Home Blog

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್: ಮನನೊಂದು ಯುವಕ ಆತ್ಮಹತ್ಯೆ!

0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಮೃತರನ್ನು ಹರ್ಷವರ್ಧನ್ (22) ಎಂದು ಗುರುತಿಸಲಾಗಿದೆ. ಇವರು ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದರು. ಹೂಡಿಕೆ ಮಾಡಿದ ಹಣದಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದರಿಂದ ಮನೋವ್ಯಥೆಗೆ ಒಳಗಾಗಿದ್ದರು.

ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಹರ್ಷವರ್ಧನ್ ಅವರ ತಂದೆ ಚಂದ್ರಶೇಖರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಲ್ಲಿಕಾರ್ಜುನ ಖರ್ಗೆಯವರು ದೇಶದ ಕ್ಷಮೆ ಕೇಳಬೇಕು: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಉಗ್ರವಾದಿ ಎಂದು ಹೇಳಿದ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖರ್ಗೆಯವರು ಮತ್ತು ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ತಿಳಿಸಿದರು.

ವಿಶ್ವದ 25ಕ್ಕೂ ಹೆಚ್ಚು ರಾಷ್ಟ್ರಗಳು ಮೋದಿಜೀ ಅವರಿಗೆ ತಮ್ಮ ದೇಶದ ಅತ್ಯುನ್ನತ ಗೌರವ ನೀಡಿವೆ ಎಂದು ಗಮನ ಸೆಳೆದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಕಾಲದಲ್ಲಿ ಸಂಬಳ ಕೊಡುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಯಾವ ಕಡೆ ಸಾಗುತ್ತಿದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶದ ನಂತರ ರಾಜಕೀಯ ಕಿಡಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ–ಜೆಡಿಎಸ್ ವಾಗ್ದಾಳಿ

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಶೇ. 98.18 ಫಲಿತಾಂಶದೊಂದಿಗೆ ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಆದರೆ ಶೇ. 85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಈ ಹಿನ್ನೆಲೆ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ತೀವ್ರ ಟೀಕೆ ಮಾಡಿದ್ದಾರೆ.

ಜೆಡಿಎಸ್, ಕಲಬುರಗಿಯ ಶೈಕ್ಷಣಿಕ ಹಿನ್ನಡೆಯಿಗೆ ಆಡಳಿತದ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದ್ದು, ಮೂಲಸೌಕರ್ಯ, ಶಿಕ್ಷಕರ ನೇಮಕ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದೆ. ಇದೇ ವೇಳೆ ಬಿಜೆಪಿ ಕೂಡ ಸಾಮಾಜಿಕ ಜಾಲತಾಣದ ಮೂಲಕ ವ್ಯಂಗ್ಯ ಪೋಸ್ಟ್ ಹಂಚಿಕೊಂಡು ಟೀಕೆ ಮಾಡಿದೆ.

ಇನ್ನು ಜೆಡಿಎಸ್ ನಾಯಕರು, “ಕಲಬುರಗಿಯನ್ನು ಶೈಕ್ಷಣಿಕವಾಗಿ ಹಿಂದುಳಿಯುವಂತೆ ಮಾಡಲಾಗಿದೆ” ಎಂದು ಆರೋಪಿಸಿದ್ದು, ಬಿಜೆಪಿ ಕೂಡ ಪ್ರಿಯಾಂಕ್ ಖರ್ಗೆ ಅವರ ಫೋಟೋ ಹಂಚಿಕೊಂಡು ಟೀಕಾತ್ಮಕ ಪ್ರತಿಕ್ರಿಯೆ ನೀಡಿದೆ.

ಈ ಫಲಿತಾಂಶದ ಹಿನ್ನೆಲೆಯಲ್ಲಿ ಶಿಕ್ಷಣ ಸಾಧನೆಗಿಂತ ರಾಜಕೀಯ ವಾಗ್ದಾಳಿ ಹೆಚ್ಚಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

SSLC ಫೇಲ್​​ ಆದವರಿಗೆ ಮೂರನೇ ಬಾರಿ ಪರೀಕ್ಷೆ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಬೆಂಗಳೂರು ನಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಈ ಬಾರಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ತೃತೀಯ ಸ್ಥಾನ ಪಡೆದಿವೆ.

ಫಲಿತಾಂಶದಲ್ಲಿ ದಾಖಲೆಯ ಮಟ್ಟದ ಪ್ರಗತಿ ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಎರಡನೇ ಪರೀಕ್ಷೆ ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಈ ಪರೀಕ್ಷೆಯ ಮೂಲಕ ಅನುತ್ತೀರ್ಣ ವಿದ್ಯಾರ್ಥಿಗಳು ಮತ್ತೊಮ್ಮೆ ಪಾಸ್ ಆಗುವ ಅವಕಾಶ ಪಡೆಯಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರು ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

SSLC Result: ರಾಜ್ಯಕ್ಕೆ 7 ಮಂದಿ ಟಾಪರ್ಸ್! 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರೇ ನೋಡಿ..!

ಬೆಂಗಳೂರು: 2025–26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಕರ್ನಾಟಕ ಶೇ. 94.1 ಪಾಸ್ ಪ್ರಮಾಣದೊಂದಿಗೆ ಹೊಸ ದಾಖಲೆ ನಿರ್ಮಿಸಿದೆ. ಪರೀಕ್ಷೆ ಬರೆದಿದ್ದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಂದಿ ಉತ್ತೀರ್ಣರಾಗಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 98.40 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಇನ್ನು ಕಲಬುರಗಿ ಜಿಲ್ಲೆ ಶೇ. 85.06 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಈ ಬಾರಿಯ ವಿಶೇಷವೆಂದರೆ, ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ಅಸಾಧಾರಣ ಸಾಧನೆ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಣವೆಬಿಳಚಿ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿ ಭರತ್ 625ಕ್ಕೆ 625 ಅಂಕ ಪಡೆದಿದ್ದಾರೆ. ಅವರು ಬಿಲ್ಡಿಂಗ್ ಕಾಂಟ್ರಾಕ್ಟರ್ ಗಿರೀಶ್ ರಾವ್ ಹಾಗೂ ಶಿಲ್ಪಾ ದಂಪತಿಯ ಪುತ್ರ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಜನ್ಯಾ ಕೂಡ ಪೂರ್ಣ ಅಂಕ ಪಡೆದು ಗಮನ ಸೆಳೆದಿದ್ದಾರೆ. ಅವರ ಸಾಧನೆಗೆ ಶಾಲಾ ಆಡಳಿತ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶಂಕರ್ ನಾರಾಯಣದ ಮದರ್ ತೆರೆಸಾ ಮೆಮೊರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲಿ ಮೊದಲ ರ್ಯಾಂಕ್ ಗಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಸರ್ಕಾರಿ ಶಾಲೆಯ ಪ್ರಾರ್ಥನಾ ಬಿರಾದಾರ್ ಕೂಡ 625ಕ್ಕೆ 625 ಅಂಕ ಪಡೆದು ಗ್ರಾಮೀಣ ವಿದ್ಯಾರ್ಥಿಗಳಿಗೂ ಸಾಧ್ಯತೆ ಇದೆ ಎಂಬುದನ್ನು ತೋರಿಸಿದ್ದಾರೆ.

ಇನ್ನೂ ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್ ಹಾಗೂ ರಾಯಚೂರು ಜಿಲ್ಲೆದ ಸುಖದೇವ್ ಕೂಡ 625ಕ್ಕೆ 625 ಅಂಕ ಪಡೆಯುವ ಮೂಲಕ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್​​ ಪಡೆದು ಕುಟುಂಬ ಮತ್ತು ಶಾಲೆ ಸೇರಿದಂತೆ ಊರಿಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಕುಟುಂಬ, ಶಾಲೆ ಮತ್ತು ಊರಿನವರು ಸಂತಸ ವ್ಯಕ್ತಪಡಿಸಿದ್ದಾರೆ.

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್..? ಇಲ್ಲಿದೆ ಡಿಟೈಲ್ಸ್

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶದ ವಿವರಗಳನ್ನು ಹಂಚಿಕೊಂಡಿದ್ದಾರೆ.

ಈ ವರ್ಷ ಪರೀಕ್ಷೆಗೆ ಹಾಜರಾದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಂದಿ ಉತ್ತೀರ್ಣರಾಗಿದ್ದು, ಒಟ್ಟು ಪಾಸ್ ಪ್ರಮಾಣ ಶೇ. 94.1ಕ್ಕೆ ಏರಿಕೆಯಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 98.40 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ಶೇ. 98.18 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಶೇ. 85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.

ಜಿಲ್ಲಾವಾರು ಫಲಿತಾಂಶ

  1. ದಕ್ಷಿಣ ಕನ್ನಡ ಜಿಲ್ಲೆ- 98.40%
  2. ಉಡುಪಿ – 98.18%
  3. ಉತ್ತರ ಕನ್ನಡ- 98.09%
  4. ಹಾಸನ- 97.51%
  5. ಮಂಡ್ಯ- 97.45%
  6. ಶಿರಸಿ- 97.21%
  7. ಹಾವೇರಿ- 96.87%
  8. ಕೊಡಗು- 96.70%
  9. ಶಿವಮೊಗ್ಗ- 96.56%
  10. ವಿಜಯನಗರ- 96.39%
  11. ಬೆಂಗಳೂರು ಗ್ರಾಮಾಂತರ – 95.84%
  12. ಧಾರವಾಡ – 95.59%
  13. ಕೋಲಾರ- 95.50%
  14. ಬಾಗಲಕೋಟೆ- 95.42%
  15. ಬೆಂಗಳೂರು ಉತ್ತರ- 95.34%
  16. ಗದಗ- 95.24%
  17. ಚಿಕ್ಕಮಗಳೂರು- 94.99%
  18. ಬೆಳಗಾವಿ – 94.75%
  19. ದಾವಣಗೆರೆ- 94.64%
  20. ಮೈಸೂರು- 94.50%
  21. ರಾಯಚೂರು- 94.41%
  22. ವಿಜಯಪುರ- 94.17%
  23. ಚಿಕ್ಕೋಡಿ- 94.09%
  24. ಬಳ್ಳಾರಿ- 93.36%
  25. ಕೊಪ್ಪಳ- 93.10%
  26. ರಾಮನಗರ- 92.83%
  27. ಚಿತ್ರದುರ್ಗ- 92.25%
  28. ಬೀದರ್- 92.18%
  29. ತುಮಕೂರು- 92.04%
  30. ಚಾಮರಾಜನಗರ- 91.89%
  31. ಯಾದಗಿರಿ- 91.89%
  32. ಬೆಂಗಳೂರು ದಕ್ಷಿಣ- 91.65%
  33. ಚಿಕ್ಕಬಳ್ಳಾಪುರ- 90.88%
  34. ಮಧುಗಿರಿ- 90.26%
  35. ಕಲಬುರಗಿ-85.06%

ಇನ್ನೂ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಪರಿಪೂರ್ಣ ಸಾಧನೆ ಮಾಡಿದ್ದು, 625ರಲ್ಲಿ 625 ಅಂಕಗಳನ್ನು ಪಡೆದಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ ಸಂಪೂರ್ಣ ಅಂಕಗಳನ್ನು ಗಳಿಸಿದ್ದಾರೆ.

ಐಪಿಎಲ್ ಬೆಟ್ಟಿಂಗ್ ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆ!

0

ಮಂಡ್ಯ: ಐಪಿಎಲ್ ಬೆಟ್ಟಿಂಗ್ ಚಟದಿಂದ ಉಂಟಾದ ಭಾರೀ ಸಾಲದ ಒತ್ತಡಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ತರೀಕೆರೆ ಗ್ರಾಮದ ನಿರೂಪ್ (28) ಮೃತ ಯುವಕನಾಗಿದ್ದಾನೆ. ಇವರು ಕೊಪ್ಪದ ಬೆಳ್ಳೇಕರೆ ವೃತ್ತದ ಬಳಿ ದಿನಸಿ ಅಂಗಡಿ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಐಪಿಎಲ್ ಬೆಟ್ಟಿಂಗ್‌ಗೆ ಒಳಗಾದ ನಿರೂಪ್ ಸುಮಾರು ₹50 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದನು ಎನ್ನಲಾಗಿದೆ. ಸಾಲದ ಒತ್ತಡ ಮತ್ತು ಭಯದಿಂದ ಮನನೊಂದು, ರಾತ್ರಿ ವೇಳೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕೆ.ಜೆ.ವಿ.ಎಸ್ ಜಿಲ್ಲಾ ಕಾರ್ಯದರ್ಶಿಯಾಗಿ ಎ.ಕೆ. ಮುಲ್ಲಾನವರ ಆಯ್ಕೆ

0

ಮುಂಡರಗಿ: ಅನೇಕ ವರ್ಷಗಳಿಂದ ಮಕ್ಕಳ ಶೈಕ್ಷಣಿಕ ಸುಧಾರಣೆ, ಮಕ್ಕಳಲ್ಲಿ ವಿಜ್ಞಾನ ಮನೋಭಾವನೆ ಬೆಳೆಸುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳ ಮೂಲಕ ಸಮಾಜಸೇವೆ ಮಾಡುತ್ತಿರುವ ಎ.ಕೆ. ಮುಲ್ಲಾನವರ ಅವರನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಗದಗ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸಮಿತಿಯ ಕಾರ್ಯದರ್ಶಿ ಈ. ಬಸವರಾಜು ತಿಳಿಸಿದ್ದಾರೆ.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯದಾದ್ಯಂತ ವಿವಿಧ ಜಿಲ್ಲೆ ಹಾಗೂ ತಾಲೂಕು ಘಟಕಗಳ ಮೂಲಕ ಶಿಕ್ಷಕರು ಮತ್ತು ಮಕ್ಕಳಿಗಾಗಿ ಶಿಬಿರಗಳನ್ನು ಆಯೋಜಿಸಿ, ವಿಜ್ಞಾನ ಚಿಂತನೆ ಬೆಳೆಸುವುದರ ಜೊತೆಗೆ ಸಮಾಜದಲ್ಲಿ ಅಡಗಿರುವ ಮೂಢನಂಬಿಕೆಗಳನ್ನು ದೂರ ಮಾಡುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ರಾಜ್ಯ ಸಮಿತಿಯಲ್ಲಿ ವಿಜ್ಞಾನಿಗಳು, ವೈದ್ಯರು, ಉಪನ್ಯಾಸಕರು, ಚಿಂತಕರು ಹಾಗೂ ಸಾಹಿತಿಗಳು ತಮ್ಮದೇ ಆದ ಕೊಡುಗೆ ನೀಡುತ್ತಾ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರತಿ ವಾರ ಆನ್‌ಲೈನ್ ಸಭೆಗಳ ಮೂಲಕ ವಿವಿಧ ವಿಷಯಗಳ ಕುರಿತು ಅನುಭವಿಗಳಿಂದ ಮಾಹಿತಿ ಹಂಚಿಕೊಳ್ಳಲಾಗುತ್ತಿದ್ದು, ಈ ಕಾರ್ಯ ಕ್ರಮಬದ್ಧವಾಗಿ ಮುಂದುವರಿದಿದೆ ಎಂದು ಈ. ಬಸವರಾಜು ತಿಳಿಸಿದರು.

ಗದಗ ಜಿಲ್ಲೆಗೆ ಒಬ್ಬ ಉತ್ತಮ ಚಿಂತಕ ಹಾಗೂ ಸಂಘಟಕರಾದ ಎ.ಕೆ. ಮುಲ್ಲಾನವರರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದು ಸಂತಸದ ವಿಚಾರ. ಅವರ ಸೇವೆ ಜಿಲ್ಲೆಯ ಮಕ್ಕಳಿಗೆ ಹಾಗೂ ಸಮಾಜಕ್ಕೆ ಲಾಭಕಾರಿಯಾಗಲಿ, ಸಮಿತಿಯ ಮೂಲಕ ಜನರಿಗೆ ಹಾಗೂ ಮಕ್ಕಳಿಗೆ ಉತ್ತಮ ಕಾರ್ಯಕ್ರಮಗಳು ದೊರೆಯಲಿ ಎಂದು ಅವರು ಅಭಿಪ್ರಾಯಪಟ್ಟರು.

SSLC ಫಲಿತಾಂಶ ಪ್ರಕಟ: 7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್! ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶ ಪ್ರಕಟವಾದ ನಂತರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಂಡರು.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ದಾಖಲೆಯ ಫಲಿತಾಂಶ ದಾಖಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಸಾಧನೆ ಮಾಡಿದ್ದು,

625ರಲ್ಲಿ 625 ಅಂಕಗಳನ್ನು ಗಳಿಸಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ ಈ ಸಾಧನೆ ಮಾಡಿದ್ದಾರೆ.

ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ಉಳಿದಂತೆ ಮಂಡ್ಯ 5ನೇ ಸ್ಥಾನ (ಶೇ 97.45), ಶಿರಸಿ 6ನೇ ಸ್ಥಾನ (ಶೇ 97.21), ಹಾವೇರಿ 7ನೇ ಸ್ಥಾನ (ಶೇ 96.87), ಕೊಡಗು 8ನೇ ಸ್ಥಾನ (ಶೇ 96.70), ಶಿವಮೊಗ್ಗ 9ನೇ ಸ್ಥಾನ (ಶೇ 96.56), ವಿಜಯನಗರ 10ನೇ ಸ್ಥಾನ (ಶೇ 96.39), ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ (ಶೇ 95.84), ಧಾರವಾಡ 12ನೇ ಸ್ಥಾನ (ಶೇ 95.59), ಕೋಲಾರ 13ನೇ ಸ್ಥಾನ (ಶೇ 95.50) ಗಳಿಸಿವೆ.

  • ಬಾಗಲಕೋಟೆ 14ನೇ ಸ್ಥಾನ – 95.42%
  • ಬೆಂ.ಉತ್ತರ 15ನೇ ಸ್ಥಾನ – 95.34%
  • ಗದಗ 16ನೇ ಸ್ಥಾನ – 95.24%
  • ಚಿಕ್ಕಮಗಳೂರು 17ನೇ ಸ್ಥಾನ – 94.99%
  • ಬೆಳಗಾವಿ 18ನೇ ಸ್ಥಾನ – 94.75%
  • ದಾವಣಗೆರೆ 19ನೇ ಸ್ಥಾನ – 94.64%
  • ಮೈಸೂರು 20ನೇ ಸ್ಥಾನ – 94.50%
  • ರಾಯಚೂರು 21ನೇ ಸ್ಥಾನ – 94.41%

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕ ವೀಕ್ಷಿಸಬಹುದಾಗಿದೆ. ಜೊತೆಗೆ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮತ್ತು ವಾಟ್ಸಾಪ್ ಮೂಲಕ ಫಲಿತಾಂಶದ ವಿವರಗಳನ್ನು ಮಂಡಳಿ ನೇರವಾಗಿ ಕಳುಹಿಸುತ್ತಿದೆ.

BREAKING: SSLC ಫಲಿತಾಂಶ ಪ್ರಕಟ: ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.

ಫಲಿತಾಂಶ ಪ್ರಕಟವಾದ ನಂತರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಂಡರು.

ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ), ಉತ್ಸವ ಪಾಟೀಲ (ಹಾಸನ) 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕ ವೀಕ್ಷಿಸಬಹುದು. ಜೊತೆಗೆ ‘KarnatakaOne’ ಮೊಬೈಲ್ ಆ್ಯಪ್ನಲ್ಲಿಯೂ ಫಲಿತಾಂಶ ಲಭ್ಯವಿದೆ.

ಇದಲ್ಲದೆ, ವಿದ್ಯಾರ್ಥಿಗಳು ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರಗಳನ್ನು ಮಂಡಳಿ ನೇರವಾಗಿ ಎಸ್ಎಂಎಸ್ ಹಾಗೂ ವಾಟ್ಸಾಪ್ ಮೂಲಕ ಕಳುಹಿಸುತ್ತಿದೆ.

error: Content is protected !!