Home Blog

ವಿಮೆ ಕಟ್ಟಿದ ರೈತರಿಗೆ ಪರಿಹಾರವೇ ಮರೀಚಿಕೆ..!

0

ವಿಜಯಸಾಕ್ಷಿ ಸುದ್ದಿ, ಡಂಬಳ: ಗದಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮೆ ಮಾಡಿಸಿದ ಸಾವಿರಾರು ರೈತರಿಗೆ ಮಧ್ಯಂತರ ಪರಿಹಾರ ದೊರೆಯದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರ್ಹರಾಗಿದ್ದರೂ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪರಿಹಾರ ನೀಡದಿರುವುದು ಸರ್ಕಾರ ಹಾಗೂ ವಿಮಾ ಕಂಪನಿಗಳ ನಿರ್ಲಕ್ಷ್ಯ ಎಂದು ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ ಆರೋಪಿಸಿದೆ.

ಗದಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮೆ ಮಾಡಿಸಿದ ಸಾವಿರಾರು ರೈತರಿಗೆ ಮಧ್ಯಂತರ ಪರಿಹಾರ ದೊರೆಯದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರ್ಹರಾಗಿದ್ದರೂ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪರಿಹಾರ ನೀಡದಿರುವುದು ಸರ್ಕಾರ ಹಾಗೂ ವಿಮಾ ಕಂಪನಿಗಳ ನಿರ್ಲಕ್ಷ್ಯ ಎಂದು ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ ಆರೋಪಿಸಿದೆ.

ಜಿಲ್ಲೆಯಲ್ಲಿ ಒಟ್ಟು 52,013 ರೈತರು ಬೆಳೆವಿಮೆ ಮಾಡಿಸಿದ್ದು, ಕಳೆದ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗಿ ಬೆಳೆ ನಷ್ಟ ಅನುಭವಿಸಿದ್ದಾರೆ. ನಿಯಮಾನುಸಾರ ಟೋಲ್‌ಫ್ರೀ ಸಂಖ್ಯೆಗೆ ದೂರು ಸಲ್ಲಿಸಿದ ರೈತರಿಗೆ ವಿಮಾ ಕಂಪನಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಧ್ಯಂತರ ಪರಿಹಾರ ನೀಡಬೇಕಾಗಿತ್ತು.

ಸಂಘದ ಪ್ರಕಾರ, 38,177 ರೈತರು ಟೋಲ್‌ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದ್ದರು. ಇವರಲ್ಲಿ ಮೊದಲ ಹಂತದಲ್ಲಿ 9,687 ರೈತರಿಗೆ ಹಾಗೂ ಎರಡನೇ ಹಂತದಲ್ಲಿ 3,020 ರೈತರಿಗೆ ಮಾತ್ರ ಪರಿಹಾರ ಜಮೆಯಾಗಿದ್ದು, ಒಟ್ಟು 12,707 ರೈತರಿಗೆ ಮಾತ್ರ ಮಧ್ಯಂತರ ಪರಿಹಾರ ದೊರೆತಿದೆ.

ಇನ್ನೂ 22,356 ರೈತರು ಅರ್ಹರಾಗಿದ್ದರೂ ಪರಿಹಾರದಿಂದ ವಂಚಿತರಾಗಿದ್ದಾರೆ. ಅಲ್ಲದೆ 3,114 ರೈತರ ಜಮೀನುಗಳನ್ನು ಸಮರ್ಪಕ ಪರಿಶೀಲನೆ ನಡೆಸದೇ ‘ಪಾಳು ಭೂಮಿ’ ಎಂದು ನಮೂದಿಸಿ ಪರಿಹಾರವನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಲಾಗಿದೆ.

ವಿಮೆ ಸಮೀಕ್ಷೆ ವೇಳೆ ಅಧಿಕಾರಿಗಳು ಪ್ರತಿ ಜಮೀನಿನ ಸಮರ್ಪಕ ಪರಿಶೀಲನೆ ನಡೆಸದೆ, ಒಂದೇ ಸರ್ವೇ ನಂಬರ್ ಆಧರಿಸಿ ವರದಿ ಸಲ್ಲಿಸಿದ್ದರಿಂದ ಬೆಳೆ ಬೆಳೆದಿದ್ದ ಜಮೀನುಗಳನ್ನೂ ಪಾಳು ಎಂದು ದಾಖಲಿಸಿ ನೈಜ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ರೈತರು ದೂರಿದ್ದಾರೆ.

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಒಣ ಮೆಣಸಿನಕಾಯಿ ಹಾಗೂ ಗೋವಿನ ಜೋಳ ಬೆಳೆದ ರೈತರಿಗೆ ಪೂರ್ಣ ಪ್ರಮಾಣದ ವಿಮಾ ಪರಿಹಾರ ಇನ್ನೂ ದೊರೆತಿಲ್ಲ. ಅಗತ್ಯ ದಾಖಲೆಗಳನ್ನು ಸಕಾಲಕ್ಕೆ ಸಲ್ಲಿಸಿದ್ದರೂ ವಿಮಾ ಕಂಪನಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆಗೆ ಹಣವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದು, ಕಳೆದ ಸಾಲಿನ ಬೆಳೆವಿಮೆ ಪರಿಹಾರ ಸಿಕ್ಕಿದ್ದರೆ ಅದು ಆಸರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಅರ್ಹ ರೈತರಿಗೆ ಶೀಘ್ರದಲ್ಲೇ ಬೆಳೆವಿಮೆ ಪರಿಹಾರ ಒದಗಿಸಬೇಕು ಎಂದು ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪಗೌಡ್ರ ಕರಮುಡಿ ಆಗ್ರಹಿಸಿದ್ದಾರೆ.

“ಅರ್ಹ ರೈತರಿಗೆ ಬೆಳೆವಿಮೆ ಪರಿಹಾರ ನೀಡದಿರುವುದು ಅನ್ನದಾತರ ಮೇಲಿನ ಅನ್ಯಾಯ. ಸರ್ಕಾರ ಹಾಗೂ ವಿಮಾ ಕಂಪನಿ ಕೂಡಲೇ ಬಾಕಿ ಇರುವ ಮಧ್ಯಂತರ ಪರಿಹಾರ ಬಿಡುಗಡೆ ಮಾಡಬೇಕು.”

ಯಲ್ಲಪ್ಪಗೌಡ್ರ ಕರಮುಡಿ, ಜಿಲ್ಲಾಧ್ಯಕ್ಷರು, ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ

ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸಿ: ಡಾ. ಸಂತೋಷ ಹುಯಿಲಗೋಳ

0

ವಿಜಯಸಾಕ್ಷಿ ಸುದ್ದಿ, ಗದಗ: ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ವಿಶೇಷ ಪೋಲಿಯೋ ಲಸಿಕಾ ಅಭಿಯಾನಕ್ಕೆ ಗದಗ ಭಾವಸಾರ ವ್ಹಿಜನ್ ಇಂಡಿಯಾ ಸಂಘಟನೆ ಸಹಕಾರ ನೀಡುವ ಮೂಲಕ ಸಾಮಾಜಿಕ ಬದ್ಧತೆಯನ್ನು ಮೆರೆಯಿತು.

ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ವಿಶೇಷ ಪೋಲಿಯೋ ಲಸಿಕಾ ಅಭಿಯಾನಕ್ಕೆ ಗದಗ ಭಾವಸಾರ ವ್ಹಿಜನ್ ಇಂಡಿಯಾ ಸಂಘಟನೆ ಸಹಕಾರ ನೀಡುವ ಮೂಲಕ ಸಾಮಾಜಿಕ ಬದ್ಧತೆಯನ್ನು ಮೆರೆಯಿತು.

ಗದಗ 1ನೇ ವೃತ್ತದ 213ನೇ ಅಂಗನವಾಡಿ ಕೇಂದ್ರದ 13ನೇ ಬೂತ್ ವತಿಯಿಂದ ನಗರದ ಡಾ. ಹುಯಿಲಗೋಳ ಸಿಟಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಡಾ. ಸಂತೋಷ ಹುಯಿಲಗೋಳ ಹಾಗೂ ಶ್ರೀಮತಿ ರೂಪಾ ಹುಯಿಲಗೋಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಡಾ. ಸಂತೋಷ ಹುಯಿಲಗೋಳ, ಪೋಲಿಯೋ ರೋಗವು ಮಕ್ಕಳನ್ನು ಶಾಶ್ವತ ಅಂಗವೈಕಲ್ಯಕ್ಕೆ ತಳ್ಳುವ ಅಪಾಯಕಾರಿ ಕಾಯಿಲೆಯಾಗಿದ್ದು, ಲಸಿಕೆಯಿಂದ ಮಾತ್ರ ಅದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯ. ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ಪ್ರತಿಯೊಬ್ಬ ಪೋಷಕರು ತಮ್ಮ ಜವಾಬ್ದಾರಿಯನ್ನು ಅರಿತು ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಗದಗ ಭಾವಸಾರ ವ್ಹಿಜನ್ ಇಂಡಿಯಾ ಅಧ್ಯಕ್ಷ ಶ್ರೀಪಾದ ವೈಕುಂಠೆ ಮಾತನಾಡಿ, ಸಂಘಟನೆಯು ಆರಂಭದಿಂದಲೂ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಿಗೆ ಬೆಂಬಲ ನೀಡುತ್ತ ಬಂದಿದೆ. ಮಕ್ಕಳ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಪೋಲಿಯೋ ಲಸಿಕಾ ಅಭಿಯಾನಕ್ಕೂ ಸಂಪೂರ್ಣ ಸಹಕಾರ ನೀಡಲಾಗಿದ್ದು, ಸರ್ಕಾರದ ಆರೋಗ್ಯ ಕಾರ್ಯಕ್ರಮಗಳು ಯಶಸ್ವಿಯಾಗಲು ಸ್ವಯಂಸೇವಾ ಸಂಘಟನೆಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ತಿಳಿಸಿದರು.

ಕಾರ್ಯದರ್ಶಿ ಸುಧಾ ವೈಕುಂಠೆ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಮರಿಯಮ್ಮ ಕಡೂರ, ಪವನಕುಮಾರ, ವೀರಣ್ಣ ಬೆಳಮಕರ, ರಾಜೇಂದ್ರ ತ್ರಿಮಲ್ಲೆ, ರಾಜೇಶ್ವರಿ ಸಣ್ಣಕ್ಕಿ, ವಿಜಯಾ ನವಲೆ, ಮಂಜುಳಾ ಜಾಧವ, ಡಾ. ದತ್ತಾತ್ರೇಯ ವೈಕುಂಠೆ, ಲಕ್ಷ್ಮೀ ಬೆಳಮಕರ, ಕಾವ್ಯಾ ದೊಡ್ಡಮನಿ, ರಾಘವೇಂದ್ರ ನವಲೆ, ಮಲ್ಲಮ್ಮ ಪಲ್ಲೇದ ಹಾಗೂ ಮಮತಾಜ್ ಧಾರವಾಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

170 ಮಕ್ಕಳಿಗೆ ಲಸಿಕೆ

ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ಸರ್ಕಲ್ ಹಾಗೂ ಹುಯಿಲಗೋಳ ಆಸ್ಪತ್ರೆ ಸುತ್ತಮುತ್ತಲಿನ ಹಿಂದುಳಿದ ಪ್ರದೇಶಗಳ ಐದು ವರ್ಷದೊಳಗಿನ ಸುಮಾರು 170 ಮಕ್ಕಳಿಗೆ ಭಾನುವಾರ ಸಂಜೆಯವರೆಗೆ ಪೋಲಿಯೋ ಲಸಿಕೆ ನೀಡಲಾಯಿತು. ಆರೋಗ್ಯ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸಹಕಾರದಿಂದ ಅಭಿಯಾನ ಯಶಸ್ವಿಯಾಗಿ ನಡೆಯಿತು.

“ಪೋಲಿಯೋವನ್ನು ತಡೆಗಟ್ಟಲು ಲಸಿಕೆಯೇ ಅತ್ಯಂತ ಪರಿಣಾಮಕಾರಿ ಅಸ್ತ್ರ. ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.”

                               ಡಾ. ಸಂತೋಷ ಹುಯಿಲಗೋಳ

ಎಸ್‌.ಎಸ್‌.ಕೆ. ತರುಣ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಇತ್ತೀಚೆಗೆ ನಡೆದ ಎಸ್‌.ಎಸ್‌.ಕೆ. ತರುಣ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇತ್ತೀಚೆಗೆ ನಡೆದ ಎಸ್‌.ಎಸ್‌.ಕೆ. ತರುಣ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಂಘದ ಅಧ್ಯಕ್ಷರಾಗಿ ಶ್ರೀರಾಮ ಸುರೇಂದ್ರಸಾ ಹಬೀಬ, ಉಪಾಧ್ಯಕ್ಷರಾಗಿ ನಾರಾಯಣಸಾ ರಾಮಚಂದ್ರಸಾ ಕಬಾಡಿ, ಗೌರವ ಕಾರ್ಯದರ್ಶಿಯಾಗಿ ಸುರೇಶ ಸೋಮನಾಥಸಾ ಮೇರವಾಡೆ, ಸಹಕಾರ್ಯದರ್ಶಿಯಾಗಿ ಪರಶುರಾಮ ಹನಮಂತಸಾ ಸೋಳಂಕಿ, ಖಜಾಂಚಿಯಾಗಿ ಸತ್ಯನಾರಾಯಣ ಫಕ್ಕೀರಸಾ ಮೇರವಾಡೆ, ಲೆಕ್ಕ ಪರಿಶೋಧಕರಾಗಿ ನರಸಿಂಗಸಾ ವೆಂಕೂಸಾ ಮೇರವಾಡೆ ಹಾಗೂ ವ್ಯಾಯಾಮಶಾಲೆ ಚೇರ್ಮನ್ ಆಗಿ ವಿನಾಯಕ ಶಂಕರಸಾ ಹಾದಿಮನಿ ಅವರನ್ನು ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳನ್ನು ಪಂಚ ಟ್ರಸ್ಟ್ ಕಮಿಟಿ, ಎಸ್‌.ಎಸ್‌.ಕೆ. ತರುಣ ಸಂಘ, ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜದ ಮುಖಂಡರು ಮತ್ತು ಸಮಾಜಬಾಂಧವರು ಅಭಿನಂದಿಸಿ, ಶುಭ ಹಾರೈಸಿದರು.

ಸಂಸ್ಕಾರಯುತ ಶಿಕ್ಷಣದಿಂದಲೇ ಉತ್ತಮ ಸಮಾಜ ನಿರ್ಮಾಣ: ವೈ.ಎನ್. ಗೌಡರ

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಸಮಾಜದಲ್ಲಿರುವ ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ಹೋಗಲಾಡಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಪಾಲಕರು ಮಕ್ಕಳಿಗೆ ಕೇವಲ ಅಂಕಗಳ ಶಿಕ್ಷಣವಲ್ಲ, ಸಂಸ್ಕಾರ ಮತ್ತು ಬದುಕು ಕಟ್ಟಿಕೊಡುವ ಶಿಕ್ಷಣ ನೀಡಬೇಕು ಎಂದು ರಾಜ್ಯ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.

ಸಮಾಜದಲ್ಲಿರುವ ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ಹೋಗಲಾಡಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಪಾಲಕರು ಮಕ್ಕಳಿಗೆ ಕೇವಲ ಅಂಕಗಳ ಶಿಕ್ಷಣವಲ್ಲ, ಸಂಸ್ಕಾರ ಮತ್ತು ಬದುಕು ಕಟ್ಟಿಕೊಡುವ ಶಿಕ್ಷಣ ನೀಡಬೇಕು ಎಂದು ರಾಜ್ಯ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.

ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವಲ್ಲಿ ಪಾಲಕರ ಪಾತ್ರ ಮಹತ್ವದ್ದಾಗಿದೆ. ಜಾತಿ-ವರ್ಗ ಭೇದರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು. ಮಕ್ಕಳ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಶಿಕ್ಷಣ ನೀಡಬೇಕು. ಒತ್ತಾಯದ ಶಿಕ್ಷಣ ಮಕ್ಕಳಿಗೆ ಹೊರೆಯಾಗಬಾರದು ಎಂದು ಅವರು ಹೇಳಿದರು.

ಪತ್ರಕರ್ತ ಸಿ.ಕೆ. ಗಣಪ್ಪನವರ ಮಾತನಾಡಿ, ವೈಚಾರಿಕತೆ ಬೆಳೆಯಲು ಶಿಕ್ಷಣ ಅಗತ್ಯ. ವಿಜ್ಞಾನ ಯುಗದಲ್ಲಿಯೂ ಅಜ್ಞಾನ ಮತ್ತು ಮೂಢನಂಬಿಕೆಗಳು ಸಮಾಜದಲ್ಲಿ ಉಳಿದಿದ್ದು, ಅವುಗಳನ್ನು ತೊಲಗಿಸಲು ನಿರಂತರ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಪ್ರೊ. ಸತೀಶ ಪಾಸಿ, ನಿವೃತ್ತ ಶಿಕ್ಷಕ ಎಚ್.ಡಿ. ಪೂಜಾರ ಹಾಗೂ ರಂಗನಾಥ ನಾಯಕ ಮಾತನಾಡಿ, ಮಾನವ ಬಂಧುತ್ವ ವೇದಿಕೆ ರಾಜ್ಯಾದ್ಯಂತ ಮೂಢನಂಬಿಕೆ ನಿರ್ಮೂಲನೆ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮಾಡುತ್ತಿದೆ. ಸಮಾಜದಲ್ಲಿ ಸಮಾನತೆ ನೆಲೆಸಬೇಕಾದರೆ ಜಾಗೃತಿ ಅತ್ಯಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷ ಸುರೇಶ ನಾಯಕ, ವಾಲ್ಮೀಕಿ ನಾಯಕ ಸಮಾಜದ ಮಾಜಿ ಅಧ್ಯಕ್ಷ ಮೈಲಾರಪ್ಪ ಕಲಕೇರಿ, ಡಿ.ಜಿ. ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೇಘರಾಜ ನಾಯಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ನಾಯಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು.

ಡಿಎಸ್‌ಎಸ್‌ ಸಂಚಾಲಕರಾಗಿ ಸುರೇಶ ನಂದೆಣ್ಣವರ ನೇಮಕ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)ಯ ಲಕ್ಷ್ಮೇಶ್ವರ ತಾಲೂಕು ಸಂಚಾಲಕರಾಗಿ ಸುರೇಶ ನಂದೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)ಯ ಲಕ್ಷ್ಮೇಶ್ವರ ತಾಲೂಕು ಸಂಚಾಲಕರಾಗಿ ಸುರೇಶ ನಂದೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಬಳ್ಳಾರಿ ಹಾಗೂ ಗದಗ ಜಿಲ್ಲಾ ಸಂಚಾಲಕ ದುರ್ಗಪ್ಪ ಎಲ್.ಎಚ್. ಅವರು ಭಾನುವಾರ ನೇಮಕಾತಿ ಆದೇಶ ನೀಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪ ಅವರ ತತ್ತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಶೋಷಿತ ಸಮುದಾಯಗಳ ಏಳಿಗೆ, ಸಾಮಾಜಿಕ ನ್ಯಾಯ ಮತ್ತು ಸಂಘಟನೆಯ ಬಲವರ್ಧನೆಗೆ ಶ್ರಮಿಸುವಂತೆ ಸೂಚಿಸಿದರು.

ಸಂಘಟನೆಯ ತಾಲೂಕು ಪದಾಧಿಕಾರಿಗಳನ್ನೂ ನೇಮಕ ಮಾಡಲಾಯಿತು. ಕೋಟೆಪ್ಪ ವರ್ದಿ, ನಾಗರಾಜ ದೊಡ್ಡಮನಿ, ಗುಡ್ಡಪ್ಪ ಮತ್ತೂರು, ಮಂಜುನಾಥ ಸೀತಮ್ಮನವರ, ಶಿವಾನಂದ ಮಾದರ, ಮಲ್ಲಿಕಾರ್ಜುನ ಪೂಜಾರ ಹಾಗೂ ಬಸವರಾಜ ಗೋದಿ ಅವರನ್ನು ಸಂಘಟನಾ ಸಂಚಾಲಕರಾಗಿ ನೇಮಕ ಮಾಡಲಾಯಿತು. ಗೋಣೆಪ್ಪ ಹರಿಜನ ಅವರನ್ನು ಖಜಾಂಚಿಯಾಗಿ ಹಾಗೂ ಹನಮಂತಪ್ಪ ಮಾದರ, ಬಸವರಾಜ ಹೆಚ್., ಶಿವಾನಂದ ತಳಗೇರಿ ಮತ್ತು ಶಿವಾನಂದ ಕಡೆಮನಿ ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳು ಸಂಘಟನೆಯ ಆಶಯಗಳಿಗೆ ಅನುಗುಣವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ಸಂಘಟನೆಯ ವಿಸ್ತರಣೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ದುರ್ಗಪ್ಪ ಎಲ್.ಎಚ್., ಗಾಳೆಪ್ಪ ಎಚ್. ಹರಿಜನ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದುತ್ವ ಧಾರ್ಮಿಕ ಆಚರಣೆಯಲ್ಲ, ಜೀವನ ಮೌಲ್ಯಗಳ ದರ್ಶನ: ಗೋಪಿ ಜಿ

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದುತ್ವವು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾದ ಪರಿಕಲ್ಪನೆಯಲ್ಲ, ಅದು ಸಹೋದರತ್ವ, ಸಹಬಾಳ್ವೆ, ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಜೀವನದರ್ಶನವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಗೋಪಿ ಜಿ ಹೇಳಿದರು.

ಹಿಂದುತ್ವವು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾದ ಪರಿಕಲ್ಪನೆಯಲ್ಲ, ಅದು ಸಹೋದರತ್ವ, ಸಹಬಾಳ್ವೆ, ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಜೀವನದರ್ಶನವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಗೋಪಿ ಜಿ ಹೇಳಿದರು.

ನಗರದ ಸೇವಾ ಚೇತನ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗದಗ ಜಿಲ್ಲಾ ಘಟಕವು ‘100 ವರ್ಷಗಳ ಸಂಘಯಾತ್ರೆ’ ಅಂಗವಾಗಿ ಆಯೋಜಿಸಿದ್ದ ಪ್ರಮುಖ ನಾಗರಿಕರ ಗೋಷ್ಠಿಯಲ್ಲಿ ಅವರು ಮಾತನಾಡಿದರು.

“ವಸುದೈವ ಕುಟುಂಬಕಂ” ಹಾಗೂ “ಸರ್ವೇ ಭವಂತು ಸುಖಿನಃ” ಎಂಬ ಭಾರತೀಯ ತತ್ವಗಳು ವಿಶ್ವಶಾಂತಿ, ಸಹಬಾಳ್ವೆ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತವೆ ಎಂದು ಅವರು ತಿಳಿಸಿದರು.

ಸಂಘ ಪ್ರತಿಪಾದಿಸುತ್ತಿರುವ ‘ಪಂಚಪರಿವರ್ತನೆ’ ಪರಿಕಲ್ಪನೆಯಡಿ ಪರಿಸರ ಸಂರಕ್ಷಣೆ, ಕುಟುಂಬ ಪ್ರಬೋಧನ, ಸಾಮಾಜಿಕ ಸಾಮರಸ್ಯ, ಸ್ವದೇಶಿ ಮನೋಭಾವ ಹಾಗೂ ನಾಗರಿಕ ಕರ್ತವ್ಯಗಳ ಪಾಲನೆಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.

ಭಾರತೀಯ ಕುಟುಂಬ ವ್ಯವಸ್ಥೆ, ಭಾಷೆ, ಸಂಸ್ಕೃತಿ ಮತ್ತು ಸಾರ್ವಜನಿಕ ಆಸ್ತಿಗಳ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿಯುತ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ ವೈಮನಸ್ಸು ಮತ್ತು ವಿಭಜನೆಗೆ ಅವಕಾಶ ನೀಡದೆ ಪರಸ್ಪರ ಗೌರವ, ಸಹಕಾರ ಹಾಗೂ ಸಾಮರಸ್ಯದ ಮನೋಭಾವ ಬೆಳೆಸಿದಾಗ ಮಾತ್ರ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಂಘಚಾಲಕ ಮಾರುತಿ ಕಟ್ಟಿಮನಿ ಉಪಸ್ಥಿತರಿದ್ದರು. ರವಿ ಬಡಿಗೇರ ಸ್ವಾಗತಿಸಿದರು. ಡಾ. ಉಮೇಶ ಹಾದಿ ನಿರೂಪಿಸಿದರು. ಬಸವರಾಜ ಪಟ್ಟಣಶೆಟ್ಟಿ ವಂದಿಸಿದರು. ಗಣ್ಯರು, ಚಿಂತಕರು, ಸ್ವಯಂಸೇವಕರು ಹಾಗೂ ಭಗಿನಿಯರು ಪಾಲ್ಗೊಂಡಿದ್ದರು.

“ಹಿಂದುತ್ವವು ಧಾರ್ಮಿಕ ಆಚರಣೆಗೆ ಸೀಮಿತವಾದ ವಿಚಾರವಲ್ಲ; ಸಹೋದರತ್ವ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಜೀವನ ದರ್ಶನ.”

                                            **— ಗೋಪಿ ಜಿ, ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘ**

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ವಿಶೇಷ ಹೆಜ್ಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.

ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.

ಶಿಬಿರದಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಮೆದುಳು ಆರೋಗ್ಯ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆಯನ್ನು ನುರಿತ ವೈದ್ಯರು ನಡೆಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಿದರು. ಸ್ವಚ್ಛತಾ ಕಾರ್ಯದಲ್ಲಿ ನಿರಂತರ ತೊಡಗಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಗೋಪಾಲ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಆನಂದ ಬದಿ, ಕಂದಾಯ ಅಧಿಕಾರಿ ಮಹೇಶ್ ಹಡಪದ, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಹೇಮೇಶ್ ಯಟ್ಟಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಕಮ್ಯುನಿಟಿ ಮೊಬೈಲೈಜರ್‌ಗಳು, ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರು ಉಪಸ್ಥಿತರಿದ್ದರು.

“ನಗರದ ಸ್ವಚ್ಛತೆಯ ಹೊಣೆ ಹೊತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೂ ನಗರಸಭೆ ಸಮಾನ ಆದ್ಯತೆ ನೀಡುತ್ತಿದೆ. ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ಅವರ ಆರೋಗ್ಯ ಕಾಪಾಡಲು ಸಹಕಾರಿಯಾಗಲಿವೆ.”

ರಾಜಾರಾಮ ಪವಾರ್, ಪೌರಾಯುಕ್ತರು, ಗದಗ-ಬೆಟಗೇರಿ ನಗರಸಭೆ

ಮಳೆರಾಯನಿಗಾಗಿ ಮಹಿಳೆಯರ ಗುರ್ಜಿ ಪೂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಳೆ ಕೊರತೆಯಿಂದ ಆತಂಕಗೊಂಡಿರುವ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 13ರ ಮಹಿಳೆಯರು ನಾಡಿನ ಸುಭಿಕ್ಷ ಹಾಗೂ ರೈತರ ಒಳಿತಿಗಾಗಿ ಸಂಪ್ರದಾಯಬದ್ಧ ಗುರ್ಜಿ ಪೂoje ನೆರವೇರಿಸಿ ಮಳೆರಾಯನ ಮೊರೆ ಹೋದರು.

ಮಳೆ ಕೊರತೆಯಿಂದ ಆತಂಕಗೊಂಡಿರುವ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 13ರ ಮಹಿಳೆಯರು ನಾಡಿನ ಸುಭಿಕ್ಷ ಹಾಗೂ ರೈತರ ಒಳಿತಿಗಾಗಿ ಸಂಪ್ರದಾಯಬದ್ಧ ಗುರ್ಜಿ ಪೂಜೆ ನೆರವೇರಿಸಿ ಮಳೆರಾಯನ ಮೊರೆ ಹೋದರು.

ರೈಲ್ವೆ ಪೊಲೀಸ್ ಕ್ವಾರ್ಟರ್ಸ್ ಸಮೀಪದ ಶ್ರೀ ಗಣಪತಿ ಹಾಗೂ ಶ್ರೀ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರು ಗುರ್ಜಿ ಹೊತ್ತು ವಾರ್ಡ್‌ನ ಮನೆ ಮನೆಗೆ ತೆರಳಿ, “ಗುರ್ಜಿ ಗುರ್ಜಿ ಯಲ್ಲಾಡಿ ಬಂದೆ, ಹಳ್ಳ-ಕೊಳ್ಳ ಸುಳಿದಾಡಿ ಬಂದೆ, ಕಾರಮಳೆಯೇ ಕಪಟ್ ಮಳೆಯೇ, ಸುರಿ ಮಳೆಯೋ… ಸುರಿ ಮಳೆಯೋ…” ಎಂದು ಜಾನಪದ ಗೀತೆಗಳನ್ನು ಹಾಡುತ್ತ ಮಳೆಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ವಾರ್ಡ್ ಸದಸ್ಯ ಮುತ್ತು ಮುಶಿಗೇರಿ ಮಾತನಾಡಿ, ನಾಡಿನ ಒಳಿತಿಗಾಗಿ ಮಹಿಳೆಯರು ಒಗ್ಗೂಡಿ ಇಂತಹ ಸಂಪ್ರದಾಯಬದ್ಧ ಪೂಜೆ ನಡೆಸಿರುವುದು ಶ್ಲಾಘನೀಯ. ಈ ಪೂಜೆಯ ಫಲವಾಗಿ ಸಕಾಲಕ್ಕೆ ಉತ್ತಮ ಮಳೆಯಾಗಿ ರೈತರು ಹಾಗೂ ನಾಡು ಸಮೃದ್ಧಿಯಾಗಲಿ ಎಂದು ಆಶಿಸಿದರು.

“ಗುರ್ಜಿ ಪೂಜೆ ನಮ್ಮ ಗ್ರಾಮೀಣ ಸಂಸ್ಕೃತಿ ಮತ್ತು ನಂಬಿಕೆಯ ಪ್ರತೀಕ. ಸಕಾಲಕ್ಕೆ ಮಳೆಯಾಗಿ ರೈತರ ಬದುಕು ಹಸನಾಗಲಿ, ನಾಡು ಸುಭಿಕ್ಷವಾಗಲಿ ಎಂಬುದು ಎಲ್ಲರ ಪ್ರಾರ್ಥನೆ.”

ಮುತ್ತು ಮುಶಿಗೇರಿ, ವಾರ್ಡ್ ಸದಸ್ಯರು

ಶಿಕ್ಷಣದಲ್ಲಿ ಸಾಧಿಸಿ ಸಮಾಜಕ್ಕೆ ಮಾದರಿಯಾಗಿ: ಡಾ. ಸಾಹಿರಾಬಾನು

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ. ಸಾಹಿರಾಬಾನು ಕರೆ ನೀಡಿದರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ. ಸಾಹಿರಾಬಾನು ಕರೆ ನೀಡಿದರು.

ಪಟ್ಟಣದ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕು ಖಿದ್ಮತ್ ಕಮಿಟಿ ವತಿಯಿಂದ ಆಯೋಜಿಸಿದ್ದ ಪ್ರಥಮ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

“ಬಹುತೇಕ ಮುಸ್ಲಿಮರು ಕಾಯಕನಿಷ್ಠರು. ದುಡಿಮೆಯೊಂದಿಗೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಮಾಡುವ ಕಾಯಕ ಮತ್ತು ಸೇವೆಯಲ್ಲಿಯೇ ದೇವರು ಅಡಗಿದ್ದಾನೆ.” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಖಿದ್ಮತ್ ಕಮಿಟಿ ಅಧ್ಯಕ್ಷ ಎಚ್. ಜಂದಿಸಾಹೇಬ್ ಮಾತನಾಡಿ, ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ನೀಡುವುದು ಪುರಸ್ಕಾರದ ಉದ್ದೇಶವಾಗಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ಪರಸ್ಪರ ಸಹಕಾರದಿಂದ ಮಾತ್ರ ಇಂತಹ ಉತ್ತಮ ಕಾರ್ಯಗಳು ಸಾಧ್ಯ ಎಂದರು.

ಪುರಸಭೆಯ ಮಾಜಿ ಅಧ್ಯಕ್ಷ ಎಂ. ಮರಿರಾಮಪ್ಪ ಮಾತನಾಡಿ, ವಿದ್ಯಾರ್ಥಿಗಳು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಪರಿಶ್ರಮದ ಮೂಲಕ ಉನ್ನತ ಗುರಿ ಸಾಧಿಸಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿವಿಧ ಗ್ರಾಮಗಳ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪ ತಹಸೀಲ್ದಾರ್ ಆಸೀಫ್, ನಿವೃತ್ತ ಯೋಧರಾದ ನೂರ್ ಮಹಮ್ಮದ್ ಹಾಗೂ ರಾಮರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ಪುರಸಭೆ ಅಧ್ಯಕ್ಷೆ ರೇಷ್ಮಾ ಸಿಕಂದರ್ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಪುರಸಭೆ ಸದಸ್ಯ ಪವಾಡಿ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಗ್ಯಾರಂಟಿ ಸಮಿತಿಯ ಗುರುಬಸವರಾಜ ಸೊನ್ನದ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಲ್ದಾಳ್ ವಿಜಯಕುಮಾರ್ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತ್ರಪಳ್ಳಿ ದೇವೇಂದ್ರಪ್ಪ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ರಫೀ, ಆಟೊ ರಾಜ, ಮೆಕಾನಿಕ್ ರಾಜು, ಬುಡೇನ್ ಸಾಬ್, ಚಾಂದ್ ಬಾಷಾ, ಬಿ. ಬಾಷಾಸಾಬ್, ಹಸನ್ ಷರೀಫ್, ಟೈಲರ್ ಶಬೀರ್, ಎನ್.ಎಂ. ಗೌಸ್, ನಜೀರ್ ಬಾಷಾ, ಎಚ್.ಎಸ್. ದಾದಾಪೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಎಚ್. ಅನೀಸ್ ಕಾರ್ಯಕ್ರಮ ನಿರ್ವಹಿಸಿದರು.

“ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು.”

ಡಾ. ಸಾಹಿರಾಬಾನು, ಅಧ್ಯಕ್ಷೆ, ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ

ಜುಲೈ 1ರಿಂದ ‘ವಿಬಿ-ಜಿ ರಾಮ್ (ಜಿ)’ ಯೋಜನೆ ಜಾರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) – ವಿಬಿ-ಜಿ ರಾಮ್ (ಜಿ) ಯೋಜನೆ ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿದ್ದು, ಗದಗ ಜಿಲ್ಲೆಯಲ್ಲಿಯೂ ಯೋಜನೆ ಅನುಷ್ಠಾನಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) – ವಿಬಿ-ಜಿ ರಾಮ್ (ಜಿ) ಯೋಜನೆ ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿದ್ದು, ಗದಗ ಜಿಲ್ಲೆಯಲ್ಲಿಯೂ ಯೋಜನೆ ಅನುಷ್ಠಾನಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ನಡೆಯಿತು. ರಾಜ್ಯ ಆಯುಕ್ತಾಲಯದಿಂದ ತರಬೇತಿ ಪಡೆದ ಮಾಸ್ಟರ್ ಟ್ರೈನರ್‌ಗಳಾದ ಸಂತೋಷ ಪಾಟೀಲ ಹಾಗೂ ಚಂದ್ರು ಲಮಾಣಿ ಅವರು ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಅವರ ನೇತೃತ್ವದಲ್ಲಿ ತರಬೇತಿ ನೀಡಿದರು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸಿ.ಆರ್. ಮುಂಡರಗಿ, ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಅಕುಶಲ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಯೋಜನೆ ನೆರವಾಗಲಿದೆ ಎಂದು ತಿಳಿಸಿದರು.

ಮಾಸ್ಟರ್ ಟ್ರೈನರ್ ಚಂದ್ರು ಲಮಾಣಿ ಮಾತನಾಡಿ, ಯೋಜನೆಯಡಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ಕುಟುಂಬಗಳ ವಯಸ್ಕ ಸದಸ್ಯರಿಗೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತ್ರಿ ನೀಡಲಾಗುತ್ತದೆ. ವಿಕಸಿತ ಗ್ರಾಮ ಪಂಚಾಯಿತಿ ಯೋಜನೆ (VGPP) ಮೂಲಕ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಆಯ್ಕೆ ಮಾಡಿ ಅನುಷ್ಠಾನಗೊಳಿಸಲಾಗುವುದು. ಕುಟುಂಬಗಳ ನೋಂದಣಿ, ಉದ್ಯೋಗ ಅರ್ಜಿ ಸ್ವೀಕಾರ, ಕಾಮಗಾರಿ ನಿರ್ವಹಣೆ ಹಾಗೂ ದಾಖಲೆಗಳ ಸಂರಕ್ಷಣೆ ಸೇರಿದಂತೆ ಪ್ರಮುಖ ಜವಾಬ್ದಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ ಎಂದು ವಿವರಿಸಿದರು.

ನರಗುಂದ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾ.ಉ.) ಹಾಗೂ ಮಾಸ್ಟರ್ ಟ್ರೈನರ್ ಸಂತೋಷ ಪಾಟೀಲ ಮಾತನಾಡಿ, ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಜೀವನೋಪಾಯ ವೃದ್ಧಿ ಹಾಗೂ ಹವಾಮಾನ ವೈಪರೀತ್ಯ ಶಮನ ಕಾಮಗಾರಿಗಳಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ. ಸಮಗ್ರ ಡಿಜಿಟಲ್ ವ್ಯವಸ್ಥೆಯ ಮೂಲಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಯೋಜನೆ ಹೊಂದಿದೆ ಎಂದು ಹೇಳಿದರು.

2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ‘ವಿಕಸಿತ ಭಾರತ @2047’ ಗುರಿ ಸಾಧನೆಗೆ ಈ ಯೋಜನೆ ಮಹತ್ವದ ಹೆಜ್ಜೆಯಾಗಲಿದ್ದು, ಗ್ರಾಮೀಣ ಉದ್ಯೋಗ ಭದ್ರತೆ ಹಾಗೂ ಜೀವನೋಪಾಯ ವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಮುಂಡರಗಿ, ರೋಣ, ಗಜೇಂದ್ರಗಡ ಹಾಗೂ ನರಗುಂದ ತಾಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕರು, ಬಿಎಫ್‌ಟಿ, ಜಿಕೆಎಂ, ತಾಲೂಕು ಪಂಚಾಯಿತಿ ನರೇಗಾ ಸಿಬ್ಬಂದಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

“ವಿಬಿ-ಜಿ ರಾಮ್ (ಜಿ) ಯೋಜನೆಯು ಗ್ರಾಮೀಣ ಉದ್ಯೋಗ ಭದ್ರತೆಯನ್ನು ಬಲಪಡಿಸುವುದರೊಂದಿಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಿದೆ.”

 ಸಿ.ಆರ್. ಮುಂಡರಗಿ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ