Home Blog

RCB Vs CSK ಐಪಿಎಲ್ ಟಿಕೆಟ್ ವಂಚನೆ! 1.46 ಲಕ್ಷ ಕಳೆದುಕೊಂಡ ಟೆಕ್ಕಿ

0

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ RCB vs CSK ಐಪಿಎಲ್ ಪಂದ್ಯ ಪಡೆಯಲು ಹೋಗಿ ಟೆಕ್ಕಿಯೊಬ್ಬರು 1.46 ಲಕ್ಷ ರೂ. ವಂಚನೆಗೆ ಒಳಗಾಗಿರುವ ಘಟನೆ ಮಹದೇವಪುರದಲ್ಲಿ ಜರುಗಿದೆ.

ಐಪಿಎಲ್ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ಅನ್ನು ಟೆಕ್ಕಿ ನೋಡಿದ್ದಾರೆ. ಆ ಪೋಸ್ಟ್ ನೋಡಿ ಆಮಿಷಕ್ಕೆ ಒಳಗಾದ ಅವರು, ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್‌ಗಳು, ಊಟದ ಕೂಪನ್‌ಗಳು ಮತ್ತು ವಿಐಪಿ ಸೌಲಭ್ಯಗಳನ್ನು ಹೊಂದಿರುವ ಟಿಕೆಟ್‌ಗಳನ್ನು ನೀಡುವುದಾಗಿ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ಟೆಕ್ಕಿ, ತಾನು ಮತ್ತು ತನ್ನ ತಾಯಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ಪಾವತಿಸಿದ್ದಾರೆ.

ಹಣ ಪಾವತಿಯ ನಂತರ, ವಂಚಕನು ಟೆಕ್ಕಿಗೆ ಸ್ಟೇಡಿಯಂನ ಗೇಟ್ ಸಂಖ್ಯೆ 10ರ ಬಳಿ ಬರಲು ಸೂಚಿಸಿದ್ದಾನೆ. ಅಲ್ಲಿಗೆ ತಲುಪಿದಾಗ, ಟೆಕ್ಕಿ ಕನಿಷ್ಠ ದರದ ಟಿಕೆಟ್‌ಗಳನ್ನು ಕೇಳಿದ್ದಾರೆ. ಆದರೆ, ವಂಚಕನು ಕೂಪನ್‌ಗಳು ಮತ್ತು ಭದ್ರತಾ ಠೇವಣಿ ಹೆಸರಿನಲ್ಲಿ ಹೆಚ್ಚಿನ ಹಣವನ್ನು ವಸೂಲಿ ಮಾಡಿದ್ದಾನೆ.

ವಂಚನೆಗೆ ಒಳಗಾಗಿರುವುದನ್ನು ಅರಿತ ಟೆಕ್ಕಿ, ತಕ್ಷಣವೇ ಸೈಬರ್ ಕಂಟ್ರೋಲ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನಿ ಪ್ಲಾಂಟ್ ಅನ್ನು ಹೊರಗೆ ಅಥವಾ ಉಡುಗೊರೆಯಾಗಿ ನೀಡಬೇಡಿ! ದಾರಿದ್ರ್ಯ ಬರಬಹುದು

0

ಮನೆಯಲ್ಲಿ ಮನಿ ಪ್ಲಾಂಟ್ ಇಡುವುದು ಶುಭಕರವಾಗಿದೆ. ಇದು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಮನೆಯಲ್ಲಿ ಸಕಾರಾತ್ಮಕ ವಾತಾವರಣವನ್ನು ಉಂಟುಮಾಡಿ, ಅದೃಷ್ಟ ಮತ್ತು ಆರ್ಥಿಕ ಸಮೃದ್ಧಿಗೆ ಸಹಾಯ ಮಾಡುತ್ತದೆ.

ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಮನಿ ಪ್ಲಾಂಟ್ ಇಡುವ ಸ್ಥಳ ಮತ್ತು ದಿಕ್ಕು ಬಹುಮುಖ್ಯ.

ವಾಸ್ತು ಸಲಹೆಗಳು:

  1. ದಿಕ್ಕು: ಮನಿ ಪ್ಲಾಂಟ್ ಅನ್ನು ಸದಾ ಆಗ್ನೇಯ ದಿಕ್ಕಿನಲ್ಲಿ ಇಡುವುದು ಉತ್ತಮ. ಈ ದಿಕ್ಕು ವಿಘ್ನೇಶ್ವರನ ನೆಚ್ಚಿನ ದಿಕ್ಕು ಎಂದು ಪರಿಗಣಿಸಲಾಗಿದೆ. ಈಶಾನ್ಯ ಭಾಗದಲ್ಲಿ ಇಡಬಾರದು; ಇಟ್ಟರೆ ಆರ್ಥಿಕ ನಷ್ಟ ಮತ್ತು ಮನೆ ನಕಾರಾತ್ಮಕವಾಗಿ ಪರಿಣಾಮ ಬೀರುತ್ತದೆ.
  2. ಸ್ಥಾನ: ಗಿಡವು ನೆಲವನ್ನು ಮುಟ್ಟದಂತೆ, ಬಳ್ಳಿಗಳನ್ನು ಹೆಣೆದು ಮೇಲಕ್ಕೆ ಬೆಳೆದಂತೆ ನಿರ್ವಹಿಸಬೇಕು. ಒಣಗಿದ ಅಥವಾ ಹಳದಿ ಎಲೆಗಳನ್ನು ಕತ್ತರಿಸಿ ತೆಗೆದುಹಾಕಬೇಕು. ಮನಿ ಪ್ಲಾಂಟ್‌ಗಳನ್ನು ಯಾವಾಗಲೂ ಮನೆಯ ಒಳಗೆ ಇಡುವುದು ಶುಭ.
  3. ಪೋಷಣೆ: ಮನಿ ಪ್ಲಾಂಟ್‌ಗಳಿಗೆ ಹೆಚ್ಚು ಸೂರ್ಯ ಬೆಳಕು ಬೇಕಾಗಿಲ್ಲ. ನೀರಿನ ಪಾತ್ರೆ ಅಥವಾ ಬಾಟಲಿಯಲ್ಲಿ ನೆಟ್ಟು, ಪ್ರತಿದಿನ ನೀರು ಹಾಕಿ ಗಿಡವನ್ನು ತಾಜಾ ಮಾಡಬೇಕು.
  4. ಬಿಸಿಲಿನಲ್ಲಿ ಅಥವಾ ಮನೆ ಹೊರಗೆ: ಮನಿ ಪ್ಲಾಂಟ್ ಅನ್ನು ಬಿಸಿಲಿನಲ್ಲಿ ಅಥವಾ ಮನೆಯ ಹೊರಗೆ ಇಡುವುದು ವಾಸ್ತು ದೋಷ ಎಂದು ಪರಿಗಣಿಸಲಾಗಿದೆ.
  5. ಉಡುಗೊರೆ ನೀಡುವುದು: ಮನಿ ಪ್ಲಾಂಟ್‌ಗಳನ್ನು ಮತ್ತೊಬ್ಬರಿಗೆ ಉಡುಗೊರೆಯಾಗಿ ನೀಡಬಾರದು, ಏಕೆಂದರೆ ಶುಕ್ರ ಗ್ರಹ ಕೋಪಗೊಂಡರೆ ಆರ್ಥಿಕ ಹಾನಿ ಸಂಭವಿಸಬಹುದು.
  • ಮನಿ ಪ್ಲಾಂಟ್ ಮನೆಗೆ ಶಕ್ತಿ, ಅದೃಷ್ಟ ಮತ್ತು ಸಂಪತ್ತು ತರುತ್ತದೆ.
  • ಗಿಡವು ಆರೋಗ್ಯವಾಗಿರಲು ನೀರು ಹಾಕಿ, ಒಣಗಿದ ಎಲೆಗಳನ್ನು ತೆಗೆದುಹಾಕಿ.
  • ದಿಕ್ಕು, ಸ್ಥಳ, ಬೆಳಕು, ಮತ್ತು ಬಳ್ಳಿಗಳ ಮೇಲ್ದರ್ಜೆ ಸರಿಯಾಗಿ ನೋಡಿಕೊಳ್ಳಬೇಕು.
  • ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಧನ ಮತ್ತು ಶುಭ ಶಕ್ತಿಯು ಹೆಚ್ಚಾಗುತ್ತದೆ.

ಮನಿ ಪ್ಲಾಂಟ್‌ಗಳು ಲಕ್ಷ್ಮಿ ದೇವಿಯ ಅಭಿವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ಸೂಕ್ತ ರೀತಿಯಲ್ಲಿ ಬೆಳೆದರೆ, ಮನೆಯಲ್ಲಿನ ಹಣಕಾಸು ಸ್ಥಿತಿ ಸುಧಾರಿಸಲು ಸಹಾಯವಾಗುತ್ತದೆ.

ಯುವಕರ ಅಪಾಯಕಾರಿ ಬೈಕ್ ಸ್ಟಂಟ್ ಹೆಚ್ಚಳ: 3 ವರ್ಷಗಳಲ್ಲಿ 1,805 ಪ್ರಕರಣಗಳು, ₹1.77 ಕೋಟಿ ದಂಡ

ಬೆಂಗಳೂರು:- ಇತ್ತೀಚೆಗೆ ಯುವಕರು ಬೈಕ್ ಸ್ಟಂಟ್ ಹಾಗೂ ಅಪಾಯಕಾರಿ ರೀತಿಯ ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸುತ್ತಿವೆ.

ಲಭ್ಯವಿರುವ ಅಂಕಿ-ಅಂಶಗಳು ಆಘಾತ ಮೂಡಿಸಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ವಾಹನ ಅಪಘಾತಗಳಲ್ಲಿ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅಪಘಾತಗಳಿಗೆ ಸಂಬಂಧಿಸಿದಂತೆ ಅಪ್ರಾಪ್ತರು ಮತ್ತು ಅವರ ಪೋಷಕರ ವಿರುದ್ಧ 1,805 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇವರಿಂದ ಬರೋಬ್ಬರಿ ₹1.77 ಕೋಟಿ ದಂಡ ವಸೂಲಾಗಿದೆ.

ಬೆಂಗಳೂರು ನಗರದಲ್ಲಿ ಅಕ್ರಮ ಚಾಲನೆ ಪ್ರಕರಣಗಳು ಹೆಚ್ಚಾಗಿದ್ದು, ಮೈಸೂರು, ತುಮಕೂರು, ಕೊಡಗು ಮೊದಲಾದ ಜಿಲ್ಲೆಗಳು ನಂತರ ಸ್ಥಾನಗಳಲ್ಲಿ ಬರುತ್ತವೆ.

ಅಂಕಿ-ಅಂಶಗಳು:

ಬೆಂಗಳೂರು:

* 2023: 240 ಪ್ರಕರಣ – ₹18.31 ಲಕ್ಷ ದಂಡ
* 2024: 378 ಪ್ರಕರಣ – ₹16.99 ಲಕ್ಷ ದಂಡ
* 2025: 632 ಪ್ರಕರಣ – ₹15.65 ಲಕ್ಷ ದಂಡ

ಮೈಸೂರು:

* 2023: ಅಪ್ರಾಪ್ತರ ವಿರುದ್ಧ 21, ಪೋಷಕರ ವಿರುದ್ಧ 15 – ₹13.55 ಲಕ್ಷ ದಂಡ
* 2024: ಅಪ್ರಾಪ್ತರ ವಿರುದ್ಧ 27, ಪೋಷಕರ ವಿರುದ್ಧ 33 – ₹1.21 ಲಕ್ಷ ದಂಡ
* 2025: ಅಪ್ರಾಪ್ತರ ವಿರುದ್ಧ 19, ಪೋಷಕರ ವಿರುದ್ಧ 34 – ₹1.37 ಲಕ್ಷ ದಂಡ

ತುಮಕೂರು:

* 2023: 21 ಪ್ರಕರಣ (ಪೋಷಕರ ವಿರುದ್ಧ 8) – ₹78,000 ದಂಡ
* 2024: 35 ಪ್ರಕರಣ (ಪೋಷಕರ ವಿರುದ್ಧ 13) – ₹95,500 ದಂಡ
* 2025: 21 ಪ್ರಕರಣ (ಪೋಷಕರ ವಿರುದ್ಧ 6) – ₹1.50 ಲಕ್ಷ ದಂಡ

ಅಪ್ರಾಪ್ತ ಚಾಲನೆ ತಡೆಗಾಗಿ ಭಾರತೀಯ ನ್ಯಾಯಸಂಹಿತೆ ಮತ್ತು ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣಗಳು ದಾಖಲಿಸಲಾಗುತ್ತಿದ್ದು, ಸಂಬಂಧಿತ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಪ್ರಮಾಣಿತ ವಾಹನ ನೋಂದಣಿಗಳನ್ನು ರದ್ದುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಶಿಫಾರಸು ಮಾಡಲಾಗಿದೆ.

ಪ್ರತಿವರ್ಷ ಜನವರಿಯಲ್ಲಿ ರಸ್ತೆ ಸುರಕ್ಷತಾ ತಿಂಗಳಂದು ವಿಶೇಷ ಅಭಿಯಾನಗಳು ಹಾಗೂ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತವೆ. ಬೆಂಗಳೂರು ನಗರದಲ್ಲಿ ವೀಲಿ ಸ್ಟಂಟ್‌ಗಳನ್ನು ತಡೆಯಲು 37 ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ, ಕಠಿಣ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಸುರಕ್ಷತೆಯನ್ನು ಗಮನಿಸಿ ವಾಹನ ಚಾಲನೆ ಮಾಡುವಂತೆ ಪೊಲೀಸ್ ಇಲಾಖೆ ಎಚ್ಚರಿಸಿದೆ.

ಇಂದು RCB Vs CSK ಹೈವೋಲ್ಟೇಜ್ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೆಚ್ಚಿನ ಭದ್ರತೆ, 2300 ಪೊಲೀಸರಿಂದ ಬಂದೋಬಸ್ತ್!

0

ಐಪಿಎಲ್‌ನಲ್ಲಿ ಭಾರಿ ಅಭಿಮಾನಿ ಬಳಗ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್  ತಂಡಗಳು ಇಂದು ಮುಖಾಮುಖಿಯಾಗಲಿರುವ ಹಿನ್ನೆಲೆ ನಗರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕಟ್ಟು ನಿಟ್ಟಾಗಿ ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಸುಮಾರು 2,300 ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಹಿಂದಿನ ಪಂದ್ಯದಲ್ಲಿ ಕಂಡುಬಂದ ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಲು ಈ ಬಾರಿ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರೇಕ್ಷಕರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ಬ್ಯಾಗೇಜ್ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಕಳೆದ ಬಾರಿ ಪಂದ್ಯ ಸಂದರ್ಭದಲ್ಲೇ 70ಕ್ಕೂ ಹೆಚ್ಚು ಮೊಬೈಲ್‌ಗಳು ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ, ಈ ಬಾರಿ ಕಳ್ಳತನ ತಡೆಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ. ಮೈದಾನದಲ್ಲಿ ಹೆಚ್ಚಿನ ಸೈನ್‌ಬೋರ್ಡ್‌ಗಳನ್ನು ಅಳವಡಿಸಲಾಗಿದ್ದು, ಮೈಕ್ ಮೂಲಕ ನಿರಂತರವಾಗಿ ಜಾಗೃತಿ ಸಂದೇಶಗಳನ್ನು ನೀಡಲಾಗುತ್ತಿದೆ.

ಭಾರೀ ಜನಸಂದಣಿಯನ್ನು ನಿಯಂತ್ರಿಸಲು ವಿಶೇಷ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಹಾಗೂ ಮೆಟ್ರೋ ಸಂಚಾರ ವ್ಯವಸ್ಥೆಗಳು ಹಿಂದಿನಂತೆಯೇ ಮುಂದುವರಿಯಲಿವೆ. ಟಿಕೆಟ್ ಇಲ್ಲದವರಿಗೆ ಸ್ಟೇಡಿಯಂ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ನಕಲಿ ಟಿಕೆಟ್ ಮಾರಾಟ ಸೇರಿದಂತೆ ಅಕ್ರಮ ಚಟುವಟಿಕೆಗಳ ಮೇಲೆ ಸಿಸಿಬಿ ಕಣ್ಣಿಟ್ಟಿದ್ದು, ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ.

ಗೋಲ್ಡ್ ಪ್ರಿಯರೇ.. ಇಂದಿನ ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ದರಪಟ್ಟಿ

0

ದೇಶದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಕಂಡುಬಂದಿದ್ದ ಏರಿಳಿತಗಳು ವಾರಾಂತ್ಯದಲ್ಲಿ ಶಾಂತಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ ಗ್ರಾಮ್‌ಗೆ ₹260 ಏರಿಕೆಯಾಗಿದೆ.

ವಿದೇಶಿ ಮಾರುಕಟ್ಟೆಗಳಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡುಬಂದಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಣಿಸಿಕೊಂಡಿದೆ. ಇತ್ತ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,320 ರೂ.
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ.
  •  

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,093 ರೂ.
    • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,835 ರೂ.
    • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ.

ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ: ಎಫ್‌ಐಆರ್‌ ದಾಖಲು

0

ಹುಬ್ಬಳ್ಳಿ: ಜೈಲಿನಲ್ಲಿ ಖೈದಿಗಳಿಗೆ ರಾಜಾಥಿತ್ಯ ನೀಡಲಾಗುತ್ತಿದೆಯೇ. ಕಂಬಿಗಳ ಹಿಂದೆ ಇದ್ದರು ಮೊಬೈಲ್‌ ಬಳಸಲು ಅನುಮತಿ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆ ಮತ್ತೊಮ್ಮೆ ಹುಟ್ಟಿಕೊಂಡಿದೆ. ಇದೀಗ ರಾಜ್ಯದ ಜೈಲು ವ್ಯವಸ್ಥೆಯನ್ನು ಪ್ರಶ್ನಿಸುವ ಮತ್ತೊಂದು ಅಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಉಪ ಕಾರಾಗೃಹದ ಬ್ಯಾರಕ್ ಸಂಖ್ಯೆ 8ರಲ್ಲಿ ತಪಾಸಣೆ ನಡೆಸಿದಾಗ ಸ್ಮಾರ್ಟ್‌ಫೋನ್‌ಗಳು, ಚಾರ್ಜರ್‌ಗಳು ಮತ್ತು ಕನೆಕ್ಟರ್‌ಗಳು ಪತ್ತೆಯಾಗಿವೆ. ಆದರೆ, “ಇದು ಯಾರದ್ದು?” ಎಂಬ ಪ್ರಶ್ನೆಗೆ ಯಾರೂ ಉತ್ತರಿಸದೇ ಇರುವುದೇ ಮತ್ತಷ್ಟು ಸಂಶಯ ಹುಟ್ಟಿಸಿದೆ.

ಈ ಹಿನ್ನೆಲೆಯಲ್ಲಿ ಬ್ಯಾರಕ್‌ನಲ್ಲಿದ್ದ 13 ಕೈದಿಗಳ ವಿರುದ್ಧ FIR ದಾಖಲಾಗಿದ್ದು, ಪ್ರಕರಣ ಇದೀಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೂ ಮೊದಲು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ್ದ ಘಟನೆ ಇನ್ನೂ ಮಾಸಿಲ್ಲ. ಜಾಮರ್ ಇದ್ದರೂ ನೆಟ್‌ವರ್ಕ್ ಸಿಗುತ್ತಿರುವುದು, ಸಿಬ್ಬಂದಿಯ ಶಾಮೀಲು ಇರುವ ಶಂಕೆ ಮೂಡಿಸಿದೆ.

ಈ ನಡುವೆ ಹುಬ್ಬಳ್ಳಿಯಲ್ಲೂ ಮೊಬೈಲ್ ಪತ್ತೆಯಾಗಿರುವುದು, “ಜೈಲುಗಳಲ್ಲಿ ರಾಜಾತಿಥ್ಯ ಮುಂದುವರಿದೇ?” ಎಂಬ ಪ್ರಶ್ನೆಯನ್ನು ಮತ್ತೆ ಎಬ್ಬಿಸಿದೆ. ಇದೀಗ ಈ ಪ್ರಕರಣ ಜೈಲು ವ್ಯವಸ್ಥೆಯ ದುರ್ಬಲತೆಗಳನ್ನು ಬಹಿರಂಗಪಡಿಸುತ್ತಿದೆ.

 

ಹುಬ್ಬಳ್ಳಿಯಲ್ಲಿ ಮತ್ತೊಂದು ಶಾಕಿಂಗ್ ಪ್ರಕರಣ: ವಿಡಿಯೋ ಬ್ಲ್ಯಾಕ್ಮೇಲ್ ಮಾಡಿ ವರ್ಷಗಳ ಕಾಲ ಯುವತಿ ಮೇಲೆ ಅತ್ಯಾಚಾರ ಆರೋಪ

0

ಹುಬ್ಬಳ್ಳಿ: ನಗರದಲ್ಲಿ ಒಂದರ ಹಿಂದೆ ಮತ್ತೊಂದು ಶಾಕ್ ನೀಡುವ ಘಟನೆಗಳು ಬೆಳಕಿಗೆ ಬರುತ್ತಿವೆ. ಜಿಮ್ ಟ್ರೈನರ್ ಪ್ರಕರಣದ ಬೆನ್ನಲ್ಲೇ, ಇದೀಗ ಯುವತಿಯನ್ನು ಪ್ರೀತಿಯ ನಾಟಕದಲ್ಲಿ ಸೆರೆಹಿಡಿದು, ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿ ವರ್ಷಗಳ ಕಾಲ ದೌರ್ಜನ್ಯ ಎಸಗಿದ ಆರೋಪ ಸ್ಫೋಟವಾಗಿದೆ.

ಮುಫೀಸ್ ಮಿಯಾನ್ನವರ್ ಎಂಬಾತ, ಕಾಲೇಜು ದಿನಗಳಲ್ಲೇ ಯುವತಿಗೆ ಪರಿಚಯವಾಗಿ, ಸ್ನೇಹವನ್ನು ಪ್ರೀತಿಯಾಗಿ ತೋರಿಸಿ ಆಕೆಯನ್ನು ನಂಬಿಸಿದ್ದಾನೆ. ನಂತರ ಗದಗ ರಸ್ತೆಯ ಬಳಿ ಕರೆದುಕೊಂಡು ಹೋಗಿ, ಯುವತಿಯ ವಿರೋಧದ ನಡುವೆಯೇ ಅತ್ಯಾಚಾರ ಎಸಗಿ, ಅದನ್ನು ವಿಡಿಯೋ ಮಾಡಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವಿಡಿಯೋವನ್ನು ಬಳಸಿಕೊಂಡು, “ಯಾರಿಗಾದರೂ ಹೇಳಿದರೆ ಜೀವ ಸಮೇತ ಬಿಡುವುದಿಲ್ಲ” ಎಂದು ಬೆದರಿಸಿ, ಹಲವು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಮುಂದುವರಿಸಿದ್ದಾನೆ ಎನ್ನಲಾಗಿದೆ.

ಇದರಷ್ಟೇ ಅಲ್ಲ, 2025ರಲ್ಲಿ ಬ್ಲ್ಯಾಕ್‌ಮೇಲ್ ಮಾಡಿ ಮದುವೆಗೆ ಒತ್ತಾಯಿಸಿದ ಘಟನೆ ಕೂಡ ನಡೆದಿದೆ. ಕುಟುಂಬದವರು ತಡೆದರೂ, ಆರೋಪಿ ಮನೆಗೂ ಬರುತ್ತಿದ್ದನು. ಇತ್ತೀಚೆಗೆ ಮನೆ ಖಾಲಿ ಇರುವ ಸಮಯದಲ್ಲಿ ಮತ್ತೆ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಇತ್ತೀಚೆಗೆ ಬೆಳಕಿಗೆ ಬಂದ ಮತ್ತೊಂದು ಪ್ರಕರಣದಿಂದ ಧೈರ್ಯಗೊಂಡ ಯುವತಿ, ಈಗ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಕೇಶ್ವಾಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

IPL 2026: SRHಗೆ ಬಿಗ್ ಶಾಕ್; ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಿದ ಪ್ಯಾಟ್ ಕಮ್ಮಿನ್ಸ್

0

ಐಪಿಎಲ್ 2026ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮಿಶ್ರ ಪ್ರದರ್ಶನ ನೀಡಿದ್ದು, ಒಂದು ಸೋಲು ಮತ್ತು ಒಂದು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಿದೆ.

ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತಿದ್ದ ತಂಡ, ನಂತರದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ಸಾಧಿಸಿತು. ಆದಾಗ್ಯೂ, ತಂಡದ ಬೌಲಿಂಗ್ ವಿಭಾಗ ಇನ್ನೂ ನಿರೀಕ್ಷಿತ ಮಟ್ಟ ತಲುಪಿಲ್ಲ.

ಈ ದುರ್ಬಲತೆಗೆ ಪ್ರಮುಖ ಕಾರಣವಾಗಿ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ಅನುಪಸ್ಥಿತಿ ಕಾಣಿಸಿಕೊಂಡಿದೆ. ಗಾಯದ ಸಮಸ್ಯೆಯಿಂದಾಗಿ ಅವರು ಮೊದಲ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ. ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆ ಇದ್ದರೂ, ಅವರು ತಕ್ಷಣವೇ ಆಸ್ಟ್ರೇಲಿಯಾಗೆ ಮರಳಿದ್ದಾರೆ.

ವರದಿಗಳ ಪ್ರಕಾರ, ಬೆನ್ನಿನ ಸಮಸ್ಯೆಗೆ ಸಂಬಂಧಿಸಿದ ಪರೀಕ್ಷೆಗಾಗಿ ಕಮ್ಮಿನ್ಸ್ ತಾಯ್ನಾಡಿಗೆ ತೆರಳಿದ್ದು, ಅಂತಿಮ ಸ್ಕ್ಯಾನ್ ಬಳಿಕವೇ ಅವರ ಮರಳುವಿಕೆ ನಿರ್ಧಾರವಾಗಲಿದೆ. ಫಲಿತಾಂಶಗಳು ಅನುಕೂಲಕರವಾಗಿದ್ದರೆ ಏಪ್ರಿಲ್ ಮೂರನೇ ವಾರದೊಳಗೆ ಅವರು ಮತ್ತೆ ತಂಡ ಸೇರುವ ಸಾಧ್ಯತೆ ಇದೆ.

ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ, ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕಮ್ಮಿನ್ಸ್ ಕಳೆದ ಒಂದು ವರ್ಷದಿಂದ ಬೆನ್ನುನೋವಿನಿಂದ ಬಳಲುತ್ತಿದ್ದು, 2025ರ ಜುಲೈ ಬಳಿಕ ಬಹುತೇಕ ಪಂದ್ಯಗಳಿಂದ ದೂರವಾಗಿದ್ದಾರೆ. ಈ ಹಿನ್ನೆಲೆ ಅವರ ಫಿಟ್ನೆಸ್ ಬಗ್ಗೆ ತಂಡದಲ್ಲಿ ಆತಂಕ ಮೂಡಿದೆ.

ಮುಂದಿನ ಪಂದ್ಯಗಳಲ್ಲಿ ಕಮ್ಮಿನ್ಸ್ ಲಭ್ಯತೆ ತಂಡದ ಪ್ರದರ್ಶನದ ಮೇಲೆ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದೆ.

ಗರ್ಭಿಣಿ ಮಹಿಳೆಯರ ಗಮನಕ್ಕೆ: ಡೆಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೇ ಪಾಲಿಸಿ!

0

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ಅವಧಿಯಾಗಿದ್ದು, ಈ ಸಮಯದಲ್ಲಿ ಸೂಕ್ತ ಆರೈಕೆ ಅತ್ಯಗತ್ಯವಾಗಿದೆ.

ತಜ್ಞರ ಪ್ರಕಾರ, ಈ ಹಂತದಲ್ಲಿ ತಾಯಿಯ ಆರೋಗ್ಯ ನೇರವಾಗಿ ಮಗುವಿನ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ. ಹಾರ್ಮೋನಲ್ ಬದಲಾವಣೆಗಳ ಕಾರಣ ದಣಿವು, ದುರ್ಬಲತೆ ಹಾಗೂ ಭಾವನಾತ್ಮಕ ಏರಿಳಿತಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಗರ್ಭಿಣಿಯರು ಹೆಚ್ಚಿನ ಜಾಗ್ರತೆ ವಹಿಸಬೇಕಾಗಿದೆ.

ಡಿಲಿವರಿ ಮೊದಲು ಪೌಷ್ಟಿಕ ಆಹಾರ ಸೇವನೆಗೆ ಹೆಚ್ಚಿನ ಮಹತ್ವ ನೀಡಬೇಕು. ಪ್ರೋಟೀನ್, ಐರನ್ ಮತ್ತು ಕ್ಯಾಲ್ಸಿಯಂ ಸಮೃದ್ಧ ಆಹಾರ ಸೇವಿಸುವುದರ ಜೊತೆಗೆ ಸಾಕಷ್ಟು ನೀರು ಕುಡಿಯುವುದರಿಂದ ದೇಹ ಹೈಡ್ರೇಟ್ ಆಗಿರುತ್ತದೆ. ನಿಯಮಿತ ವೈದ್ಯಕೀಯ ತಪಾಸಣೆ ಹಾಗೂ ವೈದ್ಯರು ಸೂಚಿಸಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ಸೇವಿಸುವುದು ಅಗತ್ಯ. ಜೊತೆಗೆ ಲಘು ವ್ಯಾಯಾಮಗಳನ್ನು ವೈದ್ಯರ ಸಲಹೆಯಂತೆ ಮಾಡುವುದು ದೇಹವನ್ನು ಸಜ್ಜುಗೊಳಿಸುತ್ತದೆ.

ಇನ್ನೊಂದೆಡೆ, ಗರ್ಭಿಣಿಯರು ಕೆಲವು ವಿಷಯಗಳಿಂದ ದೂರವಿರುವುದು ಕೂಡ ಮುಖ್ಯ. ಹೆಚ್ಚು ಮಸಾಲೆ, ಕರಿದ ಮತ್ತು ಜಂಕ್ ಫುಡ್‌ಗಳನ್ನು ತಿನ್ನುವುದನ್ನು ತಪ್ಪಿಸಬೇಕು. ಕೆಫೀನ್ ಹಾಗೂ ತಂಪು ಪಾನೀಯಗಳ ಅಧಿಕ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಭಾರವಾದ ವಸ್ತುಗಳನ್ನು ಎತ್ತುವುದು, ಹೆಚ್ಚು ಶ್ರಮದ ಕೆಲಸಗಳು ಹಾಗೂ ವೈದ್ಯರ ಸಲಹೆಯಿಲ್ಲದೆ ಔಷಧಿ ಸೇವಿಸುವುದು ಅಪಾಯಕಾರಿಯಾಗಿದೆ. ಧೂಮಪಾನ ಮತ್ತು ಮದ್ಯಪಾನವನ್ನು ಸಂಪೂರ್ಣವಾಗಿ ದೂರವಿಡಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಮಾನಸಿಕ ಸಿದ್ಧತೆಯೂ ಡಿಲಿವರಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಕುಟುಂಬದ ಬೆಂಬಲ ಮತ್ತು ಪಾಸಿಟಿವ್ ವಾತಾವರಣ ಗರ್ಭಿಣಿಗೆ ಆತ್ಮವಿಶ್ವಾಸ ನೀಡುತ್ತದೆ. ಮುಂಚಿತವಾಗಿ ಆಸ್ಪತ್ರೆ ಮತ್ತು ವೈದ್ಯರನ್ನು ಆಯ್ಕೆ ಮಾಡಿಕೊಳ್ಳುವುದು, ಅಗತ್ಯ ದಾಖಲೆಗಳು ಹಾಗೂ ವಸ್ತುಗಳನ್ನು ಸಿದ್ಧಪಡಿಸಿಕೊಳ್ಳುವುದು ಉತ್ತಮ. ಜೊತೆಗೆ ಡಿಲಿವರಿ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತೆರಳಲು ಸಹಾಯವಾಗುತ್ತದೆ.

ಒಟ್ಟಿನಲ್ಲಿ, ಸರಿಯಾದ ಮಾಹಿತಿ, ಸಮತೋಲನ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವ ಮೂಲಕ ಡಿಲಿವರಿ ಪ್ರಕ್ರಿಯೆಯನ್ನು ಸುರಕ್ಷಿತ ಹಾಗೂ ಸುಗಮವಾಗಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯಕ್ಕಿಂತ ದೇಶದ ಜನರ ಸುರಕ್ಷತೆ ಮುಖ್ಯ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ!

0

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಿರುವಲ್ಲಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪಶ್ಚಿಮ ಏಷ್ಯಾದ ರಾಷ್ಟ್ರಗಳ ಬಗ್ಗೆ ಕಾಂಗ್ರೆಸ್ ನೀಡುತ್ತಿರುವ ಹೇಳಿಕೆಗಳು ಭಾರತಕ್ಕೆ ಹಾನಿಕಾರಕವಾಗಿವೆ ಎಂದು ಟೀಕಿಸಿದ ಅವರು, ಇಂತಹ ಹೇಳಿಕೆಗಳಿಂದ ಗಲ್ಫ್ ದೇಶಗಳಲ್ಲಿ ಭಾರತೀಯರ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜಕೀಯಕ್ಕಿಂತ ದೇಶದ ಜನರ ಸುರಕ್ಷತೆಯೇ ಮುಖ್ಯ ಎಂದು ಒತ್ತಿ ಹೇಳಿದ ಮೋದಿ, ಕೇರಳದ ಜನರ ರಕ್ಷಣೆಗೆ ತಾವು ಬದ್ಧರಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿನ ಎಲ್‌ಡಿಎಫ್ ಸರ್ಕಾರದ ವಿರುದ್ಧವೂ ಕಿಡಿಕಾರಿದ ಅವರು, ದಶಕಗಳ ದುರಾಡಳಿತಕ್ಕೆ ಈ ಚುನಾವಣೆಯಲ್ಲಿ ಅಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿ ಕೇರಳದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದ ಪ್ರಧಾನಿ, ಎಲ್‌ಡಿಎಫ್ ಮತ್ತು ಯುಡಿಎಫ್ ನಡುವೆ ಸಿಲುಕಿಕೊಂಡಿರುವ ರಾಜ್ಯದ ಜನತೆ ಈ ಬಾರಿ ಬದಲಾವಣೆಗೆ ಮತ ಹಾಕಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಅಭಿವೃದ್ಧಿ ವಿಷಯದಲ್ಲೂ ಸರ್ಕಾರಗಳನ್ನು ಟೀಕಿಸಿದ ಮೋದಿ, ರಸ್ತೆ, ಸೇತುವೆ ಹಾಗೂ ವೈದ್ಯಕೀಯ ಸೌಲಭ್ಯಗಳ ಕೊರತೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಈ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

error: Content is protected !!