    • BCB: 5
    • ST: 2
  3. ಬೆಂಗಳೂರು ಪಶ್ಚಿಮ ನಗರ ಪಾಲಿಕೆ (112 ವಾರ್ಡ್‌ಗಳು)
    • ಮಹಿಳಾ: 55
    • ಸಾಮಾನ್ಯ: 64
    • BCA: 30
    • SC: 9
    • BCB: 7
    • ST: 2
  4. ಬೆಂಗಳೂರು ಪೂರ್ವ ನಗರ ಪಾಲಿಕೆ (50 ವಾರ್ಡ್‌ಗಳು)
    • ಮಹಿಳಾ: 23
    • ಸಾಮಾನ್ಯ: 25
    • BCA: 14
    • SC: 7
    • BCB: 3
    • ST: 1
  5. ಬೆಂಗಳೂರು ಕೇಂದ್ರ ನಗರ ಪಾಲಿಕೆ (63 ವಾರ್ಡ್‌ಗಳು)
    • ಮಹಿಳಾ: 30
    • ಸಾಮಾನ್ಯ: 32
    • BCA: 15
    • SC: 11
    • BCB: 4
    • ST: 1

ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಜಿಬಿಎ/ಬಿಬಿಎಂಪಿ ಚುನಾವಣೆಗೆ ಈಗ ಅಧಿಕೃತ ಮುಹೂರ್ತ ಫಿಕ್ಸ್ ಆದಂತಾಗಿದೆ. ವಾರ್ಡ್ ಮೀಸಲಾತಿ ಪ್ರಕಟಗೊಂಡಿರುವ ಕಾರಣ, ಸ್ಥಳೀಯ ನಾಯಕರು, ಮಾಜಿ ಕಾರ್ಪೊರೇಟರ್‌ಗಳು ಹಾಗೂ ಹೊಸ ಆಕಾಂಕ್ಷಿಗಳು ತಮ್ಮ ವಾರ್ಡ್‌ಗಳಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಲು ಸಿದ್ಧರಾಗಿದ್ದಾರೆ. ಶೀಘ್ರದಲ್ಲಿ ರಾಜ್ಯ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.

ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ: ನಿತೀಶ್ ಕುಮಾರ್ ಪುತ್ರ ನಿಶಾಂತ್ ಜೆಡಿಯು ಸೇರ್ಪಡೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಭಾನುವಾರ ಅಧಿಕೃತವಾಗಿ ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷವನ್ನು ಸೇರ್ಪಡೆಯಾಗಿ ತಮ್ಮ ರಾಜಕೀಯ ಪ್ರವಾಸವನ್ನು ಆರಂಭಿಸಿದ್ದಾರೆ. 50 ವರ್ಷದ ನಿಶಾಂತ್ ಕುಮಾರ್ ರಾಜಕೀಯಕ್ಕೆ ಪ್ರವೇಶ ಮಾಡಿರುವುದು ಬಿಹಾರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ನಿತೀಶ್ ಕುಮಾರ್ ಅವರು ದಶಕಗಳ ಕಾಲ ಬಿಹಾರ ರಾಜಕಾರಣದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಈಗ ರಾಜ್ಯ ರಾಜಕೀಯದಿಂದ ದೂರ ಸರಿದು ರಾಜ್ಯಸಭೆಗೆ ತೆರಳಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಪುತ್ರನ ರಾಜಕೀಯ ಪ್ರವೇಶ ಗಮನ ಸೆಳೆದಿದೆ.

ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ನಿಶಾಂತ್ ಕುಮಾರ್, “ನಾನು ಸಕ್ರಿಯ ಸದಸ್ಯನಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ. ನನ್ನ ತಂದೆ ರಾಜ್ಯಸಭೆಗೆ ಹೋಗುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ಅವರ ಮಾರ್ಗದರ್ಶನದಲ್ಲಿ ಪಕ್ಷ ಹಾಗೂ ಜನರ ವಿಶ್ವಾಸ ಉಳಿಸುವ ದಿಕ್ಕಿನಲ್ಲಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಿತೀಶ್ ಕುಮಾರ್ ತಮ್ಮ ರಾಜಕೀಯ ಜೀವನದಲ್ಲಿ ವಂಶಪಾರಂಪರ್ಯ ರಾಜಕಾರಣವನ್ನು ಕಟುವಾಗಿ ವಿರೋಧಿಸುತ್ತಾ ಬಂದವರು. ಆದರೆ ಈಗ ಅವರ ಪುತ್ರ ರಾಜಕೀಯ ಪ್ರವೇಶ ಮಾಡಿರುವುದು ವಿಶೇಷ ಚರ್ಚೆಗೆ ಕಾರಣವಾಗಿದೆ. ಇದೇ ರೀತಿಯಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ನಂತರ ರಾಜಕೀಯಕ್ಕೆ ಪ್ರವೇಶಿಸಿದ್ದರು ಎಂಬುದನ್ನು ವಿಶ್ಲೇಷಕರು ಉಲ್ಲೇಖಿಸುತ್ತಿದ್ದಾರೆ.

ನೀವೂ ಕೂಡಾ ಊಟದ ತಕ್ಷಣ ನೀರು ಕುಡಿಯುತ್ತೀರಾ? ಹಾಗಾದ್ರೆ ಇದನ್ನು ತಿಳಿಯಿರಿ!

ಆಹಾರ ಮತ್ತು ನೀರು ದೇಹದ ಆರೋಗ್ಯಕ್ಕೆ ಅತ್ಯಂತ ಮುಖ್ಯವಾದ ಪಾತ್ರ ವಹಿಸುತ್ತವೆ. ಆದರೆ ಅವುಗಳನ್ನು ಯಾವ ಸಮಯದಲ್ಲಿ, ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದರ ಅರಿವು ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ಆಯುರ್ವೇದ ತತ್ವಾನುಸಾರ, ಊಟ ಮಾಡುವ ಮುನ್ನ ಮತ್ತು ಊಟವಾದ ನಂತರ ನೀರು ಕುಡಿಯುವ ಸಮಯವನ್ನು ಸರಿಯಾಗಿ ಪಾಲಿಸಲು ಸಲಹೆ ನೀಡಲಾಗಿದೆ.

ಆಹಾರ ತಜ್ಞರ ಪ್ರಕಾರ, ಊಟದೊಂದಿಗೆ ಹೆಚ್ಚು ನೀರು ಕುಡಿಯುವುದು ತಪ್ಪಿಸಬೇಕು. ಅಗತ್ಯವಿದ್ದರೆ ಸ್ವಲ್ಪ ಪ್ರಮಾಣದ ಬೆಚ್ಚಗಿನ ನೀರನ್ನು ಮಾತ್ರ ಕುಡಿಯಬಹುದು. ಊಟದ ನಂತರ ಸುಮಾರು 30 ನಿಮಿಷಗಳ ನಂತರ ನೀರು ಕುಡಿಯುವುದು ಜೀರ್ಣಕ್ರಿಯೆಗೆ ಉತ್ತಮವಾಗಿದೆ. ಅದೇ ರೀತಿಯಾಗಿ, ಊಟಕ್ಕೆ ಸುಮಾರು 30 ನಿಮಿಷಗಳ ಮೊದಲು ನೀರು ಕುಡಿಯುವುದೂ ಸಹ ಸಹಾಯಕ.

ಊಟದ ತಕ್ಷಣ ನೀರು ಕುಡಿಯುವ ದುಷ್ಪರಿಣಾಮಗಳು:

  • ಜೀರ್ಣರಸಗಳು ತೆಳ್ಳಗಾಗುವ ಸಾಧ್ಯತೆ
  • ಆಹಾರ ಸರಿಯಾಗಿ ಜೀರ್ಣವಾಗದಿರುವುದು
  • ಹೊಟ್ಟೆ ಭಾರ, ಗ್ಯಾಸ್, ಅಜೀರ್ಣ, ಆಸಿಡಿಟಿ ಸಮಸ್ಯೆಗಳು
  • ಕೆಲವು ವೇಳೆ ಊಟದ ನಂತರ ಸುಸ್ತು ಅಥವಾ ದಣಿತ ಅನುಭವ

ಸುದೀರ್ಘ ಆರೋಗ್ಯದ ಸಲಹೆಗಳು:

  • ಆಹಾರವನ್ನು ನಿಧಾನವಾಗಿ, ಚೆನ್ನಾಗಿ ಜಗಿದು ತಿನ್ನುವುದು
  • ಸಮತೋಲನಯುತ ಆಹಾರ ಸೇವನೆ
  • ನಿರ್ದಿಷ್ಟ ಸಮಯದಲ್ಲಿ ನೀರು ಕುಡಿಯುವುದು
  • ದಿನಚರಿ, ವ್ಯಾಯಾಮ, ಸರಿಯಾದ ನಿದ್ರೆ ಪಾಲನೆ

ಜೀರ್ಣಕ್ರಿಯೆಯನ್ನು ಸುಧಾರಿಸಲು, ಆಹಾರ ಮತ್ತು ನೀರಿನ ಸರಿಯಾದ ಅಭ್ಯಾಸಗಳು ಆರೋಗ್ಯ ಕಾಪಾಡಲು ಅವಶ್ಯಕ. ಪ್ರತಿಯೊಬ್ಬರ ಜೀರ್ಣಶಕ್ತಿ ವಿಭಿನ್ನವಾಗಿರುವುದರಿಂದ ದೇಹದ ಸೂಚನೆಗಳನ್ನು ಗಮನಿಸಿ, ಜೀವನಶೈಲಿಯನ್ನು ಸಮತೋಲನದಲ್ಲಿ ಇಡುವುದು ಮಹತ್ವವಾಗಿದೆ.

 

ತಡೆಗೋಡೆ ಇಲ್ಲದ ರಸ್ತೆ ಮತ್ತೊಂದು ಬಲಿ: ಮುದುವಾಡಿ ಕೆರೆಯಲ್ಲಿ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಸಾವು

0

ಕೋಲಾರ: ಮುದುವಾಡಿ ಕೆರೆಯ ಕಟ್ಟೆಯ ಮೇಲಿರುವ ರಾಜ್ಯ ಹೆದ್ದಾರಿಯಲ್ಲಿ ತಡೆಗೋಡೆ ಇಲ್ಲದಿರುವುದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಟಿ.ಎಂ. ವೆಂಕಟೇಶ್ ಪ್ರಾಣ ಕಳೆದುಕೊಂಡಿದ್ದಾರೆ.

ಕರ್ನಾಟಕ ಪ್ರಾಂತ ರೈತ ಸಂಘದ ಕೋಲಾರ ಜಿಲ್ಲಾಧ್ಯಕ್ಷರಾಗಿದ್ದ ವೆಂಕಟೇಶ್, ನಾಳೆಯಿಂದ ಕೋಲಾರ ನಗರದಲ್ಲಿ ನಡೆಯಲಿರುವ ರೈತ ಸಂಘ ಹಾಗೂ ಸಿಪಿಎಂ ಪಕ್ಷದ ರಾಜ್ಯ ಸಮಾವೇಶದ ಸಿದ್ಧತೆಗಳಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೆಲಸ ಮುಗಿಸಿ ರಾತ್ರಿ ತಮ್ಮ ಊರಾದ ತೊರಾಂಡಹಳ್ಳಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮುದುವಾಡಿ ಕೆರೆ ಕೋಲಾರ ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾಗಿದ್ದು, ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಕೆರೆಯ ಎರಡೂ ಬದಿಗಳಲ್ಲೂ ತಡೆಗೋಡೆ ಇಲ್ಲದಿರುವುದು ಹಾಗೂ ರಸ್ತೆ ಕಿರಿದಾಗಿರುವುದು ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದೀಗ ಕಾರು ಸ್ವತಃ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆಯೋ ಅಥವಾ ಮತ್ತೊಂದು ವಾಹನ ಡಿಕ್ಕಿ ಹೊಡೆದಿದೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ಕೆರೆಯ ಕಟ್ಟೆಯ ಮೇಲಿನ ರಸ್ತೆಯನ್ನು ಅಗಲಗೊಳಿಸಿ ತಡೆಗೋಡೆ ನಿರ್ಮಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೋಲಾರ: ರಸ್ತೆ ಅಪಘಾತದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಾವು!

ಕೋಲಾರ: ರಾಜ್ಯ ಹೆದ್ದಾರಿ ಜಿಲ್ಲೆಯ ಕೇಂದ್ರದಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಳೆದ ರಾತ್ರಿ ಸುಮಾರು 1.30 ಗಂಟೆಗೆ ತೊರಾಂಡಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ, ಕಾರು ಕೆರೆಗೆ ಬಿದ್ದ ಪರಿಣಾಮ ಕಾರ್​ ನಲ್ಲಿದ್ದ ತೊರಾಂಡಹಳ್ಳಿ ಗ್ರಾಮದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ.ವೆಂಕಟೇಶ್​​ ಮೃತಪಟ್ಟಿದ್ದಾರೆ.

ಕಾರು ಕೆರೆಗೆ ಬಿದ್ದಿರುವ ವಿಷಯ ಬೆಳಗ್ಗೆ 9 ಗಂಟೆಯವರೆಗೂ ಯಾರಿಗೂ ತಿಳಿಯಲಿಲ್ಲ. ಸ್ಥಳೀಯರು ಅನುಮಾನಗೊಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರು ಮತ್ತು ಮೃತದೇಹ ಸತ್ತ ಸ್ಥಿತಿಯಲ್ಲಿ ಇರುವುದು ತಿಳಿದು ಬಂದಿದೆ.

 

ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವು!

ಹಾಸನ:- ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಜರುಗಿದೆ.

42 ವರ್ಷದ ದೇವಾನಂದ್ ಮೃತಪಟ್ಟ ದುರ್ದೈವಿ. ಇವರು ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇಂದು ಮುಂಜಾನೆ ಮಲಗಿದ್ದ ವೇಳೆಯೇ ಹೃದಯಾಘಾತವಾಗಿದೆ. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ದೇವಾನಂದ್ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ದೇವಾನಂದ್ ಹಲವಾರು ಬಾರಿ ಪೌರಾಣಿಕ ನಾಟಕಗಳಲ್ಲಿಯೂ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ತಾಯಿ, ಮಡದಿ, ಇಬ್ಬರು ಮಕ್ಕಳನ್ನು ದೇವಾನಂದ್ ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಟಿ20 ವಿಶ್ವಕಪ್ ಫೈನಲ್: ಮೂರನೇ ಬಾರಿ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸುತ್ತಾ ಭಾರತ?

0

ಟಿ20 ವಿಶ್ವಕಪ್ ಪೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ.

ಭಾರತ ಮೂರನೇ ಬಾರಿಗೆ ಚಾಂಪಿಯನ್ ಆಗಿ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ. ಸಾವಿರಾರು ಭಾರತೀಯರು ದೇಶಾದ್ಯಂತ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದು, ಟೀಂ ಇಂಡಿಯಾದ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಟೂರ್ನಿಯ ಆರಂಭಿಕ ದಿನಗಳಲ್ಲಿ ಭಾರತ ತಂಡ 2007 ರಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ, ಚುಟುಕು ಕ್ರಿಕೆಟ್ ವಿಶ್ವಕಪ್‌ನಲ್ಲಿ ಇತಿಹಾಸ ರಚಿಸಿತ್ತು. ನಂತರದ 17 ವರ್ಷಗಳಲ್ಲಿ ಭಾರತದ ಸಾಧನೆ ಸತತ ಪ್ರಯತ್ನಗಳಿಗೆ ಬಳಿಕವೂ ಟ್ರೋಫಿ ಗೆಲುವು ದೊರೆಯಲಿಲ್ಲ. 2024 ರಲ್ಲಿ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ ಆದ ನಂತರ, ಈಗ ಮತ್ತೆ ಇತಿಹಾಸ ನಿರ್ಮಿಸಲು ಅವಕಾಶ ಸಿಕ್ಕಿದ್ದು, ಮೆನ್ ಇನ್ ಬ್ಲೂ ಗೆಲ್ಲಲು ಸಿದ್ಧವಾಗಿದೆ.

ಈ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಎದುರಿಸುತ್ತಿರುವ ತಂಡ ನ್ಯೂಜಿಲೆಂಡ್. ಟೂರ್ನಿಯ ಹಿಂದಿನ ಪಂದ್ಯಗಳಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದಿಲ್ಲ. ಉಭಯ ತಂಡಗಳು ಈ ಟೂರ್ನಿಯಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು, ಎಲ್ಲಾ ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆದ್ದಿದೆ.

ಈ ಫೈನಲ್ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟೂರ್ನಿಯಲ್ಲಿ ಭಾರತ ತಂಡ ಈ ಬಾರಿ ಮೂರನೇ ಚಾಂಪಿಯನ್ ಆಗಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ನಿರೀಕ್ಷೆ ಇಟ್ಟಿದೆ.

error: Content is protected !!