ವಿಜಯಸಾಕ್ಷಿ ಸುದ್ದಿ, ಗದಗ: ನಗರದ ವಿವೇಕಾನಂದ ನಗರದ ಕರಿಯಮ್ಮಕಲ್ಲ ಬಡಾವಣೆಯಲ್ಲಿರುವ ಶ್ರೀ ಶಿವ ಚಿದಂಬರೇಶ್ವರ ಪಿರಮಿಡ್ ಧ್ಯಾನ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಆಗಸ್ಟ್ 8 ಸಂಜೆ 5 ಗಂಟೆಗೆ ಕರಿಯಮ್ಮಕಲ್ಲ ದೇವಸ್ಥಾನ ಸಮೀಪದ ಶ್ರೀ ಮುಕ್ಕಣ್ಣೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ.
ಬ್ರಹ್ಮರ್ಷಿ ಪಿತಾಮಹ ಡಾ. ಸುಬಾಷ್ ಪತ್ರಿಜಿ ಅವರ ದಿವ್ಯ ಪ್ರೇರಣೆಯೊಂದಿಗೆ ಹಾಗೂ ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ ಮೂವ್ಮೆಂಟ್ ಆಶ್ರಯದಲ್ಲಿ ನಿರ್ಮಾಣಗೊಂಡಿರುವ ಧ್ಯಾನ ಕೇಂದ್ರದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಸಾನ್ನಿಧ್ಯವನ್ನು ಸೀತಾಗಿರಿ ಹಾಗೂ ಅಣ್ಣಿಗೇರಿಯ ಗಿರೀಶ ಆಶ್ರಮದ ಡಾ. ಎ.ಸಿ. ವಾಲಿ ಮಹಾರಾಜರು ವಹಿಸಲಿದ್ದು, ಮುಕ್ಕಣ್ಣೇಶ್ವರ ಮಠದ ಸದ್ಗುರು ಶ್ರೀ ಶಂಕರಾನಂದ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪಿರಮಿಡ್ ಸೇವೆಯ ರಾಜ್ಯಾಧ್ಯಕ್ಷ ಹಾಗೂ ಬಳ್ಳಾರಿ ಪಿಎಂಸಿ ವ್ಯವಸ್ಥಾಪಕರಾದ ಹಂಪಣ್ಣ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ ಹಿರಿಯ ಪಿರಮಿಡ್ ಮಾಸ್ಟರ್ ವಿಶಾಲಾಕ್ಷಿ ಆಕಳವಾಡಿ, ಶಂಕರಹಟ್ಟಿಯ ಹಿರಿಯ ಪಿರಮಿಡ್ ಮಾಸ್ಟರ್ ವಿಶಾಲಾಕ್ಷಿ ಅಥಣಿ, ಶ್ರೀ ಮಲ್ಲಿಕಾರ್ಜುನ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರದ ನಿರ್ಮಾತೃ ರಂಗಣ್ಣ ಕೋಳಿ ಹಾಗೂ ಬಾಗಲಕೋಟೆಯ ಹಿರಿಯ ಪಿರಮಿಡ್ ಮಾಸ್ಟರ್ ರಾಜಶೇಖರ ಅಡಿಕೇನವರ ಭಾಗವಹಿಸಲಿದ್ದಾರೆ.
ಗದಗ-ಬೆಟಗೇರಿ ಅವಳಿ ನಗರದ ಪಿರಮಿಡ್ ಮಾಸ್ಟರ್ಗಳು, ಧ್ಯಾನಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪಿರಮಿಡ್ ಧ್ಯಾನ ಕೇಂದ್ರದ ನಿರ್ಮಾತೃ ಪಿ.ಡಿ. ಬಂಕಾಪೂರ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

